Homeಸಿನಿಮಾಕ್ರೀಡೆಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

ಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

- Advertisement -
- Advertisement -

ನಿನ್ನೆ ನಡೆದ 2019ರ ಐಸಿಸಿ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯದಲ್ಲಿ ಸೂಪರ್ ಒವರ್‍ನಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಜಯಿಸಿ ಚಾಂಪಿಯನ್ ಆಯಿತು. ಈ ಸೂಪರ್ ಓವರ್ ವಿರುದ್ಧ ಈಗ ಭಾರತದ ಆಟಗಾರರಾದ ಗೌತಮ್ ಗಂಭೀರ್, ರೋಹಿತ್ ಶರ್ಮಾ ಮತ್ತು ಯುವರಾಜ್ ಸಿಂಗ್ ಕಿಡಿಕಾರಿದ್ದು ಇದನ್ನು ಐಸಿಸಿ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ 241 ರನ್ ಗಳಿಸಿತ್ತು. ನಂತರ ಬ್ಯಾಟ್ ಮಾಡಿದ ಇಂಗ್ಲೆಂಡ್ ಕೂಡ 241 ರನ್ ಗೆ ಆಲೌಟ್ ಆಯ್ತು. ಆಗ ಪಂದ್ಯ ಟೈ ಆದ ಕಾರಣ ಸೂಪರ್ ಒವರ್ ಆಡಿಸಲಾಯಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 6 ಬಾಲ್‍ಗಳಲ್ಲಿ 15 ರನ್ ಗಳಿಸಿದರೆ ಆನಂತರ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಕೂಡ 6 ಬಾಲ್‍ಗಳಲ್ಲಿ 15 ರನ್ ಗಳಿಸಿತು. ಆದರೂ ಸೂಪರ್ ಓವರ್ ನಿಯಮದ ಪ್ರಕಾರ ಇಂಗ್ಲೆಂಡ್ ಗೆದ್ದು ಬೀಗಿತು.

ಇದರ ಕುರಿತು ಅಪಸ್ವರಗಳು ಜೋರಾಗಿಯೇ ಕೇಳಿಬಂದಿವೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ “ಹೆಚ್ಚು ಬೌಂಡರಿ ಗಳಿಸಿದ್ದವರು ಗೆದ್ದರು ಎಂಬ ಐಸಿಸಿಯ ಹಾಸ್ಯಸ್ಪದ ನಿಯಮದಿಂದ 2019ರ ವಿಶ್ವಕಪ್ ಫೈನಲ್ ಹೀಗಾಗಿದೆ. ನನ್ನ ಪ್ರಕಾರ ಇಬ್ಬರು ಗೆದ್ದಿದ್ದು, ಇಬ್ಬರನ್ನು ವಿಜಯಿ ಎಂದು ಘೋಷಿಸಬೇಕು. ಉಗುರು ಕಚ್ಚುವಂಟೆ ರೋಮಾಂಚನ ಆಟವಾಡಿದ ಎರಡು ತಂಡಗಳನ್ನು ನಾನು ಅಭಿನಂದಿಸುತ್ತೇನೆ. ಇಬ್ಬರೂ ಗೆದ್ದಿದ್ದಾರೆ ಎಂದಿದ್ದಾರೆ.

ಒಂದು ಹೆಜ್ಜೆ ಮುಂದೆ ಹೋಗಿರುವ ರೋಹಿತ್ ಶರ್ಮಾ “ಕ್ರಿಕೆಟ್‍ನ ಕೆಲ ನಿಯಮಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಇನ್ನು ಯುವರಾಜ್ ಸಿಂಗ್ “ಈ ನಿಯಮವನ್ನು ನಾನು ಖಂಡಿತ ಒಪ್ಪುವುದಿಲ್ಲ. ಆದರೆ ನಿಯಮ ಅಂದರೆ ನಿಯಮವೆ. ಹಾಗಾಗಿ ಕೊನೆಯದಾಗಿ ನಾನು ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡವನ್ನು ಅಭಿನಂದಿಸುತ್ತೇನೆ. ಆದರೆ ನನ್ನ ಹೃದಯ ಮಾತ್ರ ಕೊನೆಯವರೆಗೂ ದಿಟ್ಟವಾಗಿ ಹೋರಾಡಿದ ನ್ಯೂಜಿಲೆಂಡ್ ಪರವಾಗಿಯೇ ತುಡಿಯುತ್ತಿದೆ. ಗ್ರೇಟ್ ಗೇಮ್, ಎಪಿಕ್ ಫೈನಲ್” ಎಂದು ಟ್ವೀಟಿಸಿದ್ದಾರೆ.

ಸೂಪರ್ ಓವರ್ ನ ನಿಯಮಗಳೇನು?

ಯಾವುದೇ ಪಂದ್ಯದಲ್ಲಿ ಎರಡು ತಂಡಗಳ ರನ್ ಸಮನಾದರೆ ಅಂದರೆ ಟೈ ಆದರೆ ಅವರು ಎಷ್ಟೇ ವಿಕೆಟ್ ಕಳೆದುಕೊಂಡಿದ್ದರೂ ಸಹ ಅದನ್ನು ಪರಿಗಣಿಸದೇ, ಆಗ ಫಲಿತಾಂಶಕ್ಕಾಗಿ ಸೂಪರ್ ಓವರ್ ಅನ್ನು ಪರಿಚಯಿಸಲಾಯಿತು.

ಎರಡು ತಂಡಗಳಿಗೆ ಆಡಲು ಒಂದು ಓವರ್ (6 ಬಾಲ್) ಸಿಗುತ್ತದೆ. ಬಾಲ್ ಮಾಡಲು ಒಬ್ಬ ಬೌಲರ್‍ಗೆ ಅವಕಾಶವಿರುತ್ತದೆ.
ತಂಡದ ಹನ್ನೊಂದು ಜನರಲ್ಲಿ ಯಾರಾದರೂ ಮೂವರು ಬ್ಯಾಟ್ಸ್‍ಮನ್‍ಗಳಿಗೆ ಅವಕಾಶವಿರುತ್ತದೆ. 6 ಬಾಲ್‍ಗಳಿಗಿಂತ ಮೊದಲೇ ಇಬ್ಬರು ಬ್ಯಾಟ್ಸ್‍ಮನ್‍ಗಳು ಔಟಾದರೆ ಆ ತಂಡದ ಇನ್ನಿಂಗ್ಸ್ ಅಲ್ಲಿಗೆ ಮುಕ್ತಾಯವಾಗುತ್ತದೆ.

ಪಂದ್ಯದ ಕೊನೆಯ ಓವರ್‍ನಲ್ಲಿ ಯಾವ ಫೀಲ್ಡಿಂಗ್ ನಿರ್ಬಂಧವಿರುತ್ತದೆಯೇ ಸೂಪರ್ ಓವರ್‍ಗೂ ಅದೇ ಅನ್ವಯವಾಗುತ್ತದೆ.

ಪ್ರತಿ ಪಂದ್ಯದಂತೆ ಒಂದು ಡಿಆರ್‍ಎಸ್ ರಿವ್ಯೂ ತೆಗೆದುಕೊಳ್ಳಲು ಅವಕಾಶವಿರುತ್ತದೆ. ರಿವ್ಯೂ ಯಶಸ್ವಿಯಾಗದರೆ ಮುಂದುವರೆಯುತ್ತದೆ ಮತ್ತು ವಿಫಲವಾದರೆ ಮುಕ್ತಾಯವಾಗುತ್ತದೆ.

ಪಂದ್ಯದಲ್ಲಿ ಎರಡನೇಯದಾಗಿ ಬ್ಯಾಟಿಂಗ್ ಮಾಡಿದ ತಂಡ ಮೊದಲು ಬ್ಯಾಟ್ ಮಾಡುತ್ತದೆ. ಉಳಿದ ನಂತರ ಚೇಸಿಂಗ್ ಮಾಡಬೇಕು. ಯಾವ ತಂಡ ಹೆಚ್ಚು ರನ್ ಗಳಿಸಿರುತ್ತದೆಯೇ ಆ ತಂಡವನ್ನು ವಿಜಯೀ ಎಂದು ಪರಿಗಣಿಸಲಾಗುತ್ತದೆ.

ಒಂದು ವೇಳೆ ಸೂಪರ್ ಓವರ್‍ನಲ್ಲಿಯೂ ಎರಡೂ ತಂಡಗಳು ಸಮಾನ ರನ್ ಗಳಿಸಿದರೆ (ಟೈ ಆದರೆ) ಆಗ ಪಂದ್ಯದಲ್ಲಿ ಯಾವ ತಂಡ ಹೆಚ್ಚು ಬೌಂಡರಿಗಳನ್ನು ಗಳಿಸುತ್ತದೆಯೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಮೊನ್ನೆಯ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿಯೂ ಹೀಗೆಯೇ ಆಯಿತು. ಸೂಪರ್ ಓವರ್‍ನಲ್ಲಿ ಇಂಗ್ಲೆಂಡ್ 15 ರನ್ ಗಳಿಸಿದರೆ, ನ್ಯೂಜಿಲೆಂಡ್ ಕೂಡ ಅಷ್ಟೇ ರನ್ ಗಳಿಸಿತು. ಆದರೆ ಬೌಂಡರಿಗಳ ಲೆಕ್ಕ ತೆಗೆದುಕೊಂಡರೆ ಇಂಗ್ಲೆಂಡ್ ಒಟ್ಟು 26(ಮುಖ್ಯ ಪಂದ್ಯದಲ್ಲಿ 24, ಸೂಪರ್ ಓವರ್‍ನಲ್ಲಿ 2) ಬೌಂಡರಿಗಳನ್ನು ಬಾರಿಸಿದರೆ ನ್ಯೂಜಿಲೆಂಡ್ 17 (ಮುಖ್ಯ ಪಂದ್ಯದಲ್ಲಿ 16, ಸೂಪರ್ ಓವರ್‍ನಲ್ಲಿ 1) ಮಾತ್ರ ಗಳಿಸಿತ್ತು. ಹಾಗಾಗಿ ಇಂಗ್ಲೆಂಡ್ ವಿಜಯಿಯಾಯಿತು.

ಒಂದು ವೇಳೆ ಆಗಲೂ ಎರಡು ತಂಡಗಳು ಸಮಾನ ಬೌಂಡರಿಗಳನ್ನು ಗಳಿಸಿದರೆ ಸೂಪರ್ ಓವರ್ ಅನ್ನು ಹೊರತುಪಡಿಸಿ ಮುಖ್ಯ ಪಂದ್ಯದಲ್ಲಿ ಯಾರು ಹೆಚ್ಚು ಬೌಂಡರಿಗಳನ್ನು ಗಳಿಸಿರುತ್ತಾರೋ (ಸೂಪರ್ ಓವರ್ ಹೊರತುಪಡಿಸಿ) ಅದನ್ನು ವಿಜಯಿ ಎಂದು ಪರಿಗಣಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...