Homeಮುಖಪುಟ’ಸರೋಜಿನಿ ಮಹಿಷಿ’ ವರದಿ ಜಾರಿಗೆ ಬಂದ್‌: ಅಂತಾದ್ದೇನಿದೆ ಈ ವರದಿಯಲ್ಲಿ? ಜಾರಿಗೆ ಮೀನಾಮೇಷವೇಕೆ?

’ಸರೋಜಿನಿ ಮಹಿಷಿ’ ವರದಿ ಜಾರಿಗೆ ಬಂದ್‌: ಅಂತಾದ್ದೇನಿದೆ ಈ ವರದಿಯಲ್ಲಿ? ಜಾರಿಗೆ ಮೀನಾಮೇಷವೇಕೆ?

ನಾಳೆ ಅಂದರೆ ಫೆ.13ರಂದು ಕೆಲ ಕನ್ನಡಪರ ಸಂಘಟನೆಗಳು ಬಂದ್‌ಗಿಳಿದಿವೆ. ವರದಿ ಬಿಡುಗಡೆಯಾಗಿ 30 ವರ್ಷದ ನಂತರವೂ ಪ್ರತಿಭಟನೆ ನಡೆಯುತ್ತಿದೆ ಎಂದರೆ ಆ ವರದಿಯಲ್ಲೇನಿದೆ?

- Advertisement -
- Advertisement -

ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳ ಕೆಲಸದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಎಂಬ ಆಶೋತ್ತರಗಳನ್ನು ಹೊತ್ತ ರಾಜ್ಯದ ಮೊದಲ ವರದಿ ಎಂಬ ಶ್ರೇಯ ಡಾ. ಸರೋಜಿನಿ ಮಹಿಷಿ ವರದಿಗೆ ಸಲ್ಲುತ್ತದೆ. ಅಸಲಿಗೆ ಮಾಜಿ ಸಂಸದೆ ಡಾ. ಸರೋಜಿನಿ ಮಹಿಷಿ 1986ರಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಈ ವರದಿಯನ್ನು ಕೇಂದ್ರವನ್ನಾಗಿಟ್ಟುಕೊಂಡು 2020ರಲ್ಲೂ ಸಹ ಪ್ರತಿಭಟನೆ ನಡೆಯುತ್ತವೆ, ಬಂದ್‌ಗೆ ಕರೆ ನೀಡಲಾಗುತ್ತದೆ, ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಕೆಲಸ ನೀಡಿ ಎಂಬ ಘೋಷ ವಾಕ್ಯಗಳು ಮೊಳಗುತ್ತವೆ ಎಂದರೆ 3 ದಶಕಗಳೇ ಕರೆದರೂ ಸ್ವಂತ ನೆಲದಲ್ಲಿ ಬದಲಾಗದ ಕನ್ನಡಿಗರ ಪರಿಸ್ಥಿತಿಯನ್ನು ನಾವು ಊಹಿಸಬಹುದು.

ಪ್ರಸ್ತುತ ರಾಜ್ಯದಲ್ಲಿ ಯುವಜನರ ಪರಿಸ್ಥಿತಿ ಮುಂಚಿನಂತಿಲ್ಲ. ನಿರುದ್ಯೋಗ ಎಂಬುದು ದಿನೇ ದಿನೇ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಆರ್ಥಿಕ ಕುಸಿತದ ಹೆಸರಿನಲ್ಲಿ ದಿನದಿಂದ ದಿನಕ್ಕೆ ಒಂದಷ್ಟು ಯುವಜನರು ಕೆಲಸವನ್ನು ಕಳೆದುಕೊಳ್ಳುತ್ತಲೇ ಇದ್ದಾರೆ. ಕನ್ನಡ ಭಾಷೆ ಅನ್ನದ ಪ್ರಶ್ನೆಯಾಗದ ಕಾರಣ ಮಕ್ಕಳ ಪ್ರಾಥಮಿಕ ಶಿಕ್ಷಣದಿಂದಲೂ ಕನ್ನಡ ಕ್ರಮೇಣ ದೂರವಾಗುತ್ತಿದೆ. ಇಂತಹ ಸಂದಿಗ್ಧ ದಿನಗಳಲ್ಲಿ ಸರೋಜಿನಿ ಮಹಿಷಿ ವರದಿ ಕುರಿತ ಕೂಗು ಅನಿವಾರ್ಯ ಹಾಗೂ ಅವಶ್ಯಕವೂ ಹೌದು. ಆ ನಿಟ್ಟಿನಲ್ಲಿ ಫೆಬ್ರವರಿ. 13 ರಂದು ಕರೆ ನೀಡಲಾಗಿರುವ ಬಂದ್ ಸಾಕಷ್ಟು ಮಹತ್ವಪಡೆದುಕೊಂಡಿದೆ

ನಿರುದ್ಯೋಗ ಎಂಬುದು ಭಾರತದ ಮಾತ್ರವಲ್ಲ ಕರ್ನಾಟಕದ ಪಾಲಿಗೂ ಸುಮಾರು ಆರು ದಶಕಗಳ ಪಿಡುಗು. ಹೀಗಾಗಿ ಕರ್ನಾಟಕದಲ್ಲಿ ಕನ್ನಡಿಗರಿಗೆ ಕನ್ನಡ ಅನ್ನದ ಪ್ರಶ್ನೆಯಾಗಬೇಕು ಎಂಬ ಕೂಗು 1983ರಿಂದಲೂ ಇದೆ. ದಿವಂಗತ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ವೇಳೆ ಕನ್ನಡಿಗರಿಗೆ ಕರ್ನಾಟಕದಲ್ಲಿ ಪರಭಾಷಿಕರಿಂದ ಅನ್ಯಾಯವಾಗುತ್ತಿದೆ ಎಂಬ ಕೂಗು ತುಸು ಜೋರಾಗಿಯೇ ಇತ್ತು. ಹೋರಾಟಗಳೂ ಸಹ ಉಗ್ರರೂಪ ತಳೆದಿತ್ತು.
ಈ ವೇಳೆ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಕರ್ನಾಟಕದಲ್ಲಿ ಕನ್ನಡಿಗರಿಗೆ ದೊರೆಯುತ್ತಿದ್ದ ಉದ್ಯೋಗಾವಕಾಶಗಳನ್ನು ಪರಿಶೀಲಿಸಿ ವಿಮರ್ಶಿಸಲು ರಾಜ್ಯದ ಮೊದಲ ಮಹಿಳಾ ಸಂಸದೆ, ಸಚಿವೆ ಹಾಗೂ ಮಹಿಳಾ ಹೋರಾಟಗಾರ್ತಿ ಸರೋಜಿನಿ ಮಹಿಷಿ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚಿಸಿದ್ದರು. ಸತತ ಮೂರು ವರ್ಷ ಈ ಕುರಿತು ಪರಿಶೀಲನೆ ನಡೆಸಿದ್ದ ಸಮಿತಿ 1986ರಲ್ಲಿ ಸರ್ಕಾರಕ್ಕೆ 53 ಅಂಶಗಳ ಒಂದು ವರದಿಯನ್ನು ಸಲ್ಲಿಸಿತ್ತು. ಅದೇ “ಸರೋಜಿನಿ ಮಹಿಷಿ” ವರದಿ.

ಅಸಲಿಗೆ 1986ರಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದ್ದ ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ 2020ರಲ್ಲಿ ಏಕೆ ಬಂದ್‌, ಪ್ರತಿಭಟನೆಗಳು ನಡೆಯುತ್ತಿವೆ? ಯಾರು ಈ ಸರೋಜಿನಿ ಮಹಿಷಿ? ಇವರು ನೀಡಿದ್ದ ವರದಿಯಲ್ಲಿ ಏನೇನು ಅಂಶಗಳಿವೆ? ಅದರ ಜಾರಿಗೆ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಏಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಯಾರು ಈ ಸರೋಜಿನಿ ಮಹಿಷಿ?

ಧಾರವಾಡದ ಶಿರಹಟ್ಟಿ ತಾಲೂಕಿನಲ್ಲಿ 1923ರ ಮಾರ್ಚ್ 3 ರಂದು ಬಿಂದುರಾವ್ ಮಹಿಷಿ ಹಾಗೂ ಕಮಲಾಬಾಯಿ ದಂಪತಿಗಳಿಗೆ ಜನಿಸಿದ ಸರೋಜಿನಿ ಮಹಿಷಿ, ಪ್ರಾಥಮಿಕ, ಮಾಧ್ಯಮಿಕ ಶಿಕ್ಷಣವನ್ನು ಧಾರವಾಡದಲ್ಲೇ ಪೂರ್ಣಗೊಳಿಸಿದರು. ನಂತರ ಸಾಂಗ್ಲಿಯ ಮಿಲಿಂಗಟನ್ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತ ವಿಷಯದಲ್ಲಿ ಬಿಎ ಪದವಿ ಪಡೆದರು. ಮುಂಬೈನಲ್ಲಿ ಎಂ.ಎ. ಪದವಿ ಪಡೆದಿದ್ದಾರೆ.

ಹೋಮಿಯೋಪತಿ, ನಿಸರ್ಗ ಚಿಕಿತ್ಸೆ ಕಲಿಕೆಗಾಗಿ ಬೆಳಗಾವಿಯ ಆರ್‌ಎಲ್ಎಸ್ ಕಾಲೇಜಿನಲ್ಲಿ ಎಲ್.ಎಲ್.ಟಿ ಅಧ್ಯಯನ ಮಾಡಿ 1955ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಮೊದಲ ರ್‍ಯಾಂಕ್‌ನಲ್ಲಿ ಕಾನೂನು ಪದವಿ ಪಡೆದರು. ಅಲ್ಲದೆ, ಧಾರವಾಡದ ಜನತಾ ಲಾ ಕಾಲೇಜಿನಲ್ಲಿ ಕಾನೂನು ಪ್ರಾಧ್ಯಾಪಕಿಯಾಗಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ನಂತರ ವಕೀಲ ವೃತ್ತಿ ಪ್ರಾರಂಭಿಸಿ ಬಾರ್ ಕೌನ್ಸಿಲ್ ಪರೀಕ್ಷೆಯಲ್ಲಿ ಮೊದಲ ಸ್ಥಾನ ಗಳಿಸಿದ ಮಹಿಳೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾದರು. ನಾಲ್ಕು ಬಾರಿ ಧಾರವಾಡದ ಸಂಸದೆಯಾಗಿದ್ದ ಇವರು 2 ಅವಧಿಗೆ ರಾಜ್ಯಸಭೆಗೂ ಆಯ್ಕೆಯಾಗಿದ್ದಾರೆ. ಮಹಿಳೆಯರ ಸಬಲೀಕರಣದ ಕುರಿತಾಗಿ ಸಾಕಷ್ಟು ಕೆಲಸ ಮಾಡಿದ ಇವರು ಸದ್ದು ಮಾಡಿದ್ದು, ರಾಜ್ಯದೆಲ್ಲೆಡೆ ಸಂಚಲನ ಮೂಡಿಸಿದ್ದು ಸ್ಥಳೀಯರಿಗೆ ಉದ್ಯೋಗ ಎಂಬ “ಮಣ್ಣಿನ ಮಗ” ನೀತಿಯನ್ನು ಪ್ರತಿಪಾದಿಸುವ ಸರೋಜಿನಿ ಮಹಿಷಿ ವರದಿ ನೀಡಿದ ನಂತರವೇ.

ಅಂತಾದ್ದೇನಿದೆ ಈ ಸರೋಜಿನಿ ಮಹಿಷಿ ವರದಿಯಲ್ಲಿ?

ಮಿಶ್ರ ಆರ್ಥಿಕ ನೀತಿಯಿಂದ ಮಾತ್ರ ಭಾರತವನ್ನು ಅಭಿವೃದ್ಧಿ ಪಥದಲ್ಲಿ ನಡೆಸಲು ಸಾಧ್ಯ ಎಂಬ ಪರ್ಯಾಯ ಆರ್ಥಿಕ ವ್ಯವಸ್ಥೆಯ ಜಾರಿಗೆ ತುದಿಗಾಲಲ್ಲಿ ನಿಂತಿದ್ದ 90ರ ದಶಕವದು. ಪಿ. ವಿ ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರ ದೇಶದಲ್ಲಿ ಹೊಸ ಆರ್ಥಿಕ ನೀತಿಯನ್ನು ಜಾರಿಗೆ ತಂದಿತ್ತು. ಆದರೆ, ಮಿಶ್ರ ಆರ್ಥಿಕತೆ ಇಂದು ಮೇಲ್ನೋಟಕ್ಕೆ ಒಂದೇ ರೀತಿ ಕಂಡು ಬಂದರೂ ಮುಕ್ತ ಹಾಗೂ ಮಿಶ್ರ ಆರ್ಥಿಕ ನೀತಿಯ ಮಧ್ಯೆ ಭಿನ್ನತೆ ಇದೆ.

ಸರ್ಕಾರದ ಭಾಗವಹಿಸುವಿಕೆ ಇಲ್ಲದೆ ಇಂದು ಖಾಸಗಿ ಕಂಪನಿ ದೇಶದ ಯಾವುದೇ ಮೂಲೆಯಲ್ಲಿ ತಮ್ಮ ವ್ಯವಹಾರವನ್ನು ಆರಂಭಿಸುವಷ್ಟು ಸ್ವಾತಂತ್ರ್ಯವನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ನೀಡಲಾಗಿದೆ. ಒಂದು ಕಂಪನಿ ಯಾವುದೇ ರಾಜ್ಯದಲ್ಲಿ ತನ್ನ ಕಾರ್ಯಚಟುವಟಿಕೆ ಆರಂಭಿಸಿದರೆ ಅಲ್ಲಿನ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಅಧಿಕಾರಿಗಳ ಆಜ್ಞೆಯನ್ನು ಪಾಲಿಸಬೇಕು.

ಆದರೆ, ಭಾರತದಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಸರ್ಕಾರವನ್ನೇ ನಿಯಂತ್ರಿಸಬಲ್ಲಷ್ಟು ಶಕ್ತಿ ಪಡೆದಿವೆ. ಇಲ್ಲಿ ಸರ್ಕಾರದ ಆದೇಶಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಹಾಗಾಗಿ ರಾಜ್ಯದ ಯುವಜನತೆ ಕೆಲಸವಿಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಉದ್ಯೋಗ ಸೃಷ್ಠಿ ಹೊಸ ಆರ್ಥಿಕ ನೀತಿಯ ಮೊದಲ ಆದ್ಯತೆಯಾದರೂ ಸ್ಥಳೀಯರಿಗೆ ಮಣೆಹಾಕುವ ಯಾವುದೇ ನೀತಿ ಪ್ರಚಲಿತದಲ್ಲಿಲ್ಲ. ಇಂಗ್ಲೀಷ್ ಭಾಷೆ ಕಲಿತರೆ ಮಾತ್ರ ಇಲ್ಲಿನ ಐಟಿ-ಬಿಟಿ ಉದ್ಯಮಗಳಲ್ಲಿ ಕೆಲಸ ಪಡೆಯುವುದು ಸಾಧ್ಯ. ಹಾಗಾಗಿ ಪಾಲಕರು ತಮ್ಮ ಮಕ್ಕಳ ಭವಿಷ್ಯದ ಚಿಂತೆಯಿಂದ ಶಾಲಾ ದಿನಗಳಿಂದಲೇ ಇಂಗ್ಲೀಷ್ ಮಾಧ್ಯಮಕ್ಕೆ ಆದ್ಯತೆ ನೀಡುತ್ತಿದ್ದಾರೆ.

ಹಾಗಾಗಿ ಕನ್ನಡ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೆಲಸದಲ್ಲಿ ಶೇ.5ರಷ್ಟು ಮೀಸಲು ಸೌಲಭ್ಯ ನೀಡಿದಂತೆ, ರಾಜಧಾನಿಯಲ್ಲಿರುವ ಬಹುರಾಷ್ಟ್ರೀಯ ಕಂಪನಿಗಳಲ್ಲೂ ಮೀಸಲಾತಿ ನೀಡಬೇಕು. ಕನ್ನಡ, ಯುವಜನರಿಗೆ ಉದ್ಯೋಗಾವಕಾಶ ಲಭಿಸಿದರೆ ಕನ್ನಡದಿಂದ ಅನ್ನ ಲಭಿಸಿದರೆ, ಸಾಮಾನ್ಯವಾಗಿ ಕನ್ನಡದ ಉಳಿವಿನ ಪ್ರಶ್ನೆ ತೆರೆಯ ಮರೆಗೆ ಸರಿಯಲಾರಂಭಿಸುತ್ತದೆ.

ಈ ನಿಟ್ಟಿನಲ್ಲಿ ಡಾ. ಸರೋಜಿನಿ ಮಹಿಷಿ ವರದಿ ಕರ್ನಾಟಕದ ಮಟ್ಟಿಗೆ ಸಾಕಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ. ಸಾರ್ವಜನಿಕ ಮತ್ತು ಖಾಸಗಿ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಿಕೆಯಲ್ಲಿ ಆದ್ಯತೆ ಇರಬೇಕು. ಸರ್ಕಾರಿ ವಲಯದಲ್ಲಿ ಶೇ.90 ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಬೇಕು. ಬಹುರಾಷ್ಟ್ರೀಯ ಮತ್ತು ಖಾಸಗಿ ಉದ್ದಿಮೆಗಳಲ್ಲೂ ಮೊದಲು ಶೇ.5 ರಷ್ಟು ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಕೆಲಸ ನೀಡಬೇಕು ಎಂಬುದು ವರದಿಯ ಮುಖ್ಯಾಂಶಗಳು.

ಆನಂತರ ಇದು ಹಂತ ಹಂತವಾಗಿ ಶೇ.100ರಷ್ಟು ಕನ್ನಡಿಗರಿಗೆ ಅವಕಾಶ ನೀಡಬೇಕು ಎಂಬುದನ್ನೂ ಸೇರಿದಂತೆ ಡಾ. ಸರೋಜಿನಿ ಮಹಿಷಿ ಆಯೋಗ 1986ರಲ್ಲೇ 58 ಶಿಫಾರಸ್ಸುಗಳನ್ನೊಳಗೊಂಡ ಸಮಗ್ರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು.

ಅಂದಿನ ಸರ್ಕಾರ ಈ ವರದಿಯಲ್ಲಿನ 12 ಶಿಫಾರಸ್ಸುಗಳನ್ನು ತನಗೆ ಒಪ್ಪುವ ಅಧಿಕಾರವಲ್ಲವೆಂದು ಕೈಬಿಟ್ಟಿದ್ದು, ಉಳಿದ ಶಿಫಾರಸ್ಸುಗಳ ಅನುಷ್ಠಾನಕ್ಕೆ ತರಲು ಪ್ರಯತ್ನಿಸುವುದಾಗಿ ಆಶ್ವಾಸನೆ ನೀಡಿತ್ತು. ಆದರೆ ಬಹುರಾಷ್ಟ್ರೀಯ/ಖಾಸಗಿ ಕಂಪನಿಗಳಲ್ಲಿ ಈ ಶಿಫಾರಸ್ಸನ್ನು ಪಾಲಿಸಬೇಕು, ಕನ್ನಡಿಗರಿಗೆ ಉದ್ಯೋಗಾವಕಾಶ ನೀಡಬೇಕು ಎನ್ನುವ ಪ್ರಮುಖ ಶಿಫಾರಸಿಗೆ ಈವರೆಗೆ ಯಾವುದೇ ಸರ್ಕಾರ ಒಪ್ಪಿಗೆ ನೀಡಿಲ್ಲ.

ಪರಿಣಾಮ ಸರೋಜಿನಿ ಮಹಿಷಿ ಕನ್ನಡಿಗರಿಗೆ ಕನ್ನಡ ಅನ್ನದ ಪ್ರಶ್ನೆಯಾಗಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಸಲ್ಲಿಸಿದ ವರದಿ ಮೂರು ದಶಕಗಳಾದರೂ ಇಂದಿಗೂ ಜಾರಿಗೆ ಬರಲಿ ಎಂಬ ಕೂಗು ಕೇಳಿಬರುತ್ತಲೇ ಇದೆಯೇ ಹೊರತು, ಕಾರ್ಯರೂಪಕ್ಕೆ ಬರುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಪರಿಣಾಮ ರಾಜ್ಯದ ಉದ್ಯೋಗಗಳು ಕನ್ನಡಿಗರಿಗೆ ಲಭ್ಯವಾಗದೆ ಅನ್ಯ ರಾಜ್ಯದವರ ಪಾಲಾಗುತ್ತಿದೆ.

ಒಂದೆಡೆ ನೆರೆಯ ತಮಿಳುನಾಡಿನಲ್ಲಿ ದಶಕದ ಹಿಂದೆಯೇ ಸರ್ಕಾರಿ ಕೆಲಸವನ್ನು ಶೇ.90 ರಷ್ಟು ಸ್ಥಳೀಯರಿಗೆ ನೀಡಬೇಕು ಎಂಬ ಕಾಯ್ದೆ ಚಾಲ್ತಿಯಲ್ಲಿದೆ. ಆಂಧ್ರ ಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸರ್ಕಾರಿ ಹುದ್ದೆಗಳು ಸ್ಥಳೀಯರಿಗೆ ಮಾತ್ರ ಎಂಬ ಕಾನೂನನ್ನು ಜಾರಿಗೆ ತಂದಿದ್ದರು. ಆದರೆ, ಖಾಸಗಿ ಕಂಪೆನಿಗಳಲ್ಲೂ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂಬ ಕುರಿತು ಯಾವ ರಾಜ್ಯದಲ್ಲೂ ಸ್ಪಷ್ಟ ಕಾನೂನು ಇಲ್ಲ. ಕೇಂದ್ರ ಸರ್ಕಾರ ಈ ಕುರಿತು ತಲೆ ಕೆಡಿಸಿಕೊಳ್ಳುವ ಗೋಜಿಗೂ ಹೋಗಿಲ್ಲ.

ಆದರೆ, ರಾಜ್ಯ ಮಟ್ಟದಲ್ಲಿ ಕರ್ನಾಟಕದಲ್ಲಿ ಈ ಹೋರಾಟಕ್ಕೆ ಜೀವ ತುಂಬಬೇಕಾದ ಕೆಲ ಕನ್ನಡಪರ ಸಂಘಟನೆಗಳೂ ಸಹ ಇದೀಗ ಹೋರಾಟದ ಕಣದಿಂದ ಹಿಂದೆ ಸರಿದಿರುವುದು ಭವಿಷ್ಯದ ಆತಂಕಕ್ಕೆ ಕಾರಣವಾಗಿದೆ. ಇವನ್ನೆಲ್ಲಾ ಗಮನಿಸಿದರೆ ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಒತ್ತಾಯಿಸಿ ಇನ್ನೂ ಹತ್ತಾರು ದಶಕಗಳ ನಂತರ ಹೋರಾಟ ನಡೆದರೂ ಅಚ್ಚರಿ ಇಲ್ಲ ಎಂದೆನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...