Homeಸಿನಿಮಾಕ್ರೀಡೆಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

ಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

- Advertisement -
- Advertisement -

ನಿನ್ನೆ ನಡೆದ 2019ರ ಐಸಿಸಿ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯದಲ್ಲಿ ಸೂಪರ್ ಒವರ್‍ನಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಜಯಿಸಿ ಚಾಂಪಿಯನ್ ಆಯಿತು. ಈ ಸೂಪರ್ ಓವರ್ ವಿರುದ್ಧ ಈಗ ಭಾರತದ ಆಟಗಾರರಾದ ಗೌತಮ್ ಗಂಭೀರ್, ರೋಹಿತ್ ಶರ್ಮಾ ಮತ್ತು ಯುವರಾಜ್ ಸಿಂಗ್ ಕಿಡಿಕಾರಿದ್ದು ಇದನ್ನು ಐಸಿಸಿ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ 241 ರನ್ ಗಳಿಸಿತ್ತು. ನಂತರ ಬ್ಯಾಟ್ ಮಾಡಿದ ಇಂಗ್ಲೆಂಡ್ ಕೂಡ 241 ರನ್ ಗೆ ಆಲೌಟ್ ಆಯ್ತು. ಆಗ ಪಂದ್ಯ ಟೈ ಆದ ಕಾರಣ ಸೂಪರ್ ಒವರ್ ಆಡಿಸಲಾಯಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 6 ಬಾಲ್‍ಗಳಲ್ಲಿ 15 ರನ್ ಗಳಿಸಿದರೆ ಆನಂತರ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಕೂಡ 6 ಬಾಲ್‍ಗಳಲ್ಲಿ 15 ರನ್ ಗಳಿಸಿತು. ಆದರೂ ಸೂಪರ್ ಓವರ್ ನಿಯಮದ ಪ್ರಕಾರ ಇಂಗ್ಲೆಂಡ್ ಗೆದ್ದು ಬೀಗಿತು.

ಇದರ ಕುರಿತು ಅಪಸ್ವರಗಳು ಜೋರಾಗಿಯೇ ಕೇಳಿಬಂದಿವೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ “ಹೆಚ್ಚು ಬೌಂಡರಿ ಗಳಿಸಿದ್ದವರು ಗೆದ್ದರು ಎಂಬ ಐಸಿಸಿಯ ಹಾಸ್ಯಸ್ಪದ ನಿಯಮದಿಂದ 2019ರ ವಿಶ್ವಕಪ್ ಫೈನಲ್ ಹೀಗಾಗಿದೆ. ನನ್ನ ಪ್ರಕಾರ ಇಬ್ಬರು ಗೆದ್ದಿದ್ದು, ಇಬ್ಬರನ್ನು ವಿಜಯಿ ಎಂದು ಘೋಷಿಸಬೇಕು. ಉಗುರು ಕಚ್ಚುವಂಟೆ ರೋಮಾಂಚನ ಆಟವಾಡಿದ ಎರಡು ತಂಡಗಳನ್ನು ನಾನು ಅಭಿನಂದಿಸುತ್ತೇನೆ. ಇಬ್ಬರೂ ಗೆದ್ದಿದ್ದಾರೆ ಎಂದಿದ್ದಾರೆ.

ಒಂದು ಹೆಜ್ಜೆ ಮುಂದೆ ಹೋಗಿರುವ ರೋಹಿತ್ ಶರ್ಮಾ “ಕ್ರಿಕೆಟ್‍ನ ಕೆಲ ನಿಯಮಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಇನ್ನು ಯುವರಾಜ್ ಸಿಂಗ್ “ಈ ನಿಯಮವನ್ನು ನಾನು ಖಂಡಿತ ಒಪ್ಪುವುದಿಲ್ಲ. ಆದರೆ ನಿಯಮ ಅಂದರೆ ನಿಯಮವೆ. ಹಾಗಾಗಿ ಕೊನೆಯದಾಗಿ ನಾನು ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡವನ್ನು ಅಭಿನಂದಿಸುತ್ತೇನೆ. ಆದರೆ ನನ್ನ ಹೃದಯ ಮಾತ್ರ ಕೊನೆಯವರೆಗೂ ದಿಟ್ಟವಾಗಿ ಹೋರಾಡಿದ ನ್ಯೂಜಿಲೆಂಡ್ ಪರವಾಗಿಯೇ ತುಡಿಯುತ್ತಿದೆ. ಗ್ರೇಟ್ ಗೇಮ್, ಎಪಿಕ್ ಫೈನಲ್” ಎಂದು ಟ್ವೀಟಿಸಿದ್ದಾರೆ.

ಸೂಪರ್ ಓವರ್ ನ ನಿಯಮಗಳೇನು?

ಯಾವುದೇ ಪಂದ್ಯದಲ್ಲಿ ಎರಡು ತಂಡಗಳ ರನ್ ಸಮನಾದರೆ ಅಂದರೆ ಟೈ ಆದರೆ ಅವರು ಎಷ್ಟೇ ವಿಕೆಟ್ ಕಳೆದುಕೊಂಡಿದ್ದರೂ ಸಹ ಅದನ್ನು ಪರಿಗಣಿಸದೇ, ಆಗ ಫಲಿತಾಂಶಕ್ಕಾಗಿ ಸೂಪರ್ ಓವರ್ ಅನ್ನು ಪರಿಚಯಿಸಲಾಯಿತು.

ಎರಡು ತಂಡಗಳಿಗೆ ಆಡಲು ಒಂದು ಓವರ್ (6 ಬಾಲ್) ಸಿಗುತ್ತದೆ. ಬಾಲ್ ಮಾಡಲು ಒಬ್ಬ ಬೌಲರ್‍ಗೆ ಅವಕಾಶವಿರುತ್ತದೆ.
ತಂಡದ ಹನ್ನೊಂದು ಜನರಲ್ಲಿ ಯಾರಾದರೂ ಮೂವರು ಬ್ಯಾಟ್ಸ್‍ಮನ್‍ಗಳಿಗೆ ಅವಕಾಶವಿರುತ್ತದೆ. 6 ಬಾಲ್‍ಗಳಿಗಿಂತ ಮೊದಲೇ ಇಬ್ಬರು ಬ್ಯಾಟ್ಸ್‍ಮನ್‍ಗಳು ಔಟಾದರೆ ಆ ತಂಡದ ಇನ್ನಿಂಗ್ಸ್ ಅಲ್ಲಿಗೆ ಮುಕ್ತಾಯವಾಗುತ್ತದೆ.

ಪಂದ್ಯದ ಕೊನೆಯ ಓವರ್‍ನಲ್ಲಿ ಯಾವ ಫೀಲ್ಡಿಂಗ್ ನಿರ್ಬಂಧವಿರುತ್ತದೆಯೇ ಸೂಪರ್ ಓವರ್‍ಗೂ ಅದೇ ಅನ್ವಯವಾಗುತ್ತದೆ.

ಪ್ರತಿ ಪಂದ್ಯದಂತೆ ಒಂದು ಡಿಆರ್‍ಎಸ್ ರಿವ್ಯೂ ತೆಗೆದುಕೊಳ್ಳಲು ಅವಕಾಶವಿರುತ್ತದೆ. ರಿವ್ಯೂ ಯಶಸ್ವಿಯಾಗದರೆ ಮುಂದುವರೆಯುತ್ತದೆ ಮತ್ತು ವಿಫಲವಾದರೆ ಮುಕ್ತಾಯವಾಗುತ್ತದೆ.

ಪಂದ್ಯದಲ್ಲಿ ಎರಡನೇಯದಾಗಿ ಬ್ಯಾಟಿಂಗ್ ಮಾಡಿದ ತಂಡ ಮೊದಲು ಬ್ಯಾಟ್ ಮಾಡುತ್ತದೆ. ಉಳಿದ ನಂತರ ಚೇಸಿಂಗ್ ಮಾಡಬೇಕು. ಯಾವ ತಂಡ ಹೆಚ್ಚು ರನ್ ಗಳಿಸಿರುತ್ತದೆಯೇ ಆ ತಂಡವನ್ನು ವಿಜಯೀ ಎಂದು ಪರಿಗಣಿಸಲಾಗುತ್ತದೆ.

ಒಂದು ವೇಳೆ ಸೂಪರ್ ಓವರ್‍ನಲ್ಲಿಯೂ ಎರಡೂ ತಂಡಗಳು ಸಮಾನ ರನ್ ಗಳಿಸಿದರೆ (ಟೈ ಆದರೆ) ಆಗ ಪಂದ್ಯದಲ್ಲಿ ಯಾವ ತಂಡ ಹೆಚ್ಚು ಬೌಂಡರಿಗಳನ್ನು ಗಳಿಸುತ್ತದೆಯೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಮೊನ್ನೆಯ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿಯೂ ಹೀಗೆಯೇ ಆಯಿತು. ಸೂಪರ್ ಓವರ್‍ನಲ್ಲಿ ಇಂಗ್ಲೆಂಡ್ 15 ರನ್ ಗಳಿಸಿದರೆ, ನ್ಯೂಜಿಲೆಂಡ್ ಕೂಡ ಅಷ್ಟೇ ರನ್ ಗಳಿಸಿತು. ಆದರೆ ಬೌಂಡರಿಗಳ ಲೆಕ್ಕ ತೆಗೆದುಕೊಂಡರೆ ಇಂಗ್ಲೆಂಡ್ ಒಟ್ಟು 26(ಮುಖ್ಯ ಪಂದ್ಯದಲ್ಲಿ 24, ಸೂಪರ್ ಓವರ್‍ನಲ್ಲಿ 2) ಬೌಂಡರಿಗಳನ್ನು ಬಾರಿಸಿದರೆ ನ್ಯೂಜಿಲೆಂಡ್ 17 (ಮುಖ್ಯ ಪಂದ್ಯದಲ್ಲಿ 16, ಸೂಪರ್ ಓವರ್‍ನಲ್ಲಿ 1) ಮಾತ್ರ ಗಳಿಸಿತ್ತು. ಹಾಗಾಗಿ ಇಂಗ್ಲೆಂಡ್ ವಿಜಯಿಯಾಯಿತು.

ಒಂದು ವೇಳೆ ಆಗಲೂ ಎರಡು ತಂಡಗಳು ಸಮಾನ ಬೌಂಡರಿಗಳನ್ನು ಗಳಿಸಿದರೆ ಸೂಪರ್ ಓವರ್ ಅನ್ನು ಹೊರತುಪಡಿಸಿ ಮುಖ್ಯ ಪಂದ್ಯದಲ್ಲಿ ಯಾರು ಹೆಚ್ಚು ಬೌಂಡರಿಗಳನ್ನು ಗಳಿಸಿರುತ್ತಾರೋ (ಸೂಪರ್ ಓವರ್ ಹೊರತುಪಡಿಸಿ) ಅದನ್ನು ವಿಜಯಿ ಎಂದು ಪರಿಗಣಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...