Homeಸಿನಿಮಾಕ್ರೀಡೆಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

ಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

- Advertisement -
- Advertisement -

ನಿನ್ನೆ ನಡೆದ 2019ರ ಐಸಿಸಿ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯದಲ್ಲಿ ಸೂಪರ್ ಒವರ್‍ನಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಜಯಿಸಿ ಚಾಂಪಿಯನ್ ಆಯಿತು. ಈ ಸೂಪರ್ ಓವರ್ ವಿರುದ್ಧ ಈಗ ಭಾರತದ ಆಟಗಾರರಾದ ಗೌತಮ್ ಗಂಭೀರ್, ರೋಹಿತ್ ಶರ್ಮಾ ಮತ್ತು ಯುವರಾಜ್ ಸಿಂಗ್ ಕಿಡಿಕಾರಿದ್ದು ಇದನ್ನು ಐಸಿಸಿ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ 241 ರನ್ ಗಳಿಸಿತ್ತು. ನಂತರ ಬ್ಯಾಟ್ ಮಾಡಿದ ಇಂಗ್ಲೆಂಡ್ ಕೂಡ 241 ರನ್ ಗೆ ಆಲೌಟ್ ಆಯ್ತು. ಆಗ ಪಂದ್ಯ ಟೈ ಆದ ಕಾರಣ ಸೂಪರ್ ಒವರ್ ಆಡಿಸಲಾಯಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 6 ಬಾಲ್‍ಗಳಲ್ಲಿ 15 ರನ್ ಗಳಿಸಿದರೆ ಆನಂತರ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಕೂಡ 6 ಬಾಲ್‍ಗಳಲ್ಲಿ 15 ರನ್ ಗಳಿಸಿತು. ಆದರೂ ಸೂಪರ್ ಓವರ್ ನಿಯಮದ ಪ್ರಕಾರ ಇಂಗ್ಲೆಂಡ್ ಗೆದ್ದು ಬೀಗಿತು.

ಇದರ ಕುರಿತು ಅಪಸ್ವರಗಳು ಜೋರಾಗಿಯೇ ಕೇಳಿಬಂದಿವೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ “ಹೆಚ್ಚು ಬೌಂಡರಿ ಗಳಿಸಿದ್ದವರು ಗೆದ್ದರು ಎಂಬ ಐಸಿಸಿಯ ಹಾಸ್ಯಸ್ಪದ ನಿಯಮದಿಂದ 2019ರ ವಿಶ್ವಕಪ್ ಫೈನಲ್ ಹೀಗಾಗಿದೆ. ನನ್ನ ಪ್ರಕಾರ ಇಬ್ಬರು ಗೆದ್ದಿದ್ದು, ಇಬ್ಬರನ್ನು ವಿಜಯಿ ಎಂದು ಘೋಷಿಸಬೇಕು. ಉಗುರು ಕಚ್ಚುವಂಟೆ ರೋಮಾಂಚನ ಆಟವಾಡಿದ ಎರಡು ತಂಡಗಳನ್ನು ನಾನು ಅಭಿನಂದಿಸುತ್ತೇನೆ. ಇಬ್ಬರೂ ಗೆದ್ದಿದ್ದಾರೆ ಎಂದಿದ್ದಾರೆ.

ಒಂದು ಹೆಜ್ಜೆ ಮುಂದೆ ಹೋಗಿರುವ ರೋಹಿತ್ ಶರ್ಮಾ “ಕ್ರಿಕೆಟ್‍ನ ಕೆಲ ನಿಯಮಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಇನ್ನು ಯುವರಾಜ್ ಸಿಂಗ್ “ಈ ನಿಯಮವನ್ನು ನಾನು ಖಂಡಿತ ಒಪ್ಪುವುದಿಲ್ಲ. ಆದರೆ ನಿಯಮ ಅಂದರೆ ನಿಯಮವೆ. ಹಾಗಾಗಿ ಕೊನೆಯದಾಗಿ ನಾನು ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡವನ್ನು ಅಭಿನಂದಿಸುತ್ತೇನೆ. ಆದರೆ ನನ್ನ ಹೃದಯ ಮಾತ್ರ ಕೊನೆಯವರೆಗೂ ದಿಟ್ಟವಾಗಿ ಹೋರಾಡಿದ ನ್ಯೂಜಿಲೆಂಡ್ ಪರವಾಗಿಯೇ ತುಡಿಯುತ್ತಿದೆ. ಗ್ರೇಟ್ ಗೇಮ್, ಎಪಿಕ್ ಫೈನಲ್” ಎಂದು ಟ್ವೀಟಿಸಿದ್ದಾರೆ.

ಸೂಪರ್ ಓವರ್ ನ ನಿಯಮಗಳೇನು?

ಯಾವುದೇ ಪಂದ್ಯದಲ್ಲಿ ಎರಡು ತಂಡಗಳ ರನ್ ಸಮನಾದರೆ ಅಂದರೆ ಟೈ ಆದರೆ ಅವರು ಎಷ್ಟೇ ವಿಕೆಟ್ ಕಳೆದುಕೊಂಡಿದ್ದರೂ ಸಹ ಅದನ್ನು ಪರಿಗಣಿಸದೇ, ಆಗ ಫಲಿತಾಂಶಕ್ಕಾಗಿ ಸೂಪರ್ ಓವರ್ ಅನ್ನು ಪರಿಚಯಿಸಲಾಯಿತು.

ಎರಡು ತಂಡಗಳಿಗೆ ಆಡಲು ಒಂದು ಓವರ್ (6 ಬಾಲ್) ಸಿಗುತ್ತದೆ. ಬಾಲ್ ಮಾಡಲು ಒಬ್ಬ ಬೌಲರ್‍ಗೆ ಅವಕಾಶವಿರುತ್ತದೆ.
ತಂಡದ ಹನ್ನೊಂದು ಜನರಲ್ಲಿ ಯಾರಾದರೂ ಮೂವರು ಬ್ಯಾಟ್ಸ್‍ಮನ್‍ಗಳಿಗೆ ಅವಕಾಶವಿರುತ್ತದೆ. 6 ಬಾಲ್‍ಗಳಿಗಿಂತ ಮೊದಲೇ ಇಬ್ಬರು ಬ್ಯಾಟ್ಸ್‍ಮನ್‍ಗಳು ಔಟಾದರೆ ಆ ತಂಡದ ಇನ್ನಿಂಗ್ಸ್ ಅಲ್ಲಿಗೆ ಮುಕ್ತಾಯವಾಗುತ್ತದೆ.

ಪಂದ್ಯದ ಕೊನೆಯ ಓವರ್‍ನಲ್ಲಿ ಯಾವ ಫೀಲ್ಡಿಂಗ್ ನಿರ್ಬಂಧವಿರುತ್ತದೆಯೇ ಸೂಪರ್ ಓವರ್‍ಗೂ ಅದೇ ಅನ್ವಯವಾಗುತ್ತದೆ.

ಪ್ರತಿ ಪಂದ್ಯದಂತೆ ಒಂದು ಡಿಆರ್‍ಎಸ್ ರಿವ್ಯೂ ತೆಗೆದುಕೊಳ್ಳಲು ಅವಕಾಶವಿರುತ್ತದೆ. ರಿವ್ಯೂ ಯಶಸ್ವಿಯಾಗದರೆ ಮುಂದುವರೆಯುತ್ತದೆ ಮತ್ತು ವಿಫಲವಾದರೆ ಮುಕ್ತಾಯವಾಗುತ್ತದೆ.

ಪಂದ್ಯದಲ್ಲಿ ಎರಡನೇಯದಾಗಿ ಬ್ಯಾಟಿಂಗ್ ಮಾಡಿದ ತಂಡ ಮೊದಲು ಬ್ಯಾಟ್ ಮಾಡುತ್ತದೆ. ಉಳಿದ ನಂತರ ಚೇಸಿಂಗ್ ಮಾಡಬೇಕು. ಯಾವ ತಂಡ ಹೆಚ್ಚು ರನ್ ಗಳಿಸಿರುತ್ತದೆಯೇ ಆ ತಂಡವನ್ನು ವಿಜಯೀ ಎಂದು ಪರಿಗಣಿಸಲಾಗುತ್ತದೆ.

ಒಂದು ವೇಳೆ ಸೂಪರ್ ಓವರ್‍ನಲ್ಲಿಯೂ ಎರಡೂ ತಂಡಗಳು ಸಮಾನ ರನ್ ಗಳಿಸಿದರೆ (ಟೈ ಆದರೆ) ಆಗ ಪಂದ್ಯದಲ್ಲಿ ಯಾವ ತಂಡ ಹೆಚ್ಚು ಬೌಂಡರಿಗಳನ್ನು ಗಳಿಸುತ್ತದೆಯೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಮೊನ್ನೆಯ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿಯೂ ಹೀಗೆಯೇ ಆಯಿತು. ಸೂಪರ್ ಓವರ್‍ನಲ್ಲಿ ಇಂಗ್ಲೆಂಡ್ 15 ರನ್ ಗಳಿಸಿದರೆ, ನ್ಯೂಜಿಲೆಂಡ್ ಕೂಡ ಅಷ್ಟೇ ರನ್ ಗಳಿಸಿತು. ಆದರೆ ಬೌಂಡರಿಗಳ ಲೆಕ್ಕ ತೆಗೆದುಕೊಂಡರೆ ಇಂಗ್ಲೆಂಡ್ ಒಟ್ಟು 26(ಮುಖ್ಯ ಪಂದ್ಯದಲ್ಲಿ 24, ಸೂಪರ್ ಓವರ್‍ನಲ್ಲಿ 2) ಬೌಂಡರಿಗಳನ್ನು ಬಾರಿಸಿದರೆ ನ್ಯೂಜಿಲೆಂಡ್ 17 (ಮುಖ್ಯ ಪಂದ್ಯದಲ್ಲಿ 16, ಸೂಪರ್ ಓವರ್‍ನಲ್ಲಿ 1) ಮಾತ್ರ ಗಳಿಸಿತ್ತು. ಹಾಗಾಗಿ ಇಂಗ್ಲೆಂಡ್ ವಿಜಯಿಯಾಯಿತು.

ಒಂದು ವೇಳೆ ಆಗಲೂ ಎರಡು ತಂಡಗಳು ಸಮಾನ ಬೌಂಡರಿಗಳನ್ನು ಗಳಿಸಿದರೆ ಸೂಪರ್ ಓವರ್ ಅನ್ನು ಹೊರತುಪಡಿಸಿ ಮುಖ್ಯ ಪಂದ್ಯದಲ್ಲಿ ಯಾರು ಹೆಚ್ಚು ಬೌಂಡರಿಗಳನ್ನು ಗಳಿಸಿರುತ್ತಾರೋ (ಸೂಪರ್ ಓವರ್ ಹೊರತುಪಡಿಸಿ) ಅದನ್ನು ವಿಜಯಿ ಎಂದು ಪರಿಗಣಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...