Homeಕರ್ನಾಟಕಸನಾತನ ಧರ್ಮ ಎಂದರೇನು?: ಚಿಂತಕ ಕೆ.ಪಿ. ಸುರೇಶ್ ವಿಶ್ಲೇಷಣೆ ಇಲ್ಲಿದೆ..

ಸನಾತನ ಧರ್ಮ ಎಂದರೇನು?: ಚಿಂತಕ ಕೆ.ಪಿ. ಸುರೇಶ್ ವಿಶ್ಲೇಷಣೆ ಇಲ್ಲಿದೆ..

- Advertisement -
- Advertisement -

”ವರ್ಣಾಶ್ರಮ ವ್ಯವಸ್ಥೆಯನ್ನು ಜೀವಂತವಾಗಿ ಇರಿಸುವ ಉದ್ದೇಶ ಸನಾತನ ಧರ್ಮ ಹೊಂದಿದೆ. ಅದಕ್ಕಾಗಿ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವ ಮನಸ್ಥಿತಿಯ ಮುಖಂಡರು ಮುಂದಾಗಿದ್ದಾರೆ. ಈ ಕಾರಣದಿಂದ ದೇಶದ ಬಹುಸಂಖ್ಯಾತ ಶೂದ್ರ ಸಮುದಾಯ ಅಪಾಯಕ್ಕೆ ಸಿಲುಕಲಿದೆ” ಎಂದು ವಿಮರ್ಶಕ, ಚಿಂತಕ ಕೆ.ಪಿ. ಸುರೇಶ್ ಹೇಳಿದರು.

ಸಾಗರದ ಸರಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಸನಾತನ ಧರ್ಮ ಎಂದರೇನು? ಎಂಬ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಮಹಾಭಾರತ, ಭಗವದ್ಗೀತೆ ಇವುಗಳನ್ನು ಅಧ್ಯಯನ ಮಾಡಿದರೆ ಸನಾತನ ಧರ್ಮದ ಉದ್ದೇಶಗಳು ತಿಳಿಯುತ್ತವೆ. ಅದರೊಳಗಿನ ಆಂತರ್ಯ ಅರಿಯಲು ನಾವೆಲ್ಲರೂ ಮುಂದಾಗಬೇಕು. ಸನಾತನ ಧರ್ಮದಲ್ಲಿ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರನೆಂಬ ವರ್ಣಾಶ್ರಮ ವ್ಯವಸ್ಥೆ ಇದ್ದು, ಶೂದ್ರರು ಕನಿಷ್ಠವಾಗಿ ಕಾಣಲ್ಪಡುತ್ತಾರೆ. ಅವರು ಸಹ ನಮ್ಮಂತೆ ಮನುಷ್ಯರೆಂಬ ಅಂಬೇಡ್ಕರ್ ರಚಿತ ಸಂವಿಧಾನವನ್ನು ಇಂದಿನ ಬಿಜೆಪಿ ಸರ್ಕಾರ ತಿದ್ದುಪಡಿ ತರದೆ ನಿಷ್ಪಲಗೊಳಿಸುವ ಕೆಲಸಕ್ಕೆ ಮುಂದಾಗುತ್ತಿರುವುದು ಖೇದಕರ ವಿಚಾರ. ಅದಕ್ಕೆ ವಿಚಾರವಾದಿಗಳು ಒಂದಾಗಿ ಸೇರಿ ಜನತೆಯನ್ನು ಜಾಗೃತಿಗೊಳಿಸಬೇಕಿದೆ” ಎಂದು ಹೇಳಿದರು.

”ಈ ದೇಶದಲ್ಲಿ ಆಳಬೇಕಾದ ಸಮುದಾಯ ಆಳಿಸಿಕೊಳ್ಳುತ್ತಿದೆ. ರೈತರು ಸಂಘಟಿತರಾದರೆ ಅವರೇ ಚುಕ್ಕಾಣಿ ಹಿಡಿಯಬಹುದು. ದಲಿತರು, ಹಿಙದುಳಿದವರು ತುಂಡುಗಳಾಗಿ ಒಡೆದು ಹೋಗುತ್ತಿರುವ ದಿನಗಳಲ್ಲಿ ಈ ಸಮುದಾಯಗಳಿಂದ ರಾಜಕಾರಣಿಗಳಿಗೆ ಲಾಭವಾಗುತ್ತಿದೆ. ದೇಶದಲ್ಲಿ ಅಲ್ಪಸಂಖ್ಯಾತರಾದ ಮುಸಲ್ಮಾನರು ಮೀಸಲಾತಿ ಎಷ್ಟು ಪಡೆದಿದ್ದಾರೆ. ಸಣ್ಣ ಸಮುದಾಯವಾದ ಬ್ರಾಹ್ಮಣ ಸಮುದಾಯ ಎಷ್ಟು ಮೀಸಲಾತಿ ಪಡೆದಿದೆ. ಇದನ್ನು ಹೆಚ್ಚಾಗಿ ಪ್ರಚಾರ ನೀಡದೆ ಅಲ್ಲಿಯೇ ಒತ್ತುತ್ತಿರುವುದು ವಿಷಾದನೀಯ. ಯಾರಾದರೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಅವರನ್ನು ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳುವವರು ವಿಶ್ವದಲ್ಲಿರುವ ಬೇರೆ ದೇಶಗಳ ಹೆಸರನ್ನಕ್ಕೆ ಹೇಳುವುದಿಲ್ಲ” ಎಂದರು.

”ಇಲ್ಲಿ ಧರ್ಮವನ್ನು ಹಿಡಿದುಕೊಂಡು ರಾಜಕಾರಣ ಮಾಡಲಾಗುತ್ತಿದೆ ಬದಲಿಗೆ ಆಳುವವರು ರಾಜಧರ್ಮ ಪಾಲಿಸದೆ ಶೂದ್ರರನ್ನು ತುಳಿಯುತ್ತಿರುವುದು ಎಷ್ಟು ಸರಿ ಇದೆ ಎಂದು ಹೇಳಿದರು. ವಿಶ್ವದಲ್ಲಿ ಪಾಕಿಸ್ತಾನವನ್ನು ಭಯೋತ್ಪಾದಕ ದೇಶ ಎಂದು ಹೇಳುವ ನಮ್ಮ ಸರಕಾರಗಳು ಅವರೊಂದಿಗೆ ಏಕೆ ರಾಜ್ಯ ತಾಂತ್ರಿಕ ಭಾಂದವ್ಯವನ್ನು ಮುರಿದುಕೊಂಡಿಲ್ಲ ಎಂಬುದನ್ನು ಈ ದೇಶದ ಜನತೆ ಅರ್ಥಮಾಡಿಕೊಳ್ಳಬೇಕು” ಎಂದು ಎಚ್ಚರಿಸಿದರು.

”ದೇಶದಲ್ಲಿ ಮುಸಲ್ಮಾನ ಸಮುದಾಯ ಬೆರಳು ತೋರಿಸಿ ಅಧಿಕಾರ ಹಿಡಿಯುವ ಪಕ್ಷ ಒಂದು ಅವರ ಹೆಸರಿನಲ್ಲಿ ಶೂದ್ರ ಸಮುದಾಯವನ್ನು ಲೆಕ್ಕಕ್ಕಿಲ್ಲದಂತೆ ಮಾಡುತ್ತಿದ್ದಾರೆ ಮೀಸಲಾತಿಯ ಬಗ್ಗೆ ಮಾತನಾಡುವ ನೇತಾರರು 3% ಇರುವ ಸಮುದಾಯಕ್ಕೆ ಏಕೆ 10% ಮೀಸಲಾತಿ ನೀಡಿದರು. ಇದು ವಿಚಾರ ಮಾಡುವಂಥದ್ದು” ಎಂದರು.

”ನಾವುಗಳು ಇಂದು ಚಿರತೆಯೊಂದು ಜಿಂಕೆಯ ಗುಂಪನ್ನು ದೂರದಿಂದ ನೋಡುತ್ತದೆ. ಮರದ ಮೇಲಿನ ಮುಷಿಯ ಇದನ್ನು ನೋಡಿ ಜೋರಾಗಿ ಕಿರುಚುತ್ತದೆ. ಆಗ ಜಿಂಕೆ ಹಿಂಡು ಅಪಾಯದಿಂದ ಪಾರಾಗಲು ಕೊಡುವ ಸೂಚನೆಯ ಹೊರತು ಇದರಿಂದ ಮರದ ಮೇಲಿನ ಮುಶಿಯಕ್ಕೇನು ಅಪಾಯವಿಲ್ಲ. ಇಂದಿನ ದಿನಮಾನಕ್ಕೆ ಜಾಗೃತರಾಗುವ ಪ್ರಜೆಗಳು ಮುಶಿಯಾದ ಪಾತ್ರ ವಹಿಸಬೇಕು” ಎಂದು ಹೇಳಿದರು.

”ಉದಯ ನಿಧಿ ಸ್ಟಾಲಿನ್ ಹೇಳಿದ ಸನಾತನ ಧರ್ಮದ ಹೇಳಿಕೆಗೆ ಆರಂಭದಲ್ಲಿ ವಿರೋಧ ಉಂಟಾಯಿತು. ಹಿಂದೂಪರ ಸಂಘಟನೆಗಳು ಪ್ರತಿರೋಧ ತೋರಿಸಿದವು. ಆದರೆ ಸನಾತನ ಧರ್ಮದ ಬಗ್ಗೆ ಹೆಚ್ಚಿಗೆ ವಿರೋಧಿಸಿದರೆ ಅಲ್ಲಿ ಇತರ ಸಮುದಾಯಗಳು ನಮ್ಮಿಂದ ದೂರವಾಗಿ ವೋಟ್ ಬ್ಯಾಂಕ್ ಇಲ್ಲದಂತಾಗಬಹುದು ಎಂಬ ಕಾರಣಕ್ಕೆ ಒಂದು ರಾಜಕೀಯ ಪಕ್ಷ ಸುಮ್ಮನಾಗಿದೆ. ಸನಾತನ ಧರ್ಮದ ಬಗ್ಗೆ ಮಾತನಾಡಿದಾಗ ಪ್ರತಿಭಟನೆ ಇಳಿಯುವ ಧರ್ಮರಕ್ಷಕರು ಮಣಿಪುರದಲ್ಲಿ ಕುಕ್ಕಿ ಮತ್ತು ಮೈತೆಯಿ ಈ ಸಮುದಾಯದ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿ ರಸ್ತೆಯಲ್ಲಿ ಮೆರವಣಿಗೆ ಮಾಡುವಾಗ ಎಲ್ಲಿ ಹೋಗಿದ್ದರೆಂದು ಪ್ರಶ್ನಿಸಿದರು. ಈಗಾಗಲೇ ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಭುಗಿಲೆದ್ದಿದೆ. ಈ ಕಾರಣದಿಂದ ಸನಾತನ ಧರ್ಮದ ಉದಯ ನಿಧಿ ಸ್ಟಾಲಿನ್ ಹೇಳಿಕೆ ಮೂಲೆಗುಂಪಾಗಿದೆ. ಇವುಗಳ ಬಗ್ಗೆ ಚರ್ಚೆ ನಡೆಯಬೇಕು” ಎಂದರು.

”ಸನಾತನ ಧರ್ಮದ ಕಿರುಕುಳದಿಂದ ಜೈನ ಧರ್ಮ ಉದಯವಾಯಿತು. ಲಿಂಗಾಯತ ಧರ್ಮ ಉದಯವಾಯಿತು. ಅನೇಕರು ಹಿಂದೂ ಧರ್ಮವನ್ನು ತೊರೆದು ಬೌದ್ಧ ಮತ್ತು ಕ್ರಿಶ್ಚಿಯನ್ ಧರ್ಮದ ಕಡೆ ಮುಖ ಮಾಡಿದರು. ಇದಕ್ಕೆಲ್ಲ ಕಾರಣ ಧರ್ಮದಲ್ಲಿ ಇರುವ ತಾರತಮ್ಯ ಇವುಗಳ ಬಗ್ಗೆ ಪ್ರಶ್ನಿಸಿದರೆ ಅವರು ಧರ್ಮವಿರೋಧಿಗಳೆಂಬ ಹಣೆಪಟ್ಟಿ ಕಟ್ಟುತ್ತಾರೆ. ಕೋರ್ಟು, ಕೇಸುಗಳೆಂದು ಅಲೆಯುವಂತೆ ಮಾಡುತ್ತಾರೆ. ಆದರೂ ಸತ್ಯವಾದ ಮಾತನ್ನು ಜನತೆಗೆ ತಿಳಿಸುವ ಕೆಲಸ ಮಾಡಬೇಕಿದೆ. ಅದಕ್ಕಾಗಿ ನಾವೆಲ್ಲರೂ ಸೇರಿ ಮುನ್ನಡೆಯೋಣ” ಎಂದು ಹೇಳಿದರು.

ಇದನ್ನೂ ಓದಿ: ಸನಾತನ ವಿವಾದ: ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...