Homeಮುಖಪುಟಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? - ಡಾ.ನರಸಿಂಹ ಗುಂಜಹಳ್ಳಿ

ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ.

- Advertisement -
- Advertisement -

ಒಂದು ಜನಾಂಗ ಸಾಮಾಜಿಕ, ಆರ್ಥಿಕ, ರಾಜಕೀಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಭೌದ್ಧಿಕವಾಗಿ ಶತಶತಮಾನಗಳಿಂದ ಶೋಷಣೆಗೆ ಒಳಗಾಗಿ, ಸಂವಿಧಾನಾತ್ಮಕ ಸೌಲಭ್ಯಗಳಿಂದ ವಂಚಿತರಾದ ಸಮುದಾಯಕ್ಕೆ ಈ ಸ್ಥಿತಿಗಳಿಂದ ಬಿಡುಗಡೆಗೊಳಿಸಲು ಕೆಲವು ಸಂವಿಧಾನಿಕ ವಿಶೇಷ ಸೌಲಭ್ಯಗಳೇ ಮೀಸಲಾತಿ. ಇದರ ಗುರಿ ಸಾಮಾಜಿಕ ನ್ಯಾಯ. ಇಂದು ಸಮಾನತೆಯ ದೇಶ ಕಟ್ಟವುದಕ್ಕೆ ಭೂಮಿ ಮತ್ತು ಮೀಸಲಾತಿ ಇವರೆಡು ಬಹುಮುಖ್ಯವಾದದ್ದು.

ಸರಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಜಾತಿಗಳಿಗೆ ಸಂವಿಧಾನದತ್ತವಾಗಿ ಬಂದಿರುವ ಮೀಸಲಾತಿಯ ಶೇ. 15 ರಲ್ಲಿ ಮಾದಿಗ ಸಮುದಾಯಕ್ಕೆ ಸಿಗಬೇಕಾದ ಪ್ರಮಾಣ ಶೇ.8.ರಷ್ಟು. ಆದರೆ ಇದುವರೆಗೆ ದಕ್ಕಿರುವುದು ಕೇವಲ ಶೇ.2ರಷ್ಟು ಮಾತ್ರ ಎಂಬುದು ಮಾದಿಗರ ಅರೋಪವಾಗಿದೆ. ಪರಿಶಿಷ್ಟ ಜಾತಿಯಲ್ಲಿ ಬಹುಸಂಖ್ಯಾತರಾದ ನಮಗೆ ನ್ಯಾಯಯುತ ಮೀಸಲಾತಿ ದೊರೆತಿಲ್ಲವೆಂಬ ಅತೃಪ್ತಿಯಿದೆ. ನಮ್ಮ ಹೆಸರಿನಲ್ಲಿ ಬಲಿಷ್ಟ ದಲಿತ ಜಾತಿಯವರು ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆಂದು ಆರೋಪಿಸುತ್ತ ತಮಗೆ ಆದ ಈ ಅನ್ಯಾಯವನ್ನು ಸರಿಪಡಿಸಿಕೊಳ್ಳಲು ಸುಮಾರು 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಇನ್ನೊಬ್ಬರ ಪಾಲು ನಮಗೆ ಬೇಡ. ನಮ್ಮ ಪಾಲಿನ ಹಕ್ಕನ್ನು ನಮಗೆ ಕೊಡಿಯೆಂದು ಒಳಮೀಸಲಾತಿಗಾಗಿ ಮಾದಿಗರು ರಾಜ್ಯದಲ್ಲಿ 1996 ರಿಂದ ಹೋರಾಟ ನಡೆಸಿದ್ದಾರೆ.

ಸರಕಾರ ರಚಿಸಿದ್ದ ಸದಾಶಿವ ಅಯೋಗವು 2012ರಲ್ಲಿ ವರದಿ ಸಲ್ಲಿಸದಾಗಿನಿಂದ ಅದರ ಪರ ಮತ್ತು ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ. ಇದು ಒಡೆದು ಆಳುವ ನೀತಿಯಲ್ಲ. ಇದು ಹಂಚಿ ತಿನ್ನುವ ಮಾನವತವಾದ. ಒಳಮೀಸಲಾತಿಯನ್ನು ವಿರೋಧಿಸುವುದೆಂದರೆ ಮೀಸಲಾತಿಯನ್ನು ಮತ್ತು ಸಮಪಾಲು – ಸಮಬಾಳು ತತ್ವವನ್ನು ವಿರೋಧಿಸುವುದಕ್ಕೆ ಸಮನಾದದ್ದು ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡುವ ಅಪಾಚಾರ ಸಹ ಹೌದು.

ಪರಿಶಿಷ್ಟ ಜಾತಿಯಲ್ಲಿರುವ ಮೀಸಲಾತಿಯನ್ನು ವಿಭಜಿಸಿದರೆ ದಲಿತರ ಒಗ್ಗಟ್ಟು ಹಾಳುಗುತ್ತಿದೆ ಎಂಬುದು ಸುಳ್ಳು. ಸಾಮಾಜಿಕ ನ್ಯಾಯಕ್ಕೆ ಭಂಗ ತರುವವರು ಇಂತಹ ಆರೋಪವನ್ನು ಮಾಡುತ್ತಾರೆ. ಸ್ವಾರ್ಥ ಮತ್ತು ಕೆಲವರು ತಮ್ಮ ಅನೂಕೂಲಕ್ಕೆ ತಕ್ಕ ಹಾಗೆ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆರ್ಥೈಸಿಕೊಳ್ಳುತ್ತಿದ್ದಾರೆ. ಅದ್ದರಿಂದ ಸದಾಶಿವ ಅಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಬಿಡುಗಡೆ ಮಾಡಬೇಕು.

ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

ಡಾ.ಬಿ.ಆರ್.ಅಂಬೇಡ್ಕರ್ ಅವರ ಅಶಯವು ಭಾರತದಲ್ಲಿ ಜನಸಂಖ್ಯೆಯಾಧಾರಿತ ಮೀಸಲಾತಿ ಹಂಚಿಕೆಯಾಗಬೇಕೆನ್ನುವುದು ವಾದವಾಗಿತ್ತು. ದಲಿತರು ಒಳ ಮೀಸಲಾತಿಯನ್ನು ಪಡೆದರೂ ವಿಘಟನೆಗೊಳ್ಳದೆ, ಈ ದೇಶದಲ್ಲಿ ಜಾತಿವ್ಯವಸ್ಥೆ, ಆಸ್ಪೃಶ್ಯತೆ ಇರುವವರೆಗೂ ಅವುಗಳ ವಿರುದ್ಧ ಮತ್ತು ಖಾಸಗಿ ವಲಯದಲ್ಲೂ ಮೀಸಲಾತಿಗಾಗಿ ಹೋರಾಟ ಮಾಡಬೇಕು. ಅದನ್ನು ಬಳಿಸಿಕೊಂಡು ಜಾತಿ ವಿನಾಶಮಾಡದೇ ಹೋದರೆ ಉಳಿಗಾಲವಿಲ್ಲ. ಜಾತಿ ಜಾತಿಗಳ ನಡುವಿನ ಸಮಾನತೆಯು ಜಾತಿಯನ್ನು ನಾಶಮಾಡುತ್ತದೆ ಎನ್ನುವುದನ್ನು ದಲಿತರು ಅರ್ಥಮಾಡಿಕೋಳ್ಳಬೇಕು.

ಇವತ್ತಿನವರೆಗೆ ದಲಿತರ ಮಿಸಲಾತಿಯನ್ನು ಹೊಲೆಯರು, ಮಾದಿಗರು, ಲಂಬಾಣಿಗಳು ಮತ್ತು ಭೋವಿಗಳು – ಈ ನಾಲ್ಕು ಜಾತಿಗಳ ಮಾತ್ರ ಹೆಚ್ಚು ಪಡೆದಿವೆ. ಪರಿಶಿಷ್ಟರಲ್ಲಿನ ಸುಡುಗಾಡು ಸಿದ್ದರು ಸೇರಿದಂತೆ ಆನೇಕ ಸಣ್ಣ ಸಣ್ಣ ದಲಿತ ಜಾತಿಗಳು ಈವರೆಗೂ ಶೇ.1 ರಷ್ಟು ಸಹ ಮೀಸಲಾತಿ ಸೌಲಭ್ಯ ಪಡೆದಿಲ್ಲ. ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟರಲ್ಲಿ ಇರುವ 101 ಜಾತಿಗಳಿಗೆ ಈಗಿರುವ ಶೇ.15 ಮೀಸಲಾತಿಯನ್ನು ಸದಾಶಿವ ಆಯೋಗ ವಿಭಜಿಸಿಕೊಟ್ಟಿದೆ ಎನ್ನಲಾಗುತ್ತಿದೆ. ಇದರ ಪ್ರಕಾರ ಹಂಚಿಕೆ ಮಾಡಬೇಕು. ಇದು ಹಲವು ಸಣ್ಣ ಪರಿಶಿಷ್ಟ ಜಾತಿಗಳಿಗೆ ನೆರವಾಗಲಿದೆ. ಇದನ್ನು ಒಳಮೀಸಲಾತಿ ಎನ್ನಿ, ಮೀಸಲಾತಿ ಪುನರ್ ವಿಂಗಡನೆ ಎನ್ನಿ, ಮೀಸಲಾತಿ ಗುಂಪುಗಳು ಎನ್ನಿ, ಏನು ಬೇಕಾದರೂ ಹೇಳಿ, ಅದು ಸಂವಿಧಾನದ ಯಾವುದೇ ವಿಧಿಗಳ ಉಲ್ಲಂಘನೆಯಾಗುವುದಿಲ್ಲ.

ದಲಿತರಲ್ಲಿನ ಸ್ಪೃಶ್ಯ ಜಾತಿಗಳು ಅಸ್ಪೃಶ್ಯ ಸಮುದಾಯವನ್ನು ಸಹೋದರಂತೆ ಕಾಣಬೇಕು. ಮೀಸಲಾತಿ ಮತ್ತು ಒಳಮೀಸಲಾತಿ ಇದು ಒಂದು ಸಾಮಾಜಿಕ ನ್ಯಾಯ. ಸ್ಪೃಶ್ಯ ಜಾತಿಯವರು ಮತ್ತು ಸಾರ್ವಜನಿಕರು ಇದನ್ನು ಬೆಂಬಲಿಸಿ ಜಾರಿಗೆಗೋಳಿಸಲು ಸರಕಾರಕ್ಕೆ ಒತ್ತಾಯಿಸಬೇಕು.

ಮೀಸಲಾತಿ ಅಸಮರ್ಪಕ ವಿತರಣೆ, ಅಸಮಾನ ಹಂಚಿಕೆಯಿಂದ ದಲಿತ ಜಾತಿಗಳಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಯಾಗಿ ಸಂಬಂಧಗಳು ಕಳೆಯುತ್ತಿವೆ. ಆದ್ದರಿಂದ ಒಳಮೀಸಲಾತಿ ಕುರಿತು ದಲಿತರು ಒಟ್ಟಿಗೆ ಕುಳಿತು ಚರ್ಚಿಸಿಬೇಕು. ಇದನ್ನು ಲಾಭ- ನಷ್ಟದ ದೃಷ್ಟಿಯಿಂದ ಪರಿಗಣಿಸದೇ, ತಾಂತ್ರಿಕ ಕಾರಣಗಳಿಂದ ನೋಡದೇ ನ್ಯಾಯ, ಮಾನವೀಯ ಕಲ್ಪನೆಗಳಿಂದ ವಿಚಾರ ಮಾಡಬೇಕು. ಅದರ ಸಾಮಾಜಿಕ ಅರ್ಥಿಕ ಸಮಸ್ಯೆಗಳನ್ನು ಚರ್ಚಿಸಿ ಅನುಷ್ಟಾನಕ್ಕೆ ಒತ್ತಾಯಿಸಬೇಕು. ದಲಿತರಿಂದಲೇ ದಲಿತರಿಗೆ ಶೋಷಣೆಯಾಗಬಾರದು ಎಂದರೆ ಕೂಡಲೆ ಒಳಮೀಸಲಾತಿ ಜಾರಿಗೆ ತರಬೇಕು. ಮೀಸಲಾತಿ ವರ್ಗೀಕರಣ ಮಾಡಿದರೆ ದಲಿತರ ನಡುವೆ, ಜಾತಿ – ಜಾತಿಗಳ ನಡುವೆ ಸಮಾನತೆ, ಸೌಹರ್ದತೆ, ಜಾತ್ಯತೀತತೆ ಮತ್ತು ಸ್ನೇಹ ಬೆಳೆಯುತ್ತದೆ. ಸ್ಪೃಶ್ಯ ಜಾತಿಗಳು ಪಟ್ಟಭದ್ರ ಹಿತಶಕ್ತಿಗಳ ಕುತಂತ್ರಕ್ಕೆ ಬಲಿಯಾಗದೇ ಮೀಸಲಾತಿ ವರ್ಗೀಕರಣಕ್ಕೆ ಒತ್ತಾಯಿಸಬೇಕು.

  • ಡಾ.ನರಸಿಂಹ ಗುಂಜಹಳ್ಳಿ

ರಾಯಚೂರು ತಾಲೂಕಿನ ಗುಂಜಳ್ಳಿಯ ನರಸಿಂಹ ಅವರು ವಿದ್ಯಾರ್ಥಿಯಾಗಿದ್ದಾಗಿನಿಂದಲೂ ಸಾಮಾಜಿಕ ಚಳುವಳಿಯಲ್ಲಿ ಸಕ್ರಿಯರು. ಬಿಎಂಟಿಸಿ ಕಂಡಕ್ಟರ್ ಆಗಿದ್ದುಕೊಂಡು ಪಿಎಚ್‌ಡಿ ಸಂಶೋಧನೆ ನಡೆಸಿ, ಪದವಿ ಪಡೆದುಕೊಂಡರು. ಇದೀಗ ಕೊಪ್ಪಳದ ಕಾಲೇಜಿನಲ್ಲಿ ಅಧ್ಯಾಪಕರು


ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...