Homeಮುಖಪುಟಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ಹಿಂಡೆನ್‌ಬರ್ಗ್ ಸಂಸ್ಥೆಯು 2020 ರಿಂದ ಟೆಸ್ಲಾ, ಟ್ವಿಟರ್ ಸೇರಿದಂತೆ ಸುಮಾರು 30 ಕಂಪನಿಗಳನ್ನು ಗುರಿಯಾಗಿಸಿಕೊಂಡು ಶಾರ್ಟಿಂಗ್ ಮಾಡಿ ಲಾಭ ಗಳಿಸಿದೆ.

- Advertisement -
- Advertisement -

ಕಳೆದ ನಾಲ್ಕು ದಿನಗಳಲ್ಲಿ ದಿಢೀರ್ ಪ್ರಚಲಿತಕ್ಕೆ ಬಂದ ಅಮೆರಿಕದ ಕಂಪನಿಯ ಹೆಸರು ಹಿಂಡೆನ್‌ಬರ್ಗ್ ರಿಸರ್ಚ್. ಭಾರತದ ನಂಬರ್ ಒನ್ ಶ್ರೀಮಂತ ಗೌತಮ್ ಅದಾನಿಯವರ ಹಣಕಾಸು ಅಕ್ರಮಗಳನ್ನು ಬಯಲಿಗೆಳೆಯುವ ವರದಿ ಪ್ರಕಟಿಸುವ ಮೂಲಕ ಅದು ಸದ್ಯ ಟ್ರೆಂಡಿಂಗ್‌ನಲ್ಲಿದೆ. ಇತ್ತ ಆ ಒಂದು ವರದಿಯಿಂದ ಅದಾನಿ ಕಂಪನಿಯ ಷೇರುಗಳೆಲ್ಲ ಪ್ರಪಾತಕ್ಕೆ ಕುಸಿಯುತ್ತಿದ್ದು, ಈ ನಾಲ್ಕು ದಿನದಲ್ಲಿ ಕನಿಷ್ಟ 4 ಲಕ್ಷ ಕೋಟಿ ರೂಗಳಿಗೂ ಹೆಚ್ಚಿನ ನಷ್ಟಕ್ಕೆ ಒಳಗಾಗಿದ್ದಾರೆ. ಅಷ್ಟು ಮಾತ್ರವಲ್ಲದೆ ಎಸ್‌ಬಿಐ, ಎಲ್‌ಐಸಿಯಂತಹ ಸಾರ್ವಜನಿಕ ವಲಯದ ಸಂಸ್ಥೆಗಳ ಷೇರು ಮೌಲ್ಯಗಳು ಕುಸಿಯುತ್ತಿದ್ದು, ಇಡೀ ಭಾರತದ ಆರ್ಥಿಕತೆ ಅಪಾಯದಲ್ಲಿದೆ. ಇಂತಹ ಸಮಯದಲ್ಲಿ ಹಿಂಡೆನ್‌ಬರ್ಗ್ ಕಂಪನಿಯನ್ನು ‘ಶಾರ್ಟ್ ಸೆಲ್ಲಿಂಗ್’ ಕಂಪನಿ ಎಂದು ಸಂಭೋದಿಸಲಾಗುತ್ತಿದೆ. ಅದು ಅದಾನಿಗೆ ಶಾರ್ಟ್ ಸೆಲ್ಲಿಂಗ್ ಮಾಡುವ ಮೂಲಕ ಮಿಲಿಯನ್‌ ಡಾಲರ್‌ಗಟ್ಟಲೇ ಹಣ ಸಂಪಾದಿಸಿದೆ ಎಂದು ವರದಿಯಾಗಿದೆ. ಆಗಿದ್ದರೆ ಶಾರ್ಟ್‌ ಸೆಲ್ಲಿಂಗ್ ಎಂದರೇನು? ಆ ಕಂಪನಿಯ ಹಿನ್ನೆಲೆಯೇನು ಎಂಬುದನ್ನು ನೋಡೋಣ.

ಹಿಂಡೆನ್‌ಬರ್ಗ್ ಹಿನ್ನೆಲೆ

2017ರಲ್ಲಿ ನಾಥನ್ ಆಂಡರ್ಸನ್ ಎಂಬುವವರು ಸ್ಥಾಪಿಸಿದ ಹಿಂಡೆನ್‌ಬರ್ಗ್ ರಿಸರ್ಚ್ ತನ್ನನ್ನು ಸಂಶೋಧನಾ ಮತ್ತು ತನಿಖಾ ಸಂಸ್ಥೆ ಎಂದು ಕರೆದುಕೊಂಡಿದೆ. ಸ್ಟಾಕ್‌ ಮಾರ್ಕೆಟ್‌ನಲ್ಲಿ ತಪ್ಪಿಸಬಹುದಾದ ಆರ್ಥಿಕ ಅವಘಡಗಳನ್ನು ಗುರುತಿಸುವುದು, ಸಂತ್ರಸ್ತರನ್ನು ರಕ್ಷಿಸುವುದು ತನ್ನ ಕೆಲಸ ಎಂದು ಹೇಳಿಕೊಂಡಿದೆ. ಕೇವಲ ಬೆರಳೆಣಿಕೆಯ ಸಿಬ್ಬಂದಿಗಳನ್ನು ಹೊಂದಿರುವ ಈ ಸಂಸ್ಥೆಯು ದೈತ್ಯ ಕಂಪನಿಗಳ ಕುರಿತಾದ ಆಳವಾದ ಸಂಶೋಧನೆ ಮಾಡುವುದರಲ್ಲಿ ಪಳಗಿದ ಕೈ ಎನಿಸಿಕೊಂಡಿದೆ. ಆರ್ಥಿಕ ಅವ್ಯವಹಾರಗಳನ್ನು ಬಯಲಿಗೆಳೆಯುವುದು, ವರದಿಗಳನ್ನು ಬಿಡುಗಡೆ ಮಾಡುವ ವಿಶಲ್ ಬ್ಲೋಯರ್ ಕೆಲಸ ಮಾಡುತ್ತಲೇ ಅದು ‘ಶಾರ್ಟ್ ಸೆಲ್ಲರ್ ಆಕ್ಟಿವಿಸಂ’ ಅನ್ನು ಮಾಡುತ್ತಾ ಬಂದಿದೆ. ಅದಾನಿ ಕಂಪನಿಯ ವಿರುದ್ಧ ಸಹ ಅದು ಶಾರ್ಟ್ ಸೆಲ್ಲಿಂಗ್ ಮಾಡಿದೆ ಎಂದು ತನ್ನ ವರದಿಯಲ್ಲಿ ಹೇಳಿಕೊಂಡಿದೆ.

ಏನಿದು ಶಾರ್ಟ್ ಸೆಲ್ಲಿಂಗ್?

ಶಾರ್ಟ್ ಸೆಲ್ಲಿಂಗ್ ಎನ್ನುವುದು ಒಂದು ಮಾರುಕಟ್ಟೆ ತಂತ್ರವಾಗಿದ್ದು ಭಾರತ ಮತ್ತು ಅಮೆರಿಕದಲ್ಲಿ ಕಾನೂನುಬದ್ಧವಾಗಿ ಯಾರು ಬೇಕಾದರೂ ಮಾಡಬಹುದಾಗಿದೆ. ಅಂದರೆ ಕೆಲವು ಕಂಪನಿಗಳ ಷೇರುಗಳ ಬೆಲೆ ಕುಸಿಯುತ್ತವೆ ಎಂದು ಅಧ್ಯಯನ, ಸಂಶೋಧನೆ ನಡೆಸುವುದು. ತನ್ನದಲ್ಲದ ಆ ಷೇರುಗಳನ್ನು ದಲ್ಲಾಳಿಗಳ ಮೂಲಕ ಎರವಲು ಪಡೆದು ಸದ್ಯದ ಬೆಲೆಗೆ ಮಾರುವುದು. ನಂತರ ಅವುಗಳ ಬೆಲೆ ಕುಸಿದಾಗ ಕಡಿಮೆ ಬೆಲೆಗೆ ಕೊಂಡು ದಲ್ಲಾಳಿಗಳಿಗೆ ಹಿಂದಿರುಗಿಸುವ ಮೂಲಕ ಲಾಭ ಗಳಿಸುವುದನ್ನು ಶಾರ್ಟ್ ಸೆಲ್ಲಿಂಗ್ ಎನ್ನಲಾಗುತ್ತದೆ.

ಉದಾಹರಣೆಯ ಮೂಲಕ ನೋಡುವುದಾದರೆ ಅಆ ಎಂಬ ಕಂಪನಿಯ ಷೇರುಗಳು 1000 ರೂಗೆ ಮಾರಾಟವಾಗುತ್ತಿರುತ್ತವೆ. ವ್ಯಕ್ತಿ ಅಥವಾ ಸಂಸ್ಥೆಯೊಂದು ಆ ಕಂಪನಿಯ ಕುರಿತು ಸಾಕಷ್ಟು ಅಧ್ಯಯನ ನಡೆಸಿ ಮುಂದಿನ ದಿನಗಳಲ್ಲಿ ಅದರ ಷೇರುಗಳ ಬೆಲೆ ಕುಸಿಯುತ್ತದೆ ಎಂದು ಅಂದಾಜಿಸುತ್ತಾರೆ. ಆಗ ಆ ಕಂಪನಿಯ 1000 ರೂ ಬೆಲೆಯ 100 ಷೇರುಗಳನ್ನು ಬ್ರೋಕರ್‌ಗಳ ಮೂಲಕ ಎರವಲು ಪಡೆದು ಮಾರಿ 1 ಲಕ್ಷ ರೂ ಗಳಿಸುತ್ತಾರೆ. ಆನಂತರ ಆ ಕಂಪನಿಯ ಷೇರುಗಳ ಬೆಲೆ 600 ರೂಗಳಿಗೆ ಕುಸಿದ ಸಂದರ್ಭದಲ್ಲಿ ತಾವೇ 60,000 ರೂಗಳಿಗೆ 100 ಷೇರುಗಳನ್ನು ಖರೀದಿಸಿ ದಲ್ಲಾಳಿಗೆ ಹಿಂದಿರುಗಿಸುತ್ತಾರೆ. ಆಗ ಅವರಿಗೆ 40,000 ರೂ ಲಾಭವಾಗುತ್ತದೆ. ಇದನ್ನು ಶಾರ್ಟಿಂಗ್ ಎನ್ನುತ್ತಾರೆ.

ಇದೊಂದು ಜೂಜಿನಂತಿರುತ್ತದೆ ಮತ್ತು ಇಂತಿಷ್ಟು ಸಮಯದಲ್ಲಿ ದಲ್ಲಾಳಿಗೆ ಷೇರುಗಳನ್ನು ಮರಳಿ ನೀಡುವ ಒಪ್ಪಂದವಾಗಿತ್ತದೆ. ಒಂದು ವೇಳೆ ಅವರ ಅಂದಾಜು ತಪ್ಪಿ ಆ ಕಂಪನಿಯ ಷೇರಿನ ಬೆಲೆ ಕುಸಿಯುವ ಬದಲು 1,400 ರೂ ಏರಿಕೆಯಾದಲ್ಲಿ ಶಾರ್ಟ್ ಮಾಡಿದ ವ್ಯಕ್ತಿ ಅಥವಾ ಸಂಸ್ಥೆ ತನ್ನ ಕೈಯಿಂದಲೇ 40,000 ದುಡ್ಡು ಹಾಕಿ ಷೇರುಗಳನ್ನು ಕೊಳ್ಳುವ ಮೂಲಕ ನಷ್ಟಕ್ಕೆ ಸಿಲುಕುವ ಸಂದರ್ಭವೂ ಎದುರಾಗಬಹುದಾಗಿದೆ.

ಪ್ರಸ್ತುತ ಹಿಂಡೆನ್‌ಬರ್ಗ್ ಅದಾನಿ ಕಂಪನಿಗೆ ಮಾಡಿರುವುದು ಇದೇ ಶಾರ್ಟಿಂಗ್ ಆಗಿದೆ. ಎರಡು ವರ್ಷಗಳ ಕಾಲ ಸತತ ಅಧ್ಯಯನ ಮಾಡಿದ ಅದು ಅದಾನಿ ಕಂಪನಿಯ ಅಕ್ರಮಗಳ ಕುರಿತು ದಾಖಲೆಗಳನ್ನು ಶೇಖರಿಸಿಟ್ಟುಕೊಂಡಿತ್ತು. ಆನಂತರ ಷೇರು ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಮೂಲಕ ಲಕ್ಷಾಂತರ ಷೇರುಗಳನ್ನು ಎರವಲು ಪಡೆದು ಮಾರಾಟ ಮಾಡಿ ಹಣ ಸಂಗ್ರಹಿಸಿಟ್ಟುಕೊಂಡಿದೆ. ಜನವರಿ 24 ರಂದು ವರದಿ ಬಿಡುಗಡೆ ಮಾಡಿದ ನಂತರ ಪ್ರಪಂಚದಾದ್ಯಂತ ಅದು ಸುದ್ದಿಯಾಗಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಯಿತು. ಅದಾನಿ ಬಹುತೇಕ ಸಾಲದ ಮೇಲೆಯೇ ಸಾಮ್ರಾಜ್ಯ ಕಟ್ಟಿದ್ದು ಅದರ ಅಡಿಪಾಯವೇ ಅಲ್ಲಾಡುತ್ತಿದೆ ಎಂಬ ಕಥನ ಬಿತ್ತರಿಸಲಾಯಿತು. ಇದರಿಂದ ಭಯಗೊಂಡ ಲಕ್ಷಾಂತರ ಜನ ಏಕಕಾಲದಲ್ಲಿ ಅದಾನಿ ಕಂಪನಿಯ ತಮ್ಮ ಷೇರುಗಳನ್ನು ಮಾರಲು ಮುಂದಾದರು. ಆಗ ಸಹಜವಾಗಿ ಅವುಗಳ ಬೆಲೆ ಕುಸಿಯುತ್ತಾ ಹೋಯಿತು. ಸುಮಾರು ಶೇ. 20%ಗೂ ಹೆಚ್ಚಿನ ಷೇರು ಬೆಲೆಗಳು ಕುಸಿಯುತ್ತಿರುವುದರಿಂದ ಅದೆಲ್ಲವೂ ಹಿಂಡೆನ್‌ಬರ್ಗ್‌ ಕಂಪನಿಗೆ ಲಾಭವಾಗುತ್ತಿದೆ. ಏಕೆಂದರೆ ಹೆಚ್ಚು ಬೆಲೆಗೆ ಮಾರಿರುವ ಅದು ಕಡಿಮೆ ಬೆಲೆ ಕೊಂಡು ದಲ್ಲಾಳಿಗೆ ಹಿಂದಿರುಗಿಸುತ್ತದೆ. ಅಂದರೆ ಅದಾನಿ ಷೇರುಗಳ ಬೆಲೆ ಕುಸಿದಷ್ಟು ಅದರ ಲಾಭ ಹಿಂಡೆನ್‌ಬರ್ಗ್‌ಗೆ ದಕ್ಕುತ್ತಿದೆ. ಹೆಚ್ಚಿನ ಬೆಲೆಗೆ ಮಾರಾಟ ಮತ್ತು ಕಡಿಮೆ ಬೆಲೆ ಕೊಳ್ಳುವುದು ನಡೆಯುತ್ತಿದೆ.

ಇದೇ ಮೊದಲಲ್ಲ

ಬ್ಲೂಮ್‌ಬರ್ಗ್ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಹಿಂಡೆನ್‌ಬರ್ಗ್ 2020 ರಿಂದ ಈ ರೀತಿಯಲ್ಲಿ ಸುಮಾರು 30 ಕಂಪನಿಗಳನ್ನು ಗುರಿಯಾಗಿಸಿಕೊಂಡು ಶಾರ್ಟಿಂಗ್ ಮಾಡಿದೆ. ಅದು ತನಿಖೆಗಳನ್ನು ಸಾರ್ವಜನಿಕಗೊಳಿಸಿದ ಮರುದಿನವೇ ಆಯಾ ಕಂಪನಿಗಳು ಸರಾಸರಿಯಾಗಿ ತಮ್ಮ ಮೌಲ್ಯದ ಸುಮಾರು 15 ಪ್ರತಿಶತವನ್ನು ಕಳೆದುಕೊಂಡಿವೆ. ಅಂದರೆ ಅವುಗಳಲ್ಲೆಲ್ಲ ಅದು ಲಾಭ ಗಳಿಸಿದೆ. ಟೆಸ್ಲಾ, ಟ್ವಿಟರ್‌ನಂತಹ ಕಂಪನಿಗಳ ಮೇಲೆ ಸಹ ಅದು ಶಾರ್ಟಿಂಗ್ ಮಾಡಿ ಲಾಭ ಗಳಿಸಿದೆ ಎನ್ನಲಾಗಿದೆ. ನಿಕೋಲಾ ಎಂಬ ಕಂಪನಿಯ ಮೇಲೆ ಹಿಂಡೆನ್‌ಬರ್ಗ್ ಶಾರ್ಟಿಂಗ್ ಮಾಡಿತ್ತು. ಹಾಗಾಗಿ ಸುಮಾರು 34 ಬಿಲಿಯನ್ ಅಮೆರಿಕನ್ ಡಾಲರ್ ಮಾರುಕಟ್ಟೆ ಮೌಲ್ಯ ಹೊಂದಿದ್ದ ನಿಕೋಲಾ ಕಂಪನಿಯು ಸದ್ಯ 1.3 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಕುಸಿದಿದೆ ಎಂದರೆ ಹಿಂಡೆನ್‌ಬರ್ಗ್ ಕಂಪನಿಯ ಸಂಶೋಧನೆಗಳು, ತಂತ್ರಗಳು ಎಷ್ಟು ಕರಾರುವಕ್ಕಾರಿಗುತ್ತವೆ ಎಂಬುದಕ್ಕೆ ಉದಾಹರಣೆಯಾಗಿದೆ.

ಇದನ್ನೂ ಓದಿ: Explainer: ಏನಿದು ಹಿಂಡೆನ್‌ಬರ್ಗ್ ವರದಿ? ಅದಾನಿ ಸಾಮ್ರಾಜ್ಯ ಕುಸಿಯುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This company has been banned in usa as per recent news, how india had allowed it to investigate by short selling method, no shares of india/USA are not allowed to allot or sell or buy to us entity or indian entity or investors at present. It seems that unknown rival entity is hand in glove. M

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...