Homeಮುಖಪುಟಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? - ಡಾ.ನರಸಿಂಹ ಗುಂಜಹಳ್ಳಿ

ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ.

- Advertisement -
- Advertisement -

ಒಂದು ಜನಾಂಗ ಸಾಮಾಜಿಕ, ಆರ್ಥಿಕ, ರಾಜಕೀಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಭೌದ್ಧಿಕವಾಗಿ ಶತಶತಮಾನಗಳಿಂದ ಶೋಷಣೆಗೆ ಒಳಗಾಗಿ, ಸಂವಿಧಾನಾತ್ಮಕ ಸೌಲಭ್ಯಗಳಿಂದ ವಂಚಿತರಾದ ಸಮುದಾಯಕ್ಕೆ ಈ ಸ್ಥಿತಿಗಳಿಂದ ಬಿಡುಗಡೆಗೊಳಿಸಲು ಕೆಲವು ಸಂವಿಧಾನಿಕ ವಿಶೇಷ ಸೌಲಭ್ಯಗಳೇ ಮೀಸಲಾತಿ. ಇದರ ಗುರಿ ಸಾಮಾಜಿಕ ನ್ಯಾಯ. ಇಂದು ಸಮಾನತೆಯ ದೇಶ ಕಟ್ಟವುದಕ್ಕೆ ಭೂಮಿ ಮತ್ತು ಮೀಸಲಾತಿ ಇವರೆಡು ಬಹುಮುಖ್ಯವಾದದ್ದು.

ಸರಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಜಾತಿಗಳಿಗೆ ಸಂವಿಧಾನದತ್ತವಾಗಿ ಬಂದಿರುವ ಮೀಸಲಾತಿಯ ಶೇ. 15 ರಲ್ಲಿ ಮಾದಿಗ ಸಮುದಾಯಕ್ಕೆ ಸಿಗಬೇಕಾದ ಪ್ರಮಾಣ ಶೇ.8.ರಷ್ಟು. ಆದರೆ ಇದುವರೆಗೆ ದಕ್ಕಿರುವುದು ಕೇವಲ ಶೇ.2ರಷ್ಟು ಮಾತ್ರ ಎಂಬುದು ಮಾದಿಗರ ಅರೋಪವಾಗಿದೆ. ಪರಿಶಿಷ್ಟ ಜಾತಿಯಲ್ಲಿ ಬಹುಸಂಖ್ಯಾತರಾದ ನಮಗೆ ನ್ಯಾಯಯುತ ಮೀಸಲಾತಿ ದೊರೆತಿಲ್ಲವೆಂಬ ಅತೃಪ್ತಿಯಿದೆ. ನಮ್ಮ ಹೆಸರಿನಲ್ಲಿ ಬಲಿಷ್ಟ ದಲಿತ ಜಾತಿಯವರು ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆಂದು ಆರೋಪಿಸುತ್ತ ತಮಗೆ ಆದ ಈ ಅನ್ಯಾಯವನ್ನು ಸರಿಪಡಿಸಿಕೊಳ್ಳಲು ಸುಮಾರು 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಇನ್ನೊಬ್ಬರ ಪಾಲು ನಮಗೆ ಬೇಡ. ನಮ್ಮ ಪಾಲಿನ ಹಕ್ಕನ್ನು ನಮಗೆ ಕೊಡಿಯೆಂದು ಒಳಮೀಸಲಾತಿಗಾಗಿ ಮಾದಿಗರು ರಾಜ್ಯದಲ್ಲಿ 1996 ರಿಂದ ಹೋರಾಟ ನಡೆಸಿದ್ದಾರೆ.

ಸರಕಾರ ರಚಿಸಿದ್ದ ಸದಾಶಿವ ಅಯೋಗವು 2012ರಲ್ಲಿ ವರದಿ ಸಲ್ಲಿಸದಾಗಿನಿಂದ ಅದರ ಪರ ಮತ್ತು ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ. ಇದು ಒಡೆದು ಆಳುವ ನೀತಿಯಲ್ಲ. ಇದು ಹಂಚಿ ತಿನ್ನುವ ಮಾನವತವಾದ. ಒಳಮೀಸಲಾತಿಯನ್ನು ವಿರೋಧಿಸುವುದೆಂದರೆ ಮೀಸಲಾತಿಯನ್ನು ಮತ್ತು ಸಮಪಾಲು – ಸಮಬಾಳು ತತ್ವವನ್ನು ವಿರೋಧಿಸುವುದಕ್ಕೆ ಸಮನಾದದ್ದು ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡುವ ಅಪಾಚಾರ ಸಹ ಹೌದು.

ಪರಿಶಿಷ್ಟ ಜಾತಿಯಲ್ಲಿರುವ ಮೀಸಲಾತಿಯನ್ನು ವಿಭಜಿಸಿದರೆ ದಲಿತರ ಒಗ್ಗಟ್ಟು ಹಾಳುಗುತ್ತಿದೆ ಎಂಬುದು ಸುಳ್ಳು. ಸಾಮಾಜಿಕ ನ್ಯಾಯಕ್ಕೆ ಭಂಗ ತರುವವರು ಇಂತಹ ಆರೋಪವನ್ನು ಮಾಡುತ್ತಾರೆ. ಸ್ವಾರ್ಥ ಮತ್ತು ಕೆಲವರು ತಮ್ಮ ಅನೂಕೂಲಕ್ಕೆ ತಕ್ಕ ಹಾಗೆ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆರ್ಥೈಸಿಕೊಳ್ಳುತ್ತಿದ್ದಾರೆ. ಅದ್ದರಿಂದ ಸದಾಶಿವ ಅಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಬಿಡುಗಡೆ ಮಾಡಬೇಕು.

ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

ಡಾ.ಬಿ.ಆರ್.ಅಂಬೇಡ್ಕರ್ ಅವರ ಅಶಯವು ಭಾರತದಲ್ಲಿ ಜನಸಂಖ್ಯೆಯಾಧಾರಿತ ಮೀಸಲಾತಿ ಹಂಚಿಕೆಯಾಗಬೇಕೆನ್ನುವುದು ವಾದವಾಗಿತ್ತು. ದಲಿತರು ಒಳ ಮೀಸಲಾತಿಯನ್ನು ಪಡೆದರೂ ವಿಘಟನೆಗೊಳ್ಳದೆ, ಈ ದೇಶದಲ್ಲಿ ಜಾತಿವ್ಯವಸ್ಥೆ, ಆಸ್ಪೃಶ್ಯತೆ ಇರುವವರೆಗೂ ಅವುಗಳ ವಿರುದ್ಧ ಮತ್ತು ಖಾಸಗಿ ವಲಯದಲ್ಲೂ ಮೀಸಲಾತಿಗಾಗಿ ಹೋರಾಟ ಮಾಡಬೇಕು. ಅದನ್ನು ಬಳಿಸಿಕೊಂಡು ಜಾತಿ ವಿನಾಶಮಾಡದೇ ಹೋದರೆ ಉಳಿಗಾಲವಿಲ್ಲ. ಜಾತಿ ಜಾತಿಗಳ ನಡುವಿನ ಸಮಾನತೆಯು ಜಾತಿಯನ್ನು ನಾಶಮಾಡುತ್ತದೆ ಎನ್ನುವುದನ್ನು ದಲಿತರು ಅರ್ಥಮಾಡಿಕೋಳ್ಳಬೇಕು.

ಇವತ್ತಿನವರೆಗೆ ದಲಿತರ ಮಿಸಲಾತಿಯನ್ನು ಹೊಲೆಯರು, ಮಾದಿಗರು, ಲಂಬಾಣಿಗಳು ಮತ್ತು ಭೋವಿಗಳು – ಈ ನಾಲ್ಕು ಜಾತಿಗಳ ಮಾತ್ರ ಹೆಚ್ಚು ಪಡೆದಿವೆ. ಪರಿಶಿಷ್ಟರಲ್ಲಿನ ಸುಡುಗಾಡು ಸಿದ್ದರು ಸೇರಿದಂತೆ ಆನೇಕ ಸಣ್ಣ ಸಣ್ಣ ದಲಿತ ಜಾತಿಗಳು ಈವರೆಗೂ ಶೇ.1 ರಷ್ಟು ಸಹ ಮೀಸಲಾತಿ ಸೌಲಭ್ಯ ಪಡೆದಿಲ್ಲ. ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟರಲ್ಲಿ ಇರುವ 101 ಜಾತಿಗಳಿಗೆ ಈಗಿರುವ ಶೇ.15 ಮೀಸಲಾತಿಯನ್ನು ಸದಾಶಿವ ಆಯೋಗ ವಿಭಜಿಸಿಕೊಟ್ಟಿದೆ ಎನ್ನಲಾಗುತ್ತಿದೆ. ಇದರ ಪ್ರಕಾರ ಹಂಚಿಕೆ ಮಾಡಬೇಕು. ಇದು ಹಲವು ಸಣ್ಣ ಪರಿಶಿಷ್ಟ ಜಾತಿಗಳಿಗೆ ನೆರವಾಗಲಿದೆ. ಇದನ್ನು ಒಳಮೀಸಲಾತಿ ಎನ್ನಿ, ಮೀಸಲಾತಿ ಪುನರ್ ವಿಂಗಡನೆ ಎನ್ನಿ, ಮೀಸಲಾತಿ ಗುಂಪುಗಳು ಎನ್ನಿ, ಏನು ಬೇಕಾದರೂ ಹೇಳಿ, ಅದು ಸಂವಿಧಾನದ ಯಾವುದೇ ವಿಧಿಗಳ ಉಲ್ಲಂಘನೆಯಾಗುವುದಿಲ್ಲ.

ದಲಿತರಲ್ಲಿನ ಸ್ಪೃಶ್ಯ ಜಾತಿಗಳು ಅಸ್ಪೃಶ್ಯ ಸಮುದಾಯವನ್ನು ಸಹೋದರಂತೆ ಕಾಣಬೇಕು. ಮೀಸಲಾತಿ ಮತ್ತು ಒಳಮೀಸಲಾತಿ ಇದು ಒಂದು ಸಾಮಾಜಿಕ ನ್ಯಾಯ. ಸ್ಪೃಶ್ಯ ಜಾತಿಯವರು ಮತ್ತು ಸಾರ್ವಜನಿಕರು ಇದನ್ನು ಬೆಂಬಲಿಸಿ ಜಾರಿಗೆಗೋಳಿಸಲು ಸರಕಾರಕ್ಕೆ ಒತ್ತಾಯಿಸಬೇಕು.

ಮೀಸಲಾತಿ ಅಸಮರ್ಪಕ ವಿತರಣೆ, ಅಸಮಾನ ಹಂಚಿಕೆಯಿಂದ ದಲಿತ ಜಾತಿಗಳಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಯಾಗಿ ಸಂಬಂಧಗಳು ಕಳೆಯುತ್ತಿವೆ. ಆದ್ದರಿಂದ ಒಳಮೀಸಲಾತಿ ಕುರಿತು ದಲಿತರು ಒಟ್ಟಿಗೆ ಕುಳಿತು ಚರ್ಚಿಸಿಬೇಕು. ಇದನ್ನು ಲಾಭ- ನಷ್ಟದ ದೃಷ್ಟಿಯಿಂದ ಪರಿಗಣಿಸದೇ, ತಾಂತ್ರಿಕ ಕಾರಣಗಳಿಂದ ನೋಡದೇ ನ್ಯಾಯ, ಮಾನವೀಯ ಕಲ್ಪನೆಗಳಿಂದ ವಿಚಾರ ಮಾಡಬೇಕು. ಅದರ ಸಾಮಾಜಿಕ ಅರ್ಥಿಕ ಸಮಸ್ಯೆಗಳನ್ನು ಚರ್ಚಿಸಿ ಅನುಷ್ಟಾನಕ್ಕೆ ಒತ್ತಾಯಿಸಬೇಕು. ದಲಿತರಿಂದಲೇ ದಲಿತರಿಗೆ ಶೋಷಣೆಯಾಗಬಾರದು ಎಂದರೆ ಕೂಡಲೆ ಒಳಮೀಸಲಾತಿ ಜಾರಿಗೆ ತರಬೇಕು. ಮೀಸಲಾತಿ ವರ್ಗೀಕರಣ ಮಾಡಿದರೆ ದಲಿತರ ನಡುವೆ, ಜಾತಿ – ಜಾತಿಗಳ ನಡುವೆ ಸಮಾನತೆ, ಸೌಹರ್ದತೆ, ಜಾತ್ಯತೀತತೆ ಮತ್ತು ಸ್ನೇಹ ಬೆಳೆಯುತ್ತದೆ. ಸ್ಪೃಶ್ಯ ಜಾತಿಗಳು ಪಟ್ಟಭದ್ರ ಹಿತಶಕ್ತಿಗಳ ಕುತಂತ್ರಕ್ಕೆ ಬಲಿಯಾಗದೇ ಮೀಸಲಾತಿ ವರ್ಗೀಕರಣಕ್ಕೆ ಒತ್ತಾಯಿಸಬೇಕು.

  • ಡಾ.ನರಸಿಂಹ ಗುಂಜಹಳ್ಳಿ

ರಾಯಚೂರು ತಾಲೂಕಿನ ಗುಂಜಳ್ಳಿಯ ನರಸಿಂಹ ಅವರು ವಿದ್ಯಾರ್ಥಿಯಾಗಿದ್ದಾಗಿನಿಂದಲೂ ಸಾಮಾಜಿಕ ಚಳುವಳಿಯಲ್ಲಿ ಸಕ್ರಿಯರು. ಬಿಎಂಟಿಸಿ ಕಂಡಕ್ಟರ್ ಆಗಿದ್ದುಕೊಂಡು ಪಿಎಚ್‌ಡಿ ಸಂಶೋಧನೆ ನಡೆಸಿ, ಪದವಿ ಪಡೆದುಕೊಂಡರು. ಇದೀಗ ಕೊಪ್ಪಳದ ಕಾಲೇಜಿನಲ್ಲಿ ಅಧ್ಯಾಪಕರು


ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....