Homeಸಿನಿಮಾಕ್ರೀಡೆಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

ಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

- Advertisement -
- Advertisement -

ನಿನ್ನೆ ನಡೆದ 2019ರ ಐಸಿಸಿ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯದಲ್ಲಿ ಸೂಪರ್ ಒವರ್‍ನಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಜಯಿಸಿ ಚಾಂಪಿಯನ್ ಆಯಿತು. ಈ ಸೂಪರ್ ಓವರ್ ವಿರುದ್ಧ ಈಗ ಭಾರತದ ಆಟಗಾರರಾದ ಗೌತಮ್ ಗಂಭೀರ್, ರೋಹಿತ್ ಶರ್ಮಾ ಮತ್ತು ಯುವರಾಜ್ ಸಿಂಗ್ ಕಿಡಿಕಾರಿದ್ದು ಇದನ್ನು ಐಸಿಸಿ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ 241 ರನ್ ಗಳಿಸಿತ್ತು. ನಂತರ ಬ್ಯಾಟ್ ಮಾಡಿದ ಇಂಗ್ಲೆಂಡ್ ಕೂಡ 241 ರನ್ ಗೆ ಆಲೌಟ್ ಆಯ್ತು. ಆಗ ಪಂದ್ಯ ಟೈ ಆದ ಕಾರಣ ಸೂಪರ್ ಒವರ್ ಆಡಿಸಲಾಯಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 6 ಬಾಲ್‍ಗಳಲ್ಲಿ 15 ರನ್ ಗಳಿಸಿದರೆ ಆನಂತರ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಕೂಡ 6 ಬಾಲ್‍ಗಳಲ್ಲಿ 15 ರನ್ ಗಳಿಸಿತು. ಆದರೂ ಸೂಪರ್ ಓವರ್ ನಿಯಮದ ಪ್ರಕಾರ ಇಂಗ್ಲೆಂಡ್ ಗೆದ್ದು ಬೀಗಿತು.

ಇದರ ಕುರಿತು ಅಪಸ್ವರಗಳು ಜೋರಾಗಿಯೇ ಕೇಳಿಬಂದಿವೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ “ಹೆಚ್ಚು ಬೌಂಡರಿ ಗಳಿಸಿದ್ದವರು ಗೆದ್ದರು ಎಂಬ ಐಸಿಸಿಯ ಹಾಸ್ಯಸ್ಪದ ನಿಯಮದಿಂದ 2019ರ ವಿಶ್ವಕಪ್ ಫೈನಲ್ ಹೀಗಾಗಿದೆ. ನನ್ನ ಪ್ರಕಾರ ಇಬ್ಬರು ಗೆದ್ದಿದ್ದು, ಇಬ್ಬರನ್ನು ವಿಜಯಿ ಎಂದು ಘೋಷಿಸಬೇಕು. ಉಗುರು ಕಚ್ಚುವಂಟೆ ರೋಮಾಂಚನ ಆಟವಾಡಿದ ಎರಡು ತಂಡಗಳನ್ನು ನಾನು ಅಭಿನಂದಿಸುತ್ತೇನೆ. ಇಬ್ಬರೂ ಗೆದ್ದಿದ್ದಾರೆ ಎಂದಿದ್ದಾರೆ.

ಒಂದು ಹೆಜ್ಜೆ ಮುಂದೆ ಹೋಗಿರುವ ರೋಹಿತ್ ಶರ್ಮಾ “ಕ್ರಿಕೆಟ್‍ನ ಕೆಲ ನಿಯಮಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಇನ್ನು ಯುವರಾಜ್ ಸಿಂಗ್ “ಈ ನಿಯಮವನ್ನು ನಾನು ಖಂಡಿತ ಒಪ್ಪುವುದಿಲ್ಲ. ಆದರೆ ನಿಯಮ ಅಂದರೆ ನಿಯಮವೆ. ಹಾಗಾಗಿ ಕೊನೆಯದಾಗಿ ನಾನು ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡವನ್ನು ಅಭಿನಂದಿಸುತ್ತೇನೆ. ಆದರೆ ನನ್ನ ಹೃದಯ ಮಾತ್ರ ಕೊನೆಯವರೆಗೂ ದಿಟ್ಟವಾಗಿ ಹೋರಾಡಿದ ನ್ಯೂಜಿಲೆಂಡ್ ಪರವಾಗಿಯೇ ತುಡಿಯುತ್ತಿದೆ. ಗ್ರೇಟ್ ಗೇಮ್, ಎಪಿಕ್ ಫೈನಲ್” ಎಂದು ಟ್ವೀಟಿಸಿದ್ದಾರೆ.

ಸೂಪರ್ ಓವರ್ ನ ನಿಯಮಗಳೇನು?

ಯಾವುದೇ ಪಂದ್ಯದಲ್ಲಿ ಎರಡು ತಂಡಗಳ ರನ್ ಸಮನಾದರೆ ಅಂದರೆ ಟೈ ಆದರೆ ಅವರು ಎಷ್ಟೇ ವಿಕೆಟ್ ಕಳೆದುಕೊಂಡಿದ್ದರೂ ಸಹ ಅದನ್ನು ಪರಿಗಣಿಸದೇ, ಆಗ ಫಲಿತಾಂಶಕ್ಕಾಗಿ ಸೂಪರ್ ಓವರ್ ಅನ್ನು ಪರಿಚಯಿಸಲಾಯಿತು.

ಎರಡು ತಂಡಗಳಿಗೆ ಆಡಲು ಒಂದು ಓವರ್ (6 ಬಾಲ್) ಸಿಗುತ್ತದೆ. ಬಾಲ್ ಮಾಡಲು ಒಬ್ಬ ಬೌಲರ್‍ಗೆ ಅವಕಾಶವಿರುತ್ತದೆ.
ತಂಡದ ಹನ್ನೊಂದು ಜನರಲ್ಲಿ ಯಾರಾದರೂ ಮೂವರು ಬ್ಯಾಟ್ಸ್‍ಮನ್‍ಗಳಿಗೆ ಅವಕಾಶವಿರುತ್ತದೆ. 6 ಬಾಲ್‍ಗಳಿಗಿಂತ ಮೊದಲೇ ಇಬ್ಬರು ಬ್ಯಾಟ್ಸ್‍ಮನ್‍ಗಳು ಔಟಾದರೆ ಆ ತಂಡದ ಇನ್ನಿಂಗ್ಸ್ ಅಲ್ಲಿಗೆ ಮುಕ್ತಾಯವಾಗುತ್ತದೆ.

ಪಂದ್ಯದ ಕೊನೆಯ ಓವರ್‍ನಲ್ಲಿ ಯಾವ ಫೀಲ್ಡಿಂಗ್ ನಿರ್ಬಂಧವಿರುತ್ತದೆಯೇ ಸೂಪರ್ ಓವರ್‍ಗೂ ಅದೇ ಅನ್ವಯವಾಗುತ್ತದೆ.

ಪ್ರತಿ ಪಂದ್ಯದಂತೆ ಒಂದು ಡಿಆರ್‍ಎಸ್ ರಿವ್ಯೂ ತೆಗೆದುಕೊಳ್ಳಲು ಅವಕಾಶವಿರುತ್ತದೆ. ರಿವ್ಯೂ ಯಶಸ್ವಿಯಾಗದರೆ ಮುಂದುವರೆಯುತ್ತದೆ ಮತ್ತು ವಿಫಲವಾದರೆ ಮುಕ್ತಾಯವಾಗುತ್ತದೆ.

ಪಂದ್ಯದಲ್ಲಿ ಎರಡನೇಯದಾಗಿ ಬ್ಯಾಟಿಂಗ್ ಮಾಡಿದ ತಂಡ ಮೊದಲು ಬ್ಯಾಟ್ ಮಾಡುತ್ತದೆ. ಉಳಿದ ನಂತರ ಚೇಸಿಂಗ್ ಮಾಡಬೇಕು. ಯಾವ ತಂಡ ಹೆಚ್ಚು ರನ್ ಗಳಿಸಿರುತ್ತದೆಯೇ ಆ ತಂಡವನ್ನು ವಿಜಯೀ ಎಂದು ಪರಿಗಣಿಸಲಾಗುತ್ತದೆ.

ಒಂದು ವೇಳೆ ಸೂಪರ್ ಓವರ್‍ನಲ್ಲಿಯೂ ಎರಡೂ ತಂಡಗಳು ಸಮಾನ ರನ್ ಗಳಿಸಿದರೆ (ಟೈ ಆದರೆ) ಆಗ ಪಂದ್ಯದಲ್ಲಿ ಯಾವ ತಂಡ ಹೆಚ್ಚು ಬೌಂಡರಿಗಳನ್ನು ಗಳಿಸುತ್ತದೆಯೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಮೊನ್ನೆಯ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿಯೂ ಹೀಗೆಯೇ ಆಯಿತು. ಸೂಪರ್ ಓವರ್‍ನಲ್ಲಿ ಇಂಗ್ಲೆಂಡ್ 15 ರನ್ ಗಳಿಸಿದರೆ, ನ್ಯೂಜಿಲೆಂಡ್ ಕೂಡ ಅಷ್ಟೇ ರನ್ ಗಳಿಸಿತು. ಆದರೆ ಬೌಂಡರಿಗಳ ಲೆಕ್ಕ ತೆಗೆದುಕೊಂಡರೆ ಇಂಗ್ಲೆಂಡ್ ಒಟ್ಟು 26(ಮುಖ್ಯ ಪಂದ್ಯದಲ್ಲಿ 24, ಸೂಪರ್ ಓವರ್‍ನಲ್ಲಿ 2) ಬೌಂಡರಿಗಳನ್ನು ಬಾರಿಸಿದರೆ ನ್ಯೂಜಿಲೆಂಡ್ 17 (ಮುಖ್ಯ ಪಂದ್ಯದಲ್ಲಿ 16, ಸೂಪರ್ ಓವರ್‍ನಲ್ಲಿ 1) ಮಾತ್ರ ಗಳಿಸಿತ್ತು. ಹಾಗಾಗಿ ಇಂಗ್ಲೆಂಡ್ ವಿಜಯಿಯಾಯಿತು.

ಒಂದು ವೇಳೆ ಆಗಲೂ ಎರಡು ತಂಡಗಳು ಸಮಾನ ಬೌಂಡರಿಗಳನ್ನು ಗಳಿಸಿದರೆ ಸೂಪರ್ ಓವರ್ ಅನ್ನು ಹೊರತುಪಡಿಸಿ ಮುಖ್ಯ ಪಂದ್ಯದಲ್ಲಿ ಯಾರು ಹೆಚ್ಚು ಬೌಂಡರಿಗಳನ್ನು ಗಳಿಸಿರುತ್ತಾರೋ (ಸೂಪರ್ ಓವರ್ ಹೊರತುಪಡಿಸಿ) ಅದನ್ನು ವಿಜಯಿ ಎಂದು ಪರಿಗಣಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...