Homeಮುಖಪುಟಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? - ಡಾ.ನರಸಿಂಹ ಗುಂಜಹಳ್ಳಿ

ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ.

- Advertisement -
- Advertisement -

ಒಂದು ಜನಾಂಗ ಸಾಮಾಜಿಕ, ಆರ್ಥಿಕ, ರಾಜಕೀಯ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಭೌದ್ಧಿಕವಾಗಿ ಶತಶತಮಾನಗಳಿಂದ ಶೋಷಣೆಗೆ ಒಳಗಾಗಿ, ಸಂವಿಧಾನಾತ್ಮಕ ಸೌಲಭ್ಯಗಳಿಂದ ವಂಚಿತರಾದ ಸಮುದಾಯಕ್ಕೆ ಈ ಸ್ಥಿತಿಗಳಿಂದ ಬಿಡುಗಡೆಗೊಳಿಸಲು ಕೆಲವು ಸಂವಿಧಾನಿಕ ವಿಶೇಷ ಸೌಲಭ್ಯಗಳೇ ಮೀಸಲಾತಿ. ಇದರ ಗುರಿ ಸಾಮಾಜಿಕ ನ್ಯಾಯ. ಇಂದು ಸಮಾನತೆಯ ದೇಶ ಕಟ್ಟವುದಕ್ಕೆ ಭೂಮಿ ಮತ್ತು ಮೀಸಲಾತಿ ಇವರೆಡು ಬಹುಮುಖ್ಯವಾದದ್ದು.

ಸರಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಜಾತಿಗಳಿಗೆ ಸಂವಿಧಾನದತ್ತವಾಗಿ ಬಂದಿರುವ ಮೀಸಲಾತಿಯ ಶೇ. 15 ರಲ್ಲಿ ಮಾದಿಗ ಸಮುದಾಯಕ್ಕೆ ಸಿಗಬೇಕಾದ ಪ್ರಮಾಣ ಶೇ.8.ರಷ್ಟು. ಆದರೆ ಇದುವರೆಗೆ ದಕ್ಕಿರುವುದು ಕೇವಲ ಶೇ.2ರಷ್ಟು ಮಾತ್ರ ಎಂಬುದು ಮಾದಿಗರ ಅರೋಪವಾಗಿದೆ. ಪರಿಶಿಷ್ಟ ಜಾತಿಯಲ್ಲಿ ಬಹುಸಂಖ್ಯಾತರಾದ ನಮಗೆ ನ್ಯಾಯಯುತ ಮೀಸಲಾತಿ ದೊರೆತಿಲ್ಲವೆಂಬ ಅತೃಪ್ತಿಯಿದೆ. ನಮ್ಮ ಹೆಸರಿನಲ್ಲಿ ಬಲಿಷ್ಟ ದಲಿತ ಜಾತಿಯವರು ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆಂದು ಆರೋಪಿಸುತ್ತ ತಮಗೆ ಆದ ಈ ಅನ್ಯಾಯವನ್ನು ಸರಿಪಡಿಸಿಕೊಳ್ಳಲು ಸುಮಾರು 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಇನ್ನೊಬ್ಬರ ಪಾಲು ನಮಗೆ ಬೇಡ. ನಮ್ಮ ಪಾಲಿನ ಹಕ್ಕನ್ನು ನಮಗೆ ಕೊಡಿಯೆಂದು ಒಳಮೀಸಲಾತಿಗಾಗಿ ಮಾದಿಗರು ರಾಜ್ಯದಲ್ಲಿ 1996 ರಿಂದ ಹೋರಾಟ ನಡೆಸಿದ್ದಾರೆ.

ಸರಕಾರ ರಚಿಸಿದ್ದ ಸದಾಶಿವ ಅಯೋಗವು 2012ರಲ್ಲಿ ವರದಿ ಸಲ್ಲಿಸದಾಗಿನಿಂದ ಅದರ ಪರ ಮತ್ತು ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಮೀಸಲಾತಿ ಮರುವರ್ಗೀಕರಣದ ಹೋರಾಟ ಯಾರ ವಿರುದ್ಧವು ಅಲ್ಲ. ಯಾರ ಹಕ್ಕನ್ನು ಕಸಿಯುವ ಉದ್ದೇಶವು ಇಲ್ಲ ಎಂದು ಒಳಮೀಸಲಾತಿ ಹೊರಾಟಗಾರರ ಅಭಿಮತವಾಗಿದೆ. ಇದು ಒಡೆದು ಆಳುವ ನೀತಿಯಲ್ಲ. ಇದು ಹಂಚಿ ತಿನ್ನುವ ಮಾನವತವಾದ. ಒಳಮೀಸಲಾತಿಯನ್ನು ವಿರೋಧಿಸುವುದೆಂದರೆ ಮೀಸಲಾತಿಯನ್ನು ಮತ್ತು ಸಮಪಾಲು – ಸಮಬಾಳು ತತ್ವವನ್ನು ವಿರೋಧಿಸುವುದಕ್ಕೆ ಸಮನಾದದ್ದು ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡುವ ಅಪಾಚಾರ ಸಹ ಹೌದು.

ಪರಿಶಿಷ್ಟ ಜಾತಿಯಲ್ಲಿರುವ ಮೀಸಲಾತಿಯನ್ನು ವಿಭಜಿಸಿದರೆ ದಲಿತರ ಒಗ್ಗಟ್ಟು ಹಾಳುಗುತ್ತಿದೆ ಎಂಬುದು ಸುಳ್ಳು. ಸಾಮಾಜಿಕ ನ್ಯಾಯಕ್ಕೆ ಭಂಗ ತರುವವರು ಇಂತಹ ಆರೋಪವನ್ನು ಮಾಡುತ್ತಾರೆ. ಸ್ವಾರ್ಥ ಮತ್ತು ಕೆಲವರು ತಮ್ಮ ಅನೂಕೂಲಕ್ಕೆ ತಕ್ಕ ಹಾಗೆ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆರ್ಥೈಸಿಕೊಳ್ಳುತ್ತಿದ್ದಾರೆ. ಅದ್ದರಿಂದ ಸದಾಶಿವ ಅಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಬಿಡುಗಡೆ ಮಾಡಬೇಕು.

ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

ಡಾ.ಬಿ.ಆರ್.ಅಂಬೇಡ್ಕರ್ ಅವರ ಅಶಯವು ಭಾರತದಲ್ಲಿ ಜನಸಂಖ್ಯೆಯಾಧಾರಿತ ಮೀಸಲಾತಿ ಹಂಚಿಕೆಯಾಗಬೇಕೆನ್ನುವುದು ವಾದವಾಗಿತ್ತು. ದಲಿತರು ಒಳ ಮೀಸಲಾತಿಯನ್ನು ಪಡೆದರೂ ವಿಘಟನೆಗೊಳ್ಳದೆ, ಈ ದೇಶದಲ್ಲಿ ಜಾತಿವ್ಯವಸ್ಥೆ, ಆಸ್ಪೃಶ್ಯತೆ ಇರುವವರೆಗೂ ಅವುಗಳ ವಿರುದ್ಧ ಮತ್ತು ಖಾಸಗಿ ವಲಯದಲ್ಲೂ ಮೀಸಲಾತಿಗಾಗಿ ಹೋರಾಟ ಮಾಡಬೇಕು. ಅದನ್ನು ಬಳಿಸಿಕೊಂಡು ಜಾತಿ ವಿನಾಶಮಾಡದೇ ಹೋದರೆ ಉಳಿಗಾಲವಿಲ್ಲ. ಜಾತಿ ಜಾತಿಗಳ ನಡುವಿನ ಸಮಾನತೆಯು ಜಾತಿಯನ್ನು ನಾಶಮಾಡುತ್ತದೆ ಎನ್ನುವುದನ್ನು ದಲಿತರು ಅರ್ಥಮಾಡಿಕೋಳ್ಳಬೇಕು.

ಇವತ್ತಿನವರೆಗೆ ದಲಿತರ ಮಿಸಲಾತಿಯನ್ನು ಹೊಲೆಯರು, ಮಾದಿಗರು, ಲಂಬಾಣಿಗಳು ಮತ್ತು ಭೋವಿಗಳು – ಈ ನಾಲ್ಕು ಜಾತಿಗಳ ಮಾತ್ರ ಹೆಚ್ಚು ಪಡೆದಿವೆ. ಪರಿಶಿಷ್ಟರಲ್ಲಿನ ಸುಡುಗಾಡು ಸಿದ್ದರು ಸೇರಿದಂತೆ ಆನೇಕ ಸಣ್ಣ ಸಣ್ಣ ದಲಿತ ಜಾತಿಗಳು ಈವರೆಗೂ ಶೇ.1 ರಷ್ಟು ಸಹ ಮೀಸಲಾತಿ ಸೌಲಭ್ಯ ಪಡೆದಿಲ್ಲ. ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟರಲ್ಲಿ ಇರುವ 101 ಜಾತಿಗಳಿಗೆ ಈಗಿರುವ ಶೇ.15 ಮೀಸಲಾತಿಯನ್ನು ಸದಾಶಿವ ಆಯೋಗ ವಿಭಜಿಸಿಕೊಟ್ಟಿದೆ ಎನ್ನಲಾಗುತ್ತಿದೆ. ಇದರ ಪ್ರಕಾರ ಹಂಚಿಕೆ ಮಾಡಬೇಕು. ಇದು ಹಲವು ಸಣ್ಣ ಪರಿಶಿಷ್ಟ ಜಾತಿಗಳಿಗೆ ನೆರವಾಗಲಿದೆ. ಇದನ್ನು ಒಳಮೀಸಲಾತಿ ಎನ್ನಿ, ಮೀಸಲಾತಿ ಪುನರ್ ವಿಂಗಡನೆ ಎನ್ನಿ, ಮೀಸಲಾತಿ ಗುಂಪುಗಳು ಎನ್ನಿ, ಏನು ಬೇಕಾದರೂ ಹೇಳಿ, ಅದು ಸಂವಿಧಾನದ ಯಾವುದೇ ವಿಧಿಗಳ ಉಲ್ಲಂಘನೆಯಾಗುವುದಿಲ್ಲ.

ದಲಿತರಲ್ಲಿನ ಸ್ಪೃಶ್ಯ ಜಾತಿಗಳು ಅಸ್ಪೃಶ್ಯ ಸಮುದಾಯವನ್ನು ಸಹೋದರಂತೆ ಕಾಣಬೇಕು. ಮೀಸಲಾತಿ ಮತ್ತು ಒಳಮೀಸಲಾತಿ ಇದು ಒಂದು ಸಾಮಾಜಿಕ ನ್ಯಾಯ. ಸ್ಪೃಶ್ಯ ಜಾತಿಯವರು ಮತ್ತು ಸಾರ್ವಜನಿಕರು ಇದನ್ನು ಬೆಂಬಲಿಸಿ ಜಾರಿಗೆಗೋಳಿಸಲು ಸರಕಾರಕ್ಕೆ ಒತ್ತಾಯಿಸಬೇಕು.

ಮೀಸಲಾತಿ ಅಸಮರ್ಪಕ ವಿತರಣೆ, ಅಸಮಾನ ಹಂಚಿಕೆಯಿಂದ ದಲಿತ ಜಾತಿಗಳಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಯಾಗಿ ಸಂಬಂಧಗಳು ಕಳೆಯುತ್ತಿವೆ. ಆದ್ದರಿಂದ ಒಳಮೀಸಲಾತಿ ಕುರಿತು ದಲಿತರು ಒಟ್ಟಿಗೆ ಕುಳಿತು ಚರ್ಚಿಸಿಬೇಕು. ಇದನ್ನು ಲಾಭ- ನಷ್ಟದ ದೃಷ್ಟಿಯಿಂದ ಪರಿಗಣಿಸದೇ, ತಾಂತ್ರಿಕ ಕಾರಣಗಳಿಂದ ನೋಡದೇ ನ್ಯಾಯ, ಮಾನವೀಯ ಕಲ್ಪನೆಗಳಿಂದ ವಿಚಾರ ಮಾಡಬೇಕು. ಅದರ ಸಾಮಾಜಿಕ ಅರ್ಥಿಕ ಸಮಸ್ಯೆಗಳನ್ನು ಚರ್ಚಿಸಿ ಅನುಷ್ಟಾನಕ್ಕೆ ಒತ್ತಾಯಿಸಬೇಕು. ದಲಿತರಿಂದಲೇ ದಲಿತರಿಗೆ ಶೋಷಣೆಯಾಗಬಾರದು ಎಂದರೆ ಕೂಡಲೆ ಒಳಮೀಸಲಾತಿ ಜಾರಿಗೆ ತರಬೇಕು. ಮೀಸಲಾತಿ ವರ್ಗೀಕರಣ ಮಾಡಿದರೆ ದಲಿತರ ನಡುವೆ, ಜಾತಿ – ಜಾತಿಗಳ ನಡುವೆ ಸಮಾನತೆ, ಸೌಹರ್ದತೆ, ಜಾತ್ಯತೀತತೆ ಮತ್ತು ಸ್ನೇಹ ಬೆಳೆಯುತ್ತದೆ. ಸ್ಪೃಶ್ಯ ಜಾತಿಗಳು ಪಟ್ಟಭದ್ರ ಹಿತಶಕ್ತಿಗಳ ಕುತಂತ್ರಕ್ಕೆ ಬಲಿಯಾಗದೇ ಮೀಸಲಾತಿ ವರ್ಗೀಕರಣಕ್ಕೆ ಒತ್ತಾಯಿಸಬೇಕು.

  • ಡಾ.ನರಸಿಂಹ ಗುಂಜಹಳ್ಳಿ

ರಾಯಚೂರು ತಾಲೂಕಿನ ಗುಂಜಳ್ಳಿಯ ನರಸಿಂಹ ಅವರು ವಿದ್ಯಾರ್ಥಿಯಾಗಿದ್ದಾಗಿನಿಂದಲೂ ಸಾಮಾಜಿಕ ಚಳುವಳಿಯಲ್ಲಿ ಸಕ್ರಿಯರು. ಬಿಎಂಟಿಸಿ ಕಂಡಕ್ಟರ್ ಆಗಿದ್ದುಕೊಂಡು ಪಿಎಚ್‌ಡಿ ಸಂಶೋಧನೆ ನಡೆಸಿ, ಪದವಿ ಪಡೆದುಕೊಂಡರು. ಇದೀಗ ಕೊಪ್ಪಳದ ಕಾಲೇಜಿನಲ್ಲಿ ಅಧ್ಯಾಪಕರು


ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...