Homeಸಿನಿಮಾಕ್ರೀಡೆಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

ಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

- Advertisement -
- Advertisement -

ನಿನ್ನೆ ನಡೆದ 2019ರ ಐಸಿಸಿ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯದಲ್ಲಿ ಸೂಪರ್ ಒವರ್‍ನಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಜಯಿಸಿ ಚಾಂಪಿಯನ್ ಆಯಿತು. ಈ ಸೂಪರ್ ಓವರ್ ವಿರುದ್ಧ ಈಗ ಭಾರತದ ಆಟಗಾರರಾದ ಗೌತಮ್ ಗಂಭೀರ್, ರೋಹಿತ್ ಶರ್ಮಾ ಮತ್ತು ಯುವರಾಜ್ ಸಿಂಗ್ ಕಿಡಿಕಾರಿದ್ದು ಇದನ್ನು ಐಸಿಸಿ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ 241 ರನ್ ಗಳಿಸಿತ್ತು. ನಂತರ ಬ್ಯಾಟ್ ಮಾಡಿದ ಇಂಗ್ಲೆಂಡ್ ಕೂಡ 241 ರನ್ ಗೆ ಆಲೌಟ್ ಆಯ್ತು. ಆಗ ಪಂದ್ಯ ಟೈ ಆದ ಕಾರಣ ಸೂಪರ್ ಒವರ್ ಆಡಿಸಲಾಯಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 6 ಬಾಲ್‍ಗಳಲ್ಲಿ 15 ರನ್ ಗಳಿಸಿದರೆ ಆನಂತರ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಕೂಡ 6 ಬಾಲ್‍ಗಳಲ್ಲಿ 15 ರನ್ ಗಳಿಸಿತು. ಆದರೂ ಸೂಪರ್ ಓವರ್ ನಿಯಮದ ಪ್ರಕಾರ ಇಂಗ್ಲೆಂಡ್ ಗೆದ್ದು ಬೀಗಿತು.

ಇದರ ಕುರಿತು ಅಪಸ್ವರಗಳು ಜೋರಾಗಿಯೇ ಕೇಳಿಬಂದಿವೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ “ಹೆಚ್ಚು ಬೌಂಡರಿ ಗಳಿಸಿದ್ದವರು ಗೆದ್ದರು ಎಂಬ ಐಸಿಸಿಯ ಹಾಸ್ಯಸ್ಪದ ನಿಯಮದಿಂದ 2019ರ ವಿಶ್ವಕಪ್ ಫೈನಲ್ ಹೀಗಾಗಿದೆ. ನನ್ನ ಪ್ರಕಾರ ಇಬ್ಬರು ಗೆದ್ದಿದ್ದು, ಇಬ್ಬರನ್ನು ವಿಜಯಿ ಎಂದು ಘೋಷಿಸಬೇಕು. ಉಗುರು ಕಚ್ಚುವಂಟೆ ರೋಮಾಂಚನ ಆಟವಾಡಿದ ಎರಡು ತಂಡಗಳನ್ನು ನಾನು ಅಭಿನಂದಿಸುತ್ತೇನೆ. ಇಬ್ಬರೂ ಗೆದ್ದಿದ್ದಾರೆ ಎಂದಿದ್ದಾರೆ.

ಒಂದು ಹೆಜ್ಜೆ ಮುಂದೆ ಹೋಗಿರುವ ರೋಹಿತ್ ಶರ್ಮಾ “ಕ್ರಿಕೆಟ್‍ನ ಕೆಲ ನಿಯಮಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಇನ್ನು ಯುವರಾಜ್ ಸಿಂಗ್ “ಈ ನಿಯಮವನ್ನು ನಾನು ಖಂಡಿತ ಒಪ್ಪುವುದಿಲ್ಲ. ಆದರೆ ನಿಯಮ ಅಂದರೆ ನಿಯಮವೆ. ಹಾಗಾಗಿ ಕೊನೆಯದಾಗಿ ನಾನು ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡವನ್ನು ಅಭಿನಂದಿಸುತ್ತೇನೆ. ಆದರೆ ನನ್ನ ಹೃದಯ ಮಾತ್ರ ಕೊನೆಯವರೆಗೂ ದಿಟ್ಟವಾಗಿ ಹೋರಾಡಿದ ನ್ಯೂಜಿಲೆಂಡ್ ಪರವಾಗಿಯೇ ತುಡಿಯುತ್ತಿದೆ. ಗ್ರೇಟ್ ಗೇಮ್, ಎಪಿಕ್ ಫೈನಲ್” ಎಂದು ಟ್ವೀಟಿಸಿದ್ದಾರೆ.

ಸೂಪರ್ ಓವರ್ ನ ನಿಯಮಗಳೇನು?

ಯಾವುದೇ ಪಂದ್ಯದಲ್ಲಿ ಎರಡು ತಂಡಗಳ ರನ್ ಸಮನಾದರೆ ಅಂದರೆ ಟೈ ಆದರೆ ಅವರು ಎಷ್ಟೇ ವಿಕೆಟ್ ಕಳೆದುಕೊಂಡಿದ್ದರೂ ಸಹ ಅದನ್ನು ಪರಿಗಣಿಸದೇ, ಆಗ ಫಲಿತಾಂಶಕ್ಕಾಗಿ ಸೂಪರ್ ಓವರ್ ಅನ್ನು ಪರಿಚಯಿಸಲಾಯಿತು.

ಎರಡು ತಂಡಗಳಿಗೆ ಆಡಲು ಒಂದು ಓವರ್ (6 ಬಾಲ್) ಸಿಗುತ್ತದೆ. ಬಾಲ್ ಮಾಡಲು ಒಬ್ಬ ಬೌಲರ್‍ಗೆ ಅವಕಾಶವಿರುತ್ತದೆ.
ತಂಡದ ಹನ್ನೊಂದು ಜನರಲ್ಲಿ ಯಾರಾದರೂ ಮೂವರು ಬ್ಯಾಟ್ಸ್‍ಮನ್‍ಗಳಿಗೆ ಅವಕಾಶವಿರುತ್ತದೆ. 6 ಬಾಲ್‍ಗಳಿಗಿಂತ ಮೊದಲೇ ಇಬ್ಬರು ಬ್ಯಾಟ್ಸ್‍ಮನ್‍ಗಳು ಔಟಾದರೆ ಆ ತಂಡದ ಇನ್ನಿಂಗ್ಸ್ ಅಲ್ಲಿಗೆ ಮುಕ್ತಾಯವಾಗುತ್ತದೆ.

ಪಂದ್ಯದ ಕೊನೆಯ ಓವರ್‍ನಲ್ಲಿ ಯಾವ ಫೀಲ್ಡಿಂಗ್ ನಿರ್ಬಂಧವಿರುತ್ತದೆಯೇ ಸೂಪರ್ ಓವರ್‍ಗೂ ಅದೇ ಅನ್ವಯವಾಗುತ್ತದೆ.

ಪ್ರತಿ ಪಂದ್ಯದಂತೆ ಒಂದು ಡಿಆರ್‍ಎಸ್ ರಿವ್ಯೂ ತೆಗೆದುಕೊಳ್ಳಲು ಅವಕಾಶವಿರುತ್ತದೆ. ರಿವ್ಯೂ ಯಶಸ್ವಿಯಾಗದರೆ ಮುಂದುವರೆಯುತ್ತದೆ ಮತ್ತು ವಿಫಲವಾದರೆ ಮುಕ್ತಾಯವಾಗುತ್ತದೆ.

ಪಂದ್ಯದಲ್ಲಿ ಎರಡನೇಯದಾಗಿ ಬ್ಯಾಟಿಂಗ್ ಮಾಡಿದ ತಂಡ ಮೊದಲು ಬ್ಯಾಟ್ ಮಾಡುತ್ತದೆ. ಉಳಿದ ನಂತರ ಚೇಸಿಂಗ್ ಮಾಡಬೇಕು. ಯಾವ ತಂಡ ಹೆಚ್ಚು ರನ್ ಗಳಿಸಿರುತ್ತದೆಯೇ ಆ ತಂಡವನ್ನು ವಿಜಯೀ ಎಂದು ಪರಿಗಣಿಸಲಾಗುತ್ತದೆ.

ಒಂದು ವೇಳೆ ಸೂಪರ್ ಓವರ್‍ನಲ್ಲಿಯೂ ಎರಡೂ ತಂಡಗಳು ಸಮಾನ ರನ್ ಗಳಿಸಿದರೆ (ಟೈ ಆದರೆ) ಆಗ ಪಂದ್ಯದಲ್ಲಿ ಯಾವ ತಂಡ ಹೆಚ್ಚು ಬೌಂಡರಿಗಳನ್ನು ಗಳಿಸುತ್ತದೆಯೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಮೊನ್ನೆಯ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿಯೂ ಹೀಗೆಯೇ ಆಯಿತು. ಸೂಪರ್ ಓವರ್‍ನಲ್ಲಿ ಇಂಗ್ಲೆಂಡ್ 15 ರನ್ ಗಳಿಸಿದರೆ, ನ್ಯೂಜಿಲೆಂಡ್ ಕೂಡ ಅಷ್ಟೇ ರನ್ ಗಳಿಸಿತು. ಆದರೆ ಬೌಂಡರಿಗಳ ಲೆಕ್ಕ ತೆಗೆದುಕೊಂಡರೆ ಇಂಗ್ಲೆಂಡ್ ಒಟ್ಟು 26(ಮುಖ್ಯ ಪಂದ್ಯದಲ್ಲಿ 24, ಸೂಪರ್ ಓವರ್‍ನಲ್ಲಿ 2) ಬೌಂಡರಿಗಳನ್ನು ಬಾರಿಸಿದರೆ ನ್ಯೂಜಿಲೆಂಡ್ 17 (ಮುಖ್ಯ ಪಂದ್ಯದಲ್ಲಿ 16, ಸೂಪರ್ ಓವರ್‍ನಲ್ಲಿ 1) ಮಾತ್ರ ಗಳಿಸಿತ್ತು. ಹಾಗಾಗಿ ಇಂಗ್ಲೆಂಡ್ ವಿಜಯಿಯಾಯಿತು.

ಒಂದು ವೇಳೆ ಆಗಲೂ ಎರಡು ತಂಡಗಳು ಸಮಾನ ಬೌಂಡರಿಗಳನ್ನು ಗಳಿಸಿದರೆ ಸೂಪರ್ ಓವರ್ ಅನ್ನು ಹೊರತುಪಡಿಸಿ ಮುಖ್ಯ ಪಂದ್ಯದಲ್ಲಿ ಯಾರು ಹೆಚ್ಚು ಬೌಂಡರಿಗಳನ್ನು ಗಳಿಸಿರುತ್ತಾರೋ (ಸೂಪರ್ ಓವರ್ ಹೊರತುಪಡಿಸಿ) ಅದನ್ನು ವಿಜಯಿ ಎಂದು ಪರಿಗಣಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...