HomeUncategorizedಈ ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್ ಅಂದರೇನು?

ಈ ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್ ಅಂದರೇನು?

- Advertisement -
- Advertisement -

ಹಣದುಬ್ಬರ ಅಥವಾ ಇನಫ್ಲೇಷನ್ ಅನ್ನೋದನ್ನ ಕೇಳಿಕೇಳಿ ಸಾಕಾಗಿಹೋಗೇದ. ಅದರ ಬಗ್ಗೆ ಸರಕಾರದವರು ಏನೂ ಮಾಡಲಾರದೇ ಇರೋದು ನೋಡಿ-ನೋಡಿ ಸಾಕಾಗಿಹೋಗೇದ. ಅದಕ್ಕ ಹೊಸಾದೊಂದು ಹುಡುಕೋಣ. ಅದರ ಹೆಸರು ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್.

ಅದು ಸ್ಟ್ಯಾಗ್ನೇಷನ್ ಹಾಗೂ ಇನಫ್ಲೇಷನ್ ಸೇರಿದ ಆರ್ಥಿಕ ಮಾರಿ. ವಾರ್ಷಿಕ ಆರ್ಥಿಕ ಬೆಳವಣಿಗೆ 5 ಶೇಕಡಾ ಇದ್ದು ಹಣದುಬ್ಬರ ಶೇ. 8ರ ಆಸುಪಾಸಿಗೆ ಬಂದಿದ್ದಕ್ಕೆ ಭಾರತ ಜಡದುಬ್ಬರವನ್ನು ಎದುರು ನೋಡ್ತಾ ಇದೆ ಅಂತ ತಜ್ಞರ ಅಂಬೋಣ.

ಸರ್ವೇಸಾಮಾನ್ಯವಾಗಿ ಏನಾಗತದ ಅಂದರ ಹಣದುಬ್ಬರ ಇದ್ದಾಗ ಬೇಡಿಕೆ ಹೆಚ್ಚಿತ್ತು ಅಂದರ ಬೆಳವಣಿಗೆ ಇರತದ. ಜನರಿಗೆ ಹಣ ಖರ್ಚು ಆಗೋದು ಹೆಚ್ಚಾದರೂ ಸಹ ಅವರ ವರಮಾನ ಹೆಚ್ಚು ಆಗೋದಕ್ಕ ಜನರಿಗೆ ತೊಂದರೆ ಆಗಂಗಿಲ್ಲ. ಆದರ ಹಣದುಬ್ಬರ ಇದ್ದು, ಸರಕು-ಸೇವೆಗಳಿಗೆ ಬೇಡಿಕೆ ಕಡಿಮೆ ಆಗಿ ಆರ್ಥಿಕ ಹಿಂಜರಿತ ಉಂಟಾದರ, ಅದು ಆ ದೇಶದ ಜನರಿಗೆ ಭಾಳ ಕಿರಿಕಿರಿ ಆಗತದ. ಅವರ ದಿನ ನಿತ್ಯದ ಕೆಲಸನೂ ಆಗದಂಗ ತೊಂದರೆ ಆಗತದ.

ಹಿಂಗ 1973 ರಾಗ ಇಡಿ ಜಗತ್ತಿನೊಳಗ ಆಗಿತ್ತು. ಪೆಟ್ರೋಲು- ಡೀಸಲ್ ಬೆಲೆ ಹೆಚ್ಚಾಗಿ ಸಾಗಾಣಿಕೆ ವೆಚ್ಚ ಹೆಚ್ಚಾಗಿ, ಸರಕುಗಳ ಬೆಲೆ ಜಾಸ್ತಿ ಆತು. ಜನ ನೌಕರಿ ಕಳಕೊಂಡರು, ಸರಕು ಖರೀದಿ ಮಾಡೋದು ಕಡಿಮೆ ಮಾಡಿದರು, ಆದರ ಜನ ಖರೀದಿ ಕಮ್ಮಿ ಮಾಡಿದರು ಅಂತ ವೆಚ್ಚಕಮ್ಮಿ ಆಗಲಿಲ್ಲ. ಇಡೀ ವಿಶ್ವದ ಆರ್ಥಿಕ ವ್ಯವಸ್ಥೆ ಅಲುಗಾಡಿ ಹೋತು.

ಇನ್ನೊಮ್ಮೆ ಹಿಂಗಾಗಿದ್ದು ಯಾವಾಗ ಅಂದರ ಚಂದ್ರಶೇಖರ ಅವರ ಕಾಲದಾಗ. ಸರಕಾರದ ನೀತಿಗಳು ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲಿಲ್ಲ. ಅದರ ಸರಕುಗಳ ಬೆಲೆ ಹೆಚ್ಚಾಗಿ ಕೂತವು. ಮಾರುವವರಿಗೂ ಅನುಕೂಲ ಆಗಲಿಲ್ಲ, ಖರೀದಿ ಮಾಡೋರಿಗೂ ಅನುಕೂಲ ಆಗಲಿಲ್ಲ.

ಇದನ್ನು ಕುಡಿಯಾಗಿದ್ದಾಗ ಚಿವುಟದಿದ್ದರೆ ಇದು ಅತ್ಯಂತ ದೊಡ್ಡ ಸಮಸ್ಯೆ ಆಗಬಹುದು. ಭಾಳ ದಿವಸ ಜಡದುಬ್ಬರ ಮುಂದುವರೆದರ ಅದು ಮಧ್ಯಮ ವರ್ಗದವರನ್ನೆಲ್ಲ ಬಡತನರೇಖೆಯ ಕೆಳಗೆ ದಬ್ಬಿ ಬಿಡತದ. ಆಡಳಿತ ಪಕ್ಷಕ್ಕೂ ಇದು ಒಳ್ಳೇದಲ್ಲ. ಸರಕಾರದ ಇಮೇಜು ಇದರಿಂದ ಕೆಡಬಹುದು. ಜನರನ್ನು ರೊಚ್ಚಿಗೆ ಎಬ್ಬಿಸಬಹುದು.

ಹಂಗಂತ ಅದನ್ನು ಸಂಭಾಳಿಸೋದು ಸರಳ ಇಲ್ಲ. ಸರಕಾರ ಅಥವಾ ರಿಸರ್ವ ಬ್ಯಾಂಕಿನಂಥ ಕೇಂದ್ರ ಬ್ಯಾಂಕು ಬಡ್ಡಿ ದರ ಹೆಚ್ಚು ಮಾಡಿದರ ಸಾಲಗಳು ದುಬಾರಿಯಾಗಿ ಯಾರೂ ತೊಗೊಳ್ಳಲಾರದಂತಾಗಿ, ಅಥವಾ ತೊಗೊಂಡವರು ವಾಪಸು ಕೊಡಲಿಕ್ಕೆ ಆಗಲಾರದಂತಾಗಿ ವ್ಯಾಪಾರ -ವ್ಯವಹಾರಕ್ಕೆ ತೊಂದರೆ ಆಗಬಹುದು. ಬಡ್ಡಿ ದರ ಕಮ್ಮಿ ಮಾಡಿದರ ಹಣದುಬ್ಬರ ಹೆಚ್ಚಾಗಿ ಜನ ಏನನ್ನೂ ಖರೀದಿ ಮಾಡದಂಗಾಗಬಹುದು, ಮಾಡಿದರ ಅವರ ಉಳಿತಾಯ ಕರಗಬಹುದು.

ಈ ವರ್ಷ ಏನಾಗೇದಪಾ ಅಂದರ ಪ್ರವಾಹ- ಬರಗಾಲದಿಂದ ಕೃಷಿ ಉತ್ಪನ್ನ ಕಮ್ಮಿ ಆಗೇದ. ಇದರಿಂದ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗೇದ. ಇದು ಕೇಂದ್ರದ ಹೊಸ ಆಮದು ನೀತಿಯಿಂದ ಕಮ್ಮಿ ಆದರ, ಅಥವಾ ಆರ್ಥಿಕ ಬೆಳವಣಿಗೆ ಮುಂದಿನ ಎರಡು – ಮೂರು ತಿಂಗಳಲ್ಲಿ ಹೆಚ್ಚಿದರ ಜಡದುಬ್ಬರದ ಬರೋ ಸಾಧ್ಯತೆ ಕಮ್ಮಿ ಆಗಬಹುದು. ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರ ಮಂಡಳಿ ಅವರು ಈಗಿನ ಹಣದುಬ್ಬರ ಕಮ್ಮಿ ಆಗತದ ಅಂತ ಹೇಳ್ಯಾರ.

ದೇಶದ ವರಮಾನ ಅಷ್ಟೇ ಉಳದು ಅಥವಾ ಕಮ್ಮಿ ಆಗುವಾಗ ಖರ್ಚು ಜಾಸ್ತಿ ಆದಂಗನ, ಪ್ರತಿ ಗೃಹಸ್ಥನ ಪರಿಸ್ಥಿತಿನೂ ಆಗಬಹುದು. ಅವನ ನೌಕರಿಗೆ ಖತರಾ ಬಂದು, ಯಾವಾಗ ಕೆಲಸ ಕಳಕೋತೇನಿ ಅನ್ನುವ ಹೆದರಿಕೆಯೊಳಗ ಇರೋವಾಗ, ಅಥವಾ ಅವನಿಗ ವಾರ್ಷಿಕ ಬಡ್ತಿ ಸಿಗಲಾರದೇ, ಸಂಬಳ ಹೆಚ್ಚಾಗಲಾರದೇ ಇದ್ದು, ವಸ್ತುಗಳ ಬೆಲೆ ಜಾಸ್ತಿ ಆಗತಾ ಹೋದರ ಅವನು ಬರೇ ಊಟ, ಮನಿ ಬಾಡಗಿ, ಅರವಿ- ಅಂಚಡಿ, ಸಾಲಿ ಫೀಸು ಇಷ್ಟ ಖರ್ಚು ಮಾಡತಾ ಹೋದಾ ಅಂದರ ಅವನು ದೇಶದ ಆರ್ಥಿಕ ಪರಿಸ್ಥಿತಿಗೆ ಯಾವ ಕೊಡುಗೆ ಕೊಡಲಾರ.

ಹೊಸ ಬಂಡವಾಳ ದೇಶಕ್ಕೆ ಬರಲಾರದು, ಹೊಸ ಉದ್ಯೋಗ ಸೃಷ್ಟಿ ಆಗಲಾರವು. ಜನರ ಕೈಯೊಳಗ ದುಡ್ಡು ನಿಲ್ಲಂಗಿಲ್ಲ. ಜನ ಬ್ಯಾಂಕಿನೊಳಗ, ಷೇರು ಮಾರುಕಟ್ಟೆಯೊಳಗ ಉಳಿತಾಯ ಮಾಡಿದರ ಅದಕ್ಕ ಬೇಕಷ್ಟು ಬಡ್ಡಿ ಬರಂಗಿಲ್ಲ.

ಜಡದುಬ್ಬರವನ್ನ ಸರಕಾರಗಳು ಕಮ್ಮಿ ಮಾಡಲಿಕ್ಕೆ ಕ್ರಮ ಕೈಕೊಳ್ಳಬೇಕು. ಸರಿಯಾದ ನೀತಿ ಪಾಲಿಸಿ ಮತ್ತ ಬರಲಾರದ ಹಂಗ ನೋಡಿಕೊಳ್ಳಬೇಕು. ಇಲ್ಲದಿದ್ದರ ಅನೇಕ ವರ್ಷಗಳ ಬೆಳವಣಿಗಿ ಹೊಳಿಯೊಳಗ ಹುಣಸೀಹಣ್ಣು ತೊಳದಂಗ ಆಗಿ ಬಿಡತದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...