Homeಮುಖಪುಟ’ಸರೋಜಿನಿ ಮಹಿಷಿ’ ವರದಿ ಜಾರಿಗೆ ಬಂದ್‌: ಅಂತಾದ್ದೇನಿದೆ ಈ ವರದಿಯಲ್ಲಿ? ಜಾರಿಗೆ ಮೀನಾಮೇಷವೇಕೆ?

’ಸರೋಜಿನಿ ಮಹಿಷಿ’ ವರದಿ ಜಾರಿಗೆ ಬಂದ್‌: ಅಂತಾದ್ದೇನಿದೆ ಈ ವರದಿಯಲ್ಲಿ? ಜಾರಿಗೆ ಮೀನಾಮೇಷವೇಕೆ?

ನಾಳೆ ಅಂದರೆ ಫೆ.13ರಂದು ಕೆಲ ಕನ್ನಡಪರ ಸಂಘಟನೆಗಳು ಬಂದ್‌ಗಿಳಿದಿವೆ. ವರದಿ ಬಿಡುಗಡೆಯಾಗಿ 30 ವರ್ಷದ ನಂತರವೂ ಪ್ರತಿಭಟನೆ ನಡೆಯುತ್ತಿದೆ ಎಂದರೆ ಆ ವರದಿಯಲ್ಲೇನಿದೆ?

- Advertisement -
- Advertisement -

ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳ ಕೆಲಸದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಎಂಬ ಆಶೋತ್ತರಗಳನ್ನು ಹೊತ್ತ ರಾಜ್ಯದ ಮೊದಲ ವರದಿ ಎಂಬ ಶ್ರೇಯ ಡಾ. ಸರೋಜಿನಿ ಮಹಿಷಿ ವರದಿಗೆ ಸಲ್ಲುತ್ತದೆ. ಅಸಲಿಗೆ ಮಾಜಿ ಸಂಸದೆ ಡಾ. ಸರೋಜಿನಿ ಮಹಿಷಿ 1986ರಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಈ ವರದಿಯನ್ನು ಕೇಂದ್ರವನ್ನಾಗಿಟ್ಟುಕೊಂಡು 2020ರಲ್ಲೂ ಸಹ ಪ್ರತಿಭಟನೆ ನಡೆಯುತ್ತವೆ, ಬಂದ್‌ಗೆ ಕರೆ ನೀಡಲಾಗುತ್ತದೆ, ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಕೆಲಸ ನೀಡಿ ಎಂಬ ಘೋಷ ವಾಕ್ಯಗಳು ಮೊಳಗುತ್ತವೆ ಎಂದರೆ 3 ದಶಕಗಳೇ ಕರೆದರೂ ಸ್ವಂತ ನೆಲದಲ್ಲಿ ಬದಲಾಗದ ಕನ್ನಡಿಗರ ಪರಿಸ್ಥಿತಿಯನ್ನು ನಾವು ಊಹಿಸಬಹುದು.

ಪ್ರಸ್ತುತ ರಾಜ್ಯದಲ್ಲಿ ಯುವಜನರ ಪರಿಸ್ಥಿತಿ ಮುಂಚಿನಂತಿಲ್ಲ. ನಿರುದ್ಯೋಗ ಎಂಬುದು ದಿನೇ ದಿನೇ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಆರ್ಥಿಕ ಕುಸಿತದ ಹೆಸರಿನಲ್ಲಿ ದಿನದಿಂದ ದಿನಕ್ಕೆ ಒಂದಷ್ಟು ಯುವಜನರು ಕೆಲಸವನ್ನು ಕಳೆದುಕೊಳ್ಳುತ್ತಲೇ ಇದ್ದಾರೆ. ಕನ್ನಡ ಭಾಷೆ ಅನ್ನದ ಪ್ರಶ್ನೆಯಾಗದ ಕಾರಣ ಮಕ್ಕಳ ಪ್ರಾಥಮಿಕ ಶಿಕ್ಷಣದಿಂದಲೂ ಕನ್ನಡ ಕ್ರಮೇಣ ದೂರವಾಗುತ್ತಿದೆ. ಇಂತಹ ಸಂದಿಗ್ಧ ದಿನಗಳಲ್ಲಿ ಸರೋಜಿನಿ ಮಹಿಷಿ ವರದಿ ಕುರಿತ ಕೂಗು ಅನಿವಾರ್ಯ ಹಾಗೂ ಅವಶ್ಯಕವೂ ಹೌದು. ಆ ನಿಟ್ಟಿನಲ್ಲಿ ಫೆಬ್ರವರಿ. 13 ರಂದು ಕರೆ ನೀಡಲಾಗಿರುವ ಬಂದ್ ಸಾಕಷ್ಟು ಮಹತ್ವಪಡೆದುಕೊಂಡಿದೆ

ನಿರುದ್ಯೋಗ ಎಂಬುದು ಭಾರತದ ಮಾತ್ರವಲ್ಲ ಕರ್ನಾಟಕದ ಪಾಲಿಗೂ ಸುಮಾರು ಆರು ದಶಕಗಳ ಪಿಡುಗು. ಹೀಗಾಗಿ ಕರ್ನಾಟಕದಲ್ಲಿ ಕನ್ನಡಿಗರಿಗೆ ಕನ್ನಡ ಅನ್ನದ ಪ್ರಶ್ನೆಯಾಗಬೇಕು ಎಂಬ ಕೂಗು 1983ರಿಂದಲೂ ಇದೆ. ದಿವಂಗತ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ವೇಳೆ ಕನ್ನಡಿಗರಿಗೆ ಕರ್ನಾಟಕದಲ್ಲಿ ಪರಭಾಷಿಕರಿಂದ ಅನ್ಯಾಯವಾಗುತ್ತಿದೆ ಎಂಬ ಕೂಗು ತುಸು ಜೋರಾಗಿಯೇ ಇತ್ತು. ಹೋರಾಟಗಳೂ ಸಹ ಉಗ್ರರೂಪ ತಳೆದಿತ್ತು.
ಈ ವೇಳೆ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಕರ್ನಾಟಕದಲ್ಲಿ ಕನ್ನಡಿಗರಿಗೆ ದೊರೆಯುತ್ತಿದ್ದ ಉದ್ಯೋಗಾವಕಾಶಗಳನ್ನು ಪರಿಶೀಲಿಸಿ ವಿಮರ್ಶಿಸಲು ರಾಜ್ಯದ ಮೊದಲ ಮಹಿಳಾ ಸಂಸದೆ, ಸಚಿವೆ ಹಾಗೂ ಮಹಿಳಾ ಹೋರಾಟಗಾರ್ತಿ ಸರೋಜಿನಿ ಮಹಿಷಿ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚಿಸಿದ್ದರು. ಸತತ ಮೂರು ವರ್ಷ ಈ ಕುರಿತು ಪರಿಶೀಲನೆ ನಡೆಸಿದ್ದ ಸಮಿತಿ 1986ರಲ್ಲಿ ಸರ್ಕಾರಕ್ಕೆ 53 ಅಂಶಗಳ ಒಂದು ವರದಿಯನ್ನು ಸಲ್ಲಿಸಿತ್ತು. ಅದೇ “ಸರೋಜಿನಿ ಮಹಿಷಿ” ವರದಿ.

ಅಸಲಿಗೆ 1986ರಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದ್ದ ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ 2020ರಲ್ಲಿ ಏಕೆ ಬಂದ್‌, ಪ್ರತಿಭಟನೆಗಳು ನಡೆಯುತ್ತಿವೆ? ಯಾರು ಈ ಸರೋಜಿನಿ ಮಹಿಷಿ? ಇವರು ನೀಡಿದ್ದ ವರದಿಯಲ್ಲಿ ಏನೇನು ಅಂಶಗಳಿವೆ? ಅದರ ಜಾರಿಗೆ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಏಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಯಾರು ಈ ಸರೋಜಿನಿ ಮಹಿಷಿ?

ಧಾರವಾಡದ ಶಿರಹಟ್ಟಿ ತಾಲೂಕಿನಲ್ಲಿ 1923ರ ಮಾರ್ಚ್ 3 ರಂದು ಬಿಂದುರಾವ್ ಮಹಿಷಿ ಹಾಗೂ ಕಮಲಾಬಾಯಿ ದಂಪತಿಗಳಿಗೆ ಜನಿಸಿದ ಸರೋಜಿನಿ ಮಹಿಷಿ, ಪ್ರಾಥಮಿಕ, ಮಾಧ್ಯಮಿಕ ಶಿಕ್ಷಣವನ್ನು ಧಾರವಾಡದಲ್ಲೇ ಪೂರ್ಣಗೊಳಿಸಿದರು. ನಂತರ ಸಾಂಗ್ಲಿಯ ಮಿಲಿಂಗಟನ್ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತ ವಿಷಯದಲ್ಲಿ ಬಿಎ ಪದವಿ ಪಡೆದರು. ಮುಂಬೈನಲ್ಲಿ ಎಂ.ಎ. ಪದವಿ ಪಡೆದಿದ್ದಾರೆ.

ಹೋಮಿಯೋಪತಿ, ನಿಸರ್ಗ ಚಿಕಿತ್ಸೆ ಕಲಿಕೆಗಾಗಿ ಬೆಳಗಾವಿಯ ಆರ್‌ಎಲ್ಎಸ್ ಕಾಲೇಜಿನಲ್ಲಿ ಎಲ್.ಎಲ್.ಟಿ ಅಧ್ಯಯನ ಮಾಡಿ 1955ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಮೊದಲ ರ್‍ಯಾಂಕ್‌ನಲ್ಲಿ ಕಾನೂನು ಪದವಿ ಪಡೆದರು. ಅಲ್ಲದೆ, ಧಾರವಾಡದ ಜನತಾ ಲಾ ಕಾಲೇಜಿನಲ್ಲಿ ಕಾನೂನು ಪ್ರಾಧ್ಯಾಪಕಿಯಾಗಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ನಂತರ ವಕೀಲ ವೃತ್ತಿ ಪ್ರಾರಂಭಿಸಿ ಬಾರ್ ಕೌನ್ಸಿಲ್ ಪರೀಕ್ಷೆಯಲ್ಲಿ ಮೊದಲ ಸ್ಥಾನ ಗಳಿಸಿದ ಮಹಿಳೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾದರು. ನಾಲ್ಕು ಬಾರಿ ಧಾರವಾಡದ ಸಂಸದೆಯಾಗಿದ್ದ ಇವರು 2 ಅವಧಿಗೆ ರಾಜ್ಯಸಭೆಗೂ ಆಯ್ಕೆಯಾಗಿದ್ದಾರೆ. ಮಹಿಳೆಯರ ಸಬಲೀಕರಣದ ಕುರಿತಾಗಿ ಸಾಕಷ್ಟು ಕೆಲಸ ಮಾಡಿದ ಇವರು ಸದ್ದು ಮಾಡಿದ್ದು, ರಾಜ್ಯದೆಲ್ಲೆಡೆ ಸಂಚಲನ ಮೂಡಿಸಿದ್ದು ಸ್ಥಳೀಯರಿಗೆ ಉದ್ಯೋಗ ಎಂಬ “ಮಣ್ಣಿನ ಮಗ” ನೀತಿಯನ್ನು ಪ್ರತಿಪಾದಿಸುವ ಸರೋಜಿನಿ ಮಹಿಷಿ ವರದಿ ನೀಡಿದ ನಂತರವೇ.

ಅಂತಾದ್ದೇನಿದೆ ಈ ಸರೋಜಿನಿ ಮಹಿಷಿ ವರದಿಯಲ್ಲಿ?

ಮಿಶ್ರ ಆರ್ಥಿಕ ನೀತಿಯಿಂದ ಮಾತ್ರ ಭಾರತವನ್ನು ಅಭಿವೃದ್ಧಿ ಪಥದಲ್ಲಿ ನಡೆಸಲು ಸಾಧ್ಯ ಎಂಬ ಪರ್ಯಾಯ ಆರ್ಥಿಕ ವ್ಯವಸ್ಥೆಯ ಜಾರಿಗೆ ತುದಿಗಾಲಲ್ಲಿ ನಿಂತಿದ್ದ 90ರ ದಶಕವದು. ಪಿ. ವಿ ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಹೊಸ ಆರ್ಥಿಕ ನೀತಿಯನ್ನು ಜಾರಿಗೆ ತಂದಿತ್ತು. ಆದರೆ, ಮಿಶ್ರ ಆರ್ಥಿಕತೆ ಇಂದು ಮೇಲ್ನೋಟಕ್ಕೆ ಒಂದೇ ರೀತಿ ಕಂಡು ಬಂದರೂ ಮುಕ್ತ ಹಾಗೂ ಮಿಶ್ರ ಆರ್ಥಿಕ ನೀತಿಯ ಮಧ್ಯೆ ಭಿನ್ನತೆ ಇದೆ.

ಸರ್ಕಾರದ ಭಾಗವಹಿಸುವಿಕೆ ಇಲ್ಲದೆ ಇಂದು ಖಾಸಗಿ ಕಂಪನಿ ದೇಶದ ಯಾವುದೇ ಮೂಲೆಯಲ್ಲಿ ತಮ್ಮ ವ್ಯವಹಾರವನ್ನು ಆರಂಭಿಸುವಷ್ಟು ಸ್ವಾತಂತ್ರ್ಯವನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ನೀಡಲಾಗಿದೆ. ಒಂದು ಕಂಪನಿ ಯಾವುದೇ ರಾಜ್ಯದಲ್ಲಿ ತನ್ನ ಕಾರ್ಯಚಟುವಟಿಕೆ ಆರಂಭಿಸಿದರೆ ಅಲ್ಲಿನ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಅಧಿಕಾರಿಗಳ ಆಜ್ಞೆಯನ್ನು ಪಾಲಿಸಬೇಕು.

ಆದರೆ, ಭಾರತದಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಸರ್ಕಾರವನ್ನೇ ನಿಯಂತ್ರಿಸಬಲ್ಲಷ್ಟು ಶಕ್ತಿ ಪಡೆದಿವೆ. ಇಲ್ಲಿ ಸರ್ಕಾರದ ಆದೇಶಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಹಾಗಾಗಿ ರಾಜ್ಯದ ಯುವಜನತೆ ಕೆಲಸವಿಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಉದ್ಯೋಗ ಸೃಷ್ಠಿ ಹೊಸ ಆರ್ಥಿಕ ನೀತಿಯ ಮೊದಲ ಆದ್ಯತೆಯಾದರೂ ಸ್ಥಳೀಯರಿಗೆ ಮಣೆಹಾಕುವ ಯಾವುದೇ ನೀತಿ ಪ್ರಚಲಿತದಲ್ಲಿಲ್ಲ. ಇಂಗ್ಲೀಷ್ ಭಾಷೆ ಕಲಿತರೆ ಮಾತ್ರ ಇಲ್ಲಿನ ಐಟಿ-ಬಿಟಿ ಉದ್ಯಮಗಳಲ್ಲಿ ಕೆಲಸ ಪಡೆಯುವುದು ಸಾಧ್ಯ. ಹಾಗಾಗಿ ಪಾಲಕರು ತಮ್ಮ ಮಕ್ಕಳ ಭವಿಷ್ಯದ ಚಿಂತೆಯಿಂದ ಶಾಲಾ ದಿನಗಳಿಂದಲೇ ಇಂಗ್ಲೀಷ್ ಮಾಧ್ಯಮಕ್ಕೆ ಆದ್ಯತೆ ನೀಡುತ್ತಿದ್ದಾರೆ.

ಹಾಗಾಗಿ ಕನ್ನಡ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೆಲಸದಲ್ಲಿ ಶೇ.5ರಷ್ಟು ಮೀಸಲು ಸೌಲಭ್ಯ ನೀಡಿದಂತೆ, ರಾಜಧಾನಿಯಲ್ಲಿರುವ ಬಹುರಾಷ್ಟ್ರೀಯ ಕಂಪನಿಗಳಲ್ಲೂ ಮೀಸಲಾತಿ ನೀಡಬೇಕು. ಕನ್ನಡ, ಯುವಜನರಿಗೆ ಉದ್ಯೋಗಾವಕಾಶ ಲಭಿಸಿದರೆ ಕನ್ನಡದಿಂದ ಅನ್ನ ಲಭಿಸಿದರೆ, ಸಾಮಾನ್ಯವಾಗಿ ಕನ್ನಡದ ಉಳಿವಿನ ಪ್ರಶ್ನೆ ತೆರೆಯ ಮರೆಗೆ ಸರಿಯಲಾರಂಭಿಸುತ್ತದೆ.

ಈ ನಿಟ್ಟಿನಲ್ಲಿ ಡಾ. ಸರೋಜಿನಿ ಮಹಿಷಿ ವರದಿ ಕರ್ನಾಟಕದ ಮಟ್ಟಿಗೆ ಸಾಕಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ. ಸಾರ್ವಜನಿಕ ಮತ್ತು ಖಾಸಗಿ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಿಕೆಯಲ್ಲಿ ಆದ್ಯತೆ ಇರಬೇಕು. ಸರ್ಕಾರಿ ವಲಯದಲ್ಲಿ ಶೇ.90 ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಬೇಕು. ಬಹುರಾಷ್ಟ್ರೀಯ ಮತ್ತು ಖಾಸಗಿ ಉದ್ದಿಮೆಗಳಲ್ಲೂ ಮೊದಲು ಶೇ.5 ರಷ್ಟು ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಕೆಲಸ ನೀಡಬೇಕು ಎಂಬುದು ವರದಿಯ ಮುಖ್ಯಾಂಶಗಳು.

ಆನಂತರ ಇದು ಹಂತ ಹಂತವಾಗಿ ಶೇ.100ರಷ್ಟು ಕನ್ನಡಿಗರಿಗೆ ಅವಕಾಶ ನೀಡಬೇಕು ಎಂಬುದನ್ನೂ ಸೇರಿದಂತೆ ಡಾ. ಸರೋಜಿನಿ ಮಹಿಷಿ ಆಯೋಗ 1986ರಲ್ಲೇ 58 ಶಿಫಾರಸ್ಸುಗಳನ್ನೊಳಗೊಂಡ ಸಮಗ್ರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು.

ಅಂದಿನ ಸರ್ಕಾರ ಈ ವರದಿಯಲ್ಲಿನ 12 ಶಿಫಾರಸ್ಸುಗಳನ್ನು ತನಗೆ ಒಪ್ಪುವ ಅಧಿಕಾರವಲ್ಲವೆಂದು ಕೈಬಿಟ್ಟಿದ್ದು, ಉಳಿದ ಶಿಫಾರಸ್ಸುಗಳ ಅನುಷ್ಠಾನಕ್ಕೆ ತರಲು ಪ್ರಯತ್ನಿಸುವುದಾಗಿ ಆಶ್ವಾಸನೆ ನೀಡಿತ್ತು. ಆದರೆ ಬಹುರಾಷ್ಟ್ರೀಯ/ಖಾಸಗಿ ಕಂಪನಿಗಳಲ್ಲಿ ಈ ಶಿಫಾರಸ್ಸನ್ನು ಪಾಲಿಸಬೇಕು, ಕನ್ನಡಿಗರಿಗೆ ಉದ್ಯೋಗಾವಕಾಶ ನೀಡಬೇಕು ಎನ್ನುವ ಪ್ರಮುಖ ಶಿಫಾರಸಿಗೆ ಈವರೆಗೆ ಯಾವುದೇ ಸರ್ಕಾರ ಒಪ್ಪಿಗೆ ನೀಡಿಲ್ಲ.

ಪರಿಣಾಮ ಸರೋಜಿನಿ ಮಹಿಷಿ ಕನ್ನಡಿಗರಿಗೆ ಕನ್ನಡ ಅನ್ನದ ಪ್ರಶ್ನೆಯಾಗಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಸಲ್ಲಿಸಿದ ವರದಿ ಮೂರು ದಶಕಗಳಾದರೂ ಇಂದಿಗೂ ಜಾರಿಗೆ ಬರಲಿ ಎಂಬ ಕೂಗು ಕೇಳಿಬರುತ್ತಲೇ ಇದೆಯೇ ಹೊರತು, ಕಾರ್ಯರೂಪಕ್ಕೆ ಬರುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಪರಿಣಾಮ ರಾಜ್ಯದ ಉದ್ಯೋಗಗಳು ಕನ್ನಡಿಗರಿಗೆ ಲಭ್ಯವಾಗದೆ ಅನ್ಯ ರಾಜ್ಯದವರ ಪಾಲಾಗುತ್ತಿದೆ.

ಒಂದೆಡೆ ನೆರೆಯ ತಮಿಳುನಾಡಿನಲ್ಲಿ ದಶಕದ ಹಿಂದೆಯೇ ಸರ್ಕಾರಿ ಕೆಲಸವನ್ನು ಶೇ.90 ರಷ್ಟು ಸ್ಥಳೀಯರಿಗೆ ನೀಡಬೇಕು ಎಂಬ ಕಾಯ್ದೆ ಚಾಲ್ತಿಯಲ್ಲಿದೆ. ಆಂಧ್ರ ಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸರ್ಕಾರಿ ಹುದ್ದೆಗಳು ಸ್ಥಳೀಯರಿಗೆ ಮಾತ್ರ ಎಂಬ ಕಾನೂನನ್ನು ಜಾರಿಗೆ ತಂದಿದ್ದರು. ಆದರೆ, ಖಾಸಗಿ ಕಂಪೆನಿಗಳಲ್ಲೂ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂಬ ಕುರಿತು ಯಾವ ರಾಜ್ಯದಲ್ಲೂ ಸ್ಪಷ್ಟ ಕಾನೂನು ಇಲ್ಲ. ಕೇಂದ್ರ ಸರ್ಕಾರ ಈ ಕುರಿತು ತಲೆ ಕೆಡಿಸಿಕೊಳ್ಳುವ ಗೋಜಿಗೂ ಹೋಗಿಲ್ಲ.

ಆದರೆ, ರಾಜ್ಯ ಮಟ್ಟದಲ್ಲಿ ಕರ್ನಾಟಕದಲ್ಲಿ ಈ ಹೋರಾಟಕ್ಕೆ ಜೀವ ತುಂಬಬೇಕಾದ ಕೆಲ ಕನ್ನಡಪರ ಸಂಘಟನೆಗಳೂ ಸಹ ಇದೀಗ ಹೋರಾಟದ ಕಣದಿಂದ ಹಿಂದೆ ಸರಿದಿರುವುದು ಭವಿಷ್ಯದ ಆತಂಕಕ್ಕೆ ಕಾರಣವಾಗಿದೆ. ಇವನ್ನೆಲ್ಲಾ ಗಮನಿಸಿದರೆ ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಒತ್ತಾಯಿಸಿ ಇನ್ನೂ ಹತ್ತಾರು ದಶಕಗಳ ನಂತರ ಹೋರಾಟ ನಡೆದರೂ ಅಚ್ಚರಿ ಇಲ್ಲ ಎಂದೆನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...