Homeಮುಖಪುಟಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ಹಿಂಡೆನ್‌ಬರ್ಗ್ ಸಂಸ್ಥೆಯು 2020 ರಿಂದ ಟೆಸ್ಲಾ, ಟ್ವಿಟರ್ ಸೇರಿದಂತೆ ಸುಮಾರು 30 ಕಂಪನಿಗಳನ್ನು ಗುರಿಯಾಗಿಸಿಕೊಂಡು ಶಾರ್ಟಿಂಗ್ ಮಾಡಿ ಲಾಭ ಗಳಿಸಿದೆ.

- Advertisement -
- Advertisement -

ಕಳೆದ ನಾಲ್ಕು ದಿನಗಳಲ್ಲಿ ದಿಢೀರ್ ಪ್ರಚಲಿತಕ್ಕೆ ಬಂದ ಅಮೆರಿಕದ ಕಂಪನಿಯ ಹೆಸರು ಹಿಂಡೆನ್‌ಬರ್ಗ್ ರಿಸರ್ಚ್. ಭಾರತದ ನಂಬರ್ ಒನ್ ಶ್ರೀಮಂತ ಗೌತಮ್ ಅದಾನಿಯವರ ಹಣಕಾಸು ಅಕ್ರಮಗಳನ್ನು ಬಯಲಿಗೆಳೆಯುವ ವರದಿ ಪ್ರಕಟಿಸುವ ಮೂಲಕ ಅದು ಸದ್ಯ ಟ್ರೆಂಡಿಂಗ್‌ನಲ್ಲಿದೆ. ಇತ್ತ ಆ ಒಂದು ವರದಿಯಿಂದ ಅದಾನಿ ಕಂಪನಿಯ ಷೇರುಗಳೆಲ್ಲ ಪ್ರಪಾತಕ್ಕೆ ಕುಸಿಯುತ್ತಿದ್ದು, ಈ ನಾಲ್ಕು ದಿನದಲ್ಲಿ ಕನಿಷ್ಟ 4 ಲಕ್ಷ ಕೋಟಿ ರೂಗಳಿಗೂ ಹೆಚ್ಚಿನ ನಷ್ಟಕ್ಕೆ ಒಳಗಾಗಿದ್ದಾರೆ. ಅಷ್ಟು ಮಾತ್ರವಲ್ಲದೆ ಎಸ್‌ಬಿಐ, ಎಲ್‌ಐಸಿಯಂತಹ ಸಾರ್ವಜನಿಕ ವಲಯದ ಸಂಸ್ಥೆಗಳ ಷೇರು ಮೌಲ್ಯಗಳು ಕುಸಿಯುತ್ತಿದ್ದು, ಇಡೀ ಭಾರತದ ಆರ್ಥಿಕತೆ ಅಪಾಯದಲ್ಲಿದೆ. ಇಂತಹ ಸಮಯದಲ್ಲಿ ಹಿಂಡೆನ್‌ಬರ್ಗ್ ಕಂಪನಿಯನ್ನು ‘ಶಾರ್ಟ್ ಸೆಲ್ಲಿಂಗ್’ ಕಂಪನಿ ಎಂದು ಸಂಭೋದಿಸಲಾಗುತ್ತಿದೆ. ಅದು ಅದಾನಿಗೆ ಶಾರ್ಟ್ ಸೆಲ್ಲಿಂಗ್ ಮಾಡುವ ಮೂಲಕ ಮಿಲಿಯನ್‌ ಡಾಲರ್‌ಗಟ್ಟಲೇ ಹಣ ಸಂಪಾದಿಸಿದೆ ಎಂದು ವರದಿಯಾಗಿದೆ. ಆಗಿದ್ದರೆ ಶಾರ್ಟ್‌ ಸೆಲ್ಲಿಂಗ್ ಎಂದರೇನು? ಆ ಕಂಪನಿಯ ಹಿನ್ನೆಲೆಯೇನು ಎಂಬುದನ್ನು ನೋಡೋಣ.

ಹಿಂಡೆನ್‌ಬರ್ಗ್ ಹಿನ್ನೆಲೆ

2017ರಲ್ಲಿ ನಾಥನ್ ಆಂಡರ್ಸನ್ ಎಂಬುವವರು ಸ್ಥಾಪಿಸಿದ ಹಿಂಡೆನ್‌ಬರ್ಗ್ ರಿಸರ್ಚ್ ತನ್ನನ್ನು ಸಂಶೋಧನಾ ಮತ್ತು ತನಿಖಾ ಸಂಸ್ಥೆ ಎಂದು ಕರೆದುಕೊಂಡಿದೆ. ಸ್ಟಾಕ್‌ ಮಾರ್ಕೆಟ್‌ನಲ್ಲಿ ತಪ್ಪಿಸಬಹುದಾದ ಆರ್ಥಿಕ ಅವಘಡಗಳನ್ನು ಗುರುತಿಸುವುದು, ಸಂತ್ರಸ್ತರನ್ನು ರಕ್ಷಿಸುವುದು ತನ್ನ ಕೆಲಸ ಎಂದು ಹೇಳಿಕೊಂಡಿದೆ. ಕೇವಲ ಬೆರಳೆಣಿಕೆಯ ಸಿಬ್ಬಂದಿಗಳನ್ನು ಹೊಂದಿರುವ ಈ ಸಂಸ್ಥೆಯು ದೈತ್ಯ ಕಂಪನಿಗಳ ಕುರಿತಾದ ಆಳವಾದ ಸಂಶೋಧನೆ ಮಾಡುವುದರಲ್ಲಿ ಪಳಗಿದ ಕೈ ಎನಿಸಿಕೊಂಡಿದೆ. ಆರ್ಥಿಕ ಅವ್ಯವಹಾರಗಳನ್ನು ಬಯಲಿಗೆಳೆಯುವುದು, ವರದಿಗಳನ್ನು ಬಿಡುಗಡೆ ಮಾಡುವ ವಿಶಲ್ ಬ್ಲೋಯರ್ ಕೆಲಸ ಮಾಡುತ್ತಲೇ ಅದು ‘ಶಾರ್ಟ್ ಸೆಲ್ಲರ್ ಆಕ್ಟಿವಿಸಂ’ ಅನ್ನು ಮಾಡುತ್ತಾ ಬಂದಿದೆ. ಅದಾನಿ ಕಂಪನಿಯ ವಿರುದ್ಧ ಸಹ ಅದು ಶಾರ್ಟ್ ಸೆಲ್ಲಿಂಗ್ ಮಾಡಿದೆ ಎಂದು ತನ್ನ ವರದಿಯಲ್ಲಿ ಹೇಳಿಕೊಂಡಿದೆ.

ಏನಿದು ಶಾರ್ಟ್ ಸೆಲ್ಲಿಂಗ್?

ಶಾರ್ಟ್ ಸೆಲ್ಲಿಂಗ್ ಎನ್ನುವುದು ಒಂದು ಮಾರುಕಟ್ಟೆ ತಂತ್ರವಾಗಿದ್ದು ಭಾರತ ಮತ್ತು ಅಮೆರಿಕದಲ್ಲಿ ಕಾನೂನುಬದ್ಧವಾಗಿ ಯಾರು ಬೇಕಾದರೂ ಮಾಡಬಹುದಾಗಿದೆ. ಅಂದರೆ ಕೆಲವು ಕಂಪನಿಗಳ ಷೇರುಗಳ ಬೆಲೆ ಕುಸಿಯುತ್ತವೆ ಎಂದು ಅಧ್ಯಯನ, ಸಂಶೋಧನೆ ನಡೆಸುವುದು. ತನ್ನದಲ್ಲದ ಆ ಷೇರುಗಳನ್ನು ದಲ್ಲಾಳಿಗಳ ಮೂಲಕ ಎರವಲು ಪಡೆದು ಸದ್ಯದ ಬೆಲೆಗೆ ಮಾರುವುದು. ನಂತರ ಅವುಗಳ ಬೆಲೆ ಕುಸಿದಾಗ ಕಡಿಮೆ ಬೆಲೆಗೆ ಕೊಂಡು ದಲ್ಲಾಳಿಗಳಿಗೆ ಹಿಂದಿರುಗಿಸುವ ಮೂಲಕ ಲಾಭ ಗಳಿಸುವುದನ್ನು ಶಾರ್ಟ್ ಸೆಲ್ಲಿಂಗ್ ಎನ್ನಲಾಗುತ್ತದೆ.

ಉದಾಹರಣೆಯ ಮೂಲಕ ನೋಡುವುದಾದರೆ ಅಆ ಎಂಬ ಕಂಪನಿಯ ಷೇರುಗಳು 1000 ರೂಗೆ ಮಾರಾಟವಾಗುತ್ತಿರುತ್ತವೆ. ವ್ಯಕ್ತಿ ಅಥವಾ ಸಂಸ್ಥೆಯೊಂದು ಆ ಕಂಪನಿಯ ಕುರಿತು ಸಾಕಷ್ಟು ಅಧ್ಯಯನ ನಡೆಸಿ ಮುಂದಿನ ದಿನಗಳಲ್ಲಿ ಅದರ ಷೇರುಗಳ ಬೆಲೆ ಕುಸಿಯುತ್ತದೆ ಎಂದು ಅಂದಾಜಿಸುತ್ತಾರೆ. ಆಗ ಆ ಕಂಪನಿಯ 1000 ರೂ ಬೆಲೆಯ 100 ಷೇರುಗಳನ್ನು ಬ್ರೋಕರ್‌ಗಳ ಮೂಲಕ ಎರವಲು ಪಡೆದು ಮಾರಿ 1 ಲಕ್ಷ ರೂ ಗಳಿಸುತ್ತಾರೆ. ಆನಂತರ ಆ ಕಂಪನಿಯ ಷೇರುಗಳ ಬೆಲೆ 600 ರೂಗಳಿಗೆ ಕುಸಿದ ಸಂದರ್ಭದಲ್ಲಿ ತಾವೇ 60,000 ರೂಗಳಿಗೆ 100 ಷೇರುಗಳನ್ನು ಖರೀದಿಸಿ ದಲ್ಲಾಳಿಗೆ ಹಿಂದಿರುಗಿಸುತ್ತಾರೆ. ಆಗ ಅವರಿಗೆ 40,000 ರೂ ಲಾಭವಾಗುತ್ತದೆ. ಇದನ್ನು ಶಾರ್ಟಿಂಗ್ ಎನ್ನುತ್ತಾರೆ.

ಇದೊಂದು ಜೂಜಿನಂತಿರುತ್ತದೆ ಮತ್ತು ಇಂತಿಷ್ಟು ಸಮಯದಲ್ಲಿ ದಲ್ಲಾಳಿಗೆ ಷೇರುಗಳನ್ನು ಮರಳಿ ನೀಡುವ ಒಪ್ಪಂದವಾಗಿತ್ತದೆ. ಒಂದು ವೇಳೆ ಅವರ ಅಂದಾಜು ತಪ್ಪಿ ಆ ಕಂಪನಿಯ ಷೇರಿನ ಬೆಲೆ ಕುಸಿಯುವ ಬದಲು 1,400 ರೂ ಏರಿಕೆಯಾದಲ್ಲಿ ಶಾರ್ಟ್ ಮಾಡಿದ ವ್ಯಕ್ತಿ ಅಥವಾ ಸಂಸ್ಥೆ ತನ್ನ ಕೈಯಿಂದಲೇ 40,000 ದುಡ್ಡು ಹಾಕಿ ಷೇರುಗಳನ್ನು ಕೊಳ್ಳುವ ಮೂಲಕ ನಷ್ಟಕ್ಕೆ ಸಿಲುಕುವ ಸಂದರ್ಭವೂ ಎದುರಾಗಬಹುದಾಗಿದೆ.

ಪ್ರಸ್ತುತ ಹಿಂಡೆನ್‌ಬರ್ಗ್ ಅದಾನಿ ಕಂಪನಿಗೆ ಮಾಡಿರುವುದು ಇದೇ ಶಾರ್ಟಿಂಗ್ ಆಗಿದೆ. ಎರಡು ವರ್ಷಗಳ ಕಾಲ ಸತತ ಅಧ್ಯಯನ ಮಾಡಿದ ಅದು ಅದಾನಿ ಕಂಪನಿಯ ಅಕ್ರಮಗಳ ಕುರಿತು ದಾಖಲೆಗಳನ್ನು ಶೇಖರಿಸಿಟ್ಟುಕೊಂಡಿತ್ತು. ಆನಂತರ ಷೇರು ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಮೂಲಕ ಲಕ್ಷಾಂತರ ಷೇರುಗಳನ್ನು ಎರವಲು ಪಡೆದು ಮಾರಾಟ ಮಾಡಿ ಹಣ ಸಂಗ್ರಹಿಸಿಟ್ಟುಕೊಂಡಿದೆ. ಜನವರಿ 24 ರಂದು ವರದಿ ಬಿಡುಗಡೆ ಮಾಡಿದ ನಂತರ ಪ್ರಪಂಚದಾದ್ಯಂತ ಅದು ಸುದ್ದಿಯಾಗಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಯಿತು. ಅದಾನಿ ಬಹುತೇಕ ಸಾಲದ ಮೇಲೆಯೇ ಸಾಮ್ರಾಜ್ಯ ಕಟ್ಟಿದ್ದು ಅದರ ಅಡಿಪಾಯವೇ ಅಲ್ಲಾಡುತ್ತಿದೆ ಎಂಬ ಕಥನ ಬಿತ್ತರಿಸಲಾಯಿತು. ಇದರಿಂದ ಭಯಗೊಂಡ ಲಕ್ಷಾಂತರ ಜನ ಏಕಕಾಲದಲ್ಲಿ ಅದಾನಿ ಕಂಪನಿಯ ತಮ್ಮ ಷೇರುಗಳನ್ನು ಮಾರಲು ಮುಂದಾದರು. ಆಗ ಸಹಜವಾಗಿ ಅವುಗಳ ಬೆಲೆ ಕುಸಿಯುತ್ತಾ ಹೋಯಿತು. ಸುಮಾರು ಶೇ. 20%ಗೂ ಹೆಚ್ಚಿನ ಷೇರು ಬೆಲೆಗಳು ಕುಸಿಯುತ್ತಿರುವುದರಿಂದ ಅದೆಲ್ಲವೂ ಹಿಂಡೆನ್‌ಬರ್ಗ್‌ ಕಂಪನಿಗೆ ಲಾಭವಾಗುತ್ತಿದೆ. ಏಕೆಂದರೆ ಹೆಚ್ಚು ಬೆಲೆಗೆ ಮಾರಿರುವ ಅದು ಕಡಿಮೆ ಬೆಲೆ ಕೊಂಡು ದಲ್ಲಾಳಿಗೆ ಹಿಂದಿರುಗಿಸುತ್ತದೆ. ಅಂದರೆ ಅದಾನಿ ಷೇರುಗಳ ಬೆಲೆ ಕುಸಿದಷ್ಟು ಅದರ ಲಾಭ ಹಿಂಡೆನ್‌ಬರ್ಗ್‌ಗೆ ದಕ್ಕುತ್ತಿದೆ. ಹೆಚ್ಚಿನ ಬೆಲೆಗೆ ಮಾರಾಟ ಮತ್ತು ಕಡಿಮೆ ಬೆಲೆ ಕೊಳ್ಳುವುದು ನಡೆಯುತ್ತಿದೆ.

ಇದೇ ಮೊದಲಲ್ಲ

ಬ್ಲೂಮ್‌ಬರ್ಗ್ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಹಿಂಡೆನ್‌ಬರ್ಗ್ 2020 ರಿಂದ ಈ ರೀತಿಯಲ್ಲಿ ಸುಮಾರು 30 ಕಂಪನಿಗಳನ್ನು ಗುರಿಯಾಗಿಸಿಕೊಂಡು ಶಾರ್ಟಿಂಗ್ ಮಾಡಿದೆ. ಅದು ತನಿಖೆಗಳನ್ನು ಸಾರ್ವಜನಿಕಗೊಳಿಸಿದ ಮರುದಿನವೇ ಆಯಾ ಕಂಪನಿಗಳು ಸರಾಸರಿಯಾಗಿ ತಮ್ಮ ಮೌಲ್ಯದ ಸುಮಾರು 15 ಪ್ರತಿಶತವನ್ನು ಕಳೆದುಕೊಂಡಿವೆ. ಅಂದರೆ ಅವುಗಳಲ್ಲೆಲ್ಲ ಅದು ಲಾಭ ಗಳಿಸಿದೆ. ಟೆಸ್ಲಾ, ಟ್ವಿಟರ್‌ನಂತಹ ಕಂಪನಿಗಳ ಮೇಲೆ ಸಹ ಅದು ಶಾರ್ಟಿಂಗ್ ಮಾಡಿ ಲಾಭ ಗಳಿಸಿದೆ ಎನ್ನಲಾಗಿದೆ. ನಿಕೋಲಾ ಎಂಬ ಕಂಪನಿಯ ಮೇಲೆ ಹಿಂಡೆನ್‌ಬರ್ಗ್ ಶಾರ್ಟಿಂಗ್ ಮಾಡಿತ್ತು. ಹಾಗಾಗಿ ಸುಮಾರು 34 ಬಿಲಿಯನ್ ಅಮೆರಿಕನ್ ಡಾಲರ್ ಮಾರುಕಟ್ಟೆ ಮೌಲ್ಯ ಹೊಂದಿದ್ದ ನಿಕೋಲಾ ಕಂಪನಿಯು ಸದ್ಯ 1.3 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಕುಸಿದಿದೆ ಎಂದರೆ ಹಿಂಡೆನ್‌ಬರ್ಗ್ ಕಂಪನಿಯ ಸಂಶೋಧನೆಗಳು, ತಂತ್ರಗಳು ಎಷ್ಟು ಕರಾರುವಕ್ಕಾರಿಗುತ್ತವೆ ಎಂಬುದಕ್ಕೆ ಉದಾಹರಣೆಯಾಗಿದೆ.

ಇದನ್ನೂ ಓದಿ: Explainer: ಏನಿದು ಹಿಂಡೆನ್‌ಬರ್ಗ್ ವರದಿ? ಅದಾನಿ ಸಾಮ್ರಾಜ್ಯ ಕುಸಿಯುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This company has been banned in usa as per recent news, how india had allowed it to investigate by short selling method, no shares of india/USA are not allowed to allot or sell or buy to us entity or indian entity or investors at present. It seems that unknown rival entity is hand in glove. M

LEAVE A REPLY

Please enter your comment!
Please enter your name here

- Advertisment -

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...