Homeಕರ್ನಾಟಕಸನಾತನ ಧರ್ಮ ಎಂದರೇನು?: ಚಿಂತಕ ಕೆ.ಪಿ. ಸುರೇಶ್ ವಿಶ್ಲೇಷಣೆ ಇಲ್ಲಿದೆ..

ಸನಾತನ ಧರ್ಮ ಎಂದರೇನು?: ಚಿಂತಕ ಕೆ.ಪಿ. ಸುರೇಶ್ ವಿಶ್ಲೇಷಣೆ ಇಲ್ಲಿದೆ..

- Advertisement -
- Advertisement -

”ವರ್ಣಾಶ್ರಮ ವ್ಯವಸ್ಥೆಯನ್ನು ಜೀವಂತವಾಗಿ ಇರಿಸುವ ಉದ್ದೇಶ ಸನಾತನ ಧರ್ಮ ಹೊಂದಿದೆ. ಅದಕ್ಕಾಗಿ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವ ಮನಸ್ಥಿತಿಯ ಮುಖಂಡರು ಮುಂದಾಗಿದ್ದಾರೆ. ಈ ಕಾರಣದಿಂದ ದೇಶದ ಬಹುಸಂಖ್ಯಾತ ಶೂದ್ರ ಸಮುದಾಯ ಅಪಾಯಕ್ಕೆ ಸಿಲುಕಲಿದೆ” ಎಂದು ವಿಮರ್ಶಕ, ಚಿಂತಕ ಕೆ.ಪಿ. ಸುರೇಶ್ ಹೇಳಿದರು.

ಸಾಗರದ ಸರಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಸನಾತನ ಧರ್ಮ ಎಂದರೇನು? ಎಂಬ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಮಹಾಭಾರತ, ಭಗವದ್ಗೀತೆ ಇವುಗಳನ್ನು ಅಧ್ಯಯನ ಮಾಡಿದರೆ ಸನಾತನ ಧರ್ಮದ ಉದ್ದೇಶಗಳು ತಿಳಿಯುತ್ತವೆ. ಅದರೊಳಗಿನ ಆಂತರ್ಯ ಅರಿಯಲು ನಾವೆಲ್ಲರೂ ಮುಂದಾಗಬೇಕು. ಸನಾತನ ಧರ್ಮದಲ್ಲಿ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರನೆಂಬ ವರ್ಣಾಶ್ರಮ ವ್ಯವಸ್ಥೆ ಇದ್ದು, ಶೂದ್ರರು ಕನಿಷ್ಠವಾಗಿ ಕಾಣಲ್ಪಡುತ್ತಾರೆ. ಅವರು ಸಹ ನಮ್ಮಂತೆ ಮನುಷ್ಯರೆಂಬ ಅಂಬೇಡ್ಕರ್ ರಚಿತ ಸಂವಿಧಾನವನ್ನು ಇಂದಿನ ಬಿಜೆಪಿ ಸರ್ಕಾರ ತಿದ್ದುಪಡಿ ತರದೆ ನಿಷ್ಪಲಗೊಳಿಸುವ ಕೆಲಸಕ್ಕೆ ಮುಂದಾಗುತ್ತಿರುವುದು ಖೇದಕರ ವಿಚಾರ. ಅದಕ್ಕೆ ವಿಚಾರವಾದಿಗಳು ಒಂದಾಗಿ ಸೇರಿ ಜನತೆಯನ್ನು ಜಾಗೃತಿಗೊಳಿಸಬೇಕಿದೆ” ಎಂದು ಹೇಳಿದರು.

”ಈ ದೇಶದಲ್ಲಿ ಆಳಬೇಕಾದ ಸಮುದಾಯ ಆಳಿಸಿಕೊಳ್ಳುತ್ತಿದೆ. ರೈತರು ಸಂಘಟಿತರಾದರೆ ಅವರೇ ಚುಕ್ಕಾಣಿ ಹಿಡಿಯಬಹುದು. ದಲಿತರು, ಹಿಙದುಳಿದವರು ತುಂಡುಗಳಾಗಿ ಒಡೆದು ಹೋಗುತ್ತಿರುವ ದಿನಗಳಲ್ಲಿ ಈ ಸಮುದಾಯಗಳಿಂದ ರಾಜಕಾರಣಿಗಳಿಗೆ ಲಾಭವಾಗುತ್ತಿದೆ. ದೇಶದಲ್ಲಿ ಅಲ್ಪಸಂಖ್ಯಾತರಾದ ಮುಸಲ್ಮಾನರು ಮೀಸಲಾತಿ ಎಷ್ಟು ಪಡೆದಿದ್ದಾರೆ. ಸಣ್ಣ ಸಮುದಾಯವಾದ ಬ್ರಾಹ್ಮಣ ಸಮುದಾಯ ಎಷ್ಟು ಮೀಸಲಾತಿ ಪಡೆದಿದೆ. ಇದನ್ನು ಹೆಚ್ಚಾಗಿ ಪ್ರಚಾರ ನೀಡದೆ ಅಲ್ಲಿಯೇ ಒತ್ತುತ್ತಿರುವುದು ವಿಷಾದನೀಯ. ಯಾರಾದರೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಅವರನ್ನು ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳುವವರು ವಿಶ್ವದಲ್ಲಿರುವ ಬೇರೆ ದೇಶಗಳ ಹೆಸರನ್ನಕ್ಕೆ ಹೇಳುವುದಿಲ್ಲ” ಎಂದರು.

”ಇಲ್ಲಿ ಧರ್ಮವನ್ನು ಹಿಡಿದುಕೊಂಡು ರಾಜಕಾರಣ ಮಾಡಲಾಗುತ್ತಿದೆ ಬದಲಿಗೆ ಆಳುವವರು ರಾಜಧರ್ಮ ಪಾಲಿಸದೆ ಶೂದ್ರರನ್ನು ತುಳಿಯುತ್ತಿರುವುದು ಎಷ್ಟು ಸರಿ ಇದೆ ಎಂದು ಹೇಳಿದರು. ವಿಶ್ವದಲ್ಲಿ ಪಾಕಿಸ್ತಾನವನ್ನು ಭಯೋತ್ಪಾದಕ ದೇಶ ಎಂದು ಹೇಳುವ ನಮ್ಮ ಸರಕಾರಗಳು ಅವರೊಂದಿಗೆ ಏಕೆ ರಾಜ್ಯ ತಾಂತ್ರಿಕ ಭಾಂದವ್ಯವನ್ನು ಮುರಿದುಕೊಂಡಿಲ್ಲ ಎಂಬುದನ್ನು ಈ ದೇಶದ ಜನತೆ ಅರ್ಥಮಾಡಿಕೊಳ್ಳಬೇಕು” ಎಂದು ಎಚ್ಚರಿಸಿದರು.

”ದೇಶದಲ್ಲಿ ಮುಸಲ್ಮಾನ ಸಮುದಾಯ ಬೆರಳು ತೋರಿಸಿ ಅಧಿಕಾರ ಹಿಡಿಯುವ ಪಕ್ಷ ಒಂದು ಅವರ ಹೆಸರಿನಲ್ಲಿ ಶೂದ್ರ ಸಮುದಾಯವನ್ನು ಲೆಕ್ಕಕ್ಕಿಲ್ಲದಂತೆ ಮಾಡುತ್ತಿದ್ದಾರೆ ಮೀಸಲಾತಿಯ ಬಗ್ಗೆ ಮಾತನಾಡುವ ನೇತಾರರು 3% ಇರುವ ಸಮುದಾಯಕ್ಕೆ ಏಕೆ 10% ಮೀಸಲಾತಿ ನೀಡಿದರು. ಇದು ವಿಚಾರ ಮಾಡುವಂಥದ್ದು” ಎಂದರು.

”ನಾವುಗಳು ಇಂದು ಚಿರತೆಯೊಂದು ಜಿಂಕೆಯ ಗುಂಪನ್ನು ದೂರದಿಂದ ನೋಡುತ್ತದೆ. ಮರದ ಮೇಲಿನ ಮುಷಿಯ ಇದನ್ನು ನೋಡಿ ಜೋರಾಗಿ ಕಿರುಚುತ್ತದೆ. ಆಗ ಜಿಂಕೆ ಹಿಂಡು ಅಪಾಯದಿಂದ ಪಾರಾಗಲು ಕೊಡುವ ಸೂಚನೆಯ ಹೊರತು ಇದರಿಂದ ಮರದ ಮೇಲಿನ ಮುಶಿಯಕ್ಕೇನು ಅಪಾಯವಿಲ್ಲ. ಇಂದಿನ ದಿನಮಾನಕ್ಕೆ ಜಾಗೃತರಾಗುವ ಪ್ರಜೆಗಳು ಮುಶಿಯಾದ ಪಾತ್ರ ವಹಿಸಬೇಕು” ಎಂದು ಹೇಳಿದರು.

”ಉದಯ ನಿಧಿ ಸ್ಟಾಲಿನ್ ಹೇಳಿದ ಸನಾತನ ಧರ್ಮದ ಹೇಳಿಕೆಗೆ ಆರಂಭದಲ್ಲಿ ವಿರೋಧ ಉಂಟಾಯಿತು. ಹಿಂದೂಪರ ಸಂಘಟನೆಗಳು ಪ್ರತಿರೋಧ ತೋರಿಸಿದವು. ಆದರೆ ಸನಾತನ ಧರ್ಮದ ಬಗ್ಗೆ ಹೆಚ್ಚಿಗೆ ವಿರೋಧಿಸಿದರೆ ಅಲ್ಲಿ ಇತರ ಸಮುದಾಯಗಳು ನಮ್ಮಿಂದ ದೂರವಾಗಿ ವೋಟ್ ಬ್ಯಾಂಕ್ ಇಲ್ಲದಂತಾಗಬಹುದು ಎಂಬ ಕಾರಣಕ್ಕೆ ಒಂದು ರಾಜಕೀಯ ಪಕ್ಷ ಸುಮ್ಮನಾಗಿದೆ. ಸನಾತನ ಧರ್ಮದ ಬಗ್ಗೆ ಮಾತನಾಡಿದಾಗ ಪ್ರತಿಭಟನೆ ಇಳಿಯುವ ಧರ್ಮರಕ್ಷಕರು ಮಣಿಪುರದಲ್ಲಿ ಕುಕ್ಕಿ ಮತ್ತು ಮೈತೆಯಿ ಈ ಸಮುದಾಯದ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿ ರಸ್ತೆಯಲ್ಲಿ ಮೆರವಣಿಗೆ ಮಾಡುವಾಗ ಎಲ್ಲಿ ಹೋಗಿದ್ದರೆಂದು ಪ್ರಶ್ನಿಸಿದರು. ಈಗಾಗಲೇ ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಭುಗಿಲೆದ್ದಿದೆ. ಈ ಕಾರಣದಿಂದ ಸನಾತನ ಧರ್ಮದ ಉದಯ ನಿಧಿ ಸ್ಟಾಲಿನ್ ಹೇಳಿಕೆ ಮೂಲೆಗುಂಪಾಗಿದೆ. ಇವುಗಳ ಬಗ್ಗೆ ಚರ್ಚೆ ನಡೆಯಬೇಕು” ಎಂದರು.

”ಸನಾತನ ಧರ್ಮದ ಕಿರುಕುಳದಿಂದ ಜೈನ ಧರ್ಮ ಉದಯವಾಯಿತು. ಲಿಂಗಾಯತ ಧರ್ಮ ಉದಯವಾಯಿತು. ಅನೇಕರು ಹಿಂದೂ ಧರ್ಮವನ್ನು ತೊರೆದು ಬೌದ್ಧ ಮತ್ತು ಕ್ರಿಶ್ಚಿಯನ್ ಧರ್ಮದ ಕಡೆ ಮುಖ ಮಾಡಿದರು. ಇದಕ್ಕೆಲ್ಲ ಕಾರಣ ಧರ್ಮದಲ್ಲಿ ಇರುವ ತಾರತಮ್ಯ ಇವುಗಳ ಬಗ್ಗೆ ಪ್ರಶ್ನಿಸಿದರೆ ಅವರು ಧರ್ಮವಿರೋಧಿಗಳೆಂಬ ಹಣೆಪಟ್ಟಿ ಕಟ್ಟುತ್ತಾರೆ. ಕೋರ್ಟು, ಕೇಸುಗಳೆಂದು ಅಲೆಯುವಂತೆ ಮಾಡುತ್ತಾರೆ. ಆದರೂ ಸತ್ಯವಾದ ಮಾತನ್ನು ಜನತೆಗೆ ತಿಳಿಸುವ ಕೆಲಸ ಮಾಡಬೇಕಿದೆ. ಅದಕ್ಕಾಗಿ ನಾವೆಲ್ಲರೂ ಸೇರಿ ಮುನ್ನಡೆಯೋಣ” ಎಂದು ಹೇಳಿದರು.

ಇದನ್ನೂ ಓದಿ: ಸನಾತನ ವಿವಾದ: ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...