Homeಸಿನಿಮಾಕ್ರೀಡೆಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

ಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

- Advertisement -
- Advertisement -

ನಿನ್ನೆ ನಡೆದ 2019ರ ಐಸಿಸಿ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯದಲ್ಲಿ ಸೂಪರ್ ಒವರ್‍ನಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಜಯಿಸಿ ಚಾಂಪಿಯನ್ ಆಯಿತು. ಈ ಸೂಪರ್ ಓವರ್ ವಿರುದ್ಧ ಈಗ ಭಾರತದ ಆಟಗಾರರಾದ ಗೌತಮ್ ಗಂಭೀರ್, ರೋಹಿತ್ ಶರ್ಮಾ ಮತ್ತು ಯುವರಾಜ್ ಸಿಂಗ್ ಕಿಡಿಕಾರಿದ್ದು ಇದನ್ನು ಐಸಿಸಿ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ 241 ರನ್ ಗಳಿಸಿತ್ತು. ನಂತರ ಬ್ಯಾಟ್ ಮಾಡಿದ ಇಂಗ್ಲೆಂಡ್ ಕೂಡ 241 ರನ್ ಗೆ ಆಲೌಟ್ ಆಯ್ತು. ಆಗ ಪಂದ್ಯ ಟೈ ಆದ ಕಾರಣ ಸೂಪರ್ ಒವರ್ ಆಡಿಸಲಾಯಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 6 ಬಾಲ್‍ಗಳಲ್ಲಿ 15 ರನ್ ಗಳಿಸಿದರೆ ಆನಂತರ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಕೂಡ 6 ಬಾಲ್‍ಗಳಲ್ಲಿ 15 ರನ್ ಗಳಿಸಿತು. ಆದರೂ ಸೂಪರ್ ಓವರ್ ನಿಯಮದ ಪ್ರಕಾರ ಇಂಗ್ಲೆಂಡ್ ಗೆದ್ದು ಬೀಗಿತು.

ಇದರ ಕುರಿತು ಅಪಸ್ವರಗಳು ಜೋರಾಗಿಯೇ ಕೇಳಿಬಂದಿವೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ “ಹೆಚ್ಚು ಬೌಂಡರಿ ಗಳಿಸಿದ್ದವರು ಗೆದ್ದರು ಎಂಬ ಐಸಿಸಿಯ ಹಾಸ್ಯಸ್ಪದ ನಿಯಮದಿಂದ 2019ರ ವಿಶ್ವಕಪ್ ಫೈನಲ್ ಹೀಗಾಗಿದೆ. ನನ್ನ ಪ್ರಕಾರ ಇಬ್ಬರು ಗೆದ್ದಿದ್ದು, ಇಬ್ಬರನ್ನು ವಿಜಯಿ ಎಂದು ಘೋಷಿಸಬೇಕು. ಉಗುರು ಕಚ್ಚುವಂಟೆ ರೋಮಾಂಚನ ಆಟವಾಡಿದ ಎರಡು ತಂಡಗಳನ್ನು ನಾನು ಅಭಿನಂದಿಸುತ್ತೇನೆ. ಇಬ್ಬರೂ ಗೆದ್ದಿದ್ದಾರೆ ಎಂದಿದ್ದಾರೆ.

ಒಂದು ಹೆಜ್ಜೆ ಮುಂದೆ ಹೋಗಿರುವ ರೋಹಿತ್ ಶರ್ಮಾ “ಕ್ರಿಕೆಟ್‍ನ ಕೆಲ ನಿಯಮಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಇನ್ನು ಯುವರಾಜ್ ಸಿಂಗ್ “ಈ ನಿಯಮವನ್ನು ನಾನು ಖಂಡಿತ ಒಪ್ಪುವುದಿಲ್ಲ. ಆದರೆ ನಿಯಮ ಅಂದರೆ ನಿಯಮವೆ. ಹಾಗಾಗಿ ಕೊನೆಯದಾಗಿ ನಾನು ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡವನ್ನು ಅಭಿನಂದಿಸುತ್ತೇನೆ. ಆದರೆ ನನ್ನ ಹೃದಯ ಮಾತ್ರ ಕೊನೆಯವರೆಗೂ ದಿಟ್ಟವಾಗಿ ಹೋರಾಡಿದ ನ್ಯೂಜಿಲೆಂಡ್ ಪರವಾಗಿಯೇ ತುಡಿಯುತ್ತಿದೆ. ಗ್ರೇಟ್ ಗೇಮ್, ಎಪಿಕ್ ಫೈನಲ್” ಎಂದು ಟ್ವೀಟಿಸಿದ್ದಾರೆ.

ಸೂಪರ್ ಓವರ್ ನ ನಿಯಮಗಳೇನು?

ಯಾವುದೇ ಪಂದ್ಯದಲ್ಲಿ ಎರಡು ತಂಡಗಳ ರನ್ ಸಮನಾದರೆ ಅಂದರೆ ಟೈ ಆದರೆ ಅವರು ಎಷ್ಟೇ ವಿಕೆಟ್ ಕಳೆದುಕೊಂಡಿದ್ದರೂ ಸಹ ಅದನ್ನು ಪರಿಗಣಿಸದೇ, ಆಗ ಫಲಿತಾಂಶಕ್ಕಾಗಿ ಸೂಪರ್ ಓವರ್ ಅನ್ನು ಪರಿಚಯಿಸಲಾಯಿತು.

ಎರಡು ತಂಡಗಳಿಗೆ ಆಡಲು ಒಂದು ಓವರ್ (6 ಬಾಲ್) ಸಿಗುತ್ತದೆ. ಬಾಲ್ ಮಾಡಲು ಒಬ್ಬ ಬೌಲರ್‍ಗೆ ಅವಕಾಶವಿರುತ್ತದೆ.
ತಂಡದ ಹನ್ನೊಂದು ಜನರಲ್ಲಿ ಯಾರಾದರೂ ಮೂವರು ಬ್ಯಾಟ್ಸ್‍ಮನ್‍ಗಳಿಗೆ ಅವಕಾಶವಿರುತ್ತದೆ. 6 ಬಾಲ್‍ಗಳಿಗಿಂತ ಮೊದಲೇ ಇಬ್ಬರು ಬ್ಯಾಟ್ಸ್‍ಮನ್‍ಗಳು ಔಟಾದರೆ ಆ ತಂಡದ ಇನ್ನಿಂಗ್ಸ್ ಅಲ್ಲಿಗೆ ಮುಕ್ತಾಯವಾಗುತ್ತದೆ.

ಪಂದ್ಯದ ಕೊನೆಯ ಓವರ್‍ನಲ್ಲಿ ಯಾವ ಫೀಲ್ಡಿಂಗ್ ನಿರ್ಬಂಧವಿರುತ್ತದೆಯೇ ಸೂಪರ್ ಓವರ್‍ಗೂ ಅದೇ ಅನ್ವಯವಾಗುತ್ತದೆ.

ಪ್ರತಿ ಪಂದ್ಯದಂತೆ ಒಂದು ಡಿಆರ್‍ಎಸ್ ರಿವ್ಯೂ ತೆಗೆದುಕೊಳ್ಳಲು ಅವಕಾಶವಿರುತ್ತದೆ. ರಿವ್ಯೂ ಯಶಸ್ವಿಯಾಗದರೆ ಮುಂದುವರೆಯುತ್ತದೆ ಮತ್ತು ವಿಫಲವಾದರೆ ಮುಕ್ತಾಯವಾಗುತ್ತದೆ.

ಪಂದ್ಯದಲ್ಲಿ ಎರಡನೇಯದಾಗಿ ಬ್ಯಾಟಿಂಗ್ ಮಾಡಿದ ತಂಡ ಮೊದಲು ಬ್ಯಾಟ್ ಮಾಡುತ್ತದೆ. ಉಳಿದ ನಂತರ ಚೇಸಿಂಗ್ ಮಾಡಬೇಕು. ಯಾವ ತಂಡ ಹೆಚ್ಚು ರನ್ ಗಳಿಸಿರುತ್ತದೆಯೇ ಆ ತಂಡವನ್ನು ವಿಜಯೀ ಎಂದು ಪರಿಗಣಿಸಲಾಗುತ್ತದೆ.

ಒಂದು ವೇಳೆ ಸೂಪರ್ ಓವರ್‍ನಲ್ಲಿಯೂ ಎರಡೂ ತಂಡಗಳು ಸಮಾನ ರನ್ ಗಳಿಸಿದರೆ (ಟೈ ಆದರೆ) ಆಗ ಪಂದ್ಯದಲ್ಲಿ ಯಾವ ತಂಡ ಹೆಚ್ಚು ಬೌಂಡರಿಗಳನ್ನು ಗಳಿಸುತ್ತದೆಯೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಮೊನ್ನೆಯ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿಯೂ ಹೀಗೆಯೇ ಆಯಿತು. ಸೂಪರ್ ಓವರ್‍ನಲ್ಲಿ ಇಂಗ್ಲೆಂಡ್ 15 ರನ್ ಗಳಿಸಿದರೆ, ನ್ಯೂಜಿಲೆಂಡ್ ಕೂಡ ಅಷ್ಟೇ ರನ್ ಗಳಿಸಿತು. ಆದರೆ ಬೌಂಡರಿಗಳ ಲೆಕ್ಕ ತೆಗೆದುಕೊಂಡರೆ ಇಂಗ್ಲೆಂಡ್ ಒಟ್ಟು 26(ಮುಖ್ಯ ಪಂದ್ಯದಲ್ಲಿ 24, ಸೂಪರ್ ಓವರ್‍ನಲ್ಲಿ 2) ಬೌಂಡರಿಗಳನ್ನು ಬಾರಿಸಿದರೆ ನ್ಯೂಜಿಲೆಂಡ್ 17 (ಮುಖ್ಯ ಪಂದ್ಯದಲ್ಲಿ 16, ಸೂಪರ್ ಓವರ್‍ನಲ್ಲಿ 1) ಮಾತ್ರ ಗಳಿಸಿತ್ತು. ಹಾಗಾಗಿ ಇಂಗ್ಲೆಂಡ್ ವಿಜಯಿಯಾಯಿತು.

ಒಂದು ವೇಳೆ ಆಗಲೂ ಎರಡು ತಂಡಗಳು ಸಮಾನ ಬೌಂಡರಿಗಳನ್ನು ಗಳಿಸಿದರೆ ಸೂಪರ್ ಓವರ್ ಅನ್ನು ಹೊರತುಪಡಿಸಿ ಮುಖ್ಯ ಪಂದ್ಯದಲ್ಲಿ ಯಾರು ಹೆಚ್ಚು ಬೌಂಡರಿಗಳನ್ನು ಗಳಿಸಿರುತ್ತಾರೋ (ಸೂಪರ್ ಓವರ್ ಹೊರತುಪಡಿಸಿ) ಅದನ್ನು ವಿಜಯಿ ಎಂದು ಪರಿಗಣಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...