Homeಮುಖಪುಟಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ಹಿಂಡೆನ್‌ಬರ್ಗ್ ಸಂಸ್ಥೆಯು 2020 ರಿಂದ ಟೆಸ್ಲಾ, ಟ್ವಿಟರ್ ಸೇರಿದಂತೆ ಸುಮಾರು 30 ಕಂಪನಿಗಳನ್ನು ಗುರಿಯಾಗಿಸಿಕೊಂಡು ಶಾರ್ಟಿಂಗ್ ಮಾಡಿ ಲಾಭ ಗಳಿಸಿದೆ.

- Advertisement -
- Advertisement -

ಕಳೆದ ನಾಲ್ಕು ದಿನಗಳಲ್ಲಿ ದಿಢೀರ್ ಪ್ರಚಲಿತಕ್ಕೆ ಬಂದ ಅಮೆರಿಕದ ಕಂಪನಿಯ ಹೆಸರು ಹಿಂಡೆನ್‌ಬರ್ಗ್ ರಿಸರ್ಚ್. ಭಾರತದ ನಂಬರ್ ಒನ್ ಶ್ರೀಮಂತ ಗೌತಮ್ ಅದಾನಿಯವರ ಹಣಕಾಸು ಅಕ್ರಮಗಳನ್ನು ಬಯಲಿಗೆಳೆಯುವ ವರದಿ ಪ್ರಕಟಿಸುವ ಮೂಲಕ ಅದು ಸದ್ಯ ಟ್ರೆಂಡಿಂಗ್‌ನಲ್ಲಿದೆ. ಇತ್ತ ಆ ಒಂದು ವರದಿಯಿಂದ ಅದಾನಿ ಕಂಪನಿಯ ಷೇರುಗಳೆಲ್ಲ ಪ್ರಪಾತಕ್ಕೆ ಕುಸಿಯುತ್ತಿದ್ದು, ಈ ನಾಲ್ಕು ದಿನದಲ್ಲಿ ಕನಿಷ್ಟ 4 ಲಕ್ಷ ಕೋಟಿ ರೂಗಳಿಗೂ ಹೆಚ್ಚಿನ ನಷ್ಟಕ್ಕೆ ಒಳಗಾಗಿದ್ದಾರೆ. ಅಷ್ಟು ಮಾತ್ರವಲ್ಲದೆ ಎಸ್‌ಬಿಐ, ಎಲ್‌ಐಸಿಯಂತಹ ಸಾರ್ವಜನಿಕ ವಲಯದ ಸಂಸ್ಥೆಗಳ ಷೇರು ಮೌಲ್ಯಗಳು ಕುಸಿಯುತ್ತಿದ್ದು, ಇಡೀ ಭಾರತದ ಆರ್ಥಿಕತೆ ಅಪಾಯದಲ್ಲಿದೆ. ಇಂತಹ ಸಮಯದಲ್ಲಿ ಹಿಂಡೆನ್‌ಬರ್ಗ್ ಕಂಪನಿಯನ್ನು ‘ಶಾರ್ಟ್ ಸೆಲ್ಲಿಂಗ್’ ಕಂಪನಿ ಎಂದು ಸಂಭೋದಿಸಲಾಗುತ್ತಿದೆ. ಅದು ಅದಾನಿಗೆ ಶಾರ್ಟ್ ಸೆಲ್ಲಿಂಗ್ ಮಾಡುವ ಮೂಲಕ ಮಿಲಿಯನ್‌ ಡಾಲರ್‌ಗಟ್ಟಲೇ ಹಣ ಸಂಪಾದಿಸಿದೆ ಎಂದು ವರದಿಯಾಗಿದೆ. ಆಗಿದ್ದರೆ ಶಾರ್ಟ್‌ ಸೆಲ್ಲಿಂಗ್ ಎಂದರೇನು? ಆ ಕಂಪನಿಯ ಹಿನ್ನೆಲೆಯೇನು ಎಂಬುದನ್ನು ನೋಡೋಣ.

ಹಿಂಡೆನ್‌ಬರ್ಗ್ ಹಿನ್ನೆಲೆ

2017ರಲ್ಲಿ ನಾಥನ್ ಆಂಡರ್ಸನ್ ಎಂಬುವವರು ಸ್ಥಾಪಿಸಿದ ಹಿಂಡೆನ್‌ಬರ್ಗ್ ರಿಸರ್ಚ್ ತನ್ನನ್ನು ಸಂಶೋಧನಾ ಮತ್ತು ತನಿಖಾ ಸಂಸ್ಥೆ ಎಂದು ಕರೆದುಕೊಂಡಿದೆ. ಸ್ಟಾಕ್‌ ಮಾರ್ಕೆಟ್‌ನಲ್ಲಿ ತಪ್ಪಿಸಬಹುದಾದ ಆರ್ಥಿಕ ಅವಘಡಗಳನ್ನು ಗುರುತಿಸುವುದು, ಸಂತ್ರಸ್ತರನ್ನು ರಕ್ಷಿಸುವುದು ತನ್ನ ಕೆಲಸ ಎಂದು ಹೇಳಿಕೊಂಡಿದೆ. ಕೇವಲ ಬೆರಳೆಣಿಕೆಯ ಸಿಬ್ಬಂದಿಗಳನ್ನು ಹೊಂದಿರುವ ಈ ಸಂಸ್ಥೆಯು ದೈತ್ಯ ಕಂಪನಿಗಳ ಕುರಿತಾದ ಆಳವಾದ ಸಂಶೋಧನೆ ಮಾಡುವುದರಲ್ಲಿ ಪಳಗಿದ ಕೈ ಎನಿಸಿಕೊಂಡಿದೆ. ಆರ್ಥಿಕ ಅವ್ಯವಹಾರಗಳನ್ನು ಬಯಲಿಗೆಳೆಯುವುದು, ವರದಿಗಳನ್ನು ಬಿಡುಗಡೆ ಮಾಡುವ ವಿಶಲ್ ಬ್ಲೋಯರ್ ಕೆಲಸ ಮಾಡುತ್ತಲೇ ಅದು ‘ಶಾರ್ಟ್ ಸೆಲ್ಲರ್ ಆಕ್ಟಿವಿಸಂ’ ಅನ್ನು ಮಾಡುತ್ತಾ ಬಂದಿದೆ. ಅದಾನಿ ಕಂಪನಿಯ ವಿರುದ್ಧ ಸಹ ಅದು ಶಾರ್ಟ್ ಸೆಲ್ಲಿಂಗ್ ಮಾಡಿದೆ ಎಂದು ತನ್ನ ವರದಿಯಲ್ಲಿ ಹೇಳಿಕೊಂಡಿದೆ.

ಏನಿದು ಶಾರ್ಟ್ ಸೆಲ್ಲಿಂಗ್?

ಶಾರ್ಟ್ ಸೆಲ್ಲಿಂಗ್ ಎನ್ನುವುದು ಒಂದು ಮಾರುಕಟ್ಟೆ ತಂತ್ರವಾಗಿದ್ದು ಭಾರತ ಮತ್ತು ಅಮೆರಿಕದಲ್ಲಿ ಕಾನೂನುಬದ್ಧವಾಗಿ ಯಾರು ಬೇಕಾದರೂ ಮಾಡಬಹುದಾಗಿದೆ. ಅಂದರೆ ಕೆಲವು ಕಂಪನಿಗಳ ಷೇರುಗಳ ಬೆಲೆ ಕುಸಿಯುತ್ತವೆ ಎಂದು ಅಧ್ಯಯನ, ಸಂಶೋಧನೆ ನಡೆಸುವುದು. ತನ್ನದಲ್ಲದ ಆ ಷೇರುಗಳನ್ನು ದಲ್ಲಾಳಿಗಳ ಮೂಲಕ ಎರವಲು ಪಡೆದು ಸದ್ಯದ ಬೆಲೆಗೆ ಮಾರುವುದು. ನಂತರ ಅವುಗಳ ಬೆಲೆ ಕುಸಿದಾಗ ಕಡಿಮೆ ಬೆಲೆಗೆ ಕೊಂಡು ದಲ್ಲಾಳಿಗಳಿಗೆ ಹಿಂದಿರುಗಿಸುವ ಮೂಲಕ ಲಾಭ ಗಳಿಸುವುದನ್ನು ಶಾರ್ಟ್ ಸೆಲ್ಲಿಂಗ್ ಎನ್ನಲಾಗುತ್ತದೆ.

ಉದಾಹರಣೆಯ ಮೂಲಕ ನೋಡುವುದಾದರೆ ಅಆ ಎಂಬ ಕಂಪನಿಯ ಷೇರುಗಳು 1000 ರೂಗೆ ಮಾರಾಟವಾಗುತ್ತಿರುತ್ತವೆ. ವ್ಯಕ್ತಿ ಅಥವಾ ಸಂಸ್ಥೆಯೊಂದು ಆ ಕಂಪನಿಯ ಕುರಿತು ಸಾಕಷ್ಟು ಅಧ್ಯಯನ ನಡೆಸಿ ಮುಂದಿನ ದಿನಗಳಲ್ಲಿ ಅದರ ಷೇರುಗಳ ಬೆಲೆ ಕುಸಿಯುತ್ತದೆ ಎಂದು ಅಂದಾಜಿಸುತ್ತಾರೆ. ಆಗ ಆ ಕಂಪನಿಯ 1000 ರೂ ಬೆಲೆಯ 100 ಷೇರುಗಳನ್ನು ಬ್ರೋಕರ್‌ಗಳ ಮೂಲಕ ಎರವಲು ಪಡೆದು ಮಾರಿ 1 ಲಕ್ಷ ರೂ ಗಳಿಸುತ್ತಾರೆ. ಆನಂತರ ಆ ಕಂಪನಿಯ ಷೇರುಗಳ ಬೆಲೆ 600 ರೂಗಳಿಗೆ ಕುಸಿದ ಸಂದರ್ಭದಲ್ಲಿ ತಾವೇ 60,000 ರೂಗಳಿಗೆ 100 ಷೇರುಗಳನ್ನು ಖರೀದಿಸಿ ದಲ್ಲಾಳಿಗೆ ಹಿಂದಿರುಗಿಸುತ್ತಾರೆ. ಆಗ ಅವರಿಗೆ 40,000 ರೂ ಲಾಭವಾಗುತ್ತದೆ. ಇದನ್ನು ಶಾರ್ಟಿಂಗ್ ಎನ್ನುತ್ತಾರೆ.

ಇದೊಂದು ಜೂಜಿನಂತಿರುತ್ತದೆ ಮತ್ತು ಇಂತಿಷ್ಟು ಸಮಯದಲ್ಲಿ ದಲ್ಲಾಳಿಗೆ ಷೇರುಗಳನ್ನು ಮರಳಿ ನೀಡುವ ಒಪ್ಪಂದವಾಗಿತ್ತದೆ. ಒಂದು ವೇಳೆ ಅವರ ಅಂದಾಜು ತಪ್ಪಿ ಆ ಕಂಪನಿಯ ಷೇರಿನ ಬೆಲೆ ಕುಸಿಯುವ ಬದಲು 1,400 ರೂ ಏರಿಕೆಯಾದಲ್ಲಿ ಶಾರ್ಟ್ ಮಾಡಿದ ವ್ಯಕ್ತಿ ಅಥವಾ ಸಂಸ್ಥೆ ತನ್ನ ಕೈಯಿಂದಲೇ 40,000 ದುಡ್ಡು ಹಾಕಿ ಷೇರುಗಳನ್ನು ಕೊಳ್ಳುವ ಮೂಲಕ ನಷ್ಟಕ್ಕೆ ಸಿಲುಕುವ ಸಂದರ್ಭವೂ ಎದುರಾಗಬಹುದಾಗಿದೆ.

ಪ್ರಸ್ತುತ ಹಿಂಡೆನ್‌ಬರ್ಗ್ ಅದಾನಿ ಕಂಪನಿಗೆ ಮಾಡಿರುವುದು ಇದೇ ಶಾರ್ಟಿಂಗ್ ಆಗಿದೆ. ಎರಡು ವರ್ಷಗಳ ಕಾಲ ಸತತ ಅಧ್ಯಯನ ಮಾಡಿದ ಅದು ಅದಾನಿ ಕಂಪನಿಯ ಅಕ್ರಮಗಳ ಕುರಿತು ದಾಖಲೆಗಳನ್ನು ಶೇಖರಿಸಿಟ್ಟುಕೊಂಡಿತ್ತು. ಆನಂತರ ಷೇರು ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಮೂಲಕ ಲಕ್ಷಾಂತರ ಷೇರುಗಳನ್ನು ಎರವಲು ಪಡೆದು ಮಾರಾಟ ಮಾಡಿ ಹಣ ಸಂಗ್ರಹಿಸಿಟ್ಟುಕೊಂಡಿದೆ. ಜನವರಿ 24 ರಂದು ವರದಿ ಬಿಡುಗಡೆ ಮಾಡಿದ ನಂತರ ಪ್ರಪಂಚದಾದ್ಯಂತ ಅದು ಸುದ್ದಿಯಾಗಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಯಿತು. ಅದಾನಿ ಬಹುತೇಕ ಸಾಲದ ಮೇಲೆಯೇ ಸಾಮ್ರಾಜ್ಯ ಕಟ್ಟಿದ್ದು ಅದರ ಅಡಿಪಾಯವೇ ಅಲ್ಲಾಡುತ್ತಿದೆ ಎಂಬ ಕಥನ ಬಿತ್ತರಿಸಲಾಯಿತು. ಇದರಿಂದ ಭಯಗೊಂಡ ಲಕ್ಷಾಂತರ ಜನ ಏಕಕಾಲದಲ್ಲಿ ಅದಾನಿ ಕಂಪನಿಯ ತಮ್ಮ ಷೇರುಗಳನ್ನು ಮಾರಲು ಮುಂದಾದರು. ಆಗ ಸಹಜವಾಗಿ ಅವುಗಳ ಬೆಲೆ ಕುಸಿಯುತ್ತಾ ಹೋಯಿತು. ಸುಮಾರು ಶೇ. 20%ಗೂ ಹೆಚ್ಚಿನ ಷೇರು ಬೆಲೆಗಳು ಕುಸಿಯುತ್ತಿರುವುದರಿಂದ ಅದೆಲ್ಲವೂ ಹಿಂಡೆನ್‌ಬರ್ಗ್‌ ಕಂಪನಿಗೆ ಲಾಭವಾಗುತ್ತಿದೆ. ಏಕೆಂದರೆ ಹೆಚ್ಚು ಬೆಲೆಗೆ ಮಾರಿರುವ ಅದು ಕಡಿಮೆ ಬೆಲೆ ಕೊಂಡು ದಲ್ಲಾಳಿಗೆ ಹಿಂದಿರುಗಿಸುತ್ತದೆ. ಅಂದರೆ ಅದಾನಿ ಷೇರುಗಳ ಬೆಲೆ ಕುಸಿದಷ್ಟು ಅದರ ಲಾಭ ಹಿಂಡೆನ್‌ಬರ್ಗ್‌ಗೆ ದಕ್ಕುತ್ತಿದೆ. ಹೆಚ್ಚಿನ ಬೆಲೆಗೆ ಮಾರಾಟ ಮತ್ತು ಕಡಿಮೆ ಬೆಲೆ ಕೊಳ್ಳುವುದು ನಡೆಯುತ್ತಿದೆ.

ಇದೇ ಮೊದಲಲ್ಲ

ಬ್ಲೂಮ್‌ಬರ್ಗ್ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಹಿಂಡೆನ್‌ಬರ್ಗ್ 2020 ರಿಂದ ಈ ರೀತಿಯಲ್ಲಿ ಸುಮಾರು 30 ಕಂಪನಿಗಳನ್ನು ಗುರಿಯಾಗಿಸಿಕೊಂಡು ಶಾರ್ಟಿಂಗ್ ಮಾಡಿದೆ. ಅದು ತನಿಖೆಗಳನ್ನು ಸಾರ್ವಜನಿಕಗೊಳಿಸಿದ ಮರುದಿನವೇ ಆಯಾ ಕಂಪನಿಗಳು ಸರಾಸರಿಯಾಗಿ ತಮ್ಮ ಮೌಲ್ಯದ ಸುಮಾರು 15 ಪ್ರತಿಶತವನ್ನು ಕಳೆದುಕೊಂಡಿವೆ. ಅಂದರೆ ಅವುಗಳಲ್ಲೆಲ್ಲ ಅದು ಲಾಭ ಗಳಿಸಿದೆ. ಟೆಸ್ಲಾ, ಟ್ವಿಟರ್‌ನಂತಹ ಕಂಪನಿಗಳ ಮೇಲೆ ಸಹ ಅದು ಶಾರ್ಟಿಂಗ್ ಮಾಡಿ ಲಾಭ ಗಳಿಸಿದೆ ಎನ್ನಲಾಗಿದೆ. ನಿಕೋಲಾ ಎಂಬ ಕಂಪನಿಯ ಮೇಲೆ ಹಿಂಡೆನ್‌ಬರ್ಗ್ ಶಾರ್ಟಿಂಗ್ ಮಾಡಿತ್ತು. ಹಾಗಾಗಿ ಸುಮಾರು 34 ಬಿಲಿಯನ್ ಅಮೆರಿಕನ್ ಡಾಲರ್ ಮಾರುಕಟ್ಟೆ ಮೌಲ್ಯ ಹೊಂದಿದ್ದ ನಿಕೋಲಾ ಕಂಪನಿಯು ಸದ್ಯ 1.3 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಕುಸಿದಿದೆ ಎಂದರೆ ಹಿಂಡೆನ್‌ಬರ್ಗ್ ಕಂಪನಿಯ ಸಂಶೋಧನೆಗಳು, ತಂತ್ರಗಳು ಎಷ್ಟು ಕರಾರುವಕ್ಕಾರಿಗುತ್ತವೆ ಎಂಬುದಕ್ಕೆ ಉದಾಹರಣೆಯಾಗಿದೆ.

ಇದನ್ನೂ ಓದಿ: Explainer: ಏನಿದು ಹಿಂಡೆನ್‌ಬರ್ಗ್ ವರದಿ? ಅದಾನಿ ಸಾಮ್ರಾಜ್ಯ ಕುಸಿಯುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This company has been banned in usa as per recent news, how india had allowed it to investigate by short selling method, no shares of india/USA are not allowed to allot or sell or buy to us entity or indian entity or investors at present. It seems that unknown rival entity is hand in glove. M

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...