Homeಕರ್ನಾಟಕಸನಾತನ ಧರ್ಮ ಎಂದರೇನು?: ಚಿಂತಕ ಕೆ.ಪಿ. ಸುರೇಶ್ ವಿಶ್ಲೇಷಣೆ ಇಲ್ಲಿದೆ..

ಸನಾತನ ಧರ್ಮ ಎಂದರೇನು?: ಚಿಂತಕ ಕೆ.ಪಿ. ಸುರೇಶ್ ವಿಶ್ಲೇಷಣೆ ಇಲ್ಲಿದೆ..

- Advertisement -
- Advertisement -

”ವರ್ಣಾಶ್ರಮ ವ್ಯವಸ್ಥೆಯನ್ನು ಜೀವಂತವಾಗಿ ಇರಿಸುವ ಉದ್ದೇಶ ಸನಾತನ ಧರ್ಮ ಹೊಂದಿದೆ. ಅದಕ್ಕಾಗಿ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವ ಮನಸ್ಥಿತಿಯ ಮುಖಂಡರು ಮುಂದಾಗಿದ್ದಾರೆ. ಈ ಕಾರಣದಿಂದ ದೇಶದ ಬಹುಸಂಖ್ಯಾತ ಶೂದ್ರ ಸಮುದಾಯ ಅಪಾಯಕ್ಕೆ ಸಿಲುಕಲಿದೆ” ಎಂದು ವಿಮರ್ಶಕ, ಚಿಂತಕ ಕೆ.ಪಿ. ಸುರೇಶ್ ಹೇಳಿದರು.

ಸಾಗರದ ಸರಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಸನಾತನ ಧರ್ಮ ಎಂದರೇನು? ಎಂಬ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಮಹಾಭಾರತ, ಭಗವದ್ಗೀತೆ ಇವುಗಳನ್ನು ಅಧ್ಯಯನ ಮಾಡಿದರೆ ಸನಾತನ ಧರ್ಮದ ಉದ್ದೇಶಗಳು ತಿಳಿಯುತ್ತವೆ. ಅದರೊಳಗಿನ ಆಂತರ್ಯ ಅರಿಯಲು ನಾವೆಲ್ಲರೂ ಮುಂದಾಗಬೇಕು. ಸನಾತನ ಧರ್ಮದಲ್ಲಿ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರನೆಂಬ ವರ್ಣಾಶ್ರಮ ವ್ಯವಸ್ಥೆ ಇದ್ದು, ಶೂದ್ರರು ಕನಿಷ್ಠವಾಗಿ ಕಾಣಲ್ಪಡುತ್ತಾರೆ. ಅವರು ಸಹ ನಮ್ಮಂತೆ ಮನುಷ್ಯರೆಂಬ ಅಂಬೇಡ್ಕರ್ ರಚಿತ ಸಂವಿಧಾನವನ್ನು ಇಂದಿನ ಬಿಜೆಪಿ ಸರ್ಕಾರ ತಿದ್ದುಪಡಿ ತರದೆ ನಿಷ್ಪಲಗೊಳಿಸುವ ಕೆಲಸಕ್ಕೆ ಮುಂದಾಗುತ್ತಿರುವುದು ಖೇದಕರ ವಿಚಾರ. ಅದಕ್ಕೆ ವಿಚಾರವಾದಿಗಳು ಒಂದಾಗಿ ಸೇರಿ ಜನತೆಯನ್ನು ಜಾಗೃತಿಗೊಳಿಸಬೇಕಿದೆ” ಎಂದು ಹೇಳಿದರು.

”ಈ ದೇಶದಲ್ಲಿ ಆಳಬೇಕಾದ ಸಮುದಾಯ ಆಳಿಸಿಕೊಳ್ಳುತ್ತಿದೆ. ರೈತರು ಸಂಘಟಿತರಾದರೆ ಅವರೇ ಚುಕ್ಕಾಣಿ ಹಿಡಿಯಬಹುದು. ದಲಿತರು, ಹಿಙದುಳಿದವರು ತುಂಡುಗಳಾಗಿ ಒಡೆದು ಹೋಗುತ್ತಿರುವ ದಿನಗಳಲ್ಲಿ ಈ ಸಮುದಾಯಗಳಿಂದ ರಾಜಕಾರಣಿಗಳಿಗೆ ಲಾಭವಾಗುತ್ತಿದೆ. ದೇಶದಲ್ಲಿ ಅಲ್ಪಸಂಖ್ಯಾತರಾದ ಮುಸಲ್ಮಾನರು ಮೀಸಲಾತಿ ಎಷ್ಟು ಪಡೆದಿದ್ದಾರೆ. ಸಣ್ಣ ಸಮುದಾಯವಾದ ಬ್ರಾಹ್ಮಣ ಸಮುದಾಯ ಎಷ್ಟು ಮೀಸಲಾತಿ ಪಡೆದಿದೆ. ಇದನ್ನು ಹೆಚ್ಚಾಗಿ ಪ್ರಚಾರ ನೀಡದೆ ಅಲ್ಲಿಯೇ ಒತ್ತುತ್ತಿರುವುದು ವಿಷಾದನೀಯ. ಯಾರಾದರೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಅವರನ್ನು ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳುವವರು ವಿಶ್ವದಲ್ಲಿರುವ ಬೇರೆ ದೇಶಗಳ ಹೆಸರನ್ನಕ್ಕೆ ಹೇಳುವುದಿಲ್ಲ” ಎಂದರು.

”ಇಲ್ಲಿ ಧರ್ಮವನ್ನು ಹಿಡಿದುಕೊಂಡು ರಾಜಕಾರಣ ಮಾಡಲಾಗುತ್ತಿದೆ ಬದಲಿಗೆ ಆಳುವವರು ರಾಜಧರ್ಮ ಪಾಲಿಸದೆ ಶೂದ್ರರನ್ನು ತುಳಿಯುತ್ತಿರುವುದು ಎಷ್ಟು ಸರಿ ಇದೆ ಎಂದು ಹೇಳಿದರು. ವಿಶ್ವದಲ್ಲಿ ಪಾಕಿಸ್ತಾನವನ್ನು ಭಯೋತ್ಪಾದಕ ದೇಶ ಎಂದು ಹೇಳುವ ನಮ್ಮ ಸರಕಾರಗಳು ಅವರೊಂದಿಗೆ ಏಕೆ ರಾಜ್ಯ ತಾಂತ್ರಿಕ ಭಾಂದವ್ಯವನ್ನು ಮುರಿದುಕೊಂಡಿಲ್ಲ ಎಂಬುದನ್ನು ಈ ದೇಶದ ಜನತೆ ಅರ್ಥಮಾಡಿಕೊಳ್ಳಬೇಕು” ಎಂದು ಎಚ್ಚರಿಸಿದರು.

”ದೇಶದಲ್ಲಿ ಮುಸಲ್ಮಾನ ಸಮುದಾಯ ಬೆರಳು ತೋರಿಸಿ ಅಧಿಕಾರ ಹಿಡಿಯುವ ಪಕ್ಷ ಒಂದು ಅವರ ಹೆಸರಿನಲ್ಲಿ ಶೂದ್ರ ಸಮುದಾಯವನ್ನು ಲೆಕ್ಕಕ್ಕಿಲ್ಲದಂತೆ ಮಾಡುತ್ತಿದ್ದಾರೆ ಮೀಸಲಾತಿಯ ಬಗ್ಗೆ ಮಾತನಾಡುವ ನೇತಾರರು 3% ಇರುವ ಸಮುದಾಯಕ್ಕೆ ಏಕೆ 10% ಮೀಸಲಾತಿ ನೀಡಿದರು. ಇದು ವಿಚಾರ ಮಾಡುವಂಥದ್ದು” ಎಂದರು.

”ನಾವುಗಳು ಇಂದು ಚಿರತೆಯೊಂದು ಜಿಂಕೆಯ ಗುಂಪನ್ನು ದೂರದಿಂದ ನೋಡುತ್ತದೆ. ಮರದ ಮೇಲಿನ ಮುಷಿಯ ಇದನ್ನು ನೋಡಿ ಜೋರಾಗಿ ಕಿರುಚುತ್ತದೆ. ಆಗ ಜಿಂಕೆ ಹಿಂಡು ಅಪಾಯದಿಂದ ಪಾರಾಗಲು ಕೊಡುವ ಸೂಚನೆಯ ಹೊರತು ಇದರಿಂದ ಮರದ ಮೇಲಿನ ಮುಶಿಯಕ್ಕೇನು ಅಪಾಯವಿಲ್ಲ. ಇಂದಿನ ದಿನಮಾನಕ್ಕೆ ಜಾಗೃತರಾಗುವ ಪ್ರಜೆಗಳು ಮುಶಿಯಾದ ಪಾತ್ರ ವಹಿಸಬೇಕು” ಎಂದು ಹೇಳಿದರು.

”ಉದಯ ನಿಧಿ ಸ್ಟಾಲಿನ್ ಹೇಳಿದ ಸನಾತನ ಧರ್ಮದ ಹೇಳಿಕೆಗೆ ಆರಂಭದಲ್ಲಿ ವಿರೋಧ ಉಂಟಾಯಿತು. ಹಿಂದೂಪರ ಸಂಘಟನೆಗಳು ಪ್ರತಿರೋಧ ತೋರಿಸಿದವು. ಆದರೆ ಸನಾತನ ಧರ್ಮದ ಬಗ್ಗೆ ಹೆಚ್ಚಿಗೆ ವಿರೋಧಿಸಿದರೆ ಅಲ್ಲಿ ಇತರ ಸಮುದಾಯಗಳು ನಮ್ಮಿಂದ ದೂರವಾಗಿ ವೋಟ್ ಬ್ಯಾಂಕ್ ಇಲ್ಲದಂತಾಗಬಹುದು ಎಂಬ ಕಾರಣಕ್ಕೆ ಒಂದು ರಾಜಕೀಯ ಪಕ್ಷ ಸುಮ್ಮನಾಗಿದೆ. ಸನಾತನ ಧರ್ಮದ ಬಗ್ಗೆ ಮಾತನಾಡಿದಾಗ ಪ್ರತಿಭಟನೆ ಇಳಿಯುವ ಧರ್ಮರಕ್ಷಕರು ಮಣಿಪುರದಲ್ಲಿ ಕುಕ್ಕಿ ಮತ್ತು ಮೈತೆಯಿ ಈ ಸಮುದಾಯದ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿ ರಸ್ತೆಯಲ್ಲಿ ಮೆರವಣಿಗೆ ಮಾಡುವಾಗ ಎಲ್ಲಿ ಹೋಗಿದ್ದರೆಂದು ಪ್ರಶ್ನಿಸಿದರು. ಈಗಾಗಲೇ ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಭುಗಿಲೆದ್ದಿದೆ. ಈ ಕಾರಣದಿಂದ ಸನಾತನ ಧರ್ಮದ ಉದಯ ನಿಧಿ ಸ್ಟಾಲಿನ್ ಹೇಳಿಕೆ ಮೂಲೆಗುಂಪಾಗಿದೆ. ಇವುಗಳ ಬಗ್ಗೆ ಚರ್ಚೆ ನಡೆಯಬೇಕು” ಎಂದರು.

”ಸನಾತನ ಧರ್ಮದ ಕಿರುಕುಳದಿಂದ ಜೈನ ಧರ್ಮ ಉದಯವಾಯಿತು. ಲಿಂಗಾಯತ ಧರ್ಮ ಉದಯವಾಯಿತು. ಅನೇಕರು ಹಿಂದೂ ಧರ್ಮವನ್ನು ತೊರೆದು ಬೌದ್ಧ ಮತ್ತು ಕ್ರಿಶ್ಚಿಯನ್ ಧರ್ಮದ ಕಡೆ ಮುಖ ಮಾಡಿದರು. ಇದಕ್ಕೆಲ್ಲ ಕಾರಣ ಧರ್ಮದಲ್ಲಿ ಇರುವ ತಾರತಮ್ಯ ಇವುಗಳ ಬಗ್ಗೆ ಪ್ರಶ್ನಿಸಿದರೆ ಅವರು ಧರ್ಮವಿರೋಧಿಗಳೆಂಬ ಹಣೆಪಟ್ಟಿ ಕಟ್ಟುತ್ತಾರೆ. ಕೋರ್ಟು, ಕೇಸುಗಳೆಂದು ಅಲೆಯುವಂತೆ ಮಾಡುತ್ತಾರೆ. ಆದರೂ ಸತ್ಯವಾದ ಮಾತನ್ನು ಜನತೆಗೆ ತಿಳಿಸುವ ಕೆಲಸ ಮಾಡಬೇಕಿದೆ. ಅದಕ್ಕಾಗಿ ನಾವೆಲ್ಲರೂ ಸೇರಿ ಮುನ್ನಡೆಯೋಣ” ಎಂದು ಹೇಳಿದರು.

ಇದನ್ನೂ ಓದಿ: ಸನಾತನ ವಿವಾದ: ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...