Homeಸಿನಿಮಾಕ್ರೀಡೆಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

ಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

- Advertisement -
- Advertisement -

ನಿನ್ನೆ ನಡೆದ 2019ರ ಐಸಿಸಿ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯದಲ್ಲಿ ಸೂಪರ್ ಒವರ್‍ನಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಜಯಿಸಿ ಚಾಂಪಿಯನ್ ಆಯಿತು. ಈ ಸೂಪರ್ ಓವರ್ ವಿರುದ್ಧ ಈಗ ಭಾರತದ ಆಟಗಾರರಾದ ಗೌತಮ್ ಗಂಭೀರ್, ರೋಹಿತ್ ಶರ್ಮಾ ಮತ್ತು ಯುವರಾಜ್ ಸಿಂಗ್ ಕಿಡಿಕಾರಿದ್ದು ಇದನ್ನು ಐಸಿಸಿ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ 241 ರನ್ ಗಳಿಸಿತ್ತು. ನಂತರ ಬ್ಯಾಟ್ ಮಾಡಿದ ಇಂಗ್ಲೆಂಡ್ ಕೂಡ 241 ರನ್ ಗೆ ಆಲೌಟ್ ಆಯ್ತು. ಆಗ ಪಂದ್ಯ ಟೈ ಆದ ಕಾರಣ ಸೂಪರ್ ಒವರ್ ಆಡಿಸಲಾಯಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 6 ಬಾಲ್‍ಗಳಲ್ಲಿ 15 ರನ್ ಗಳಿಸಿದರೆ ಆನಂತರ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಕೂಡ 6 ಬಾಲ್‍ಗಳಲ್ಲಿ 15 ರನ್ ಗಳಿಸಿತು. ಆದರೂ ಸೂಪರ್ ಓವರ್ ನಿಯಮದ ಪ್ರಕಾರ ಇಂಗ್ಲೆಂಡ್ ಗೆದ್ದು ಬೀಗಿತು.

ಇದರ ಕುರಿತು ಅಪಸ್ವರಗಳು ಜೋರಾಗಿಯೇ ಕೇಳಿಬಂದಿವೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ “ಹೆಚ್ಚು ಬೌಂಡರಿ ಗಳಿಸಿದ್ದವರು ಗೆದ್ದರು ಎಂಬ ಐಸಿಸಿಯ ಹಾಸ್ಯಸ್ಪದ ನಿಯಮದಿಂದ 2019ರ ವಿಶ್ವಕಪ್ ಫೈನಲ್ ಹೀಗಾಗಿದೆ. ನನ್ನ ಪ್ರಕಾರ ಇಬ್ಬರು ಗೆದ್ದಿದ್ದು, ಇಬ್ಬರನ್ನು ವಿಜಯಿ ಎಂದು ಘೋಷಿಸಬೇಕು. ಉಗುರು ಕಚ್ಚುವಂಟೆ ರೋಮಾಂಚನ ಆಟವಾಡಿದ ಎರಡು ತಂಡಗಳನ್ನು ನಾನು ಅಭಿನಂದಿಸುತ್ತೇನೆ. ಇಬ್ಬರೂ ಗೆದ್ದಿದ್ದಾರೆ ಎಂದಿದ್ದಾರೆ.

ಒಂದು ಹೆಜ್ಜೆ ಮುಂದೆ ಹೋಗಿರುವ ರೋಹಿತ್ ಶರ್ಮಾ “ಕ್ರಿಕೆಟ್‍ನ ಕೆಲ ನಿಯಮಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಇನ್ನು ಯುವರಾಜ್ ಸಿಂಗ್ “ಈ ನಿಯಮವನ್ನು ನಾನು ಖಂಡಿತ ಒಪ್ಪುವುದಿಲ್ಲ. ಆದರೆ ನಿಯಮ ಅಂದರೆ ನಿಯಮವೆ. ಹಾಗಾಗಿ ಕೊನೆಯದಾಗಿ ನಾನು ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡವನ್ನು ಅಭಿನಂದಿಸುತ್ತೇನೆ. ಆದರೆ ನನ್ನ ಹೃದಯ ಮಾತ್ರ ಕೊನೆಯವರೆಗೂ ದಿಟ್ಟವಾಗಿ ಹೋರಾಡಿದ ನ್ಯೂಜಿಲೆಂಡ್ ಪರವಾಗಿಯೇ ತುಡಿಯುತ್ತಿದೆ. ಗ್ರೇಟ್ ಗೇಮ್, ಎಪಿಕ್ ಫೈನಲ್” ಎಂದು ಟ್ವೀಟಿಸಿದ್ದಾರೆ.

ಸೂಪರ್ ಓವರ್ ನ ನಿಯಮಗಳೇನು?

ಯಾವುದೇ ಪಂದ್ಯದಲ್ಲಿ ಎರಡು ತಂಡಗಳ ರನ್ ಸಮನಾದರೆ ಅಂದರೆ ಟೈ ಆದರೆ ಅವರು ಎಷ್ಟೇ ವಿಕೆಟ್ ಕಳೆದುಕೊಂಡಿದ್ದರೂ ಸಹ ಅದನ್ನು ಪರಿಗಣಿಸದೇ, ಆಗ ಫಲಿತಾಂಶಕ್ಕಾಗಿ ಸೂಪರ್ ಓವರ್ ಅನ್ನು ಪರಿಚಯಿಸಲಾಯಿತು.

ಎರಡು ತಂಡಗಳಿಗೆ ಆಡಲು ಒಂದು ಓವರ್ (6 ಬಾಲ್) ಸಿಗುತ್ತದೆ. ಬಾಲ್ ಮಾಡಲು ಒಬ್ಬ ಬೌಲರ್‍ಗೆ ಅವಕಾಶವಿರುತ್ತದೆ.
ತಂಡದ ಹನ್ನೊಂದು ಜನರಲ್ಲಿ ಯಾರಾದರೂ ಮೂವರು ಬ್ಯಾಟ್ಸ್‍ಮನ್‍ಗಳಿಗೆ ಅವಕಾಶವಿರುತ್ತದೆ. 6 ಬಾಲ್‍ಗಳಿಗಿಂತ ಮೊದಲೇ ಇಬ್ಬರು ಬ್ಯಾಟ್ಸ್‍ಮನ್‍ಗಳು ಔಟಾದರೆ ಆ ತಂಡದ ಇನ್ನಿಂಗ್ಸ್ ಅಲ್ಲಿಗೆ ಮುಕ್ತಾಯವಾಗುತ್ತದೆ.

ಪಂದ್ಯದ ಕೊನೆಯ ಓವರ್‍ನಲ್ಲಿ ಯಾವ ಫೀಲ್ಡಿಂಗ್ ನಿರ್ಬಂಧವಿರುತ್ತದೆಯೇ ಸೂಪರ್ ಓವರ್‍ಗೂ ಅದೇ ಅನ್ವಯವಾಗುತ್ತದೆ.

ಪ್ರತಿ ಪಂದ್ಯದಂತೆ ಒಂದು ಡಿಆರ್‍ಎಸ್ ರಿವ್ಯೂ ತೆಗೆದುಕೊಳ್ಳಲು ಅವಕಾಶವಿರುತ್ತದೆ. ರಿವ್ಯೂ ಯಶಸ್ವಿಯಾಗದರೆ ಮುಂದುವರೆಯುತ್ತದೆ ಮತ್ತು ವಿಫಲವಾದರೆ ಮುಕ್ತಾಯವಾಗುತ್ತದೆ.

ಪಂದ್ಯದಲ್ಲಿ ಎರಡನೇಯದಾಗಿ ಬ್ಯಾಟಿಂಗ್ ಮಾಡಿದ ತಂಡ ಮೊದಲು ಬ್ಯಾಟ್ ಮಾಡುತ್ತದೆ. ಉಳಿದ ನಂತರ ಚೇಸಿಂಗ್ ಮಾಡಬೇಕು. ಯಾವ ತಂಡ ಹೆಚ್ಚು ರನ್ ಗಳಿಸಿರುತ್ತದೆಯೇ ಆ ತಂಡವನ್ನು ವಿಜಯೀ ಎಂದು ಪರಿಗಣಿಸಲಾಗುತ್ತದೆ.

ಒಂದು ವೇಳೆ ಸೂಪರ್ ಓವರ್‍ನಲ್ಲಿಯೂ ಎರಡೂ ತಂಡಗಳು ಸಮಾನ ರನ್ ಗಳಿಸಿದರೆ (ಟೈ ಆದರೆ) ಆಗ ಪಂದ್ಯದಲ್ಲಿ ಯಾವ ತಂಡ ಹೆಚ್ಚು ಬೌಂಡರಿಗಳನ್ನು ಗಳಿಸುತ್ತದೆಯೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಮೊನ್ನೆಯ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿಯೂ ಹೀಗೆಯೇ ಆಯಿತು. ಸೂಪರ್ ಓವರ್‍ನಲ್ಲಿ ಇಂಗ್ಲೆಂಡ್ 15 ರನ್ ಗಳಿಸಿದರೆ, ನ್ಯೂಜಿಲೆಂಡ್ ಕೂಡ ಅಷ್ಟೇ ರನ್ ಗಳಿಸಿತು. ಆದರೆ ಬೌಂಡರಿಗಳ ಲೆಕ್ಕ ತೆಗೆದುಕೊಂಡರೆ ಇಂಗ್ಲೆಂಡ್ ಒಟ್ಟು 26(ಮುಖ್ಯ ಪಂದ್ಯದಲ್ಲಿ 24, ಸೂಪರ್ ಓವರ್‍ನಲ್ಲಿ 2) ಬೌಂಡರಿಗಳನ್ನು ಬಾರಿಸಿದರೆ ನ್ಯೂಜಿಲೆಂಡ್ 17 (ಮುಖ್ಯ ಪಂದ್ಯದಲ್ಲಿ 16, ಸೂಪರ್ ಓವರ್‍ನಲ್ಲಿ 1) ಮಾತ್ರ ಗಳಿಸಿತ್ತು. ಹಾಗಾಗಿ ಇಂಗ್ಲೆಂಡ್ ವಿಜಯಿಯಾಯಿತು.

ಒಂದು ವೇಳೆ ಆಗಲೂ ಎರಡು ತಂಡಗಳು ಸಮಾನ ಬೌಂಡರಿಗಳನ್ನು ಗಳಿಸಿದರೆ ಸೂಪರ್ ಓವರ್ ಅನ್ನು ಹೊರತುಪಡಿಸಿ ಮುಖ್ಯ ಪಂದ್ಯದಲ್ಲಿ ಯಾರು ಹೆಚ್ಚು ಬೌಂಡರಿಗಳನ್ನು ಗಳಿಸಿರುತ್ತಾರೋ (ಸೂಪರ್ ಓವರ್ ಹೊರತುಪಡಿಸಿ) ಅದನ್ನು ವಿಜಯಿ ಎಂದು ಪರಿಗಣಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...