Homeಕರ್ನಾಟಕಆರ್‌ಸಿಇಪಿ ಎಂದರೇನು, ಆರ್‌ಸಿಇಪಿ ಜಾರಿಯಿಂದ ದೇಶದ ಮೇಲಾಗುವ ಪರಿಣಾಮವೇನು?: ಇಲ್ಲಿದೆ ಮಾಹಿತಿ

ಆರ್‌ಸಿಇಪಿ ಎಂದರೇನು, ಆರ್‌ಸಿಇಪಿ ಜಾರಿಯಿಂದ ದೇಶದ ಮೇಲಾಗುವ ಪರಿಣಾಮವೇನು?: ಇಲ್ಲಿದೆ ಮಾಹಿತಿ

- Advertisement -
- Advertisement -

– ಕೆ.ಪಿ ಸುರೇಶ್

RCEP ಬಗ್ಗೆ ಚುಟುಕು ಪ್ರಶ್ನೋತ್ತರ… 

RCEP ಎಂದರೇನು..?
ಭಾರತ, ಚೀನಾ, ಮಲೇಷಿಯಾ, ಜಪಾನ್, ಕಾಂಬೋಡಿಯಾ, ವಿಯೆಟ್ನಾಂ ಸಹಿತ ಹದಿನೈದು ದೇಶಗಳು ಸೇರಿದ ಪ್ರಾದೇಶಿಕ ಸಹಭಾಗಿತ್ವ.

ಪ್ರಸ್ತಾಪದ ಮಾತುಕತೆ ಶುರುವಾಗಿ ಎಷ್ಟು ವರ್ಷಗಳಾದವು..?
2012ರಲ್ಲಿ ಈ ಒಪ್ಪಂದದ ಸ್ಥೂಲ ಚರ್ಚೆ ಆರಂಭವಾಯಿತು. ವಿವಿಧ ಹಂತಗಳ ಮಾತುಕತೆಗಳು ಕಳೆದ ಏಳು ವರ್ಷಗಳಲ್ಲಿ ನಡೆದು ಬೆಳೆಯುತ್ತಾ ಇದೇ ನವೆಂಬರ್‌ 4ಕ್ಕೆ ಅಂತಿಮ ಸುತ್ತಿನ ಒಪ್ಪಂದದ ಸಭೆ ನಡೆಯಲಿದೆ.

ಇಷ್ಟು ವರ್ಷ ಏನಾಯಿತು..?
ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರ್ಕಾರ ಈ ಒಪ್ಪಂದದ ಯಾವ ವಿವರಗಳನ್ನೂ ಸಾರ್ವಜನಿಕವಾಗಿ ಹಂಚಿಕೊಂಡಿಲ್ಲ. ಉಳಿದ ದೇಶಗಳು ತಮ್ಮ ತಮ್ಮ ಸಂಸತ್ತುಗಳಲ್ಲಿ ಇದರ ವಿವರಗಳನ್ನು ಪ್ರಸ್ತುತಪಡಿಸಿವೆ. ಆದರೆ ನಮ್ಮ ಸರ್ಕಾರ ಸಂಪೂರ್ಣ ರಹಸ್ಯವಾಗಿಟ್ಟಿದೆ. ಈ ಮಾತುಕತೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ವಿಷಯ ತಜ್ಞರು ಯಾರು ಎಂಬುದೂ ಸಹ ಸಾರ್ವಜನಿಕವಾಗಿಲ್ಲ.

RCEP ಒಪ್ಪಂದದ ಮುಖ್ಯ ಅಂಶಗಳೇನು..?
ಈ ಎಲ್ಲಾ ರಾಷ್ಟ್ರಗಳೂ ಒಂದೇ ದೇಶವೆಂಬಂತೆ ತಮ್ಮ ಸರಕುಗಳನ್ನು ಯಾವುದೇ ತೆರಿಗೆಗೆ ತಡೆ ಇಲ್ಲದೇ ಪರಸ್ಪರ ಮಾರಾಟ ಮಾಡುವ ಸೌಲಭ್ಯ ಹೊಂದುತ್ತಾರೆ. ಈ ರೀತಿಯ ಆರ್ಥಿಕ ವಲಯಗಳನ್ನು ಆಧುನಿಕ ವ್ಯಾಪಾರ ಸಂದರ್ಭದಲ್ಲಿ ಸೃಷ್ಟಿಸಿಕೊಳ್ಳಲಾಗುತ್ತಿದೆ.

ಉಳಿದ ಅಂಶಗಳೇನು..?
ಉಳಿದ ಯಾವ ವಿವರಗಳೂ ಅಧಿಕೃತವಾಗಿ ಲಭ್ಯವಿಲ್ಲ. ಆದರೆ ಸೋರಿಕೆಯಾದ ದಾಖಲೆಗಳನ್ನು ಗಮನಿಸಿದರೆ ಬೌದ್ಧಿಕ ಆಸ್ತಿ ಹಕ್ಕಿನಿಂದ ಹಿಡಿದು, ಹಲವು ಉತ್ಪನ್ನಗಳಲ್ಲಿ ಇದಕ್ಕೆ ತಡೆಯೊಡ್ಡುವ ದೇಶದಿಂದ ಪರಿಹಾರ ವಸೂಲಿ ಮಾಡುವ ಅಧಿಕಾರ ರಫ್ತು ಮಾಡುವ ಸರ್ಕಾರ ಅಥವಾ ಸಂಸ್ಥೆಗೆ ಇರುತ್ತದೆ.

ಇದರಿಂದ ನಮ್ಮ ದೇಶದ ಮೇಲಾಗುವ ಪರಿಣಾಮಗಳು ಏನು..? 
ಈಗಾಗಲೇ ಭಾರತ ವ್ಯಾಪಾರದಲ್ಲಿ ಡೆಫಿಸಿಟ್ ಹೊಂದಿದೆ. ಅದರಲ್ಲೂ ಚೀನಾ ರಾಷ್ಟ್ರವೊಂದೇ ಶೇ. 50 ರಷ್ಟು ಸರಕು ಸುರಿಯಬಹುದು. ಉಳಿದಂತೆ ಆಸ್ಟ್ರೇಲಿಯಾ, ನ್ಯೂಜಿಲಾಂಡ್‍ಗಳು ಡೈರಿ ಉತ್ಪನ್ನಗಳನ್ನು ಭಾರತಕ್ಕೆ ಸುರಿಯುವ ಸಾಧ್ಯತೆಯಿದೆ. ಸುಮಾರು ಹತ್ತು ಸಾವಿರ ವಿವಿಧ ವಸ್ತುಗಳು ಈ ಒಪ್ಪಂದದ ಅನ್ವಯ ಆಮದು- ರಫ್ತು ಆಗಲಿವೆ. ಈ ವಸ್ತುಗಳಲ್ಲಿ ಕೃಷಿ, ಹಾಲು ಉತ್ಪಾದನೆ, ಸಾಗರೋತ್ಪನ್ನಗಳು ಅಷ್ಟೇ ಅಲ್ಲ, ಔಷಧಿ ಕ್ಷೇತ್ರದ ಪಾಲೂ ಅಧಿಕವಾಗಿರಲಿದೆ. ಬೌದ್ಧಿಕ ಉತ್ಪನ್ನದ ಬೌದ್ಧಿಕ ಹಕ್ಕಿನ ವಾಯಿದೆಯನ್ನೂ ವಿಸ್ತರಿಸುವ ಹಕ್ಕು ಇದೆ.

ಯಾವ ಉತ್ಪನ್ನಗಳಿಂದ ದೇಶಕ್ಕೆ ತೊಂದರೆಯಾಗಲಿದೆ..? 
ನಿರ್ದಿಷ್ಟವಾಗಿ ಇಂಥದ್ದೇ ಉತ್ಪನ್ನಗಳಿಂದ ನಾವು ರಕ್ಷಣೆ ಪಡೆಯಬಹುದು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ತಜ್ಞರ ಪ್ರಕಾರ 10 ಸಾವಿರ ಉತ್ಪನ್ನಗಳಲ್ಲಿ ಹೆಚ್ಚೆಂದರೆ ನೂರು ಉತ್ಪನ್ನಗಳಿಗೆ ರಕ್ಷಣೆ ನೀಡಬಹುದು. ಅಡಿಕೆ, ಮೆಣಸು ಇತ್ಯಾದಿಗೆ ತೊಂದರೆ ಇಲ್ಲ ಎನ್ನುತ್ತಾರಲ್ಲ ಎಂಬ ಪ್ರಶ್ನೆಯೂ ಎದುರಾಗುತ್ತದೆ. ಸದ್ಯಕ್ಕೆ ತೊಂದರೆ ಕಾಣಿಸದಿದ್ದರೂ, ಸದಸ್ಯ ರಾಷ್ಟ್ರಗಳು ನಿಯಮಗಳನ್ನು ತಿದ್ದುಪಡಿ ಮಾಡಿದಾಗ ಪರಿಣಾಮ ಏನಾಗುತ್ತದೆ ಎಂಬ ಬಗ್ಗೆ ಊಹಿಸುವುದು ಕಷ್ಟ. ಮುಖ್ಯವಾಗಿ ಯಾವ ಸರಕಿಗೂ ಆಧುನಿಕ ವ್ಯಾಪಾರ ಒಪ್ಪಂದದಲ್ಲಿ ಖಾಯಂ ರಕ್ಷಣೆ ಎಂಬುದು ಇಲ್ಲ.

ನಮಗೆ ಆಪತ್ತು ಇದೆ ಎಂದು ಏಕೆ ಭಾವಿಸಲಾಗುತ್ತಿದೆ..?
ನಮ್ಮ ಉತ್ಪನ್ನಗಳು ಸ್ಪರ್ಧಾತ್ಮಕವಾಗಿಲ್ಲ. ಗುಣಮಟ್ಟದಲ್ಲೂ, ಉತ್ಪಾದಕ ವೆಚ್ಚದಲ್ಲೂ ಎಂಬ ಆತಂಕ ಇದೆ. ಉಳಿದ ದೇಶಗಳ, ಅದರಲ್ಲೂ ಚೀನಾದ ಉತ್ಪನ್ನಗಳು, ನಮ್ಮ ಉತ್ಪನ್ನಗಳಿಗಿಂತ ಅಗ್ಗವಾಗಿ ಉತ್ಪಾದನೆಯಾಗುತ್ತವೆ. ಆದ್ದರಿಂದ ದೇಶೀಯ ಉತ್ಪನ್ನಗಳಿಗೆ ಬೇಡಿಕೆ ಕಡಿಮೆಯಾಗುವ ಆತಂಕವೂ ಇದೆ.

ಸರ್ಕಾರ ಏನು ಮಾಡಬೇಕು..?
ಮುಖ್ಯವಾಗಿ ವಿವಿಧ ಕ್ಷೇತ್ರಗಳಲ್ಲಿ ಉತ್ಪಾದಕತೆ ಮತ್ತು ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಲು ಬಂಡವಾಳ ಹೂಡಬೇಕು. ಇದು ಮೂಲತಃ ತರಬೇತಿ , ಕೌಶಲ್ಯಗಳಿಗೆ ಸಂಬಂಧಿಸಿದ್ದಾಗಿದೆ. ಈ ರೀತಿ ದೇಶೀಯ ಉತ್ಪಾದನೆಯನ್ನು ಸನ್ನದ್ಧಗೊಳಿಸಲು ಮೊದಲು ಸಹಿ ಹಾಕಿದರೆ, ನಮ್ಮ ಉತ್ಪಾದಕರು ತೊಂದರೆಗೆ ಒಳಗಾಗುತ್ತಾರೆ.

ಸರ್ಕಾರ ಏನು ಮಾಡುತ್ತಿದೆ..?
ಕೃಷಿ ಮತ್ತಿತರ ಕ್ಷೇತ್ರಗಳು, ರಾಜ್ಯಗಳಿಗೆ ಸಂಬಂಧಿಸಿದ ಕಾರಣ ಆಯಾ ರಾಜ್ಯಗಳಲ್ಲಿ ಕೌಶಲ್ಯ ತರಬೇತಿ ಅಷ್ಟೇ ಅಲ್ಲ, ರೈತಾಪಿ ವರ್ಗಕ್ಕೆ ಮಾರ್ಗದರ್ಶನ ಮಾಡುವ ಬಲು ದೊಡ್ಡ ತರಬೇತುದಾರರ ಪಡೆಯನ್ನು ನಿಯೋಜಿಸಬೇಕಾಗಿದೆ. ಹಾಗೇ ಉತ್ಪಾದನಾ ಗುಣಮಟ್ಟದ ಬಗ್ಗೆ ಮಾನದಂಡಗಳನ್ನು ತಳಮಟ್ಟದವರೆಗೂ ಮನನ ಮಾಡಿಸಿ, ಉತ್ಪನ್ನವನ್ನು ಶ್ರೇಷ್ಠಗೊಳಿಸಬೇಕು. ಇದರೊಂದಿಗೆ ಒಳಸುರಿ, ಕೊಯ್ಲು ಸಾಗಣೆ, ಸಂಸ್ಕರಣೆ, ಪ್ಯಾಕೇಜಿಂಗ್, ಮೌಲ್ಯವರ್ಧನೆ- ಹೀಗೆ ಎಲ್ಲಾ ಆಯಾಮಗಳಲ್ಲೂ ಏಕಕಾಲಕ್ಕೆ ಸಂರಚನೆ ಸೃಷ್ಟಿಸಬೇಕು.

ಈಗಾಗಲೇ ಸರ್ಕಾರ ಕೈಗೊಂಡಿರುವ ಉಪಕ್ರಮಗಳು ಯಾವವು..?
ಕೃಷಿ ಮತ್ತು ಕೌಶಲ್ಯ ಕ್ಷೇತ್ರಗಳಲ್ಲಿ ಘೋಷಿಸಿದ ಉಪಕ್ರಮಗಳ ಶೇ. 10ರಷ್ಟೂ ಕೆಲಸವಾಗಿಲ್ಲ. ಉದಾ: ಕೌಶಲ್ಯ ಕ್ಷೇತ್ರದಲ್ಲಿ 41 ಸ್ಕಿಲ್ ಕೌನ್ಸಿಲ್‍ಗಳನ್ನು ಘೋಷಿಸಿ, ಸುಮಾರು 5000 ಉದ್ಯೋಗ ಸಾಧ್ಯತೆಗಳನ್ನು ಗುರುತಿಸಬೇಕಿದೆ.  ಅಲ್ಪಕಾಲೀನ ತರಬೇತಿ ಮೂಲಕ ಕೌಶಲ್ಯ ತರಬೇತಿ ಪಡೆದ ಲಕ್ಷಾಂತರ ಯುವಕರನ್ನು ಸೃಷ್ಟಿಸುವ ಘೋಷಣೆ ಇದೆ. ಆದರೆ ಬಹುತೇಕ ಕೌನ್ಸಿಲ್‌ಗಳಲ್ಲಿ ಗುಣಮಟ್ಟದ ತರಬೇತಿಯೇ ಇಲ್ಲ.
ಆಹಾರ ಸಂಸ್ಕರಣೆಯಲ್ಲೂ ಅಷ್ಟೇ. ಶೇ. 10-30ರಷ್ಟು ಉತ್ಪನ್ನ ಹಾಳಾಗುತ್ತಿದೆ ಎಂದು ಸರ್ಕಾರದ ಅಧಿಕೃತ ವಿವರಗಳೇ ಹೇಳುತ್ತಿವೆ.

ಮುಖ್ಯವಾಗಿ ಆರ್ಥಿಕ ಸಂಕಷ್ಟದಲ್ಲಿರುವ ಸರ್ಕಾರ ಈ ವಿವಿಧ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಬೇಕಾದಷ್ಟು ಅನುದಾನ ಒದಗಿಸಿಲ್ಲ. ಈಗ ಈ ಒಪ್ಪಂದ ಎಂಬ ಪೆಡಂಭೂತ ನಮ್ಮ ದಿಡ್ಡಿ ಬಾಗಿಲಿಗೆ ಬಂದಿದೆ. ನಮ್ಮನ್ನು ಆಳುವವರ ಕೈ ತಿರುಚಿಯಾದರೂ ಇದಕ್ಕೆ ಸಹಿ ಹಾಕಿಸುವ ಶಕ್ತಿ ಚೀನಾದಿಂದ ಹಿಡಿದು ಇತರೆ ದೇಶಗಳಿಗೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...