Homeಸಿನಿಮಾಕ್ರೀಡೆಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

ಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

- Advertisement -
- Advertisement -

ನಿನ್ನೆ ನಡೆದ 2019ರ ಐಸಿಸಿ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯದಲ್ಲಿ ಸೂಪರ್ ಒವರ್‍ನಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಜಯಿಸಿ ಚಾಂಪಿಯನ್ ಆಯಿತು. ಈ ಸೂಪರ್ ಓವರ್ ವಿರುದ್ಧ ಈಗ ಭಾರತದ ಆಟಗಾರರಾದ ಗೌತಮ್ ಗಂಭೀರ್, ರೋಹಿತ್ ಶರ್ಮಾ ಮತ್ತು ಯುವರಾಜ್ ಸಿಂಗ್ ಕಿಡಿಕಾರಿದ್ದು ಇದನ್ನು ಐಸಿಸಿ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ 241 ರನ್ ಗಳಿಸಿತ್ತು. ನಂತರ ಬ್ಯಾಟ್ ಮಾಡಿದ ಇಂಗ್ಲೆಂಡ್ ಕೂಡ 241 ರನ್ ಗೆ ಆಲೌಟ್ ಆಯ್ತು. ಆಗ ಪಂದ್ಯ ಟೈ ಆದ ಕಾರಣ ಸೂಪರ್ ಒವರ್ ಆಡಿಸಲಾಯಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 6 ಬಾಲ್‍ಗಳಲ್ಲಿ 15 ರನ್ ಗಳಿಸಿದರೆ ಆನಂತರ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಕೂಡ 6 ಬಾಲ್‍ಗಳಲ್ಲಿ 15 ರನ್ ಗಳಿಸಿತು. ಆದರೂ ಸೂಪರ್ ಓವರ್ ನಿಯಮದ ಪ್ರಕಾರ ಇಂಗ್ಲೆಂಡ್ ಗೆದ್ದು ಬೀಗಿತು.

ಇದರ ಕುರಿತು ಅಪಸ್ವರಗಳು ಜೋರಾಗಿಯೇ ಕೇಳಿಬಂದಿವೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ “ಹೆಚ್ಚು ಬೌಂಡರಿ ಗಳಿಸಿದ್ದವರು ಗೆದ್ದರು ಎಂಬ ಐಸಿಸಿಯ ಹಾಸ್ಯಸ್ಪದ ನಿಯಮದಿಂದ 2019ರ ವಿಶ್ವಕಪ್ ಫೈನಲ್ ಹೀಗಾಗಿದೆ. ನನ್ನ ಪ್ರಕಾರ ಇಬ್ಬರು ಗೆದ್ದಿದ್ದು, ಇಬ್ಬರನ್ನು ವಿಜಯಿ ಎಂದು ಘೋಷಿಸಬೇಕು. ಉಗುರು ಕಚ್ಚುವಂಟೆ ರೋಮಾಂಚನ ಆಟವಾಡಿದ ಎರಡು ತಂಡಗಳನ್ನು ನಾನು ಅಭಿನಂದಿಸುತ್ತೇನೆ. ಇಬ್ಬರೂ ಗೆದ್ದಿದ್ದಾರೆ ಎಂದಿದ್ದಾರೆ.

ಒಂದು ಹೆಜ್ಜೆ ಮುಂದೆ ಹೋಗಿರುವ ರೋಹಿತ್ ಶರ್ಮಾ “ಕ್ರಿಕೆಟ್‍ನ ಕೆಲ ನಿಯಮಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಇನ್ನು ಯುವರಾಜ್ ಸಿಂಗ್ “ಈ ನಿಯಮವನ್ನು ನಾನು ಖಂಡಿತ ಒಪ್ಪುವುದಿಲ್ಲ. ಆದರೆ ನಿಯಮ ಅಂದರೆ ನಿಯಮವೆ. ಹಾಗಾಗಿ ಕೊನೆಯದಾಗಿ ನಾನು ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡವನ್ನು ಅಭಿನಂದಿಸುತ್ತೇನೆ. ಆದರೆ ನನ್ನ ಹೃದಯ ಮಾತ್ರ ಕೊನೆಯವರೆಗೂ ದಿಟ್ಟವಾಗಿ ಹೋರಾಡಿದ ನ್ಯೂಜಿಲೆಂಡ್ ಪರವಾಗಿಯೇ ತುಡಿಯುತ್ತಿದೆ. ಗ್ರೇಟ್ ಗೇಮ್, ಎಪಿಕ್ ಫೈನಲ್” ಎಂದು ಟ್ವೀಟಿಸಿದ್ದಾರೆ.

ಸೂಪರ್ ಓವರ್ ನ ನಿಯಮಗಳೇನು?

ಯಾವುದೇ ಪಂದ್ಯದಲ್ಲಿ ಎರಡು ತಂಡಗಳ ರನ್ ಸಮನಾದರೆ ಅಂದರೆ ಟೈ ಆದರೆ ಅವರು ಎಷ್ಟೇ ವಿಕೆಟ್ ಕಳೆದುಕೊಂಡಿದ್ದರೂ ಸಹ ಅದನ್ನು ಪರಿಗಣಿಸದೇ, ಆಗ ಫಲಿತಾಂಶಕ್ಕಾಗಿ ಸೂಪರ್ ಓವರ್ ಅನ್ನು ಪರಿಚಯಿಸಲಾಯಿತು.

ಎರಡು ತಂಡಗಳಿಗೆ ಆಡಲು ಒಂದು ಓವರ್ (6 ಬಾಲ್) ಸಿಗುತ್ತದೆ. ಬಾಲ್ ಮಾಡಲು ಒಬ್ಬ ಬೌಲರ್‍ಗೆ ಅವಕಾಶವಿರುತ್ತದೆ.
ತಂಡದ ಹನ್ನೊಂದು ಜನರಲ್ಲಿ ಯಾರಾದರೂ ಮೂವರು ಬ್ಯಾಟ್ಸ್‍ಮನ್‍ಗಳಿಗೆ ಅವಕಾಶವಿರುತ್ತದೆ. 6 ಬಾಲ್‍ಗಳಿಗಿಂತ ಮೊದಲೇ ಇಬ್ಬರು ಬ್ಯಾಟ್ಸ್‍ಮನ್‍ಗಳು ಔಟಾದರೆ ಆ ತಂಡದ ಇನ್ನಿಂಗ್ಸ್ ಅಲ್ಲಿಗೆ ಮುಕ್ತಾಯವಾಗುತ್ತದೆ.

ಪಂದ್ಯದ ಕೊನೆಯ ಓವರ್‍ನಲ್ಲಿ ಯಾವ ಫೀಲ್ಡಿಂಗ್ ನಿರ್ಬಂಧವಿರುತ್ತದೆಯೇ ಸೂಪರ್ ಓವರ್‍ಗೂ ಅದೇ ಅನ್ವಯವಾಗುತ್ತದೆ.

ಪ್ರತಿ ಪಂದ್ಯದಂತೆ ಒಂದು ಡಿಆರ್‍ಎಸ್ ರಿವ್ಯೂ ತೆಗೆದುಕೊಳ್ಳಲು ಅವಕಾಶವಿರುತ್ತದೆ. ರಿವ್ಯೂ ಯಶಸ್ವಿಯಾಗದರೆ ಮುಂದುವರೆಯುತ್ತದೆ ಮತ್ತು ವಿಫಲವಾದರೆ ಮುಕ್ತಾಯವಾಗುತ್ತದೆ.

ಪಂದ್ಯದಲ್ಲಿ ಎರಡನೇಯದಾಗಿ ಬ್ಯಾಟಿಂಗ್ ಮಾಡಿದ ತಂಡ ಮೊದಲು ಬ್ಯಾಟ್ ಮಾಡುತ್ತದೆ. ಉಳಿದ ನಂತರ ಚೇಸಿಂಗ್ ಮಾಡಬೇಕು. ಯಾವ ತಂಡ ಹೆಚ್ಚು ರನ್ ಗಳಿಸಿರುತ್ತದೆಯೇ ಆ ತಂಡವನ್ನು ವಿಜಯೀ ಎಂದು ಪರಿಗಣಿಸಲಾಗುತ್ತದೆ.

ಒಂದು ವೇಳೆ ಸೂಪರ್ ಓವರ್‍ನಲ್ಲಿಯೂ ಎರಡೂ ತಂಡಗಳು ಸಮಾನ ರನ್ ಗಳಿಸಿದರೆ (ಟೈ ಆದರೆ) ಆಗ ಪಂದ್ಯದಲ್ಲಿ ಯಾವ ತಂಡ ಹೆಚ್ಚು ಬೌಂಡರಿಗಳನ್ನು ಗಳಿಸುತ್ತದೆಯೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಮೊನ್ನೆಯ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿಯೂ ಹೀಗೆಯೇ ಆಯಿತು. ಸೂಪರ್ ಓವರ್‍ನಲ್ಲಿ ಇಂಗ್ಲೆಂಡ್ 15 ರನ್ ಗಳಿಸಿದರೆ, ನ್ಯೂಜಿಲೆಂಡ್ ಕೂಡ ಅಷ್ಟೇ ರನ್ ಗಳಿಸಿತು. ಆದರೆ ಬೌಂಡರಿಗಳ ಲೆಕ್ಕ ತೆಗೆದುಕೊಂಡರೆ ಇಂಗ್ಲೆಂಡ್ ಒಟ್ಟು 26(ಮುಖ್ಯ ಪಂದ್ಯದಲ್ಲಿ 24, ಸೂಪರ್ ಓವರ್‍ನಲ್ಲಿ 2) ಬೌಂಡರಿಗಳನ್ನು ಬಾರಿಸಿದರೆ ನ್ಯೂಜಿಲೆಂಡ್ 17 (ಮುಖ್ಯ ಪಂದ್ಯದಲ್ಲಿ 16, ಸೂಪರ್ ಓವರ್‍ನಲ್ಲಿ 1) ಮಾತ್ರ ಗಳಿಸಿತ್ತು. ಹಾಗಾಗಿ ಇಂಗ್ಲೆಂಡ್ ವಿಜಯಿಯಾಯಿತು.

ಒಂದು ವೇಳೆ ಆಗಲೂ ಎರಡು ತಂಡಗಳು ಸಮಾನ ಬೌಂಡರಿಗಳನ್ನು ಗಳಿಸಿದರೆ ಸೂಪರ್ ಓವರ್ ಅನ್ನು ಹೊರತುಪಡಿಸಿ ಮುಖ್ಯ ಪಂದ್ಯದಲ್ಲಿ ಯಾರು ಹೆಚ್ಚು ಬೌಂಡರಿಗಳನ್ನು ಗಳಿಸಿರುತ್ತಾರೋ (ಸೂಪರ್ ಓವರ್ ಹೊರತುಪಡಿಸಿ) ಅದನ್ನು ವಿಜಯಿ ಎಂದು ಪರಿಗಣಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...