HomeUncategorizedಈ ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್ ಅಂದರೇನು?

ಈ ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್ ಅಂದರೇನು?

- Advertisement -
- Advertisement -

ಹಣದುಬ್ಬರ ಅಥವಾ ಇನಫ್ಲೇಷನ್ ಅನ್ನೋದನ್ನ ಕೇಳಿಕೇಳಿ ಸಾಕಾಗಿಹೋಗೇದ. ಅದರ ಬಗ್ಗೆ ಸರಕಾರದವರು ಏನೂ ಮಾಡಲಾರದೇ ಇರೋದು ನೋಡಿ-ನೋಡಿ ಸಾಕಾಗಿಹೋಗೇದ. ಅದಕ್ಕ ಹೊಸಾದೊಂದು ಹುಡುಕೋಣ. ಅದರ ಹೆಸರು ಜಡದುಬ್ಬರ ಅಥವಾ ಸ್ಟ್ಯಾಗಫ್ಲೇಷನ್.

ಅದು ಸ್ಟ್ಯಾಗ್ನೇಷನ್ ಹಾಗೂ ಇನಫ್ಲೇಷನ್ ಸೇರಿದ ಆರ್ಥಿಕ ಮಾರಿ. ವಾರ್ಷಿಕ ಆರ್ಥಿಕ ಬೆಳವಣಿಗೆ 5 ಶೇಕಡಾ ಇದ್ದು ಹಣದುಬ್ಬರ ಶೇ. 8ರ ಆಸುಪಾಸಿಗೆ ಬಂದಿದ್ದಕ್ಕೆ ಭಾರತ ಜಡದುಬ್ಬರವನ್ನು ಎದುರು ನೋಡ್ತಾ ಇದೆ ಅಂತ ತಜ್ಞರ ಅಂಬೋಣ.

ಸರ್ವೇಸಾಮಾನ್ಯವಾಗಿ ಏನಾಗತದ ಅಂದರ ಹಣದುಬ್ಬರ ಇದ್ದಾಗ ಬೇಡಿಕೆ ಹೆಚ್ಚಿತ್ತು ಅಂದರ ಬೆಳವಣಿಗೆ ಇರತದ. ಜನರಿಗೆ ಹಣ ಖರ್ಚು ಆಗೋದು ಹೆಚ್ಚಾದರೂ ಸಹ ಅವರ ವರಮಾನ ಹೆಚ್ಚು ಆಗೋದಕ್ಕ ಜನರಿಗೆ ತೊಂದರೆ ಆಗಂಗಿಲ್ಲ. ಆದರ ಹಣದುಬ್ಬರ ಇದ್ದು, ಸರಕು-ಸೇವೆಗಳಿಗೆ ಬೇಡಿಕೆ ಕಡಿಮೆ ಆಗಿ ಆರ್ಥಿಕ ಹಿಂಜರಿತ ಉಂಟಾದರ, ಅದು ಆ ದೇಶದ ಜನರಿಗೆ ಭಾಳ ಕಿರಿಕಿರಿ ಆಗತದ. ಅವರ ದಿನ ನಿತ್ಯದ ಕೆಲಸನೂ ಆಗದಂಗ ತೊಂದರೆ ಆಗತದ.

ಹಿಂಗ 1973 ರಾಗ ಇಡಿ ಜಗತ್ತಿನೊಳಗ ಆಗಿತ್ತು. ಪೆಟ್ರೋಲು- ಡೀಸಲ್ ಬೆಲೆ ಹೆಚ್ಚಾಗಿ ಸಾಗಾಣಿಕೆ ವೆಚ್ಚ ಹೆಚ್ಚಾಗಿ, ಸರಕುಗಳ ಬೆಲೆ ಜಾಸ್ತಿ ಆತು. ಜನ ನೌಕರಿ ಕಳಕೊಂಡರು, ಸರಕು ಖರೀದಿ ಮಾಡೋದು ಕಡಿಮೆ ಮಾಡಿದರು, ಆದರ ಜನ ಖರೀದಿ ಕಮ್ಮಿ ಮಾಡಿದರು ಅಂತ ವೆಚ್ಚಕಮ್ಮಿ ಆಗಲಿಲ್ಲ. ಇಡೀ ವಿಶ್ವದ ಆರ್ಥಿಕ ವ್ಯವಸ್ಥೆ ಅಲುಗಾಡಿ ಹೋತು.

ಇನ್ನೊಮ್ಮೆ ಹಿಂಗಾಗಿದ್ದು ಯಾವಾಗ ಅಂದರ ಚಂದ್ರಶೇಖರ ಅವರ ಕಾಲದಾಗ. ಸರಕಾರದ ನೀತಿಗಳು ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲಿಲ್ಲ. ಅದರ ಸರಕುಗಳ ಬೆಲೆ ಹೆಚ್ಚಾಗಿ ಕೂತವು. ಮಾರುವವರಿಗೂ ಅನುಕೂಲ ಆಗಲಿಲ್ಲ, ಖರೀದಿ ಮಾಡೋರಿಗೂ ಅನುಕೂಲ ಆಗಲಿಲ್ಲ.

ಇದನ್ನು ಕುಡಿಯಾಗಿದ್ದಾಗ ಚಿವುಟದಿದ್ದರೆ ಇದು ಅತ್ಯಂತ ದೊಡ್ಡ ಸಮಸ್ಯೆ ಆಗಬಹುದು. ಭಾಳ ದಿವಸ ಜಡದುಬ್ಬರ ಮುಂದುವರೆದರ ಅದು ಮಧ್ಯಮ ವರ್ಗದವರನ್ನೆಲ್ಲ ಬಡತನರೇಖೆಯ ಕೆಳಗೆ ದಬ್ಬಿ ಬಿಡತದ. ಆಡಳಿತ ಪಕ್ಷಕ್ಕೂ ಇದು ಒಳ್ಳೇದಲ್ಲ. ಸರಕಾರದ ಇಮೇಜು ಇದರಿಂದ ಕೆಡಬಹುದು. ಜನರನ್ನು ರೊಚ್ಚಿಗೆ ಎಬ್ಬಿಸಬಹುದು.

ಹಂಗಂತ ಅದನ್ನು ಸಂಭಾಳಿಸೋದು ಸರಳ ಇಲ್ಲ. ಸರಕಾರ ಅಥವಾ ರಿಸರ್ವ ಬ್ಯಾಂಕಿನಂಥ ಕೇಂದ್ರ ಬ್ಯಾಂಕು ಬಡ್ಡಿ ದರ ಹೆಚ್ಚು ಮಾಡಿದರ ಸಾಲಗಳು ದುಬಾರಿಯಾಗಿ ಯಾರೂ ತೊಗೊಳ್ಳಲಾರದಂತಾಗಿ, ಅಥವಾ ತೊಗೊಂಡವರು ವಾಪಸು ಕೊಡಲಿಕ್ಕೆ ಆಗಲಾರದಂತಾಗಿ ವ್ಯಾಪಾರ -ವ್ಯವಹಾರಕ್ಕೆ ತೊಂದರೆ ಆಗಬಹುದು. ಬಡ್ಡಿ ದರ ಕಮ್ಮಿ ಮಾಡಿದರ ಹಣದುಬ್ಬರ ಹೆಚ್ಚಾಗಿ ಜನ ಏನನ್ನೂ ಖರೀದಿ ಮಾಡದಂಗಾಗಬಹುದು, ಮಾಡಿದರ ಅವರ ಉಳಿತಾಯ ಕರಗಬಹುದು.

ಈ ವರ್ಷ ಏನಾಗೇದಪಾ ಅಂದರ ಪ್ರವಾಹ- ಬರಗಾಲದಿಂದ ಕೃಷಿ ಉತ್ಪನ್ನ ಕಮ್ಮಿ ಆಗೇದ. ಇದರಿಂದ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗೇದ. ಇದು ಕೇಂದ್ರದ ಹೊಸ ಆಮದು ನೀತಿಯಿಂದ ಕಮ್ಮಿ ಆದರ, ಅಥವಾ ಆರ್ಥಿಕ ಬೆಳವಣಿಗೆ ಮುಂದಿನ ಎರಡು – ಮೂರು ತಿಂಗಳಲ್ಲಿ ಹೆಚ್ಚಿದರ ಜಡದುಬ್ಬರದ ಬರೋ ಸಾಧ್ಯತೆ ಕಮ್ಮಿ ಆಗಬಹುದು. ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರ ಮಂಡಳಿ ಅವರು ಈಗಿನ ಹಣದುಬ್ಬರ ಕಮ್ಮಿ ಆಗತದ ಅಂತ ಹೇಳ್ಯಾರ.

ದೇಶದ ವರಮಾನ ಅಷ್ಟೇ ಉಳದು ಅಥವಾ ಕಮ್ಮಿ ಆಗುವಾಗ ಖರ್ಚು ಜಾಸ್ತಿ ಆದಂಗನ, ಪ್ರತಿ ಗೃಹಸ್ಥನ ಪರಿಸ್ಥಿತಿನೂ ಆಗಬಹುದು. ಅವನ ನೌಕರಿಗೆ ಖತರಾ ಬಂದು, ಯಾವಾಗ ಕೆಲಸ ಕಳಕೋತೇನಿ ಅನ್ನುವ ಹೆದರಿಕೆಯೊಳಗ ಇರೋವಾಗ, ಅಥವಾ ಅವನಿಗ ವಾರ್ಷಿಕ ಬಡ್ತಿ ಸಿಗಲಾರದೇ, ಸಂಬಳ ಹೆಚ್ಚಾಗಲಾರದೇ ಇದ್ದು, ವಸ್ತುಗಳ ಬೆಲೆ ಜಾಸ್ತಿ ಆಗತಾ ಹೋದರ ಅವನು ಬರೇ ಊಟ, ಮನಿ ಬಾಡಗಿ, ಅರವಿ- ಅಂಚಡಿ, ಸಾಲಿ ಫೀಸು ಇಷ್ಟ ಖರ್ಚು ಮಾಡತಾ ಹೋದಾ ಅಂದರ ಅವನು ದೇಶದ ಆರ್ಥಿಕ ಪರಿಸ್ಥಿತಿಗೆ ಯಾವ ಕೊಡುಗೆ ಕೊಡಲಾರ.

ಹೊಸ ಬಂಡವಾಳ ದೇಶಕ್ಕೆ ಬರಲಾರದು, ಹೊಸ ಉದ್ಯೋಗ ಸೃಷ್ಟಿ ಆಗಲಾರವು. ಜನರ ಕೈಯೊಳಗ ದುಡ್ಡು ನಿಲ್ಲಂಗಿಲ್ಲ. ಜನ ಬ್ಯಾಂಕಿನೊಳಗ, ಷೇರು ಮಾರುಕಟ್ಟೆಯೊಳಗ ಉಳಿತಾಯ ಮಾಡಿದರ ಅದಕ್ಕ ಬೇಕಷ್ಟು ಬಡ್ಡಿ ಬರಂಗಿಲ್ಲ.

ಜಡದುಬ್ಬರವನ್ನ ಸರಕಾರಗಳು ಕಮ್ಮಿ ಮಾಡಲಿಕ್ಕೆ ಕ್ರಮ ಕೈಕೊಳ್ಳಬೇಕು. ಸರಿಯಾದ ನೀತಿ ಪಾಲಿಸಿ ಮತ್ತ ಬರಲಾರದ ಹಂಗ ನೋಡಿಕೊಳ್ಳಬೇಕು. ಇಲ್ಲದಿದ್ದರ ಅನೇಕ ವರ್ಷಗಳ ಬೆಳವಣಿಗಿ ಹೊಳಿಯೊಳಗ ಹುಣಸೀಹಣ್ಣು ತೊಳದಂಗ ಆಗಿ ಬಿಡತದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...