HomeUncategorizedಈ ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್ ಅಂದರೇನು?

ಈ ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್ ಅಂದರೇನು?

- Advertisement -
- Advertisement -

ಹಣದುಬ್ಬರ ಅಥವಾ ಇನಫ್ಲೇಷನ್ ಅನ್ನೋದನ್ನ ಕೇಳಿಕೇಳಿ ಸಾಕಾಗಿಹೋಗೇದ. ಅದರ ಬಗ್ಗೆ ಸರಕಾರದವರು ಏನೂ ಮಾಡಲಾರದೇ ಇರೋದು ನೋಡಿ-ನೋಡಿ ಸಾಕಾಗಿಹೋಗೇದ. ಅದಕ್ಕ ಹೊಸಾದೊಂದು ಹುಡುಕೋಣ. ಅದರ ಹೆಸರು ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್.

ಅದು ಸ್ಟ್ಯಾಗ್ನೇಷನ್ ಹಾಗೂ ಇನಫ್ಲೇಷನ್ ಸೇರಿದ ಆರ್ಥಿಕ ಮಾರಿ. ವಾರ್ಷಿಕ ಆರ್ಥಿಕ ಬೆಳವಣಿಗೆ 5 ಶೇಕಡಾ ಇದ್ದು ಹಣದುಬ್ಬರ ಶೇ. 8ರ ಆಸುಪಾಸಿಗೆ ಬಂದಿದ್ದಕ್ಕೆ ಭಾರತ ಜಡದುಬ್ಬರವನ್ನು ಎದುರು ನೋಡ್ತಾ ಇದೆ ಅಂತ ತಜ್ಞರ ಅಂಬೋಣ.

ಸರ್ವೇಸಾಮಾನ್ಯವಾಗಿ ಏನಾಗತದ ಅಂದರ ಹಣದುಬ್ಬರ ಇದ್ದಾಗ ಬೇಡಿಕೆ ಹೆಚ್ಚಿತ್ತು ಅಂದರ ಬೆಳವಣಿಗೆ ಇರತದ. ಜನರಿಗೆ ಹಣ ಖರ್ಚು ಆಗೋದು ಹೆಚ್ಚಾದರೂ ಸಹ ಅವರ ವರಮಾನ ಹೆಚ್ಚು ಆಗೋದಕ್ಕ ಜನರಿಗೆ ತೊಂದರೆ ಆಗಂಗಿಲ್ಲ. ಆದರ ಹಣದುಬ್ಬರ ಇದ್ದು, ಸರಕು-ಸೇವೆಗಳಿಗೆ ಬೇಡಿಕೆ ಕಡಿಮೆ ಆಗಿ ಆರ್ಥಿಕ ಹಿಂಜರಿತ ಉಂಟಾದರ, ಅದು ಆ ದೇಶದ ಜನರಿಗೆ ಭಾಳ ಕಿರಿಕಿರಿ ಆಗತದ. ಅವರ ದಿನ ನಿತ್ಯದ ಕೆಲಸನೂ ಆಗದಂಗ ತೊಂದರೆ ಆಗತದ.

ಹಿಂಗ 1973 ರಾಗ ಇಡಿ ಜಗತ್ತಿನೊಳಗ ಆಗಿತ್ತು. ಪೆಟ್ರೋಲು- ಡೀಸಲ್ ಬೆಲೆ ಹೆಚ್ಚಾಗಿ ಸಾಗಾಣಿಕೆ ವೆಚ್ಚ ಹೆಚ್ಚಾಗಿ, ಸರಕುಗಳ ಬೆಲೆ ಜಾಸ್ತಿ ಆತು. ಜನ ನೌಕರಿ ಕಳಕೊಂಡರು, ಸರಕು ಖರೀದಿ ಮಾಡೋದು ಕಡಿಮೆ ಮಾಡಿದರು, ಆದರ ಜನ ಖರೀದಿ ಕಮ್ಮಿ ಮಾಡಿದರು ಅಂತ ವೆಚ್ಚಕಮ್ಮಿ ಆಗಲಿಲ್ಲ. ಇಡೀ ವಿಶ್ವದ ಆರ್ಥಿಕ ವ್ಯವಸ್ಥೆ ಅಲುಗಾಡಿ ಹೋತು.

ಇನ್ನೊಮ್ಮೆ ಹಿಂಗಾಗಿದ್ದು ಯಾವಾಗ ಅಂದರ ಚಂದ್ರಶೇಖರ ಅವರ ಕಾಲದಾಗ. ಸರಕಾರದ ನೀತಿಗಳು ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲಿಲ್ಲ. ಅದರ ಸರಕುಗಳ ಬೆಲೆ ಹೆಚ್ಚಾಗಿ ಕೂತವು. ಮಾರುವವರಿಗೂ ಅನುಕೂಲ ಆಗಲಿಲ್ಲ, ಖರೀದಿ ಮಾಡೋರಿಗೂ ಅನುಕೂಲ ಆಗಲಿಲ್ಲ.

ಇದನ್ನು ಕುಡಿಯಾಗಿದ್ದಾಗ ಚಿವುಟದಿದ್ದರೆ ಇದು ಅತ್ಯಂತ ದೊಡ್ಡ ಸಮಸ್ಯೆ ಆಗಬಹುದು. ಭಾಳ ದಿವಸ ಜಡದುಬ್ಬರ ಮುಂದುವರೆದರ ಅದು ಮಧ್ಯಮ ವರ್ಗದವರನ್ನೆಲ್ಲ ಬಡತನರೇಖೆಯ ಕೆಳಗೆ ದಬ್ಬಿ ಬಿಡತದ. ಆಡಳಿತ ಪಕ್ಷಕ್ಕೂ ಇದು ಒಳ್ಳೇದಲ್ಲ. ಸರಕಾರದ ಇಮೇಜು ಇದರಿಂದ ಕೆಡಬಹುದು. ಜನರನ್ನು ರೊಚ್ಚಿಗೆ ಎಬ್ಬಿಸಬಹುದು.

ಹಂಗಂತ ಅದನ್ನು ಸಂಭಾಳಿಸೋದು ಸರಳ ಇಲ್ಲ. ಸರಕಾರ ಅಥವಾ ರಿಸರ್ವ ಬ್ಯಾಂಕಿನಂಥ ಕೇಂದ್ರ ಬ್ಯಾಂಕು ಬಡ್ಡಿ ದರ ಹೆಚ್ಚು ಮಾಡಿದರ ಸಾಲಗಳು ದುಬಾರಿಯಾಗಿ ಯಾರೂ ತೊಗೊಳ್ಳಲಾರದಂತಾಗಿ, ಅಥವಾ ತೊಗೊಂಡವರು ವಾಪಸು ಕೊಡಲಿಕ್ಕೆ ಆಗಲಾರದಂತಾಗಿ ವ್ಯಾಪಾರ -ವ್ಯವಹಾರಕ್ಕೆ ತೊಂದರೆ ಆಗಬಹುದು. ಬಡ್ಡಿ ದರ ಕಮ್ಮಿ ಮಾಡಿದರ ಹಣದುಬ್ಬರ ಹೆಚ್ಚಾಗಿ ಜನ ಏನನ್ನೂ ಖರೀದಿ ಮಾಡದಂಗಾಗಬಹುದು, ಮಾಡಿದರ ಅವರ ಉಳಿತಾಯ ಕರಗಬಹುದು.

ಈ ವರ್ಷ ಏನಾಗೇದಪಾ ಅಂದರ ಪ್ರವಾಹ- ಬರಗಾಲದಿಂದ ಕೃಷಿ ಉತ್ಪನ್ನ ಕಮ್ಮಿ ಆಗೇದ. ಇದರಿಂದ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗೇದ. ಇದು ಕೇಂದ್ರದ ಹೊಸ ಆಮದು ನೀತಿಯಿಂದ ಕಮ್ಮಿ ಆದರ, ಅಥವಾ ಆರ್ಥಿಕ ಬೆಳವಣಿಗೆ ಮುಂದಿನ ಎರಡು – ಮೂರು ತಿಂಗಳಲ್ಲಿ ಹೆಚ್ಚಿದರ ಜಡದುಬ್ಬರದ ಬರೋ ಸಾಧ್ಯತೆ ಕಮ್ಮಿ ಆಗಬಹುದು. ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರ ಮಂಡಳಿ ಅವರು ಈಗಿನ ಹಣದುಬ್ಬರ ಕಮ್ಮಿ ಆಗತದ ಅಂತ ಹೇಳ್ಯಾರ.

ದೇಶದ ವರಮಾನ ಅಷ್ಟೇ ಉಳದು ಅಥವಾ ಕಮ್ಮಿ ಆಗುವಾಗ ಖರ್ಚು ಜಾಸ್ತಿ ಆದಂಗನ, ಪ್ರತಿ ಗೃಹಸ್ಥನ ಪರಿಸ್ಥಿತಿನೂ ಆಗಬಹುದು. ಅವನ ನೌಕರಿಗೆ ಖತರಾ ಬಂದು, ಯಾವಾಗ ಕೆಲಸ ಕಳಕೋತೇನಿ ಅನ್ನುವ ಹೆದರಿಕೆಯೊಳಗ ಇರೋವಾಗ, ಅಥವಾ ಅವನಿಗ ವಾರ್ಷಿಕ ಬಡ್ತಿ ಸಿಗಲಾರದೇ, ಸಂಬಳ ಹೆಚ್ಚಾಗಲಾರದೇ ಇದ್ದು, ವಸ್ತುಗಳ ಬೆಲೆ ಜಾಸ್ತಿ ಆಗತಾ ಹೋದರ ಅವನು ಬರೇ ಊಟ, ಮನಿ ಬಾಡಗಿ, ಅರವಿ- ಅಂಚಡಿ, ಸಾಲಿ ಫೀಸು ಇಷ್ಟ ಖರ್ಚು ಮಾಡತಾ ಹೋದಾ ಅಂದರ ಅವನು ದೇಶದ ಆರ್ಥಿಕ ಪರಿಸ್ಥಿತಿಗೆ ಯಾವ ಕೊಡುಗೆ ಕೊಡಲಾರ.

ಹೊಸ ಬಂಡವಾಳ ದೇಶಕ್ಕೆ ಬರಲಾರದು, ಹೊಸ ಉದ್ಯೋಗ ಸೃಷ್ಟಿ ಆಗಲಾರವು. ಜನರ ಕೈಯೊಳಗ ದುಡ್ಡು ನಿಲ್ಲಂಗಿಲ್ಲ. ಜನ ಬ್ಯಾಂಕಿನೊಳಗ, ಷೇರು ಮಾರುಕಟ್ಟೆಯೊಳಗ ಉಳಿತಾಯ ಮಾಡಿದರ ಅದಕ್ಕ ಬೇಕಷ್ಟು ಬಡ್ಡಿ ಬರಂಗಿಲ್ಲ.

ಜಡದುಬ್ಬರವನ್ನ ಸರಕಾರಗಳು ಕಮ್ಮಿ ಮಾಡಲಿಕ್ಕೆ ಕ್ರಮ ಕೈಕೊಳ್ಳಬೇಕು. ಸರಿಯಾದ ನೀತಿ ಪಾಲಿಸಿ ಮತ್ತ ಬರಲಾರದ ಹಂಗ ನೋಡಿಕೊಳ್ಳಬೇಕು. ಇಲ್ಲದಿದ್ದರ ಅನೇಕ ವರ್ಷಗಳ ಬೆಳವಣಿಗಿ ಹೊಳಿಯೊಳಗ ಹುಣಸೀಹಣ್ಣು ತೊಳದಂಗ ಆಗಿ ಬಿಡತದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...