Homeಕರ್ನಾಟಕಸನಾತನ ಧರ್ಮ ಎಂದರೇನು?: ಚಿಂತಕ ಕೆ.ಪಿ. ಸುರೇಶ್ ವಿಶ್ಲೇಷಣೆ ಇಲ್ಲಿದೆ..

ಸನಾತನ ಧರ್ಮ ಎಂದರೇನು?: ಚಿಂತಕ ಕೆ.ಪಿ. ಸುರೇಶ್ ವಿಶ್ಲೇಷಣೆ ಇಲ್ಲಿದೆ..

- Advertisement -
- Advertisement -

”ವರ್ಣಾಶ್ರಮ ವ್ಯವಸ್ಥೆಯನ್ನು ಜೀವಂತವಾಗಿ ಇರಿಸುವ ಉದ್ದೇಶ ಸನಾತನ ಧರ್ಮ ಹೊಂದಿದೆ. ಅದಕ್ಕಾಗಿ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವ ಮನಸ್ಥಿತಿಯ ಮುಖಂಡರು ಮುಂದಾಗಿದ್ದಾರೆ. ಈ ಕಾರಣದಿಂದ ದೇಶದ ಬಹುಸಂಖ್ಯಾತ ಶೂದ್ರ ಸಮುದಾಯ ಅಪಾಯಕ್ಕೆ ಸಿಲುಕಲಿದೆ” ಎಂದು ವಿಮರ್ಶಕ, ಚಿಂತಕ ಕೆ.ಪಿ. ಸುರೇಶ್ ಹೇಳಿದರು.

ಸಾಗರದ ಸರಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಸನಾತನ ಧರ್ಮ ಎಂದರೇನು? ಎಂಬ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಮಹಾಭಾರತ, ಭಗವದ್ಗೀತೆ ಇವುಗಳನ್ನು ಅಧ್ಯಯನ ಮಾಡಿದರೆ ಸನಾತನ ಧರ್ಮದ ಉದ್ದೇಶಗಳು ತಿಳಿಯುತ್ತವೆ. ಅದರೊಳಗಿನ ಆಂತರ್ಯ ಅರಿಯಲು ನಾವೆಲ್ಲರೂ ಮುಂದಾಗಬೇಕು. ಸನಾತನ ಧರ್ಮದಲ್ಲಿ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರನೆಂಬ ವರ್ಣಾಶ್ರಮ ವ್ಯವಸ್ಥೆ ಇದ್ದು, ಶೂದ್ರರು ಕನಿಷ್ಠವಾಗಿ ಕಾಣಲ್ಪಡುತ್ತಾರೆ. ಅವರು ಸಹ ನಮ್ಮಂತೆ ಮನುಷ್ಯರೆಂಬ ಅಂಬೇಡ್ಕರ್ ರಚಿತ ಸಂವಿಧಾನವನ್ನು ಇಂದಿನ ಬಿಜೆಪಿ ಸರ್ಕಾರ ತಿದ್ದುಪಡಿ ತರದೆ ನಿಷ್ಪಲಗೊಳಿಸುವ ಕೆಲಸಕ್ಕೆ ಮುಂದಾಗುತ್ತಿರುವುದು ಖೇದಕರ ವಿಚಾರ. ಅದಕ್ಕೆ ವಿಚಾರವಾದಿಗಳು ಒಂದಾಗಿ ಸೇರಿ ಜನತೆಯನ್ನು ಜಾಗೃತಿಗೊಳಿಸಬೇಕಿದೆ” ಎಂದು ಹೇಳಿದರು.

”ಈ ದೇಶದಲ್ಲಿ ಆಳಬೇಕಾದ ಸಮುದಾಯ ಆಳಿಸಿಕೊಳ್ಳುತ್ತಿದೆ. ರೈತರು ಸಂಘಟಿತರಾದರೆ ಅವರೇ ಚುಕ್ಕಾಣಿ ಹಿಡಿಯಬಹುದು. ದಲಿತರು, ಹಿಙದುಳಿದವರು ತುಂಡುಗಳಾಗಿ ಒಡೆದು ಹೋಗುತ್ತಿರುವ ದಿನಗಳಲ್ಲಿ ಈ ಸಮುದಾಯಗಳಿಂದ ರಾಜಕಾರಣಿಗಳಿಗೆ ಲಾಭವಾಗುತ್ತಿದೆ. ದೇಶದಲ್ಲಿ ಅಲ್ಪಸಂಖ್ಯಾತರಾದ ಮುಸಲ್ಮಾನರು ಮೀಸಲಾತಿ ಎಷ್ಟು ಪಡೆದಿದ್ದಾರೆ. ಸಣ್ಣ ಸಮುದಾಯವಾದ ಬ್ರಾಹ್ಮಣ ಸಮುದಾಯ ಎಷ್ಟು ಮೀಸಲಾತಿ ಪಡೆದಿದೆ. ಇದನ್ನು ಹೆಚ್ಚಾಗಿ ಪ್ರಚಾರ ನೀಡದೆ ಅಲ್ಲಿಯೇ ಒತ್ತುತ್ತಿರುವುದು ವಿಷಾದನೀಯ. ಯಾರಾದರೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಅವರನ್ನು ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳುವವರು ವಿಶ್ವದಲ್ಲಿರುವ ಬೇರೆ ದೇಶಗಳ ಹೆಸರನ್ನಕ್ಕೆ ಹೇಳುವುದಿಲ್ಲ” ಎಂದರು.

”ಇಲ್ಲಿ ಧರ್ಮವನ್ನು ಹಿಡಿದುಕೊಂಡು ರಾಜಕಾರಣ ಮಾಡಲಾಗುತ್ತಿದೆ ಬದಲಿಗೆ ಆಳುವವರು ರಾಜಧರ್ಮ ಪಾಲಿಸದೆ ಶೂದ್ರರನ್ನು ತುಳಿಯುತ್ತಿರುವುದು ಎಷ್ಟು ಸರಿ ಇದೆ ಎಂದು ಹೇಳಿದರು. ವಿಶ್ವದಲ್ಲಿ ಪಾಕಿಸ್ತಾನವನ್ನು ಭಯೋತ್ಪಾದಕ ದೇಶ ಎಂದು ಹೇಳುವ ನಮ್ಮ ಸರಕಾರಗಳು ಅವರೊಂದಿಗೆ ಏಕೆ ರಾಜ್ಯ ತಾಂತ್ರಿಕ ಭಾಂದವ್ಯವನ್ನು ಮುರಿದುಕೊಂಡಿಲ್ಲ ಎಂಬುದನ್ನು ಈ ದೇಶದ ಜನತೆ ಅರ್ಥಮಾಡಿಕೊಳ್ಳಬೇಕು” ಎಂದು ಎಚ್ಚರಿಸಿದರು.

”ದೇಶದಲ್ಲಿ ಮುಸಲ್ಮಾನ ಸಮುದಾಯ ಬೆರಳು ತೋರಿಸಿ ಅಧಿಕಾರ ಹಿಡಿಯುವ ಪಕ್ಷ ಒಂದು ಅವರ ಹೆಸರಿನಲ್ಲಿ ಶೂದ್ರ ಸಮುದಾಯವನ್ನು ಲೆಕ್ಕಕ್ಕಿಲ್ಲದಂತೆ ಮಾಡುತ್ತಿದ್ದಾರೆ ಮೀಸಲಾತಿಯ ಬಗ್ಗೆ ಮಾತನಾಡುವ ನೇತಾರರು 3% ಇರುವ ಸಮುದಾಯಕ್ಕೆ ಏಕೆ 10% ಮೀಸಲಾತಿ ನೀಡಿದರು. ಇದು ವಿಚಾರ ಮಾಡುವಂಥದ್ದು” ಎಂದರು.

”ನಾವುಗಳು ಇಂದು ಚಿರತೆಯೊಂದು ಜಿಂಕೆಯ ಗುಂಪನ್ನು ದೂರದಿಂದ ನೋಡುತ್ತದೆ. ಮರದ ಮೇಲಿನ ಮುಷಿಯ ಇದನ್ನು ನೋಡಿ ಜೋರಾಗಿ ಕಿರುಚುತ್ತದೆ. ಆಗ ಜಿಂಕೆ ಹಿಂಡು ಅಪಾಯದಿಂದ ಪಾರಾಗಲು ಕೊಡುವ ಸೂಚನೆಯ ಹೊರತು ಇದರಿಂದ ಮರದ ಮೇಲಿನ ಮುಶಿಯಕ್ಕೇನು ಅಪಾಯವಿಲ್ಲ. ಇಂದಿನ ದಿನಮಾನಕ್ಕೆ ಜಾಗೃತರಾಗುವ ಪ್ರಜೆಗಳು ಮುಶಿಯಾದ ಪಾತ್ರ ವಹಿಸಬೇಕು” ಎಂದು ಹೇಳಿದರು.

”ಉದಯ ನಿಧಿ ಸ್ಟಾಲಿನ್ ಹೇಳಿದ ಸನಾತನ ಧರ್ಮದ ಹೇಳಿಕೆಗೆ ಆರಂಭದಲ್ಲಿ ವಿರೋಧ ಉಂಟಾಯಿತು. ಹಿಂದೂಪರ ಸಂಘಟನೆಗಳು ಪ್ರತಿರೋಧ ತೋರಿಸಿದವು. ಆದರೆ ಸನಾತನ ಧರ್ಮದ ಬಗ್ಗೆ ಹೆಚ್ಚಿಗೆ ವಿರೋಧಿಸಿದರೆ ಅಲ್ಲಿ ಇತರ ಸಮುದಾಯಗಳು ನಮ್ಮಿಂದ ದೂರವಾಗಿ ವೋಟ್ ಬ್ಯಾಂಕ್ ಇಲ್ಲದಂತಾಗಬಹುದು ಎಂಬ ಕಾರಣಕ್ಕೆ ಒಂದು ರಾಜಕೀಯ ಪಕ್ಷ ಸುಮ್ಮನಾಗಿದೆ. ಸನಾತನ ಧರ್ಮದ ಬಗ್ಗೆ ಮಾತನಾಡಿದಾಗ ಪ್ರತಿಭಟನೆ ಇಳಿಯುವ ಧರ್ಮರಕ್ಷಕರು ಮಣಿಪುರದಲ್ಲಿ ಕುಕ್ಕಿ ಮತ್ತು ಮೈತೆಯಿ ಈ ಸಮುದಾಯದ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿ ರಸ್ತೆಯಲ್ಲಿ ಮೆರವಣಿಗೆ ಮಾಡುವಾಗ ಎಲ್ಲಿ ಹೋಗಿದ್ದರೆಂದು ಪ್ರಶ್ನಿಸಿದರು. ಈಗಾಗಲೇ ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಭುಗಿಲೆದ್ದಿದೆ. ಈ ಕಾರಣದಿಂದ ಸನಾತನ ಧರ್ಮದ ಉದಯ ನಿಧಿ ಸ್ಟಾಲಿನ್ ಹೇಳಿಕೆ ಮೂಲೆಗುಂಪಾಗಿದೆ. ಇವುಗಳ ಬಗ್ಗೆ ಚರ್ಚೆ ನಡೆಯಬೇಕು” ಎಂದರು.

”ಸನಾತನ ಧರ್ಮದ ಕಿರುಕುಳದಿಂದ ಜೈನ ಧರ್ಮ ಉದಯವಾಯಿತು. ಲಿಂಗಾಯತ ಧರ್ಮ ಉದಯವಾಯಿತು. ಅನೇಕರು ಹಿಂದೂ ಧರ್ಮವನ್ನು ತೊರೆದು ಬೌದ್ಧ ಮತ್ತು ಕ್ರಿಶ್ಚಿಯನ್ ಧರ್ಮದ ಕಡೆ ಮುಖ ಮಾಡಿದರು. ಇದಕ್ಕೆಲ್ಲ ಕಾರಣ ಧರ್ಮದಲ್ಲಿ ಇರುವ ತಾರತಮ್ಯ ಇವುಗಳ ಬಗ್ಗೆ ಪ್ರಶ್ನಿಸಿದರೆ ಅವರು ಧರ್ಮವಿರೋಧಿಗಳೆಂಬ ಹಣೆಪಟ್ಟಿ ಕಟ್ಟುತ್ತಾರೆ. ಕೋರ್ಟು, ಕೇಸುಗಳೆಂದು ಅಲೆಯುವಂತೆ ಮಾಡುತ್ತಾರೆ. ಆದರೂ ಸತ್ಯವಾದ ಮಾತನ್ನು ಜನತೆಗೆ ತಿಳಿಸುವ ಕೆಲಸ ಮಾಡಬೇಕಿದೆ. ಅದಕ್ಕಾಗಿ ನಾವೆಲ್ಲರೂ ಸೇರಿ ಮುನ್ನಡೆಯೋಣ” ಎಂದು ಹೇಳಿದರು.

ಇದನ್ನೂ ಓದಿ: ಸನಾತನ ವಿವಾದ: ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...