Homeಮುಖಪುಟಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? - ಡಾ.ನರಸಿಂಹ ಗುಂಜಹಳ್ಳಿ

ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ.

- Advertisement -
- Advertisement -

ಒಂದು ಜನಾಂಗ ಸಾಮಾಜಿಕ, ಆರ್ಥಿಕ, ರಾಜಕೀಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಭೌದ್ಧಿಕವಾಗಿ ಶತಶತಮಾನಗಳಿಂದ ಶೋಷಣೆಗೆ ಒಳಗಾಗಿ, ಸಂವಿಧಾನಾತ್ಮಕ ಸೌಲಭ್ಯಗಳಿಂದ ವಂಚಿತರಾದ ಸಮುದಾಯಕ್ಕೆ ಈ ಸ್ಥಿತಿಗಳಿಂದ ಬಿಡುಗಡೆಗೊಳಿಸಲು ಕೆಲವು ಸಂವಿಧಾನಿಕ ವಿಶೇಷ ಸೌಲಭ್ಯಗಳೇ ಮೀಸಲಾತಿ. ಇದರ ಗುರಿ ಸಾಮಾಜಿಕ ನ್ಯಾಯ. ಇಂದು ಸಮಾನತೆಯ ದೇಶ ಕಟ್ಟವುದಕ್ಕೆ ಭೂಮಿ ಮತ್ತು ಮೀಸಲಾತಿ ಇವರೆಡು ಬಹುಮುಖ್ಯವಾದದ್ದು.

ಸರಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಜಾತಿಗಳಿಗೆ ಸಂವಿಧಾನದತ್ತವಾಗಿ ಬಂದಿರುವ ಮೀಸಲಾತಿಯ ಶೇ. 15 ರಲ್ಲಿ ಮಾದಿಗ ಸಮುದಾಯಕ್ಕೆ ಸಿಗಬೇಕಾದ ಪ್ರಮಾಣ ಶೇ.8.ರಷ್ಟು. ಆದರೆ ಇದುವರೆಗೆ ದಕ್ಕಿರುವುದು ಕೇವಲ ಶೇ.2ರಷ್ಟು ಮಾತ್ರ ಎಂಬುದು ಮಾದಿಗರ ಅರೋಪವಾಗಿದೆ. ಪರಿಶಿಷ್ಟ ಜಾತಿಯಲ್ಲಿ ಬಹುಸಂಖ್ಯಾತರಾದ ನಮಗೆ ನ್ಯಾಯಯುತ ಮೀಸಲಾತಿ ದೊರೆತಿಲ್ಲವೆಂಬ ಅತೃಪ್ತಿಯಿದೆ. ನಮ್ಮ ಹೆಸರಿನಲ್ಲಿ ಬಲಿಷ್ಟ ದಲಿತ ಜಾತಿಯವರು ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆಂದು ಆರೋಪಿಸುತ್ತ ತಮಗೆ ಆದ ಈ ಅನ್ಯಾಯವನ್ನು ಸರಿಪಡಿಸಿಕೊಳ್ಳಲು ಸುಮಾರು 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಇನ್ನೊಬ್ಬರ ಪಾಲು ನಮಗೆ ಬೇಡ. ನಮ್ಮ ಪಾಲಿನ ಹಕ್ಕನ್ನು ನಮಗೆ ಕೊಡಿಯೆಂದು ಒಳಮೀಸಲಾತಿಗಾಗಿ ಮಾದಿಗರು ರಾಜ್ಯದಲ್ಲಿ 1996 ರಿಂದ ಹೋರಾಟ ನಡೆಸಿದ್ದಾರೆ.

ಸರಕಾರ ರಚಿಸಿದ್ದ ಸದಾಶಿವ ಅಯೋಗವು 2012ರಲ್ಲಿ ವರದಿ ಸಲ್ಲಿಸದಾಗಿನಿಂದ ಅದರ ಪರ ಮತ್ತು ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ. ಇದು ಒಡೆದು ಆಳುವ ನೀತಿಯಲ್ಲ. ಇದು ಹಂಚಿ ತಿನ್ನುವ ಮಾನವತವಾದ. ಒಳಮೀಸಲಾತಿಯನ್ನು ವಿರೋಧಿಸುವುದೆಂದರೆ ಮೀಸಲಾತಿಯನ್ನು ಮತ್ತು ಸಮಪಾಲು – ಸಮಬಾಳು ತತ್ವವನ್ನು ವಿರೋಧಿಸುವುದಕ್ಕೆ ಸಮನಾದದ್ದು ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡುವ ಅಪಾಚಾರ ಸಹ ಹೌದು.

ಪರಿಶಿಷ್ಟ ಜಾತಿಯಲ್ಲಿರುವ ಮೀಸಲಾತಿಯನ್ನು ವಿಭಜಿಸಿದರೆ ದಲಿತರ ಒಗ್ಗಟ್ಟು ಹಾಳುಗುತ್ತಿದೆ ಎಂಬುದು ಸುಳ್ಳು. ಸಾಮಾಜಿಕ ನ್ಯಾಯಕ್ಕೆ ಭಂಗ ತರುವವರು ಇಂತಹ ಆರೋಪವನ್ನು ಮಾಡುತ್ತಾರೆ. ಸ್ವಾರ್ಥ ಮತ್ತು ಕೆಲವರು ತಮ್ಮ ಅನೂಕೂಲಕ್ಕೆ ತಕ್ಕ ಹಾಗೆ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆರ್ಥೈಸಿಕೊಳ್ಳುತ್ತಿದ್ದಾರೆ. ಅದ್ದರಿಂದ ಸದಾಶಿವ ಅಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಬಿಡುಗಡೆ ಮಾಡಬೇಕು.

ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

ಡಾ.ಬಿ.ಆರ್.ಅಂಬೇಡ್ಕರ್ ಅವರ ಅಶಯವು ಭಾರತದಲ್ಲಿ ಜನಸಂಖ್ಯೆಯಾಧಾರಿತ ಮೀಸಲಾತಿ ಹಂಚಿಕೆಯಾಗಬೇಕೆನ್ನುವುದು ವಾದವಾಗಿತ್ತು. ದಲಿತರು ಒಳ ಮೀಸಲಾತಿಯನ್ನು ಪಡೆದರೂ ವಿಘಟನೆಗೊಳ್ಳದೆ, ಈ ದೇಶದಲ್ಲಿ ಜಾತಿವ್ಯವಸ್ಥೆ, ಆಸ್ಪೃಶ್ಯತೆ ಇರುವವರೆಗೂ ಅವುಗಳ ವಿರುದ್ಧ ಮತ್ತು ಖಾಸಗಿ ವಲಯದಲ್ಲೂ ಮೀಸಲಾತಿಗಾಗಿ ಹೋರಾಟ ಮಾಡಬೇಕು. ಅದನ್ನು ಬಳಿಸಿಕೊಂಡು ಜಾತಿ ವಿನಾಶಮಾಡದೇ ಹೋದರೆ ಉಳಿಗಾಲವಿಲ್ಲ. ಜಾತಿ ಜಾತಿಗಳ ನಡುವಿನ ಸಮಾನತೆಯು ಜಾತಿಯನ್ನು ನಾಶಮಾಡುತ್ತದೆ ಎನ್ನುವುದನ್ನು ದಲಿತರು ಅರ್ಥಮಾಡಿಕೋಳ್ಳಬೇಕು.

ಇವತ್ತಿನವರೆಗೆ ದಲಿತರ ಮಿಸಲಾತಿಯನ್ನು ಹೊಲೆಯರು, ಮಾದಿಗರು, ಲಂಬಾಣಿಗಳು ಮತ್ತು ಭೋವಿಗಳು – ಈ ನಾಲ್ಕು ಜಾತಿಗಳ ಮಾತ್ರ ಹೆಚ್ಚು ಪಡೆದಿವೆ. ಪರಿಶಿಷ್ಟರಲ್ಲಿನ ಸುಡುಗಾಡು ಸಿದ್ದರು ಸೇರಿದಂತೆ ಆನೇಕ ಸಣ್ಣ ಸಣ್ಣ ದಲಿತ ಜಾತಿಗಳು ಈವರೆಗೂ ಶೇ.1 ರಷ್ಟು ಸಹ ಮೀಸಲಾತಿ ಸೌಲಭ್ಯ ಪಡೆದಿಲ್ಲ. ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟರಲ್ಲಿ ಇರುವ 101 ಜಾತಿಗಳಿಗೆ ಈಗಿರುವ ಶೇ.15 ಮೀಸಲಾತಿಯನ್ನು ಸದಾಶಿವ ಆಯೋಗ ವಿಭಜಿಸಿಕೊಟ್ಟಿದೆ ಎನ್ನಲಾಗುತ್ತಿದೆ. ಇದರ ಪ್ರಕಾರ ಹಂಚಿಕೆ ಮಾಡಬೇಕು. ಇದು ಹಲವು ಸಣ್ಣ ಪರಿಶಿಷ್ಟ ಜಾತಿಗಳಿಗೆ ನೆರವಾಗಲಿದೆ. ಇದನ್ನು ಒಳಮೀಸಲಾತಿ ಎನ್ನಿ, ಮೀಸಲಾತಿ ಪುನರ್ ವಿಂಗಡನೆ ಎನ್ನಿ, ಮೀಸಲಾತಿ ಗುಂಪುಗಳು ಎನ್ನಿ, ಏನು ಬೇಕಾದರೂ ಹೇಳಿ, ಅದು ಸಂವಿಧಾನದ ಯಾವುದೇ ವಿಧಿಗಳ ಉಲ್ಲಂಘನೆಯಾಗುವುದಿಲ್ಲ.

ದಲಿತರಲ್ಲಿನ ಸ್ಪೃಶ್ಯ ಜಾತಿಗಳು ಅಸ್ಪೃಶ್ಯ ಸಮುದಾಯವನ್ನು ಸಹೋದರಂತೆ ಕಾಣಬೇಕು. ಮೀಸಲಾತಿ ಮತ್ತು ಒಳಮೀಸಲಾತಿ ಇದು ಒಂದು ಸಾಮಾಜಿಕ ನ್ಯಾಯ. ಸ್ಪೃಶ್ಯ ಜಾತಿಯವರು ಮತ್ತು ಸಾರ್ವಜನಿಕರು ಇದನ್ನು ಬೆಂಬಲಿಸಿ ಜಾರಿಗೆಗೋಳಿಸಲು ಸರಕಾರಕ್ಕೆ ಒತ್ತಾಯಿಸಬೇಕು.

ಮೀಸಲಾತಿ ಅಸಮರ್ಪಕ ವಿತರಣೆ, ಅಸಮಾನ ಹಂಚಿಕೆಯಿಂದ ದಲಿತ ಜಾತಿಗಳಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಯಾಗಿ ಸಂಬಂಧಗಳು ಕಳೆಯುತ್ತಿವೆ. ಆದ್ದರಿಂದ ಒಳಮೀಸಲಾತಿ ಕುರಿತು ದಲಿತರು ಒಟ್ಟಿಗೆ ಕುಳಿತು ಚರ್ಚಿಸಿಬೇಕು. ಇದನ್ನು ಲಾಭ- ನಷ್ಟದ ದೃಷ್ಟಿಯಿಂದ ಪರಿಗಣಿಸದೇ, ತಾಂತ್ರಿಕ ಕಾರಣಗಳಿಂದ ನೋಡದೇ ನ್ಯಾಯ, ಮಾನವೀಯ ಕಲ್ಪನೆಗಳಿಂದ ವಿಚಾರ ಮಾಡಬೇಕು. ಅದರ ಸಾಮಾಜಿಕ ಅರ್ಥಿಕ ಸಮಸ್ಯೆಗಳನ್ನು ಚರ್ಚಿಸಿ ಅನುಷ್ಟಾನಕ್ಕೆ ಒತ್ತಾಯಿಸಬೇಕು. ದಲಿತರಿಂದಲೇ ದಲಿತರಿಗೆ ಶೋಷಣೆಯಾಗಬಾರದು ಎಂದರೆ ಕೂಡಲೆ ಒಳಮೀಸಲಾತಿ ಜಾರಿಗೆ ತರಬೇಕು. ಮೀಸಲಾತಿ ವರ್ಗೀಕರಣ ಮಾಡಿದರೆ ದಲಿತರ ನಡುವೆ, ಜಾತಿ – ಜಾತಿಗಳ ನಡುವೆ ಸಮಾನತೆ, ಸೌಹರ್ದತೆ, ಜಾತ್ಯತೀತತೆ ಮತ್ತು ಸ್ನೇಹ ಬೆಳೆಯುತ್ತದೆ. ಸ್ಪೃಶ್ಯ ಜಾತಿಗಳು ಪಟ್ಟಭದ್ರ ಹಿತಶಕ್ತಿಗಳ ಕುತಂತ್ರಕ್ಕೆ ಬಲಿಯಾಗದೇ ಮೀಸಲಾತಿ ವರ್ಗೀಕರಣಕ್ಕೆ ಒತ್ತಾಯಿಸಬೇಕು.

  • ಡಾ.ನರಸಿಂಹ ಗುಂಜಹಳ್ಳಿ

ರಾಯಚೂರು ತಾಲೂಕಿನ ಗುಂಜಳ್ಳಿಯ ನರಸಿಂಹ ಅವರು ವಿದ್ಯಾರ್ಥಿಯಾಗಿದ್ದಾಗಿನಿಂದಲೂ ಸಾಮಾಜಿಕ ಚಳುವಳಿಯಲ್ಲಿ ಸಕ್ರಿಯರು. ಬಿಎಂಟಿಸಿ ಕಂಡಕ್ಟರ್ ಆಗಿದ್ದುಕೊಂಡು ಪಿಎಚ್‌ಡಿ ಸಂಶೋಧನೆ ನಡೆಸಿ, ಪದವಿ ಪಡೆದುಕೊಂಡರು. ಇದೀಗ ಕೊಪ್ಪಳದ ಕಾಲೇಜಿನಲ್ಲಿ ಅಧ್ಯಾಪಕರು


ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...