HomeUncategorizedಈ ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್ ಅಂದರೇನು?

ಈ ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್ ಅಂದರೇನು?

- Advertisement -
- Advertisement -

ಹಣದುಬ್ಬರ ಅಥವಾ ಇನಫ್ಲೇಷನ್ ಅನ್ನೋದನ್ನ ಕೇಳಿಕೇಳಿ ಸಾಕಾಗಿಹೋಗೇದ. ಅದರ ಬಗ್ಗೆ ಸರಕಾರದವರು ಏನೂ ಮಾಡಲಾರದೇ ಇರೋದು ನೋಡಿ-ನೋಡಿ ಸಾಕಾಗಿಹೋಗೇದ. ಅದಕ್ಕ ಹೊಸಾದೊಂದು ಹುಡುಕೋಣ. ಅದರ ಹೆಸರು ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್.

ಅದು ಸ್ಟ್ಯಾಗ್ನೇಷನ್ ಹಾಗೂ ಇನಫ್ಲೇಷನ್ ಸೇರಿದ ಆರ್ಥಿಕ ಮಾರಿ. ವಾರ್ಷಿಕ ಆರ್ಥಿಕ ಬೆಳವಣಿಗೆ 5 ಶೇಕಡಾ ಇದ್ದು ಹಣದುಬ್ಬರ ಶೇ. 8ರ ಆಸುಪಾಸಿಗೆ ಬಂದಿದ್ದಕ್ಕೆ ಭಾರತ ಜಡದುಬ್ಬರವನ್ನು ಎದುರು ನೋಡ್ತಾ ಇದೆ ಅಂತ ತಜ್ಞರ ಅಂಬೋಣ.

ಸರ್ವೇಸಾಮಾನ್ಯವಾಗಿ ಏನಾಗತದ ಅಂದರ ಹಣದುಬ್ಬರ ಇದ್ದಾಗ ಬೇಡಿಕೆ ಹೆಚ್ಚಿತ್ತು ಅಂದರ ಬೆಳವಣಿಗೆ ಇರತದ. ಜನರಿಗೆ ಹಣ ಖರ್ಚು ಆಗೋದು ಹೆಚ್ಚಾದರೂ ಸಹ ಅವರ ವರಮಾನ ಹೆಚ್ಚು ಆಗೋದಕ್ಕ ಜನರಿಗೆ ತೊಂದರೆ ಆಗಂಗಿಲ್ಲ. ಆದರ ಹಣದುಬ್ಬರ ಇದ್ದು, ಸರಕು-ಸೇವೆಗಳಿಗೆ ಬೇಡಿಕೆ ಕಡಿಮೆ ಆಗಿ ಆರ್ಥಿಕ ಹಿಂಜರಿತ ಉಂಟಾದರ, ಅದು ಆ ದೇಶದ ಜನರಿಗೆ ಭಾಳ ಕಿರಿಕಿರಿ ಆಗತದ. ಅವರ ದಿನ ನಿತ್ಯದ ಕೆಲಸನೂ ಆಗದಂಗ ತೊಂದರೆ ಆಗತದ.

ಹಿಂಗ 1973 ರಾಗ ಇಡಿ ಜಗತ್ತಿನೊಳಗ ಆಗಿತ್ತು. ಪೆಟ್ರೋಲು- ಡೀಸಲ್ ಬೆಲೆ ಹೆಚ್ಚಾಗಿ ಸಾಗಾಣಿಕೆ ವೆಚ್ಚ ಹೆಚ್ಚಾಗಿ, ಸರಕುಗಳ ಬೆಲೆ ಜಾಸ್ತಿ ಆತು. ಜನ ನೌಕರಿ ಕಳಕೊಂಡರು, ಸರಕು ಖರೀದಿ ಮಾಡೋದು ಕಡಿಮೆ ಮಾಡಿದರು, ಆದರ ಜನ ಖರೀದಿ ಕಮ್ಮಿ ಮಾಡಿದರು ಅಂತ ವೆಚ್ಚಕಮ್ಮಿ ಆಗಲಿಲ್ಲ. ಇಡೀ ವಿಶ್ವದ ಆರ್ಥಿಕ ವ್ಯವಸ್ಥೆ ಅಲುಗಾಡಿ ಹೋತು.

ಇನ್ನೊಮ್ಮೆ ಹಿಂಗಾಗಿದ್ದು ಯಾವಾಗ ಅಂದರ ಚಂದ್ರಶೇಖರ ಅವರ ಕಾಲದಾಗ. ಸರಕಾರದ ನೀತಿಗಳು ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲಿಲ್ಲ. ಅದರ ಸರಕುಗಳ ಬೆಲೆ ಹೆಚ್ಚಾಗಿ ಕೂತವು. ಮಾರುವವರಿಗೂ ಅನುಕೂಲ ಆಗಲಿಲ್ಲ, ಖರೀದಿ ಮಾಡೋರಿಗೂ ಅನುಕೂಲ ಆಗಲಿಲ್ಲ.

ಇದನ್ನು ಕುಡಿಯಾಗಿದ್ದಾಗ ಚಿವುಟದಿದ್ದರೆ ಇದು ಅತ್ಯಂತ ದೊಡ್ಡ ಸಮಸ್ಯೆ ಆಗಬಹುದು. ಭಾಳ ದಿವಸ ಜಡದುಬ್ಬರ ಮುಂದುವರೆದರ ಅದು ಮಧ್ಯಮ ವರ್ಗದವರನ್ನೆಲ್ಲ ಬಡತನರೇಖೆಯ ಕೆಳಗೆ ದಬ್ಬಿ ಬಿಡತದ. ಆಡಳಿತ ಪಕ್ಷಕ್ಕೂ ಇದು ಒಳ್ಳೇದಲ್ಲ. ಸರಕಾರದ ಇಮೇಜು ಇದರಿಂದ ಕೆಡಬಹುದು. ಜನರನ್ನು ರೊಚ್ಚಿಗೆ ಎಬ್ಬಿಸಬಹುದು.

ಹಂಗಂತ ಅದನ್ನು ಸಂಭಾಳಿಸೋದು ಸರಳ ಇಲ್ಲ. ಸರಕಾರ ಅಥವಾ ರಿಸರ್ವ ಬ್ಯಾಂಕಿನಂಥ ಕೇಂದ್ರ ಬ್ಯಾಂಕು ಬಡ್ಡಿ ದರ ಹೆಚ್ಚು ಮಾಡಿದರ ಸಾಲಗಳು ದುಬಾರಿಯಾಗಿ ಯಾರೂ ತೊಗೊಳ್ಳಲಾರದಂತಾಗಿ, ಅಥವಾ ತೊಗೊಂಡವರು ವಾಪಸು ಕೊಡಲಿಕ್ಕೆ ಆಗಲಾರದಂತಾಗಿ ವ್ಯಾಪಾರ -ವ್ಯವಹಾರಕ್ಕೆ ತೊಂದರೆ ಆಗಬಹುದು. ಬಡ್ಡಿ ದರ ಕಮ್ಮಿ ಮಾಡಿದರ ಹಣದುಬ್ಬರ ಹೆಚ್ಚಾಗಿ ಜನ ಏನನ್ನೂ ಖರೀದಿ ಮಾಡದಂಗಾಗಬಹುದು, ಮಾಡಿದರ ಅವರ ಉಳಿತಾಯ ಕರಗಬಹುದು.

ಈ ವರ್ಷ ಏನಾಗೇದಪಾ ಅಂದರ ಪ್ರವಾಹ- ಬರಗಾಲದಿಂದ ಕೃಷಿ ಉತ್ಪನ್ನ ಕಮ್ಮಿ ಆಗೇದ. ಇದರಿಂದ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗೇದ. ಇದು ಕೇಂದ್ರದ ಹೊಸ ಆಮದು ನೀತಿಯಿಂದ ಕಮ್ಮಿ ಆದರ, ಅಥವಾ ಆರ್ಥಿಕ ಬೆಳವಣಿಗೆ ಮುಂದಿನ ಎರಡು – ಮೂರು ತಿಂಗಳಲ್ಲಿ ಹೆಚ್ಚಿದರ ಜಡದುಬ್ಬರದ ಬರೋ ಸಾಧ್ಯತೆ ಕಮ್ಮಿ ಆಗಬಹುದು. ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರ ಮಂಡಳಿ ಅವರು ಈಗಿನ ಹಣದುಬ್ಬರ ಕಮ್ಮಿ ಆಗತದ ಅಂತ ಹೇಳ್ಯಾರ.

ದೇಶದ ವರಮಾನ ಅಷ್ಟೇ ಉಳದು ಅಥವಾ ಕಮ್ಮಿ ಆಗುವಾಗ ಖರ್ಚು ಜಾಸ್ತಿ ಆದಂಗನ, ಪ್ರತಿ ಗೃಹಸ್ಥನ ಪರಿಸ್ಥಿತಿನೂ ಆಗಬಹುದು. ಅವನ ನೌಕರಿಗೆ ಖತರಾ ಬಂದು, ಯಾವಾಗ ಕೆಲಸ ಕಳಕೋತೇನಿ ಅನ್ನುವ ಹೆದರಿಕೆಯೊಳಗ ಇರೋವಾಗ, ಅಥವಾ ಅವನಿಗ ವಾರ್ಷಿಕ ಬಡ್ತಿ ಸಿಗಲಾರದೇ, ಸಂಬಳ ಹೆಚ್ಚಾಗಲಾರದೇ ಇದ್ದು, ವಸ್ತುಗಳ ಬೆಲೆ ಜಾಸ್ತಿ ಆಗತಾ ಹೋದರ ಅವನು ಬರೇ ಊಟ, ಮನಿ ಬಾಡಗಿ, ಅರವಿ- ಅಂಚಡಿ, ಸಾಲಿ ಫೀಸು ಇಷ್ಟ ಖರ್ಚು ಮಾಡತಾ ಹೋದಾ ಅಂದರ ಅವನು ದೇಶದ ಆರ್ಥಿಕ ಪರಿಸ್ಥಿತಿಗೆ ಯಾವ ಕೊಡುಗೆ ಕೊಡಲಾರ.

ಹೊಸ ಬಂಡವಾಳ ದೇಶಕ್ಕೆ ಬರಲಾರದು, ಹೊಸ ಉದ್ಯೋಗ ಸೃಷ್ಟಿ ಆಗಲಾರವು. ಜನರ ಕೈಯೊಳಗ ದುಡ್ಡು ನಿಲ್ಲಂಗಿಲ್ಲ. ಜನ ಬ್ಯಾಂಕಿನೊಳಗ, ಷೇರು ಮಾರುಕಟ್ಟೆಯೊಳಗ ಉಳಿತಾಯ ಮಾಡಿದರ ಅದಕ್ಕ ಬೇಕಷ್ಟು ಬಡ್ಡಿ ಬರಂಗಿಲ್ಲ.

ಜಡದುಬ್ಬರವನ್ನ ಸರಕಾರಗಳು ಕಮ್ಮಿ ಮಾಡಲಿಕ್ಕೆ ಕ್ರಮ ಕೈಕೊಳ್ಳಬೇಕು. ಸರಿಯಾದ ನೀತಿ ಪಾಲಿಸಿ ಮತ್ತ ಬರಲಾರದ ಹಂಗ ನೋಡಿಕೊಳ್ಳಬೇಕು. ಇಲ್ಲದಿದ್ದರ ಅನೇಕ ವರ್ಷಗಳ ಬೆಳವಣಿಗಿ ಹೊಳಿಯೊಳಗ ಹುಣಸೀಹಣ್ಣು ತೊಳದಂಗ ಆಗಿ ಬಿಡತದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...