Homeಸಿನಿಮಾಕ್ರೀಡೆಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

ಸೂಪರ್ ಓವರ್ ವಿರುದ್ದ ತಿರುಗಿಬಿದ್ದ ಗಂಭೀರ್, ರೋಹಿತ್ ಮತ್ತು ಯುವರಾಜ್: ಏನಿದು ಸೂಪರ್ ಓವರ್?

- Advertisement -
- Advertisement -

ನಿನ್ನೆ ನಡೆದ 2019ರ ಐಸಿಸಿ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯದಲ್ಲಿ ಸೂಪರ್ ಒವರ್‍ನಲ್ಲಿ ಇಂಗ್ಲೆಂಡ್ ನ್ಯೂಜಿಲೆಂಡ್ ವಿರುದ್ಧ ಜಯಿಸಿ ಚಾಂಪಿಯನ್ ಆಯಿತು. ಈ ಸೂಪರ್ ಓವರ್ ವಿರುದ್ಧ ಈಗ ಭಾರತದ ಆಟಗಾರರಾದ ಗೌತಮ್ ಗಂಭೀರ್, ರೋಹಿತ್ ಶರ್ಮಾ ಮತ್ತು ಯುವರಾಜ್ ಸಿಂಗ್ ಕಿಡಿಕಾರಿದ್ದು ಇದನ್ನು ಐಸಿಸಿ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ 241 ರನ್ ಗಳಿಸಿತ್ತು. ನಂತರ ಬ್ಯಾಟ್ ಮಾಡಿದ ಇಂಗ್ಲೆಂಡ್ ಕೂಡ 241 ರನ್ ಗೆ ಆಲೌಟ್ ಆಯ್ತು. ಆಗ ಪಂದ್ಯ ಟೈ ಆದ ಕಾರಣ ಸೂಪರ್ ಒವರ್ ಆಡಿಸಲಾಯಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 6 ಬಾಲ್‍ಗಳಲ್ಲಿ 15 ರನ್ ಗಳಿಸಿದರೆ ಆನಂತರ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಕೂಡ 6 ಬಾಲ್‍ಗಳಲ್ಲಿ 15 ರನ್ ಗಳಿಸಿತು. ಆದರೂ ಸೂಪರ್ ಓವರ್ ನಿಯಮದ ಪ್ರಕಾರ ಇಂಗ್ಲೆಂಡ್ ಗೆದ್ದು ಬೀಗಿತು.

ಇದರ ಕುರಿತು ಅಪಸ್ವರಗಳು ಜೋರಾಗಿಯೇ ಕೇಳಿಬಂದಿವೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ “ಹೆಚ್ಚು ಬೌಂಡರಿ ಗಳಿಸಿದ್ದವರು ಗೆದ್ದರು ಎಂಬ ಐಸಿಸಿಯ ಹಾಸ್ಯಸ್ಪದ ನಿಯಮದಿಂದ 2019ರ ವಿಶ್ವಕಪ್ ಫೈನಲ್ ಹೀಗಾಗಿದೆ. ನನ್ನ ಪ್ರಕಾರ ಇಬ್ಬರು ಗೆದ್ದಿದ್ದು, ಇಬ್ಬರನ್ನು ವಿಜಯಿ ಎಂದು ಘೋಷಿಸಬೇಕು. ಉಗುರು ಕಚ್ಚುವಂಟೆ ರೋಮಾಂಚನ ಆಟವಾಡಿದ ಎರಡು ತಂಡಗಳನ್ನು ನಾನು ಅಭಿನಂದಿಸುತ್ತೇನೆ. ಇಬ್ಬರೂ ಗೆದ್ದಿದ್ದಾರೆ ಎಂದಿದ್ದಾರೆ.

ಒಂದು ಹೆಜ್ಜೆ ಮುಂದೆ ಹೋಗಿರುವ ರೋಹಿತ್ ಶರ್ಮಾ “ಕ್ರಿಕೆಟ್‍ನ ಕೆಲ ನಿಯಮಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಇನ್ನು ಯುವರಾಜ್ ಸಿಂಗ್ “ಈ ನಿಯಮವನ್ನು ನಾನು ಖಂಡಿತ ಒಪ್ಪುವುದಿಲ್ಲ. ಆದರೆ ನಿಯಮ ಅಂದರೆ ನಿಯಮವೆ. ಹಾಗಾಗಿ ಕೊನೆಯದಾಗಿ ನಾನು ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡವನ್ನು ಅಭಿನಂದಿಸುತ್ತೇನೆ. ಆದರೆ ನನ್ನ ಹೃದಯ ಮಾತ್ರ ಕೊನೆಯವರೆಗೂ ದಿಟ್ಟವಾಗಿ ಹೋರಾಡಿದ ನ್ಯೂಜಿಲೆಂಡ್ ಪರವಾಗಿಯೇ ತುಡಿಯುತ್ತಿದೆ. ಗ್ರೇಟ್ ಗೇಮ್, ಎಪಿಕ್ ಫೈನಲ್” ಎಂದು ಟ್ವೀಟಿಸಿದ್ದಾರೆ.

ಸೂಪರ್ ಓವರ್ ನ ನಿಯಮಗಳೇನು?

ಯಾವುದೇ ಪಂದ್ಯದಲ್ಲಿ ಎರಡು ತಂಡಗಳ ರನ್ ಸಮನಾದರೆ ಅಂದರೆ ಟೈ ಆದರೆ ಅವರು ಎಷ್ಟೇ ವಿಕೆಟ್ ಕಳೆದುಕೊಂಡಿದ್ದರೂ ಸಹ ಅದನ್ನು ಪರಿಗಣಿಸದೇ, ಆಗ ಫಲಿತಾಂಶಕ್ಕಾಗಿ ಸೂಪರ್ ಓವರ್ ಅನ್ನು ಪರಿಚಯಿಸಲಾಯಿತು.

ಎರಡು ತಂಡಗಳಿಗೆ ಆಡಲು ಒಂದು ಓವರ್ (6 ಬಾಲ್) ಸಿಗುತ್ತದೆ. ಬಾಲ್ ಮಾಡಲು ಒಬ್ಬ ಬೌಲರ್‍ಗೆ ಅವಕಾಶವಿರುತ್ತದೆ.
ತಂಡದ ಹನ್ನೊಂದು ಜನರಲ್ಲಿ ಯಾರಾದರೂ ಮೂವರು ಬ್ಯಾಟ್ಸ್‍ಮನ್‍ಗಳಿಗೆ ಅವಕಾಶವಿರುತ್ತದೆ. 6 ಬಾಲ್‍ಗಳಿಗಿಂತ ಮೊದಲೇ ಇಬ್ಬರು ಬ್ಯಾಟ್ಸ್‍ಮನ್‍ಗಳು ಔಟಾದರೆ ಆ ತಂಡದ ಇನ್ನಿಂಗ್ಸ್ ಅಲ್ಲಿಗೆ ಮುಕ್ತಾಯವಾಗುತ್ತದೆ.

ಪಂದ್ಯದ ಕೊನೆಯ ಓವರ್‍ನಲ್ಲಿ ಯಾವ ಫೀಲ್ಡಿಂಗ್ ನಿರ್ಬಂಧವಿರುತ್ತದೆಯೇ ಸೂಪರ್ ಓವರ್‍ಗೂ ಅದೇ ಅನ್ವಯವಾಗುತ್ತದೆ.

ಪ್ರತಿ ಪಂದ್ಯದಂತೆ ಒಂದು ಡಿಆರ್‍ಎಸ್ ರಿವ್ಯೂ ತೆಗೆದುಕೊಳ್ಳಲು ಅವಕಾಶವಿರುತ್ತದೆ. ರಿವ್ಯೂ ಯಶಸ್ವಿಯಾಗದರೆ ಮುಂದುವರೆಯುತ್ತದೆ ಮತ್ತು ವಿಫಲವಾದರೆ ಮುಕ್ತಾಯವಾಗುತ್ತದೆ.

ಪಂದ್ಯದಲ್ಲಿ ಎರಡನೇಯದಾಗಿ ಬ್ಯಾಟಿಂಗ್ ಮಾಡಿದ ತಂಡ ಮೊದಲು ಬ್ಯಾಟ್ ಮಾಡುತ್ತದೆ. ಉಳಿದ ನಂತರ ಚೇಸಿಂಗ್ ಮಾಡಬೇಕು. ಯಾವ ತಂಡ ಹೆಚ್ಚು ರನ್ ಗಳಿಸಿರುತ್ತದೆಯೇ ಆ ತಂಡವನ್ನು ವಿಜಯೀ ಎಂದು ಪರಿಗಣಿಸಲಾಗುತ್ತದೆ.

ಒಂದು ವೇಳೆ ಸೂಪರ್ ಓವರ್‍ನಲ್ಲಿಯೂ ಎರಡೂ ತಂಡಗಳು ಸಮಾನ ರನ್ ಗಳಿಸಿದರೆ (ಟೈ ಆದರೆ) ಆಗ ಪಂದ್ಯದಲ್ಲಿ ಯಾವ ತಂಡ ಹೆಚ್ಚು ಬೌಂಡರಿಗಳನ್ನು ಗಳಿಸುತ್ತದೆಯೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಮೊನ್ನೆಯ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿಯೂ ಹೀಗೆಯೇ ಆಯಿತು. ಸೂಪರ್ ಓವರ್‍ನಲ್ಲಿ ಇಂಗ್ಲೆಂಡ್ 15 ರನ್ ಗಳಿಸಿದರೆ, ನ್ಯೂಜಿಲೆಂಡ್ ಕೂಡ ಅಷ್ಟೇ ರನ್ ಗಳಿಸಿತು. ಆದರೆ ಬೌಂಡರಿಗಳ ಲೆಕ್ಕ ತೆಗೆದುಕೊಂಡರೆ ಇಂಗ್ಲೆಂಡ್ ಒಟ್ಟು 26(ಮುಖ್ಯ ಪಂದ್ಯದಲ್ಲಿ 24, ಸೂಪರ್ ಓವರ್‍ನಲ್ಲಿ 2) ಬೌಂಡರಿಗಳನ್ನು ಬಾರಿಸಿದರೆ ನ್ಯೂಜಿಲೆಂಡ್ 17 (ಮುಖ್ಯ ಪಂದ್ಯದಲ್ಲಿ 16, ಸೂಪರ್ ಓವರ್‍ನಲ್ಲಿ 1) ಮಾತ್ರ ಗಳಿಸಿತ್ತು. ಹಾಗಾಗಿ ಇಂಗ್ಲೆಂಡ್ ವಿಜಯಿಯಾಯಿತು.

ಒಂದು ವೇಳೆ ಆಗಲೂ ಎರಡು ತಂಡಗಳು ಸಮಾನ ಬೌಂಡರಿಗಳನ್ನು ಗಳಿಸಿದರೆ ಸೂಪರ್ ಓವರ್ ಅನ್ನು ಹೊರತುಪಡಿಸಿ ಮುಖ್ಯ ಪಂದ್ಯದಲ್ಲಿ ಯಾರು ಹೆಚ್ಚು ಬೌಂಡರಿಗಳನ್ನು ಗಳಿಸಿರುತ್ತಾರೋ (ಸೂಪರ್ ಓವರ್ ಹೊರತುಪಡಿಸಿ) ಅದನ್ನು ವಿಜಯಿ ಎಂದು ಪರಿಗಣಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...