Homeಕರ್ನಾಟಕಆರ್‌ಸಿಇಪಿ ಎಂದರೇನು, ಆರ್‌ಸಿಇಪಿ ಜಾರಿಯಿಂದ ದೇಶದ ಮೇಲಾಗುವ ಪರಿಣಾಮವೇನು?: ಇಲ್ಲಿದೆ ಮಾಹಿತಿ

ಆರ್‌ಸಿಇಪಿ ಎಂದರೇನು, ಆರ್‌ಸಿಇಪಿ ಜಾರಿಯಿಂದ ದೇಶದ ಮೇಲಾಗುವ ಪರಿಣಾಮವೇನು?: ಇಲ್ಲಿದೆ ಮಾಹಿತಿ

- Advertisement -
- Advertisement -

– ಕೆ.ಪಿ ಸುರೇಶ್

RCEP ಬಗ್ಗೆ ಚುಟುಕು ಪ್ರಶ್ನೋತ್ತರ… 

RCEP ಎಂದರೇನು..?
ಭಾರತ, ಚೀನಾ, ಮಲೇಷಿಯಾ, ಜಪಾನ್, ಕಾಂಬೋಡಿಯಾ, ವಿಯೆಟ್ನಾಂ ಸಹಿತ ಹದಿನೈದು ದೇಶಗಳು ಸೇರಿದ ಪ್ರಾದೇಶಿಕ ಸಹಭಾಗಿತ್ವ.

ಪ್ರಸ್ತಾಪದ ಮಾತುಕತೆ ಶುರುವಾಗಿ ಎಷ್ಟು ವರ್ಷಗಳಾದವು..?
2012ರಲ್ಲಿ ಈ ಒಪ್ಪಂದದ ಸ್ಥೂಲ ಚರ್ಚೆ ಆರಂಭವಾಯಿತು. ವಿವಿಧ ಹಂತಗಳ ಮಾತುಕತೆಗಳು ಕಳೆದ ಏಳು ವರ್ಷಗಳಲ್ಲಿ ನಡೆದು ಬೆಳೆಯುತ್ತಾ ಇದೇ ನವೆಂಬರ್‌ 4ಕ್ಕೆ ಅಂತಿಮ ಸುತ್ತಿನ ಒಪ್ಪಂದದ ಸಭೆ ನಡೆಯಲಿದೆ.

ಇಷ್ಟು ವರ್ಷ ಏನಾಯಿತು..?
ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರ್ಕಾರ ಈ ಒಪ್ಪಂದದ ಯಾವ ವಿವರಗಳನ್ನೂ ಸಾರ್ವಜನಿಕವಾಗಿ ಹಂಚಿಕೊಂಡಿಲ್ಲ. ಉಳಿದ ದೇಶಗಳು ತಮ್ಮ ತಮ್ಮ ಸಂಸತ್ತುಗಳಲ್ಲಿ ಇದರ ವಿವರಗಳನ್ನು ಪ್ರಸ್ತುತಪಡಿಸಿವೆ. ಆದರೆ ನಮ್ಮ ಸರ್ಕಾರ ಸಂಪೂರ್ಣ ರಹಸ್ಯವಾಗಿಟ್ಟಿದೆ. ಈ ಮಾತುಕತೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ವಿಷಯ ತಜ್ಞರು ಯಾರು ಎಂಬುದೂ ಸಹ ಸಾರ್ವಜನಿಕವಾಗಿಲ್ಲ.

RCEP ಒಪ್ಪಂದದ ಮುಖ್ಯ ಅಂಶಗಳೇನು..?
ಈ ಎಲ್ಲಾ ರಾಷ್ಟ್ರಗಳೂ ಒಂದೇ ದೇಶವೆಂಬಂತೆ ತಮ್ಮ ಸರಕುಗಳನ್ನು ಯಾವುದೇ ತೆರಿಗೆಗೆ ತಡೆ ಇಲ್ಲದೇ ಪರಸ್ಪರ ಮಾರಾಟ ಮಾಡುವ ಸೌಲಭ್ಯ ಹೊಂದುತ್ತಾರೆ. ಈ ರೀತಿಯ ಆರ್ಥಿಕ ವಲಯಗಳನ್ನು ಆಧುನಿಕ ವ್ಯಾಪಾರ ಸಂದರ್ಭದಲ್ಲಿ ಸೃಷ್ಟಿಸಿಕೊಳ್ಳಲಾಗುತ್ತಿದೆ.

ಉಳಿದ ಅಂಶಗಳೇನು..?
ಉಳಿದ ಯಾವ ವಿವರಗಳೂ ಅಧಿಕೃತವಾಗಿ ಲಭ್ಯವಿಲ್ಲ. ಆದರೆ ಸೋರಿಕೆಯಾದ ದಾಖಲೆಗಳನ್ನು ಗಮನಿಸಿದರೆ ಬೌದ್ಧಿಕ ಆಸ್ತಿ ಹಕ್ಕಿನಿಂದ ಹಿಡಿದು, ಹಲವು ಉತ್ಪನ್ನಗಳಲ್ಲಿ ಇದಕ್ಕೆ ತಡೆಯೊಡ್ಡುವ ದೇಶದಿಂದ ಪರಿಹಾರ ವಸೂಲಿ ಮಾಡುವ ಅಧಿಕಾರ ರಫ್ತು ಮಾಡುವ ಸರ್ಕಾರ ಅಥವಾ ಸಂಸ್ಥೆಗೆ ಇರುತ್ತದೆ.

ಇದರಿಂದ ನಮ್ಮ ದೇಶದ ಮೇಲಾಗುವ ಪರಿಣಾಮಗಳು ಏನು..? 
ಈಗಾಗಲೇ ಭಾರತ ವ್ಯಾಪಾರದಲ್ಲಿ ಡೆಫಿಸಿಟ್ ಹೊಂದಿದೆ. ಅದರಲ್ಲೂ ಚೀನಾ ರಾಷ್ಟ್ರವೊಂದೇ ಶೇ. 50 ರಷ್ಟು ಸರಕು ಸುರಿಯಬಹುದು. ಉಳಿದಂತೆ ಆಸ್ಟ್ರೇಲಿಯಾ, ನ್ಯೂಜಿಲಾಂಡ್‍ಗಳು ಡೈರಿ ಉತ್ಪನ್ನಗಳನ್ನು ಭಾರತಕ್ಕೆ ಸುರಿಯುವ ಸಾಧ್ಯತೆಯಿದೆ. ಸುಮಾರು ಹತ್ತು ಸಾವಿರ ವಿವಿಧ ವಸ್ತುಗಳು ಈ ಒಪ್ಪಂದದ ಅನ್ವಯ ಆಮದು- ರಫ್ತು ಆಗಲಿವೆ. ಈ ವಸ್ತುಗಳಲ್ಲಿ ಕೃಷಿ, ಹಾಲು ಉತ್ಪಾದನೆ, ಸಾಗರೋತ್ಪನ್ನಗಳು ಅಷ್ಟೇ ಅಲ್ಲ, ಔಷಧಿ ಕ್ಷೇತ್ರದ ಪಾಲೂ ಅಧಿಕವಾಗಿರಲಿದೆ. ಬೌದ್ಧಿಕ ಉತ್ಪನ್ನದ ಬೌದ್ಧಿಕ ಹಕ್ಕಿನ ವಾಯಿದೆಯನ್ನೂ ವಿಸ್ತರಿಸುವ ಹಕ್ಕು ಇದೆ.

ಯಾವ ಉತ್ಪನ್ನಗಳಿಂದ ದೇಶಕ್ಕೆ ತೊಂದರೆಯಾಗಲಿದೆ..? 
ನಿರ್ದಿಷ್ಟವಾಗಿ ಇಂಥದ್ದೇ ಉತ್ಪನ್ನಗಳಿಂದ ನಾವು ರಕ್ಷಣೆ ಪಡೆಯಬಹುದು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ತಜ್ಞರ ಪ್ರಕಾರ 10 ಸಾವಿರ ಉತ್ಪನ್ನಗಳಲ್ಲಿ ಹೆಚ್ಚೆಂದರೆ ನೂರು ಉತ್ಪನ್ನಗಳಿಗೆ ರಕ್ಷಣೆ ನೀಡಬಹುದು. ಅಡಿಕೆ, ಮೆಣಸು ಇತ್ಯಾದಿಗೆ ತೊಂದರೆ ಇಲ್ಲ ಎನ್ನುತ್ತಾರಲ್ಲ ಎಂಬ ಪ್ರಶ್ನೆಯೂ ಎದುರಾಗುತ್ತದೆ. ಸದ್ಯಕ್ಕೆ ತೊಂದರೆ ಕಾಣಿಸದಿದ್ದರೂ, ಸದಸ್ಯ ರಾಷ್ಟ್ರಗಳು ನಿಯಮಗಳನ್ನು ತಿದ್ದುಪಡಿ ಮಾಡಿದಾಗ ಪರಿಣಾಮ ಏನಾಗುತ್ತದೆ ಎಂಬ ಬಗ್ಗೆ ಊಹಿಸುವುದು ಕಷ್ಟ. ಮುಖ್ಯವಾಗಿ ಯಾವ ಸರಕಿಗೂ ಆಧುನಿಕ ವ್ಯಾಪಾರ ಒಪ್ಪಂದದಲ್ಲಿ ಖಾಯಂ ರಕ್ಷಣೆ ಎಂಬುದು ಇಲ್ಲ.

ನಮಗೆ ಆಪತ್ತು ಇದೆ ಎಂದು ಏಕೆ ಭಾವಿಸಲಾಗುತ್ತಿದೆ..?
ನಮ್ಮ ಉತ್ಪನ್ನಗಳು ಸ್ಪರ್ಧಾತ್ಮಕವಾಗಿಲ್ಲ. ಗುಣಮಟ್ಟದಲ್ಲೂ, ಉತ್ಪಾದಕ ವೆಚ್ಚದಲ್ಲೂ ಎಂಬ ಆತಂಕ ಇದೆ. ಉಳಿದ ದೇಶಗಳ, ಅದರಲ್ಲೂ ಚೀನಾದ ಉತ್ಪನ್ನಗಳು, ನಮ್ಮ ಉತ್ಪನ್ನಗಳಿಗಿಂತ ಅಗ್ಗವಾಗಿ ಉತ್ಪಾದನೆಯಾಗುತ್ತವೆ. ಆದ್ದರಿಂದ ದೇಶೀಯ ಉತ್ಪನ್ನಗಳಿಗೆ ಬೇಡಿಕೆ ಕಡಿಮೆಯಾಗುವ ಆತಂಕವೂ ಇದೆ.

ಸರ್ಕಾರ ಏನು ಮಾಡಬೇಕು..?
ಮುಖ್ಯವಾಗಿ ವಿವಿಧ ಕ್ಷೇತ್ರಗಳಲ್ಲಿ ಉತ್ಪಾದಕತೆ ಮತ್ತು ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಲು ಬಂಡವಾಳ ಹೂಡಬೇಕು. ಇದು ಮೂಲತಃ ತರಬೇತಿ , ಕೌಶಲ್ಯಗಳಿಗೆ ಸಂಬಂಧಿಸಿದ್ದಾಗಿದೆ. ಈ ರೀತಿ ದೇಶೀಯ ಉತ್ಪಾದನೆಯನ್ನು ಸನ್ನದ್ಧಗೊಳಿಸಲು ಮೊದಲು ಸಹಿ ಹಾಕಿದರೆ, ನಮ್ಮ ಉತ್ಪಾದಕರು ತೊಂದರೆಗೆ ಒಳಗಾಗುತ್ತಾರೆ.

ಸರ್ಕಾರ ಏನು ಮಾಡುತ್ತಿದೆ..?
ಕೃಷಿ ಮತ್ತಿತರ ಕ್ಷೇತ್ರಗಳು, ರಾಜ್ಯಗಳಿಗೆ ಸಂಬಂಧಿಸಿದ ಕಾರಣ ಆಯಾ ರಾಜ್ಯಗಳಲ್ಲಿ ಕೌಶಲ್ಯ ತರಬೇತಿ ಅಷ್ಟೇ ಅಲ್ಲ, ರೈತಾಪಿ ವರ್ಗಕ್ಕೆ ಮಾರ್ಗದರ್ಶನ ಮಾಡುವ ಬಲು ದೊಡ್ಡ ತರಬೇತುದಾರರ ಪಡೆಯನ್ನು ನಿಯೋಜಿಸಬೇಕಾಗಿದೆ. ಹಾಗೇ ಉತ್ಪಾದನಾ ಗುಣಮಟ್ಟದ ಬಗ್ಗೆ ಮಾನದಂಡಗಳನ್ನು ತಳಮಟ್ಟದವರೆಗೂ ಮನನ ಮಾಡಿಸಿ, ಉತ್ಪನ್ನವನ್ನು ಶ್ರೇಷ್ಠಗೊಳಿಸಬೇಕು. ಇದರೊಂದಿಗೆ ಒಳಸುರಿ, ಕೊಯ್ಲು ಸಾಗಣೆ, ಸಂಸ್ಕರಣೆ, ಪ್ಯಾಕೇಜಿಂಗ್, ಮೌಲ್ಯವರ್ಧನೆ- ಹೀಗೆ ಎಲ್ಲಾ ಆಯಾಮಗಳಲ್ಲೂ ಏಕಕಾಲಕ್ಕೆ ಸಂರಚನೆ ಸೃಷ್ಟಿಸಬೇಕು.

ಈಗಾಗಲೇ ಸರ್ಕಾರ ಕೈಗೊಂಡಿರುವ ಉಪಕ್ರಮಗಳು ಯಾವವು..?
ಕೃಷಿ ಮತ್ತು ಕೌಶಲ್ಯ ಕ್ಷೇತ್ರಗಳಲ್ಲಿ ಘೋಷಿಸಿದ ಉಪಕ್ರಮಗಳ ಶೇ. 10ರಷ್ಟೂ ಕೆಲಸವಾಗಿಲ್ಲ. ಉದಾ: ಕೌಶಲ್ಯ ಕ್ಷೇತ್ರದಲ್ಲಿ 41 ಸ್ಕಿಲ್ ಕೌನ್ಸಿಲ್‍ಗಳನ್ನು ಘೋಷಿಸಿ, ಸುಮಾರು 5000 ಉದ್ಯೋಗ ಸಾಧ್ಯತೆಗಳನ್ನು ಗುರುತಿಸಬೇಕಿದೆ.  ಅಲ್ಪಕಾಲೀನ ತರಬೇತಿ ಮೂಲಕ ಕೌಶಲ್ಯ ತರಬೇತಿ ಪಡೆದ ಲಕ್ಷಾಂತರ ಯುವಕರನ್ನು ಸೃಷ್ಟಿಸುವ ಘೋಷಣೆ ಇದೆ. ಆದರೆ ಬಹುತೇಕ ಕೌನ್ಸಿಲ್‌ಗಳಲ್ಲಿ ಗುಣಮಟ್ಟದ ತರಬೇತಿಯೇ ಇಲ್ಲ.
ಆಹಾರ ಸಂಸ್ಕರಣೆಯಲ್ಲೂ ಅಷ್ಟೇ. ಶೇ. 10-30ರಷ್ಟು ಉತ್ಪನ್ನ ಹಾಳಾಗುತ್ತಿದೆ ಎಂದು ಸರ್ಕಾರದ ಅಧಿಕೃತ ವಿವರಗಳೇ ಹೇಳುತ್ತಿವೆ.

ಮುಖ್ಯವಾಗಿ ಆರ್ಥಿಕ ಸಂಕಷ್ಟದಲ್ಲಿರುವ ಸರ್ಕಾರ ಈ ವಿವಿಧ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಬೇಕಾದಷ್ಟು ಅನುದಾನ ಒದಗಿಸಿಲ್ಲ. ಈಗ ಈ ಒಪ್ಪಂದ ಎಂಬ ಪೆಡಂಭೂತ ನಮ್ಮ ದಿಡ್ಡಿ ಬಾಗಿಲಿಗೆ ಬಂದಿದೆ. ನಮ್ಮನ್ನು ಆಳುವವರ ಕೈ ತಿರುಚಿಯಾದರೂ ಇದಕ್ಕೆ ಸಹಿ ಹಾಕಿಸುವ ಶಕ್ತಿ ಚೀನಾದಿಂದ ಹಿಡಿದು ಇತರೆ ದೇಶಗಳಿಗೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...