Homeಮುಖಪುಟಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? - ಡಾ.ನರಸಿಂಹ ಗುಂಜಹಳ್ಳಿ

ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ.

- Advertisement -
- Advertisement -

ಒಂದು ಜನಾಂಗ ಸಾಮಾಜಿಕ, ಆರ್ಥಿಕ, ರಾಜಕೀಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಭೌದ್ಧಿಕವಾಗಿ ಶತಶತಮಾನಗಳಿಂದ ಶೋಷಣೆಗೆ ಒಳಗಾಗಿ, ಸಂವಿಧಾನಾತ್ಮಕ ಸೌಲಭ್ಯಗಳಿಂದ ವಂಚಿತರಾದ ಸಮುದಾಯಕ್ಕೆ ಈ ಸ್ಥಿತಿಗಳಿಂದ ಬಿಡುಗಡೆಗೊಳಿಸಲು ಕೆಲವು ಸಂವಿಧಾನಿಕ ವಿಶೇಷ ಸೌಲಭ್ಯಗಳೇ ಮೀಸಲಾತಿ. ಇದರ ಗುರಿ ಸಾಮಾಜಿಕ ನ್ಯಾಯ. ಇಂದು ಸಮಾನತೆಯ ದೇಶ ಕಟ್ಟವುದಕ್ಕೆ ಭೂಮಿ ಮತ್ತು ಮೀಸಲಾತಿ ಇವರೆಡು ಬಹುಮುಖ್ಯವಾದದ್ದು.

ಸರಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಜಾತಿಗಳಿಗೆ ಸಂವಿಧಾನದತ್ತವಾಗಿ ಬಂದಿರುವ ಮೀಸಲಾತಿಯ ಶೇ. 15 ರಲ್ಲಿ ಮಾದಿಗ ಸಮುದಾಯಕ್ಕೆ ಸಿಗಬೇಕಾದ ಪ್ರಮಾಣ ಶೇ.8.ರಷ್ಟು. ಆದರೆ ಇದುವರೆಗೆ ದಕ್ಕಿರುವುದು ಕೇವಲ ಶೇ.2ರಷ್ಟು ಮಾತ್ರ ಎಂಬುದು ಮಾದಿಗರ ಅರೋಪವಾಗಿದೆ. ಪರಿಶಿಷ್ಟ ಜಾತಿಯಲ್ಲಿ ಬಹುಸಂಖ್ಯಾತರಾದ ನಮಗೆ ನ್ಯಾಯಯುತ ಮೀಸಲಾತಿ ದೊರೆತಿಲ್ಲವೆಂಬ ಅತೃಪ್ತಿಯಿದೆ. ನಮ್ಮ ಹೆಸರಿನಲ್ಲಿ ಬಲಿಷ್ಟ ದಲಿತ ಜಾತಿಯವರು ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆಂದು ಆರೋಪಿಸುತ್ತ ತಮಗೆ ಆದ ಈ ಅನ್ಯಾಯವನ್ನು ಸರಿಪಡಿಸಿಕೊಳ್ಳಲು ಸುಮಾರು 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಇನ್ನೊಬ್ಬರ ಪಾಲು ನಮಗೆ ಬೇಡ. ನಮ್ಮ ಪಾಲಿನ ಹಕ್ಕನ್ನು ನಮಗೆ ಕೊಡಿಯೆಂದು ಒಳಮೀಸಲಾತಿಗಾಗಿ ಮಾದಿಗರು ರಾಜ್ಯದಲ್ಲಿ 1996 ರಿಂದ ಹೋರಾಟ ನಡೆಸಿದ್ದಾರೆ.

ಸರಕಾರ ರಚಿಸಿದ್ದ ಸದಾಶಿವ ಅಯೋಗವು 2012ರಲ್ಲಿ ವರದಿ ಸಲ್ಲಿಸದಾಗಿನಿಂದ ಅದರ ಪರ ಮತ್ತು ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ. ಇದು ಒಡೆದು ಆಳುವ ನೀತಿಯಲ್ಲ. ಇದು ಹಂಚಿ ತಿನ್ನುವ ಮಾನವತವಾದ. ಒಳಮೀಸಲಾತಿಯನ್ನು ವಿರೋಧಿಸುವುದೆಂದರೆ ಮೀಸಲಾತಿಯನ್ನು ಮತ್ತು ಸಮಪಾಲು – ಸಮಬಾಳು ತತ್ವವನ್ನು ವಿರೋಧಿಸುವುದಕ್ಕೆ ಸಮನಾದದ್ದು ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡುವ ಅಪಾಚಾರ ಸಹ ಹೌದು.

ಪರಿಶಿಷ್ಟ ಜಾತಿಯಲ್ಲಿರುವ ಮೀಸಲಾತಿಯನ್ನು ವಿಭಜಿಸಿದರೆ ದಲಿತರ ಒಗ್ಗಟ್ಟು ಹಾಳುಗುತ್ತಿದೆ ಎಂಬುದು ಸುಳ್ಳು. ಸಾಮಾಜಿಕ ನ್ಯಾಯಕ್ಕೆ ಭಂಗ ತರುವವರು ಇಂತಹ ಆರೋಪವನ್ನು ಮಾಡುತ್ತಾರೆ. ಸ್ವಾರ್ಥ ಮತ್ತು ಕೆಲವರು ತಮ್ಮ ಅನೂಕೂಲಕ್ಕೆ ತಕ್ಕ ಹಾಗೆ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆರ್ಥೈಸಿಕೊಳ್ಳುತ್ತಿದ್ದಾರೆ. ಅದ್ದರಿಂದ ಸದಾಶಿವ ಅಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಬಿಡುಗಡೆ ಮಾಡಬೇಕು.

ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

ಡಾ.ಬಿ.ಆರ್.ಅಂಬೇಡ್ಕರ್ ಅವರ ಅಶಯವು ಭಾರತದಲ್ಲಿ ಜನಸಂಖ್ಯೆಯಾಧಾರಿತ ಮೀಸಲಾತಿ ಹಂಚಿಕೆಯಾಗಬೇಕೆನ್ನುವುದು ವಾದವಾಗಿತ್ತು. ದಲಿತರು ಒಳ ಮೀಸಲಾತಿಯನ್ನು ಪಡೆದರೂ ವಿಘಟನೆಗೊಳ್ಳದೆ, ಈ ದೇಶದಲ್ಲಿ ಜಾತಿವ್ಯವಸ್ಥೆ, ಆಸ್ಪೃಶ್ಯತೆ ಇರುವವರೆಗೂ ಅವುಗಳ ವಿರುದ್ಧ ಮತ್ತು ಖಾಸಗಿ ವಲಯದಲ್ಲೂ ಮೀಸಲಾತಿಗಾಗಿ ಹೋರಾಟ ಮಾಡಬೇಕು. ಅದನ್ನು ಬಳಿಸಿಕೊಂಡು ಜಾತಿ ವಿನಾಶಮಾಡದೇ ಹೋದರೆ ಉಳಿಗಾಲವಿಲ್ಲ. ಜಾತಿ ಜಾತಿಗಳ ನಡುವಿನ ಸಮಾನತೆಯು ಜಾತಿಯನ್ನು ನಾಶಮಾಡುತ್ತದೆ ಎನ್ನುವುದನ್ನು ದಲಿತರು ಅರ್ಥಮಾಡಿಕೋಳ್ಳಬೇಕು.

ಇವತ್ತಿನವರೆಗೆ ದಲಿತರ ಮಿಸಲಾತಿಯನ್ನು ಹೊಲೆಯರು, ಮಾದಿಗರು, ಲಂಬಾಣಿಗಳು ಮತ್ತು ಭೋವಿಗಳು – ಈ ನಾಲ್ಕು ಜಾತಿಗಳ ಮಾತ್ರ ಹೆಚ್ಚು ಪಡೆದಿವೆ. ಪರಿಶಿಷ್ಟರಲ್ಲಿನ ಸುಡುಗಾಡು ಸಿದ್ದರು ಸೇರಿದಂತೆ ಆನೇಕ ಸಣ್ಣ ಸಣ್ಣ ದಲಿತ ಜಾತಿಗಳು ಈವರೆಗೂ ಶೇ.1 ರಷ್ಟು ಸಹ ಮೀಸಲಾತಿ ಸೌಲಭ್ಯ ಪಡೆದಿಲ್ಲ. ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟರಲ್ಲಿ ಇರುವ 101 ಜಾತಿಗಳಿಗೆ ಈಗಿರುವ ಶೇ.15 ಮೀಸಲಾತಿಯನ್ನು ಸದಾಶಿವ ಆಯೋಗ ವಿಭಜಿಸಿಕೊಟ್ಟಿದೆ ಎನ್ನಲಾಗುತ್ತಿದೆ. ಇದರ ಪ್ರಕಾರ ಹಂಚಿಕೆ ಮಾಡಬೇಕು. ಇದು ಹಲವು ಸಣ್ಣ ಪರಿಶಿಷ್ಟ ಜಾತಿಗಳಿಗೆ ನೆರವಾಗಲಿದೆ. ಇದನ್ನು ಒಳಮೀಸಲಾತಿ ಎನ್ನಿ, ಮೀಸಲಾತಿ ಪುನರ್ ವಿಂಗಡನೆ ಎನ್ನಿ, ಮೀಸಲಾತಿ ಗುಂಪುಗಳು ಎನ್ನಿ, ಏನು ಬೇಕಾದರೂ ಹೇಳಿ, ಅದು ಸಂವಿಧಾನದ ಯಾವುದೇ ವಿಧಿಗಳ ಉಲ್ಲಂಘನೆಯಾಗುವುದಿಲ್ಲ.

ದಲಿತರಲ್ಲಿನ ಸ್ಪೃಶ್ಯ ಜಾತಿಗಳು ಅಸ್ಪೃಶ್ಯ ಸಮುದಾಯವನ್ನು ಸಹೋದರಂತೆ ಕಾಣಬೇಕು. ಮೀಸಲಾತಿ ಮತ್ತು ಒಳಮೀಸಲಾತಿ ಇದು ಒಂದು ಸಾಮಾಜಿಕ ನ್ಯಾಯ. ಸ್ಪೃಶ್ಯ ಜಾತಿಯವರು ಮತ್ತು ಸಾರ್ವಜನಿಕರು ಇದನ್ನು ಬೆಂಬಲಿಸಿ ಜಾರಿಗೆಗೋಳಿಸಲು ಸರಕಾರಕ್ಕೆ ಒತ್ತಾಯಿಸಬೇಕು.

ಮೀಸಲಾತಿ ಅಸಮರ್ಪಕ ವಿತರಣೆ, ಅಸಮಾನ ಹಂಚಿಕೆಯಿಂದ ದಲಿತ ಜಾತಿಗಳಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಯಾಗಿ ಸಂಬಂಧಗಳು ಕಳೆಯುತ್ತಿವೆ. ಆದ್ದರಿಂದ ಒಳಮೀಸಲಾತಿ ಕುರಿತು ದಲಿತರು ಒಟ್ಟಿಗೆ ಕುಳಿತು ಚರ್ಚಿಸಿಬೇಕು. ಇದನ್ನು ಲಾಭ- ನಷ್ಟದ ದೃಷ್ಟಿಯಿಂದ ಪರಿಗಣಿಸದೇ, ತಾಂತ್ರಿಕ ಕಾರಣಗಳಿಂದ ನೋಡದೇ ನ್ಯಾಯ, ಮಾನವೀಯ ಕಲ್ಪನೆಗಳಿಂದ ವಿಚಾರ ಮಾಡಬೇಕು. ಅದರ ಸಾಮಾಜಿಕ ಅರ್ಥಿಕ ಸಮಸ್ಯೆಗಳನ್ನು ಚರ್ಚಿಸಿ ಅನುಷ್ಟಾನಕ್ಕೆ ಒತ್ತಾಯಿಸಬೇಕು. ದಲಿತರಿಂದಲೇ ದಲಿತರಿಗೆ ಶೋಷಣೆಯಾಗಬಾರದು ಎಂದರೆ ಕೂಡಲೆ ಒಳಮೀಸಲಾತಿ ಜಾರಿಗೆ ತರಬೇಕು. ಮೀಸಲಾತಿ ವರ್ಗೀಕರಣ ಮಾಡಿದರೆ ದಲಿತರ ನಡುವೆ, ಜಾತಿ – ಜಾತಿಗಳ ನಡುವೆ ಸಮಾನತೆ, ಸೌಹರ್ದತೆ, ಜಾತ್ಯತೀತತೆ ಮತ್ತು ಸ್ನೇಹ ಬೆಳೆಯುತ್ತದೆ. ಸ್ಪೃಶ್ಯ ಜಾತಿಗಳು ಪಟ್ಟಭದ್ರ ಹಿತಶಕ್ತಿಗಳ ಕುತಂತ್ರಕ್ಕೆ ಬಲಿಯಾಗದೇ ಮೀಸಲಾತಿ ವರ್ಗೀಕರಣಕ್ಕೆ ಒತ್ತಾಯಿಸಬೇಕು.

  • ಡಾ.ನರಸಿಂಹ ಗುಂಜಹಳ್ಳಿ

ರಾಯಚೂರು ತಾಲೂಕಿನ ಗುಂಜಳ್ಳಿಯ ನರಸಿಂಹ ಅವರು ವಿದ್ಯಾರ್ಥಿಯಾಗಿದ್ದಾಗಿನಿಂದಲೂ ಸಾಮಾಜಿಕ ಚಳುವಳಿಯಲ್ಲಿ ಸಕ್ರಿಯರು. ಬಿಎಂಟಿಸಿ ಕಂಡಕ್ಟರ್ ಆಗಿದ್ದುಕೊಂಡು ಪಿಎಚ್‌ಡಿ ಸಂಶೋಧನೆ ನಡೆಸಿ, ಪದವಿ ಪಡೆದುಕೊಂಡರು. ಇದೀಗ ಕೊಪ್ಪಳದ ಕಾಲೇಜಿನಲ್ಲಿ ಅಧ್ಯಾಪಕರು


ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...