Homeಮುಖಪುಟಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ಹಿಂಡೆನ್‌ಬರ್ಗ್ ಸಂಸ್ಥೆಯು 2020 ರಿಂದ ಟೆಸ್ಲಾ, ಟ್ವಿಟರ್ ಸೇರಿದಂತೆ ಸುಮಾರು 30 ಕಂಪನಿಗಳನ್ನು ಗುರಿಯಾಗಿಸಿಕೊಂಡು ಶಾರ್ಟಿಂಗ್ ಮಾಡಿ ಲಾಭ ಗಳಿಸಿದೆ.

- Advertisement -
- Advertisement -

ಕಳೆದ ನಾಲ್ಕು ದಿನಗಳಲ್ಲಿ ದಿಢೀರ್ ಪ್ರಚಲಿತಕ್ಕೆ ಬಂದ ಅಮೆರಿಕದ ಕಂಪನಿಯ ಹೆಸರು ಹಿಂಡೆನ್‌ಬರ್ಗ್ ರಿಸರ್ಚ್. ಭಾರತದ ನಂಬರ್ ಒನ್ ಶ್ರೀಮಂತ ಗೌತಮ್ ಅದಾನಿಯವರ ಹಣಕಾಸು ಅಕ್ರಮಗಳನ್ನು ಬಯಲಿಗೆಳೆಯುವ ವರದಿ ಪ್ರಕಟಿಸುವ ಮೂಲಕ ಅದು ಸದ್ಯ ಟ್ರೆಂಡಿಂಗ್‌ನಲ್ಲಿದೆ. ಇತ್ತ ಆ ಒಂದು ವರದಿಯಿಂದ ಅದಾನಿ ಕಂಪನಿಯ ಷೇರುಗಳೆಲ್ಲ ಪ್ರಪಾತಕ್ಕೆ ಕುಸಿಯುತ್ತಿದ್ದು, ಈ ನಾಲ್ಕು ದಿನದಲ್ಲಿ ಕನಿಷ್ಟ 4 ಲಕ್ಷ ಕೋಟಿ ರೂಗಳಿಗೂ ಹೆಚ್ಚಿನ ನಷ್ಟಕ್ಕೆ ಒಳಗಾಗಿದ್ದಾರೆ. ಅಷ್ಟು ಮಾತ್ರವಲ್ಲದೆ ಎಸ್‌ಬಿಐ, ಎಲ್‌ಐಸಿಯಂತಹ ಸಾರ್ವಜನಿಕ ವಲಯದ ಸಂಸ್ಥೆಗಳ ಷೇರು ಮೌಲ್ಯಗಳು ಕುಸಿಯುತ್ತಿದ್ದು, ಇಡೀ ಭಾರತದ ಆರ್ಥಿಕತೆ ಅಪಾಯದಲ್ಲಿದೆ. ಇಂತಹ ಸಮಯದಲ್ಲಿ ಹಿಂಡೆನ್‌ಬರ್ಗ್ ಕಂಪನಿಯನ್ನು ‘ಶಾರ್ಟ್ ಸೆಲ್ಲಿಂಗ್’ ಕಂಪನಿ ಎಂದು ಸಂಭೋದಿಸಲಾಗುತ್ತಿದೆ. ಅದು ಅದಾನಿಗೆ ಶಾರ್ಟ್ ಸೆಲ್ಲಿಂಗ್ ಮಾಡುವ ಮೂಲಕ ಮಿಲಿಯನ್‌ ಡಾಲರ್‌ಗಟ್ಟಲೇ ಹಣ ಸಂಪಾದಿಸಿದೆ ಎಂದು ವರದಿಯಾಗಿದೆ. ಆಗಿದ್ದರೆ ಶಾರ್ಟ್‌ ಸೆಲ್ಲಿಂಗ್ ಎಂದರೇನು? ಆ ಕಂಪನಿಯ ಹಿನ್ನೆಲೆಯೇನು ಎಂಬುದನ್ನು ನೋಡೋಣ.

ಹಿಂಡೆನ್‌ಬರ್ಗ್ ಹಿನ್ನೆಲೆ

2017ರಲ್ಲಿ ನಾಥನ್ ಆಂಡರ್ಸನ್ ಎಂಬುವವರು ಸ್ಥಾಪಿಸಿದ ಹಿಂಡೆನ್‌ಬರ್ಗ್ ರಿಸರ್ಚ್ ತನ್ನನ್ನು ಸಂಶೋಧನಾ ಮತ್ತು ತನಿಖಾ ಸಂಸ್ಥೆ ಎಂದು ಕರೆದುಕೊಂಡಿದೆ. ಸ್ಟಾಕ್‌ ಮಾರ್ಕೆಟ್‌ನಲ್ಲಿ ತಪ್ಪಿಸಬಹುದಾದ ಆರ್ಥಿಕ ಅವಘಡಗಳನ್ನು ಗುರುತಿಸುವುದು, ಸಂತ್ರಸ್ತರನ್ನು ರಕ್ಷಿಸುವುದು ತನ್ನ ಕೆಲಸ ಎಂದು ಹೇಳಿಕೊಂಡಿದೆ. ಕೇವಲ ಬೆರಳೆಣಿಕೆಯ ಸಿಬ್ಬಂದಿಗಳನ್ನು ಹೊಂದಿರುವ ಈ ಸಂಸ್ಥೆಯು ದೈತ್ಯ ಕಂಪನಿಗಳ ಕುರಿತಾದ ಆಳವಾದ ಸಂಶೋಧನೆ ಮಾಡುವುದರಲ್ಲಿ ಪಳಗಿದ ಕೈ ಎನಿಸಿಕೊಂಡಿದೆ. ಆರ್ಥಿಕ ಅವ್ಯವಹಾರಗಳನ್ನು ಬಯಲಿಗೆಳೆಯುವುದು, ವರದಿಗಳನ್ನು ಬಿಡುಗಡೆ ಮಾಡುವ ವಿಶಲ್ ಬ್ಲೋಯರ್ ಕೆಲಸ ಮಾಡುತ್ತಲೇ ಅದು ‘ಶಾರ್ಟ್ ಸೆಲ್ಲರ್ ಆಕ್ಟಿವಿಸಂ’ ಅನ್ನು ಮಾಡುತ್ತಾ ಬಂದಿದೆ. ಅದಾನಿ ಕಂಪನಿಯ ವಿರುದ್ಧ ಸಹ ಅದು ಶಾರ್ಟ್ ಸೆಲ್ಲಿಂಗ್ ಮಾಡಿದೆ ಎಂದು ತನ್ನ ವರದಿಯಲ್ಲಿ ಹೇಳಿಕೊಂಡಿದೆ.

ಏನಿದು ಶಾರ್ಟ್ ಸೆಲ್ಲಿಂಗ್?

ಶಾರ್ಟ್ ಸೆಲ್ಲಿಂಗ್ ಎನ್ನುವುದು ಒಂದು ಮಾರುಕಟ್ಟೆ ತಂತ್ರವಾಗಿದ್ದು ಭಾರತ ಮತ್ತು ಅಮೆರಿಕದಲ್ಲಿ ಕಾನೂನುಬದ್ಧವಾಗಿ ಯಾರು ಬೇಕಾದರೂ ಮಾಡಬಹುದಾಗಿದೆ. ಅಂದರೆ ಕೆಲವು ಕಂಪನಿಗಳ ಷೇರುಗಳ ಬೆಲೆ ಕುಸಿಯುತ್ತವೆ ಎಂದು ಅಧ್ಯಯನ, ಸಂಶೋಧನೆ ನಡೆಸುವುದು. ತನ್ನದಲ್ಲದ ಆ ಷೇರುಗಳನ್ನು ದಲ್ಲಾಳಿಗಳ ಮೂಲಕ ಎರವಲು ಪಡೆದು ಸದ್ಯದ ಬೆಲೆಗೆ ಮಾರುವುದು. ನಂತರ ಅವುಗಳ ಬೆಲೆ ಕುಸಿದಾಗ ಕಡಿಮೆ ಬೆಲೆಗೆ ಕೊಂಡು ದಲ್ಲಾಳಿಗಳಿಗೆ ಹಿಂದಿರುಗಿಸುವ ಮೂಲಕ ಲಾಭ ಗಳಿಸುವುದನ್ನು ಶಾರ್ಟ್ ಸೆಲ್ಲಿಂಗ್ ಎನ್ನಲಾಗುತ್ತದೆ.

ಉದಾಹರಣೆಯ ಮೂಲಕ ನೋಡುವುದಾದರೆ ಅಆ ಎಂಬ ಕಂಪನಿಯ ಷೇರುಗಳು 1000 ರೂಗೆ ಮಾರಾಟವಾಗುತ್ತಿರುತ್ತವೆ. ವ್ಯಕ್ತಿ ಅಥವಾ ಸಂಸ್ಥೆಯೊಂದು ಆ ಕಂಪನಿಯ ಕುರಿತು ಸಾಕಷ್ಟು ಅಧ್ಯಯನ ನಡೆಸಿ ಮುಂದಿನ ದಿನಗಳಲ್ಲಿ ಅದರ ಷೇರುಗಳ ಬೆಲೆ ಕುಸಿಯುತ್ತದೆ ಎಂದು ಅಂದಾಜಿಸುತ್ತಾರೆ. ಆಗ ಆ ಕಂಪನಿಯ 1000 ರೂ ಬೆಲೆಯ 100 ಷೇರುಗಳನ್ನು ಬ್ರೋಕರ್‌ಗಳ ಮೂಲಕ ಎರವಲು ಪಡೆದು ಮಾರಿ 1 ಲಕ್ಷ ರೂ ಗಳಿಸುತ್ತಾರೆ. ಆನಂತರ ಆ ಕಂಪನಿಯ ಷೇರುಗಳ ಬೆಲೆ 600 ರೂಗಳಿಗೆ ಕುಸಿದ ಸಂದರ್ಭದಲ್ಲಿ ತಾವೇ 60,000 ರೂಗಳಿಗೆ 100 ಷೇರುಗಳನ್ನು ಖರೀದಿಸಿ ದಲ್ಲಾಳಿಗೆ ಹಿಂದಿರುಗಿಸುತ್ತಾರೆ. ಆಗ ಅವರಿಗೆ 40,000 ರೂ ಲಾಭವಾಗುತ್ತದೆ. ಇದನ್ನು ಶಾರ್ಟಿಂಗ್ ಎನ್ನುತ್ತಾರೆ.

ಇದೊಂದು ಜೂಜಿನಂತಿರುತ್ತದೆ ಮತ್ತು ಇಂತಿಷ್ಟು ಸಮಯದಲ್ಲಿ ದಲ್ಲಾಳಿಗೆ ಷೇರುಗಳನ್ನು ಮರಳಿ ನೀಡುವ ಒಪ್ಪಂದವಾಗಿತ್ತದೆ. ಒಂದು ವೇಳೆ ಅವರ ಅಂದಾಜು ತಪ್ಪಿ ಆ ಕಂಪನಿಯ ಷೇರಿನ ಬೆಲೆ ಕುಸಿಯುವ ಬದಲು 1,400 ರೂ ಏರಿಕೆಯಾದಲ್ಲಿ ಶಾರ್ಟ್ ಮಾಡಿದ ವ್ಯಕ್ತಿ ಅಥವಾ ಸಂಸ್ಥೆ ತನ್ನ ಕೈಯಿಂದಲೇ 40,000 ದುಡ್ಡು ಹಾಕಿ ಷೇರುಗಳನ್ನು ಕೊಳ್ಳುವ ಮೂಲಕ ನಷ್ಟಕ್ಕೆ ಸಿಲುಕುವ ಸಂದರ್ಭವೂ ಎದುರಾಗಬಹುದಾಗಿದೆ.

ಪ್ರಸ್ತುತ ಹಿಂಡೆನ್‌ಬರ್ಗ್ ಅದಾನಿ ಕಂಪನಿಗೆ ಮಾಡಿರುವುದು ಇದೇ ಶಾರ್ಟಿಂಗ್ ಆಗಿದೆ. ಎರಡು ವರ್ಷಗಳ ಕಾಲ ಸತತ ಅಧ್ಯಯನ ಮಾಡಿದ ಅದು ಅದಾನಿ ಕಂಪನಿಯ ಅಕ್ರಮಗಳ ಕುರಿತು ದಾಖಲೆಗಳನ್ನು ಶೇಖರಿಸಿಟ್ಟುಕೊಂಡಿತ್ತು. ಆನಂತರ ಷೇರು ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಮೂಲಕ ಲಕ್ಷಾಂತರ ಷೇರುಗಳನ್ನು ಎರವಲು ಪಡೆದು ಮಾರಾಟ ಮಾಡಿ ಹಣ ಸಂಗ್ರಹಿಸಿಟ್ಟುಕೊಂಡಿದೆ. ಜನವರಿ 24 ರಂದು ವರದಿ ಬಿಡುಗಡೆ ಮಾಡಿದ ನಂತರ ಪ್ರಪಂಚದಾದ್ಯಂತ ಅದು ಸುದ್ದಿಯಾಗಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಯಿತು. ಅದಾನಿ ಬಹುತೇಕ ಸಾಲದ ಮೇಲೆಯೇ ಸಾಮ್ರಾಜ್ಯ ಕಟ್ಟಿದ್ದು ಅದರ ಅಡಿಪಾಯವೇ ಅಲ್ಲಾಡುತ್ತಿದೆ ಎಂಬ ಕಥನ ಬಿತ್ತರಿಸಲಾಯಿತು. ಇದರಿಂದ ಭಯಗೊಂಡ ಲಕ್ಷಾಂತರ ಜನ ಏಕಕಾಲದಲ್ಲಿ ಅದಾನಿ ಕಂಪನಿಯ ತಮ್ಮ ಷೇರುಗಳನ್ನು ಮಾರಲು ಮುಂದಾದರು. ಆಗ ಸಹಜವಾಗಿ ಅವುಗಳ ಬೆಲೆ ಕುಸಿಯುತ್ತಾ ಹೋಯಿತು. ಸುಮಾರು ಶೇ. 20%ಗೂ ಹೆಚ್ಚಿನ ಷೇರು ಬೆಲೆಗಳು ಕುಸಿಯುತ್ತಿರುವುದರಿಂದ ಅದೆಲ್ಲವೂ ಹಿಂಡೆನ್‌ಬರ್ಗ್‌ ಕಂಪನಿಗೆ ಲಾಭವಾಗುತ್ತಿದೆ. ಏಕೆಂದರೆ ಹೆಚ್ಚು ಬೆಲೆಗೆ ಮಾರಿರುವ ಅದು ಕಡಿಮೆ ಬೆಲೆ ಕೊಂಡು ದಲ್ಲಾಳಿಗೆ ಹಿಂದಿರುಗಿಸುತ್ತದೆ. ಅಂದರೆ ಅದಾನಿ ಷೇರುಗಳ ಬೆಲೆ ಕುಸಿದಷ್ಟು ಅದರ ಲಾಭ ಹಿಂಡೆನ್‌ಬರ್ಗ್‌ಗೆ ದಕ್ಕುತ್ತಿದೆ. ಹೆಚ್ಚಿನ ಬೆಲೆಗೆ ಮಾರಾಟ ಮತ್ತು ಕಡಿಮೆ ಬೆಲೆ ಕೊಳ್ಳುವುದು ನಡೆಯುತ್ತಿದೆ.

ಇದೇ ಮೊದಲಲ್ಲ

ಬ್ಲೂಮ್‌ಬರ್ಗ್ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಹಿಂಡೆನ್‌ಬರ್ಗ್ 2020 ರಿಂದ ಈ ರೀತಿಯಲ್ಲಿ ಸುಮಾರು 30 ಕಂಪನಿಗಳನ್ನು ಗುರಿಯಾಗಿಸಿಕೊಂಡು ಶಾರ್ಟಿಂಗ್ ಮಾಡಿದೆ. ಅದು ತನಿಖೆಗಳನ್ನು ಸಾರ್ವಜನಿಕಗೊಳಿಸಿದ ಮರುದಿನವೇ ಆಯಾ ಕಂಪನಿಗಳು ಸರಾಸರಿಯಾಗಿ ತಮ್ಮ ಮೌಲ್ಯದ ಸುಮಾರು 15 ಪ್ರತಿಶತವನ್ನು ಕಳೆದುಕೊಂಡಿವೆ. ಅಂದರೆ ಅವುಗಳಲ್ಲೆಲ್ಲ ಅದು ಲಾಭ ಗಳಿಸಿದೆ. ಟೆಸ್ಲಾ, ಟ್ವಿಟರ್‌ನಂತಹ ಕಂಪನಿಗಳ ಮೇಲೆ ಸಹ ಅದು ಶಾರ್ಟಿಂಗ್ ಮಾಡಿ ಲಾಭ ಗಳಿಸಿದೆ ಎನ್ನಲಾಗಿದೆ. ನಿಕೋಲಾ ಎಂಬ ಕಂಪನಿಯ ಮೇಲೆ ಹಿಂಡೆನ್‌ಬರ್ಗ್ ಶಾರ್ಟಿಂಗ್ ಮಾಡಿತ್ತು. ಹಾಗಾಗಿ ಸುಮಾರು 34 ಬಿಲಿಯನ್ ಅಮೆರಿಕನ್ ಡಾಲರ್ ಮಾರುಕಟ್ಟೆ ಮೌಲ್ಯ ಹೊಂದಿದ್ದ ನಿಕೋಲಾ ಕಂಪನಿಯು ಸದ್ಯ 1.3 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಕುಸಿದಿದೆ ಎಂದರೆ ಹಿಂಡೆನ್‌ಬರ್ಗ್ ಕಂಪನಿಯ ಸಂಶೋಧನೆಗಳು, ತಂತ್ರಗಳು ಎಷ್ಟು ಕರಾರುವಕ್ಕಾರಿಗುತ್ತವೆ ಎಂಬುದಕ್ಕೆ ಉದಾಹರಣೆಯಾಗಿದೆ.

ಇದನ್ನೂ ಓದಿ: Explainer: ಏನಿದು ಹಿಂಡೆನ್‌ಬರ್ಗ್ ವರದಿ? ಅದಾನಿ ಸಾಮ್ರಾಜ್ಯ ಕುಸಿಯುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This company has been banned in usa as per recent news, how india had allowed it to investigate by short selling method, no shares of india/USA are not allowed to allot or sell or buy to us entity or indian entity or investors at present. It seems that unknown rival entity is hand in glove. M

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...