Homeಮುಖಪುಟಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ಹಿಂಡೆನ್‌ಬರ್ಗ್ ಸಂಸ್ಥೆಯು 2020 ರಿಂದ ಟೆಸ್ಲಾ, ಟ್ವಿಟರ್ ಸೇರಿದಂತೆ ಸುಮಾರು 30 ಕಂಪನಿಗಳನ್ನು ಗುರಿಯಾಗಿಸಿಕೊಂಡು ಶಾರ್ಟಿಂಗ್ ಮಾಡಿ ಲಾಭ ಗಳಿಸಿದೆ.

- Advertisement -
- Advertisement -

ಕಳೆದ ನಾಲ್ಕು ದಿನಗಳಲ್ಲಿ ದಿಢೀರ್ ಪ್ರಚಲಿತಕ್ಕೆ ಬಂದ ಅಮೆರಿಕದ ಕಂಪನಿಯ ಹೆಸರು ಹಿಂಡೆನ್‌ಬರ್ಗ್ ರಿಸರ್ಚ್. ಭಾರತದ ನಂಬರ್ ಒನ್ ಶ್ರೀಮಂತ ಗೌತಮ್ ಅದಾನಿಯವರ ಹಣಕಾಸು ಅಕ್ರಮಗಳನ್ನು ಬಯಲಿಗೆಳೆಯುವ ವರದಿ ಪ್ರಕಟಿಸುವ ಮೂಲಕ ಅದು ಸದ್ಯ ಟ್ರೆಂಡಿಂಗ್‌ನಲ್ಲಿದೆ. ಇತ್ತ ಆ ಒಂದು ವರದಿಯಿಂದ ಅದಾನಿ ಕಂಪನಿಯ ಷೇರುಗಳೆಲ್ಲ ಪ್ರಪಾತಕ್ಕೆ ಕುಸಿಯುತ್ತಿದ್ದು, ಈ ನಾಲ್ಕು ದಿನದಲ್ಲಿ ಕನಿಷ್ಟ 4 ಲಕ್ಷ ಕೋಟಿ ರೂಗಳಿಗೂ ಹೆಚ್ಚಿನ ನಷ್ಟಕ್ಕೆ ಒಳಗಾಗಿದ್ದಾರೆ. ಅಷ್ಟು ಮಾತ್ರವಲ್ಲದೆ ಎಸ್‌ಬಿಐ, ಎಲ್‌ಐಸಿಯಂತಹ ಸಾರ್ವಜನಿಕ ವಲಯದ ಸಂಸ್ಥೆಗಳ ಷೇರು ಮೌಲ್ಯಗಳು ಕುಸಿಯುತ್ತಿದ್ದು, ಇಡೀ ಭಾರತದ ಆರ್ಥಿಕತೆ ಅಪಾಯದಲ್ಲಿದೆ. ಇಂತಹ ಸಮಯದಲ್ಲಿ ಹಿಂಡೆನ್‌ಬರ್ಗ್ ಕಂಪನಿಯನ್ನು ‘ಶಾರ್ಟ್ ಸೆಲ್ಲಿಂಗ್’ ಕಂಪನಿ ಎಂದು ಸಂಭೋದಿಸಲಾಗುತ್ತಿದೆ. ಅದು ಅದಾನಿಗೆ ಶಾರ್ಟ್ ಸೆಲ್ಲಿಂಗ್ ಮಾಡುವ ಮೂಲಕ ಮಿಲಿಯನ್‌ ಡಾಲರ್‌ಗಟ್ಟಲೇ ಹಣ ಸಂಪಾದಿಸಿದೆ ಎಂದು ವರದಿಯಾಗಿದೆ. ಆಗಿದ್ದರೆ ಶಾರ್ಟ್‌ ಸೆಲ್ಲಿಂಗ್ ಎಂದರೇನು? ಆ ಕಂಪನಿಯ ಹಿನ್ನೆಲೆಯೇನು ಎಂಬುದನ್ನು ನೋಡೋಣ.

ಹಿಂಡೆನ್‌ಬರ್ಗ್ ಹಿನ್ನೆಲೆ

2017ರಲ್ಲಿ ನಾಥನ್ ಆಂಡರ್ಸನ್ ಎಂಬುವವರು ಸ್ಥಾಪಿಸಿದ ಹಿಂಡೆನ್‌ಬರ್ಗ್ ರಿಸರ್ಚ್ ತನ್ನನ್ನು ಸಂಶೋಧನಾ ಮತ್ತು ತನಿಖಾ ಸಂಸ್ಥೆ ಎಂದು ಕರೆದುಕೊಂಡಿದೆ. ಸ್ಟಾಕ್‌ ಮಾರ್ಕೆಟ್‌ನಲ್ಲಿ ತಪ್ಪಿಸಬಹುದಾದ ಆರ್ಥಿಕ ಅವಘಡಗಳನ್ನು ಗುರುತಿಸುವುದು, ಸಂತ್ರಸ್ತರನ್ನು ರಕ್ಷಿಸುವುದು ತನ್ನ ಕೆಲಸ ಎಂದು ಹೇಳಿಕೊಂಡಿದೆ. ಕೇವಲ ಬೆರಳೆಣಿಕೆಯ ಸಿಬ್ಬಂದಿಗಳನ್ನು ಹೊಂದಿರುವ ಈ ಸಂಸ್ಥೆಯು ದೈತ್ಯ ಕಂಪನಿಗಳ ಕುರಿತಾದ ಆಳವಾದ ಸಂಶೋಧನೆ ಮಾಡುವುದರಲ್ಲಿ ಪಳಗಿದ ಕೈ ಎನಿಸಿಕೊಂಡಿದೆ. ಆರ್ಥಿಕ ಅವ್ಯವಹಾರಗಳನ್ನು ಬಯಲಿಗೆಳೆಯುವುದು, ವರದಿಗಳನ್ನು ಬಿಡುಗಡೆ ಮಾಡುವ ವಿಶಲ್ ಬ್ಲೋಯರ್ ಕೆಲಸ ಮಾಡುತ್ತಲೇ ಅದು ‘ಶಾರ್ಟ್ ಸೆಲ್ಲರ್ ಆಕ್ಟಿವಿಸಂ’ ಅನ್ನು ಮಾಡುತ್ತಾ ಬಂದಿದೆ. ಅದಾನಿ ಕಂಪನಿಯ ವಿರುದ್ಧ ಸಹ ಅದು ಶಾರ್ಟ್ ಸೆಲ್ಲಿಂಗ್ ಮಾಡಿದೆ ಎಂದು ತನ್ನ ವರದಿಯಲ್ಲಿ ಹೇಳಿಕೊಂಡಿದೆ.

ಏನಿದು ಶಾರ್ಟ್ ಸೆಲ್ಲಿಂಗ್?

ಶಾರ್ಟ್ ಸೆಲ್ಲಿಂಗ್ ಎನ್ನುವುದು ಒಂದು ಮಾರುಕಟ್ಟೆ ತಂತ್ರವಾಗಿದ್ದು ಭಾರತ ಮತ್ತು ಅಮೆರಿಕದಲ್ಲಿ ಕಾನೂನುಬದ್ಧವಾಗಿ ಯಾರು ಬೇಕಾದರೂ ಮಾಡಬಹುದಾಗಿದೆ. ಅಂದರೆ ಕೆಲವು ಕಂಪನಿಗಳ ಷೇರುಗಳ ಬೆಲೆ ಕುಸಿಯುತ್ತವೆ ಎಂದು ಅಧ್ಯಯನ, ಸಂಶೋಧನೆ ನಡೆಸುವುದು. ತನ್ನದಲ್ಲದ ಆ ಷೇರುಗಳನ್ನು ದಲ್ಲಾಳಿಗಳ ಮೂಲಕ ಎರವಲು ಪಡೆದು ಸದ್ಯದ ಬೆಲೆಗೆ ಮಾರುವುದು. ನಂತರ ಅವುಗಳ ಬೆಲೆ ಕುಸಿದಾಗ ಕಡಿಮೆ ಬೆಲೆಗೆ ಕೊಂಡು ದಲ್ಲಾಳಿಗಳಿಗೆ ಹಿಂದಿರುಗಿಸುವ ಮೂಲಕ ಲಾಭ ಗಳಿಸುವುದನ್ನು ಶಾರ್ಟ್ ಸೆಲ್ಲಿಂಗ್ ಎನ್ನಲಾಗುತ್ತದೆ.

ಉದಾಹರಣೆಯ ಮೂಲಕ ನೋಡುವುದಾದರೆ ಅಆ ಎಂಬ ಕಂಪನಿಯ ಷೇರುಗಳು 1000 ರೂಗೆ ಮಾರಾಟವಾಗುತ್ತಿರುತ್ತವೆ. ವ್ಯಕ್ತಿ ಅಥವಾ ಸಂಸ್ಥೆಯೊಂದು ಆ ಕಂಪನಿಯ ಕುರಿತು ಸಾಕಷ್ಟು ಅಧ್ಯಯನ ನಡೆಸಿ ಮುಂದಿನ ದಿನಗಳಲ್ಲಿ ಅದರ ಷೇರುಗಳ ಬೆಲೆ ಕುಸಿಯುತ್ತದೆ ಎಂದು ಅಂದಾಜಿಸುತ್ತಾರೆ. ಆಗ ಆ ಕಂಪನಿಯ 1000 ರೂ ಬೆಲೆಯ 100 ಷೇರುಗಳನ್ನು ಬ್ರೋಕರ್‌ಗಳ ಮೂಲಕ ಎರವಲು ಪಡೆದು ಮಾರಿ 1 ಲಕ್ಷ ರೂ ಗಳಿಸುತ್ತಾರೆ. ಆನಂತರ ಆ ಕಂಪನಿಯ ಷೇರುಗಳ ಬೆಲೆ 600 ರೂಗಳಿಗೆ ಕುಸಿದ ಸಂದರ್ಭದಲ್ಲಿ ತಾವೇ 60,000 ರೂಗಳಿಗೆ 100 ಷೇರುಗಳನ್ನು ಖರೀದಿಸಿ ದಲ್ಲಾಳಿಗೆ ಹಿಂದಿರುಗಿಸುತ್ತಾರೆ. ಆಗ ಅವರಿಗೆ 40,000 ರೂ ಲಾಭವಾಗುತ್ತದೆ. ಇದನ್ನು ಶಾರ್ಟಿಂಗ್ ಎನ್ನುತ್ತಾರೆ.

ಇದೊಂದು ಜೂಜಿನಂತಿರುತ್ತದೆ ಮತ್ತು ಇಂತಿಷ್ಟು ಸಮಯದಲ್ಲಿ ದಲ್ಲಾಳಿಗೆ ಷೇರುಗಳನ್ನು ಮರಳಿ ನೀಡುವ ಒಪ್ಪಂದವಾಗಿತ್ತದೆ. ಒಂದು ವೇಳೆ ಅವರ ಅಂದಾಜು ತಪ್ಪಿ ಆ ಕಂಪನಿಯ ಷೇರಿನ ಬೆಲೆ ಕುಸಿಯುವ ಬದಲು 1,400 ರೂ ಏರಿಕೆಯಾದಲ್ಲಿ ಶಾರ್ಟ್ ಮಾಡಿದ ವ್ಯಕ್ತಿ ಅಥವಾ ಸಂಸ್ಥೆ ತನ್ನ ಕೈಯಿಂದಲೇ 40,000 ದುಡ್ಡು ಹಾಕಿ ಷೇರುಗಳನ್ನು ಕೊಳ್ಳುವ ಮೂಲಕ ನಷ್ಟಕ್ಕೆ ಸಿಲುಕುವ ಸಂದರ್ಭವೂ ಎದುರಾಗಬಹುದಾಗಿದೆ.

ಪ್ರಸ್ತುತ ಹಿಂಡೆನ್‌ಬರ್ಗ್ ಅದಾನಿ ಕಂಪನಿಗೆ ಮಾಡಿರುವುದು ಇದೇ ಶಾರ್ಟಿಂಗ್ ಆಗಿದೆ. ಎರಡು ವರ್ಷಗಳ ಕಾಲ ಸತತ ಅಧ್ಯಯನ ಮಾಡಿದ ಅದು ಅದಾನಿ ಕಂಪನಿಯ ಅಕ್ರಮಗಳ ಕುರಿತು ದಾಖಲೆಗಳನ್ನು ಶೇಖರಿಸಿಟ್ಟುಕೊಂಡಿತ್ತು. ಆನಂತರ ಷೇರು ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಮೂಲಕ ಲಕ್ಷಾಂತರ ಷೇರುಗಳನ್ನು ಎರವಲು ಪಡೆದು ಮಾರಾಟ ಮಾಡಿ ಹಣ ಸಂಗ್ರಹಿಸಿಟ್ಟುಕೊಂಡಿದೆ. ಜನವರಿ 24 ರಂದು ವರದಿ ಬಿಡುಗಡೆ ಮಾಡಿದ ನಂತರ ಪ್ರಪಂಚದಾದ್ಯಂತ ಅದು ಸುದ್ದಿಯಾಗಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಯಿತು. ಅದಾನಿ ಬಹುತೇಕ ಸಾಲದ ಮೇಲೆಯೇ ಸಾಮ್ರಾಜ್ಯ ಕಟ್ಟಿದ್ದು ಅದರ ಅಡಿಪಾಯವೇ ಅಲ್ಲಾಡುತ್ತಿದೆ ಎಂಬ ಕಥನ ಬಿತ್ತರಿಸಲಾಯಿತು. ಇದರಿಂದ ಭಯಗೊಂಡ ಲಕ್ಷಾಂತರ ಜನ ಏಕಕಾಲದಲ್ಲಿ ಅದಾನಿ ಕಂಪನಿಯ ತಮ್ಮ ಷೇರುಗಳನ್ನು ಮಾರಲು ಮುಂದಾದರು. ಆಗ ಸಹಜವಾಗಿ ಅವುಗಳ ಬೆಲೆ ಕುಸಿಯುತ್ತಾ ಹೋಯಿತು. ಸುಮಾರು ಶೇ. 20%ಗೂ ಹೆಚ್ಚಿನ ಷೇರು ಬೆಲೆಗಳು ಕುಸಿಯುತ್ತಿರುವುದರಿಂದ ಅದೆಲ್ಲವೂ ಹಿಂಡೆನ್‌ಬರ್ಗ್‌ ಕಂಪನಿಗೆ ಲಾಭವಾಗುತ್ತಿದೆ. ಏಕೆಂದರೆ ಹೆಚ್ಚು ಬೆಲೆಗೆ ಮಾರಿರುವ ಅದು ಕಡಿಮೆ ಬೆಲೆ ಕೊಂಡು ದಲ್ಲಾಳಿಗೆ ಹಿಂದಿರುಗಿಸುತ್ತದೆ. ಅಂದರೆ ಅದಾನಿ ಷೇರುಗಳ ಬೆಲೆ ಕುಸಿದಷ್ಟು ಅದರ ಲಾಭ ಹಿಂಡೆನ್‌ಬರ್ಗ್‌ಗೆ ದಕ್ಕುತ್ತಿದೆ. ಹೆಚ್ಚಿನ ಬೆಲೆಗೆ ಮಾರಾಟ ಮತ್ತು ಕಡಿಮೆ ಬೆಲೆ ಕೊಳ್ಳುವುದು ನಡೆಯುತ್ತಿದೆ.

ಇದೇ ಮೊದಲಲ್ಲ

ಬ್ಲೂಮ್‌ಬರ್ಗ್ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಹಿಂಡೆನ್‌ಬರ್ಗ್ 2020 ರಿಂದ ಈ ರೀತಿಯಲ್ಲಿ ಸುಮಾರು 30 ಕಂಪನಿಗಳನ್ನು ಗುರಿಯಾಗಿಸಿಕೊಂಡು ಶಾರ್ಟಿಂಗ್ ಮಾಡಿದೆ. ಅದು ತನಿಖೆಗಳನ್ನು ಸಾರ್ವಜನಿಕಗೊಳಿಸಿದ ಮರುದಿನವೇ ಆಯಾ ಕಂಪನಿಗಳು ಸರಾಸರಿಯಾಗಿ ತಮ್ಮ ಮೌಲ್ಯದ ಸುಮಾರು 15 ಪ್ರತಿಶತವನ್ನು ಕಳೆದುಕೊಂಡಿವೆ. ಅಂದರೆ ಅವುಗಳಲ್ಲೆಲ್ಲ ಅದು ಲಾಭ ಗಳಿಸಿದೆ. ಟೆಸ್ಲಾ, ಟ್ವಿಟರ್‌ನಂತಹ ಕಂಪನಿಗಳ ಮೇಲೆ ಸಹ ಅದು ಶಾರ್ಟಿಂಗ್ ಮಾಡಿ ಲಾಭ ಗಳಿಸಿದೆ ಎನ್ನಲಾಗಿದೆ. ನಿಕೋಲಾ ಎಂಬ ಕಂಪನಿಯ ಮೇಲೆ ಹಿಂಡೆನ್‌ಬರ್ಗ್ ಶಾರ್ಟಿಂಗ್ ಮಾಡಿತ್ತು. ಹಾಗಾಗಿ ಸುಮಾರು 34 ಬಿಲಿಯನ್ ಅಮೆರಿಕನ್ ಡಾಲರ್ ಮಾರುಕಟ್ಟೆ ಮೌಲ್ಯ ಹೊಂದಿದ್ದ ನಿಕೋಲಾ ಕಂಪನಿಯು ಸದ್ಯ 1.3 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಕುಸಿದಿದೆ ಎಂದರೆ ಹಿಂಡೆನ್‌ಬರ್ಗ್ ಕಂಪನಿಯ ಸಂಶೋಧನೆಗಳು, ತಂತ್ರಗಳು ಎಷ್ಟು ಕರಾರುವಕ್ಕಾರಿಗುತ್ತವೆ ಎಂಬುದಕ್ಕೆ ಉದಾಹರಣೆಯಾಗಿದೆ.

ಇದನ್ನೂ ಓದಿ: Explainer: ಏನಿದು ಹಿಂಡೆನ್‌ಬರ್ಗ್ ವರದಿ? ಅದಾನಿ ಸಾಮ್ರಾಜ್ಯ ಕುಸಿಯುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This company has been banned in usa as per recent news, how india had allowed it to investigate by short selling method, no shares of india/USA are not allowed to allot or sell or buy to us entity or indian entity or investors at present. It seems that unknown rival entity is hand in glove. M

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...