Homeಮುಖಪುಟಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? - ಡಾ.ನರಸಿಂಹ ಗುಂಜಹಳ್ಳಿ

ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ.

- Advertisement -
- Advertisement -

ಒಂದು ಜನಾಂಗ ಸಾಮಾಜಿಕ, ಆರ್ಥಿಕ, ರಾಜಕೀಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಭೌದ್ಧಿಕವಾಗಿ ಶತಶತಮಾನಗಳಿಂದ ಶೋಷಣೆಗೆ ಒಳಗಾಗಿ, ಸಂವಿಧಾನಾತ್ಮಕ ಸೌಲಭ್ಯಗಳಿಂದ ವಂಚಿತರಾದ ಸಮುದಾಯಕ್ಕೆ ಈ ಸ್ಥಿತಿಗಳಿಂದ ಬಿಡುಗಡೆಗೊಳಿಸಲು ಕೆಲವು ಸಂವಿಧಾನಿಕ ವಿಶೇಷ ಸೌಲಭ್ಯಗಳೇ ಮೀಸಲಾತಿ. ಇದರ ಗುರಿ ಸಾಮಾಜಿಕ ನ್ಯಾಯ. ಇಂದು ಸಮಾನತೆಯ ದೇಶ ಕಟ್ಟವುದಕ್ಕೆ ಭೂಮಿ ಮತ್ತು ಮೀಸಲಾತಿ ಇವರೆಡು ಬಹುಮುಖ್ಯವಾದದ್ದು.

ಸರಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಜಾತಿಗಳಿಗೆ ಸಂವಿಧಾನದತ್ತವಾಗಿ ಬಂದಿರುವ ಮೀಸಲಾತಿಯ ಶೇ. 15 ರಲ್ಲಿ ಮಾದಿಗ ಸಮುದಾಯಕ್ಕೆ ಸಿಗಬೇಕಾದ ಪ್ರಮಾಣ ಶೇ.8.ರಷ್ಟು. ಆದರೆ ಇದುವರೆಗೆ ದಕ್ಕಿರುವುದು ಕೇವಲ ಶೇ.2ರಷ್ಟು ಮಾತ್ರ ಎಂಬುದು ಮಾದಿಗರ ಅರೋಪವಾಗಿದೆ. ಪರಿಶಿಷ್ಟ ಜಾತಿಯಲ್ಲಿ ಬಹುಸಂಖ್ಯಾತರಾದ ನಮಗೆ ನ್ಯಾಯಯುತ ಮೀಸಲಾತಿ ದೊರೆತಿಲ್ಲವೆಂಬ ಅತೃಪ್ತಿಯಿದೆ. ನಮ್ಮ ಹೆಸರಿನಲ್ಲಿ ಬಲಿಷ್ಟ ದಲಿತ ಜಾತಿಯವರು ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆಂದು ಆರೋಪಿಸುತ್ತ ತಮಗೆ ಆದ ಈ ಅನ್ಯಾಯವನ್ನು ಸರಿಪಡಿಸಿಕೊಳ್ಳಲು ಸುಮಾರು 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಇನ್ನೊಬ್ಬರ ಪಾಲು ನಮಗೆ ಬೇಡ. ನಮ್ಮ ಪಾಲಿನ ಹಕ್ಕನ್ನು ನಮಗೆ ಕೊಡಿಯೆಂದು ಒಳಮೀಸಲಾತಿಗಾಗಿ ಮಾದಿಗರು ರಾಜ್ಯದಲ್ಲಿ 1996 ರಿಂದ ಹೋರಾಟ ನಡೆಸಿದ್ದಾರೆ.

ಸರಕಾರ ರಚಿಸಿದ್ದ ಸದಾಶಿವ ಅಯೋಗವು 2012ರಲ್ಲಿ ವರದಿ ಸಲ್ಲಿಸದಾಗಿನಿಂದ ಅದರ ಪರ ಮತ್ತು ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ. ಇದು ಒಡೆದು ಆಳುವ ನೀತಿಯಲ್ಲ. ಇದು ಹಂಚಿ ತಿನ್ನುವ ಮಾನವತವಾದ. ಒಳಮೀಸಲಾತಿಯನ್ನು ವಿರೋಧಿಸುವುದೆಂದರೆ ಮೀಸಲಾತಿಯನ್ನು ಮತ್ತು ಸಮಪಾಲು – ಸಮಬಾಳು ತತ್ವವನ್ನು ವಿರೋಧಿಸುವುದಕ್ಕೆ ಸಮನಾದದ್ದು ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡುವ ಅಪಾಚಾರ ಸಹ ಹೌದು.

ಪರಿಶಿಷ್ಟ ಜಾತಿಯಲ್ಲಿರುವ ಮೀಸಲಾತಿಯನ್ನು ವಿಭಜಿಸಿದರೆ ದಲಿತರ ಒಗ್ಗಟ್ಟು ಹಾಳುಗುತ್ತಿದೆ ಎಂಬುದು ಸುಳ್ಳು. ಸಾಮಾಜಿಕ ನ್ಯಾಯಕ್ಕೆ ಭಂಗ ತರುವವರು ಇಂತಹ ಆರೋಪವನ್ನು ಮಾಡುತ್ತಾರೆ. ಸ್ವಾರ್ಥ ಮತ್ತು ಕೆಲವರು ತಮ್ಮ ಅನೂಕೂಲಕ್ಕೆ ತಕ್ಕ ಹಾಗೆ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆರ್ಥೈಸಿಕೊಳ್ಳುತ್ತಿದ್ದಾರೆ. ಅದ್ದರಿಂದ ಸದಾಶಿವ ಅಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಬಿಡುಗಡೆ ಮಾಡಬೇಕು.

ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

ಡಾ.ಬಿ.ಆರ್.ಅಂಬೇಡ್ಕರ್ ಅವರ ಅಶಯವು ಭಾರತದಲ್ಲಿ ಜನಸಂಖ್ಯೆಯಾಧಾರಿತ ಮೀಸಲಾತಿ ಹಂಚಿಕೆಯಾಗಬೇಕೆನ್ನುವುದು ವಾದವಾಗಿತ್ತು. ದಲಿತರು ಒಳ ಮೀಸಲಾತಿಯನ್ನು ಪಡೆದರೂ ವಿಘಟನೆಗೊಳ್ಳದೆ, ಈ ದೇಶದಲ್ಲಿ ಜಾತಿವ್ಯವಸ್ಥೆ, ಆಸ್ಪೃಶ್ಯತೆ ಇರುವವರೆಗೂ ಅವುಗಳ ವಿರುದ್ಧ ಮತ್ತು ಖಾಸಗಿ ವಲಯದಲ್ಲೂ ಮೀಸಲಾತಿಗಾಗಿ ಹೋರಾಟ ಮಾಡಬೇಕು. ಅದನ್ನು ಬಳಿಸಿಕೊಂಡು ಜಾತಿ ವಿನಾಶಮಾಡದೇ ಹೋದರೆ ಉಳಿಗಾಲವಿಲ್ಲ. ಜಾತಿ ಜಾತಿಗಳ ನಡುವಿನ ಸಮಾನತೆಯು ಜಾತಿಯನ್ನು ನಾಶಮಾಡುತ್ತದೆ ಎನ್ನುವುದನ್ನು ದಲಿತರು ಅರ್ಥಮಾಡಿಕೋಳ್ಳಬೇಕು.

ಇವತ್ತಿನವರೆಗೆ ದಲಿತರ ಮಿಸಲಾತಿಯನ್ನು ಹೊಲೆಯರು, ಮಾದಿಗರು, ಲಂಬಾಣಿಗಳು ಮತ್ತು ಭೋವಿಗಳು – ಈ ನಾಲ್ಕು ಜಾತಿಗಳ ಮಾತ್ರ ಹೆಚ್ಚು ಪಡೆದಿವೆ. ಪರಿಶಿಷ್ಟರಲ್ಲಿನ ಸುಡುಗಾಡು ಸಿದ್ದರು ಸೇರಿದಂತೆ ಆನೇಕ ಸಣ್ಣ ಸಣ್ಣ ದಲಿತ ಜಾತಿಗಳು ಈವರೆಗೂ ಶೇ.1 ರಷ್ಟು ಸಹ ಮೀಸಲಾತಿ ಸೌಲಭ್ಯ ಪಡೆದಿಲ್ಲ. ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟರಲ್ಲಿ ಇರುವ 101 ಜಾತಿಗಳಿಗೆ ಈಗಿರುವ ಶೇ.15 ಮೀಸಲಾತಿಯನ್ನು ಸದಾಶಿವ ಆಯೋಗ ವಿಭಜಿಸಿಕೊಟ್ಟಿದೆ ಎನ್ನಲಾಗುತ್ತಿದೆ. ಇದರ ಪ್ರಕಾರ ಹಂಚಿಕೆ ಮಾಡಬೇಕು. ಇದು ಹಲವು ಸಣ್ಣ ಪರಿಶಿಷ್ಟ ಜಾತಿಗಳಿಗೆ ನೆರವಾಗಲಿದೆ. ಇದನ್ನು ಒಳಮೀಸಲಾತಿ ಎನ್ನಿ, ಮೀಸಲಾತಿ ಪುನರ್ ವಿಂಗಡನೆ ಎನ್ನಿ, ಮೀಸಲಾತಿ ಗುಂಪುಗಳು ಎನ್ನಿ, ಏನು ಬೇಕಾದರೂ ಹೇಳಿ, ಅದು ಸಂವಿಧಾನದ ಯಾವುದೇ ವಿಧಿಗಳ ಉಲ್ಲಂಘನೆಯಾಗುವುದಿಲ್ಲ.

ದಲಿತರಲ್ಲಿನ ಸ್ಪೃಶ್ಯ ಜಾತಿಗಳು ಅಸ್ಪೃಶ್ಯ ಸಮುದಾಯವನ್ನು ಸಹೋದರಂತೆ ಕಾಣಬೇಕು. ಮೀಸಲಾತಿ ಮತ್ತು ಒಳಮೀಸಲಾತಿ ಇದು ಒಂದು ಸಾಮಾಜಿಕ ನ್ಯಾಯ. ಸ್ಪೃಶ್ಯ ಜಾತಿಯವರು ಮತ್ತು ಸಾರ್ವಜನಿಕರು ಇದನ್ನು ಬೆಂಬಲಿಸಿ ಜಾರಿಗೆಗೋಳಿಸಲು ಸರಕಾರಕ್ಕೆ ಒತ್ತಾಯಿಸಬೇಕು.

ಮೀಸಲಾತಿ ಅಸಮರ್ಪಕ ವಿತರಣೆ, ಅಸಮಾನ ಹಂಚಿಕೆಯಿಂದ ದಲಿತ ಜಾತಿಗಳಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಯಾಗಿ ಸಂಬಂಧಗಳು ಕಳೆಯುತ್ತಿವೆ. ಆದ್ದರಿಂದ ಒಳಮೀಸಲಾತಿ ಕುರಿತು ದಲಿತರು ಒಟ್ಟಿಗೆ ಕುಳಿತು ಚರ್ಚಿಸಿಬೇಕು. ಇದನ್ನು ಲಾಭ- ನಷ್ಟದ ದೃಷ್ಟಿಯಿಂದ ಪರಿಗಣಿಸದೇ, ತಾಂತ್ರಿಕ ಕಾರಣಗಳಿಂದ ನೋಡದೇ ನ್ಯಾಯ, ಮಾನವೀಯ ಕಲ್ಪನೆಗಳಿಂದ ವಿಚಾರ ಮಾಡಬೇಕು. ಅದರ ಸಾಮಾಜಿಕ ಅರ್ಥಿಕ ಸಮಸ್ಯೆಗಳನ್ನು ಚರ್ಚಿಸಿ ಅನುಷ್ಟಾನಕ್ಕೆ ಒತ್ತಾಯಿಸಬೇಕು. ದಲಿತರಿಂದಲೇ ದಲಿತರಿಗೆ ಶೋಷಣೆಯಾಗಬಾರದು ಎಂದರೆ ಕೂಡಲೆ ಒಳಮೀಸಲಾತಿ ಜಾರಿಗೆ ತರಬೇಕು. ಮೀಸಲಾತಿ ವರ್ಗೀಕರಣ ಮಾಡಿದರೆ ದಲಿತರ ನಡುವೆ, ಜಾತಿ – ಜಾತಿಗಳ ನಡುವೆ ಸಮಾನತೆ, ಸೌಹರ್ದತೆ, ಜಾತ್ಯತೀತತೆ ಮತ್ತು ಸ್ನೇಹ ಬೆಳೆಯುತ್ತದೆ. ಸ್ಪೃಶ್ಯ ಜಾತಿಗಳು ಪಟ್ಟಭದ್ರ ಹಿತಶಕ್ತಿಗಳ ಕುತಂತ್ರಕ್ಕೆ ಬಲಿಯಾಗದೇ ಮೀಸಲಾತಿ ವರ್ಗೀಕರಣಕ್ಕೆ ಒತ್ತಾಯಿಸಬೇಕು.

  • ಡಾ.ನರಸಿಂಹ ಗುಂಜಹಳ್ಳಿ

ರಾಯಚೂರು ತಾಲೂಕಿನ ಗುಂಜಳ್ಳಿಯ ನರಸಿಂಹ ಅವರು ವಿದ್ಯಾರ್ಥಿಯಾಗಿದ್ದಾಗಿನಿಂದಲೂ ಸಾಮಾಜಿಕ ಚಳುವಳಿಯಲ್ಲಿ ಸಕ್ರಿಯರು. ಬಿಎಂಟಿಸಿ ಕಂಡಕ್ಟರ್ ಆಗಿದ್ದುಕೊಂಡು ಪಿಎಚ್‌ಡಿ ಸಂಶೋಧನೆ ನಡೆಸಿ, ಪದವಿ ಪಡೆದುಕೊಂಡರು. ಇದೀಗ ಕೊಪ್ಪಳದ ಕಾಲೇಜಿನಲ್ಲಿ ಅಧ್ಯಾಪಕರು


ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...