Homeಕರ್ನಾಟಕಸನಾತನ ಧರ್ಮ ಎಂದರೇನು?: ಚಿಂತಕ ಕೆ.ಪಿ. ಸುರೇಶ್ ವಿಶ್ಲೇಷಣೆ ಇಲ್ಲಿದೆ..

ಸನಾತನ ಧರ್ಮ ಎಂದರೇನು?: ಚಿಂತಕ ಕೆ.ಪಿ. ಸುರೇಶ್ ವಿಶ್ಲೇಷಣೆ ಇಲ್ಲಿದೆ..

- Advertisement -
- Advertisement -

”ವರ್ಣಾಶ್ರಮ ವ್ಯವಸ್ಥೆಯನ್ನು ಜೀವಂತವಾಗಿ ಇರಿಸುವ ಉದ್ದೇಶ ಸನಾತನ ಧರ್ಮ ಹೊಂದಿದೆ. ಅದಕ್ಕಾಗಿ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವ ಮನಸ್ಥಿತಿಯ ಮುಖಂಡರು ಮುಂದಾಗಿದ್ದಾರೆ. ಈ ಕಾರಣದಿಂದ ದೇಶದ ಬಹುಸಂಖ್ಯಾತ ಶೂದ್ರ ಸಮುದಾಯ ಅಪಾಯಕ್ಕೆ ಸಿಲುಕಲಿದೆ” ಎಂದು ವಿಮರ್ಶಕ, ಚಿಂತಕ ಕೆ.ಪಿ. ಸುರೇಶ್ ಹೇಳಿದರು.

ಸಾಗರದ ಸರಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಸನಾತನ ಧರ್ಮ ಎಂದರೇನು? ಎಂಬ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಮಹಾಭಾರತ, ಭಗವದ್ಗೀತೆ ಇವುಗಳನ್ನು ಅಧ್ಯಯನ ಮಾಡಿದರೆ ಸನಾತನ ಧರ್ಮದ ಉದ್ದೇಶಗಳು ತಿಳಿಯುತ್ತವೆ. ಅದರೊಳಗಿನ ಆಂತರ್ಯ ಅರಿಯಲು ನಾವೆಲ್ಲರೂ ಮುಂದಾಗಬೇಕು. ಸನಾತನ ಧರ್ಮದಲ್ಲಿ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರನೆಂಬ ವರ್ಣಾಶ್ರಮ ವ್ಯವಸ್ಥೆ ಇದ್ದು, ಶೂದ್ರರು ಕನಿಷ್ಠವಾಗಿ ಕಾಣಲ್ಪಡುತ್ತಾರೆ. ಅವರು ಸಹ ನಮ್ಮಂತೆ ಮನುಷ್ಯರೆಂಬ ಅಂಬೇಡ್ಕರ್ ರಚಿತ ಸಂವಿಧಾನವನ್ನು ಇಂದಿನ ಬಿಜೆಪಿ ಸರ್ಕಾರ ತಿದ್ದುಪಡಿ ತರದೆ ನಿಷ್ಪಲಗೊಳಿಸುವ ಕೆಲಸಕ್ಕೆ ಮುಂದಾಗುತ್ತಿರುವುದು ಖೇದಕರ ವಿಚಾರ. ಅದಕ್ಕೆ ವಿಚಾರವಾದಿಗಳು ಒಂದಾಗಿ ಸೇರಿ ಜನತೆಯನ್ನು ಜಾಗೃತಿಗೊಳಿಸಬೇಕಿದೆ” ಎಂದು ಹೇಳಿದರು.

”ಈ ದೇಶದಲ್ಲಿ ಆಳಬೇಕಾದ ಸಮುದಾಯ ಆಳಿಸಿಕೊಳ್ಳುತ್ತಿದೆ. ರೈತರು ಸಂಘಟಿತರಾದರೆ ಅವರೇ ಚುಕ್ಕಾಣಿ ಹಿಡಿಯಬಹುದು. ದಲಿತರು, ಹಿಙದುಳಿದವರು ತುಂಡುಗಳಾಗಿ ಒಡೆದು ಹೋಗುತ್ತಿರುವ ದಿನಗಳಲ್ಲಿ ಈ ಸಮುದಾಯಗಳಿಂದ ರಾಜಕಾರಣಿಗಳಿಗೆ ಲಾಭವಾಗುತ್ತಿದೆ. ದೇಶದಲ್ಲಿ ಅಲ್ಪಸಂಖ್ಯಾತರಾದ ಮುಸಲ್ಮಾನರು ಮೀಸಲಾತಿ ಎಷ್ಟು ಪಡೆದಿದ್ದಾರೆ. ಸಣ್ಣ ಸಮುದಾಯವಾದ ಬ್ರಾಹ್ಮಣ ಸಮುದಾಯ ಎಷ್ಟು ಮೀಸಲಾತಿ ಪಡೆದಿದೆ. ಇದನ್ನು ಹೆಚ್ಚಾಗಿ ಪ್ರಚಾರ ನೀಡದೆ ಅಲ್ಲಿಯೇ ಒತ್ತುತ್ತಿರುವುದು ವಿಷಾದನೀಯ. ಯಾರಾದರೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಅವರನ್ನು ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳುವವರು ವಿಶ್ವದಲ್ಲಿರುವ ಬೇರೆ ದೇಶಗಳ ಹೆಸರನ್ನಕ್ಕೆ ಹೇಳುವುದಿಲ್ಲ” ಎಂದರು.

”ಇಲ್ಲಿ ಧರ್ಮವನ್ನು ಹಿಡಿದುಕೊಂಡು ರಾಜಕಾರಣ ಮಾಡಲಾಗುತ್ತಿದೆ ಬದಲಿಗೆ ಆಳುವವರು ರಾಜಧರ್ಮ ಪಾಲಿಸದೆ ಶೂದ್ರರನ್ನು ತುಳಿಯುತ್ತಿರುವುದು ಎಷ್ಟು ಸರಿ ಇದೆ ಎಂದು ಹೇಳಿದರು. ವಿಶ್ವದಲ್ಲಿ ಪಾಕಿಸ್ತಾನವನ್ನು ಭಯೋತ್ಪಾದಕ ದೇಶ ಎಂದು ಹೇಳುವ ನಮ್ಮ ಸರಕಾರಗಳು ಅವರೊಂದಿಗೆ ಏಕೆ ರಾಜ್ಯ ತಾಂತ್ರಿಕ ಭಾಂದವ್ಯವನ್ನು ಮುರಿದುಕೊಂಡಿಲ್ಲ ಎಂಬುದನ್ನು ಈ ದೇಶದ ಜನತೆ ಅರ್ಥಮಾಡಿಕೊಳ್ಳಬೇಕು” ಎಂದು ಎಚ್ಚರಿಸಿದರು.

”ದೇಶದಲ್ಲಿ ಮುಸಲ್ಮಾನ ಸಮುದಾಯ ಬೆರಳು ತೋರಿಸಿ ಅಧಿಕಾರ ಹಿಡಿಯುವ ಪಕ್ಷ ಒಂದು ಅವರ ಹೆಸರಿನಲ್ಲಿ ಶೂದ್ರ ಸಮುದಾಯವನ್ನು ಲೆಕ್ಕಕ್ಕಿಲ್ಲದಂತೆ ಮಾಡುತ್ತಿದ್ದಾರೆ ಮೀಸಲಾತಿಯ ಬಗ್ಗೆ ಮಾತನಾಡುವ ನೇತಾರರು 3% ಇರುವ ಸಮುದಾಯಕ್ಕೆ ಏಕೆ 10% ಮೀಸಲಾತಿ ನೀಡಿದರು. ಇದು ವಿಚಾರ ಮಾಡುವಂಥದ್ದು” ಎಂದರು.

”ನಾವುಗಳು ಇಂದು ಚಿರತೆಯೊಂದು ಜಿಂಕೆಯ ಗುಂಪನ್ನು ದೂರದಿಂದ ನೋಡುತ್ತದೆ. ಮರದ ಮೇಲಿನ ಮುಷಿಯ ಇದನ್ನು ನೋಡಿ ಜೋರಾಗಿ ಕಿರುಚುತ್ತದೆ. ಆಗ ಜಿಂಕೆ ಹಿಂಡು ಅಪಾಯದಿಂದ ಪಾರಾಗಲು ಕೊಡುವ ಸೂಚನೆಯ ಹೊರತು ಇದರಿಂದ ಮರದ ಮೇಲಿನ ಮುಶಿಯಕ್ಕೇನು ಅಪಾಯವಿಲ್ಲ. ಇಂದಿನ ದಿನಮಾನಕ್ಕೆ ಜಾಗೃತರಾಗುವ ಪ್ರಜೆಗಳು ಮುಶಿಯಾದ ಪಾತ್ರ ವಹಿಸಬೇಕು” ಎಂದು ಹೇಳಿದರು.

”ಉದಯ ನಿಧಿ ಸ್ಟಾಲಿನ್ ಹೇಳಿದ ಸನಾತನ ಧರ್ಮದ ಹೇಳಿಕೆಗೆ ಆರಂಭದಲ್ಲಿ ವಿರೋಧ ಉಂಟಾಯಿತು. ಹಿಂದೂಪರ ಸಂಘಟನೆಗಳು ಪ್ರತಿರೋಧ ತೋರಿಸಿದವು. ಆದರೆ ಸನಾತನ ಧರ್ಮದ ಬಗ್ಗೆ ಹೆಚ್ಚಿಗೆ ವಿರೋಧಿಸಿದರೆ ಅಲ್ಲಿ ಇತರ ಸಮುದಾಯಗಳು ನಮ್ಮಿಂದ ದೂರವಾಗಿ ವೋಟ್ ಬ್ಯಾಂಕ್ ಇಲ್ಲದಂತಾಗಬಹುದು ಎಂಬ ಕಾರಣಕ್ಕೆ ಒಂದು ರಾಜಕೀಯ ಪಕ್ಷ ಸುಮ್ಮನಾಗಿದೆ. ಸನಾತನ ಧರ್ಮದ ಬಗ್ಗೆ ಮಾತನಾಡಿದಾಗ ಪ್ರತಿಭಟನೆ ಇಳಿಯುವ ಧರ್ಮರಕ್ಷಕರು ಮಣಿಪುರದಲ್ಲಿ ಕುಕ್ಕಿ ಮತ್ತು ಮೈತೆಯಿ ಈ ಸಮುದಾಯದ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿ ರಸ್ತೆಯಲ್ಲಿ ಮೆರವಣಿಗೆ ಮಾಡುವಾಗ ಎಲ್ಲಿ ಹೋಗಿದ್ದರೆಂದು ಪ್ರಶ್ನಿಸಿದರು. ಈಗಾಗಲೇ ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಭುಗಿಲೆದ್ದಿದೆ. ಈ ಕಾರಣದಿಂದ ಸನಾತನ ಧರ್ಮದ ಉದಯ ನಿಧಿ ಸ್ಟಾಲಿನ್ ಹೇಳಿಕೆ ಮೂಲೆಗುಂಪಾಗಿದೆ. ಇವುಗಳ ಬಗ್ಗೆ ಚರ್ಚೆ ನಡೆಯಬೇಕು” ಎಂದರು.

”ಸನಾತನ ಧರ್ಮದ ಕಿರುಕುಳದಿಂದ ಜೈನ ಧರ್ಮ ಉದಯವಾಯಿತು. ಲಿಂಗಾಯತ ಧರ್ಮ ಉದಯವಾಯಿತು. ಅನೇಕರು ಹಿಂದೂ ಧರ್ಮವನ್ನು ತೊರೆದು ಬೌದ್ಧ ಮತ್ತು ಕ್ರಿಶ್ಚಿಯನ್ ಧರ್ಮದ ಕಡೆ ಮುಖ ಮಾಡಿದರು. ಇದಕ್ಕೆಲ್ಲ ಕಾರಣ ಧರ್ಮದಲ್ಲಿ ಇರುವ ತಾರತಮ್ಯ ಇವುಗಳ ಬಗ್ಗೆ ಪ್ರಶ್ನಿಸಿದರೆ ಅವರು ಧರ್ಮವಿರೋಧಿಗಳೆಂಬ ಹಣೆಪಟ್ಟಿ ಕಟ್ಟುತ್ತಾರೆ. ಕೋರ್ಟು, ಕೇಸುಗಳೆಂದು ಅಲೆಯುವಂತೆ ಮಾಡುತ್ತಾರೆ. ಆದರೂ ಸತ್ಯವಾದ ಮಾತನ್ನು ಜನತೆಗೆ ತಿಳಿಸುವ ಕೆಲಸ ಮಾಡಬೇಕಿದೆ. ಅದಕ್ಕಾಗಿ ನಾವೆಲ್ಲರೂ ಸೇರಿ ಮುನ್ನಡೆಯೋಣ” ಎಂದು ಹೇಳಿದರು.

ಇದನ್ನೂ ಓದಿ: ಸನಾತನ ವಿವಾದ: ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...