Homeಕರ್ನಾಟಕಕೃಷಿ ಕ್ಷೇತ್ರದ ಸಮಸ್ಯೆಗಳು: ಡಾ.ಕಮ್ಮರಡಿಯವರ ಲೇಖನ ಸರಣಿ -ಆಹಾರ ಭದ್ರತೆ ನೀಡಿದ ರೈತರ ಪಾಡೇನು?

ಕೃಷಿ ಕ್ಷೇತ್ರದ ಸಮಸ್ಯೆಗಳು: ಡಾ.ಕಮ್ಮರಡಿಯವರ ಲೇಖನ ಸರಣಿ -ಆಹಾರ ಭದ್ರತೆ ನೀಡಿದ ರೈತರ ಪಾಡೇನು?

ಭಾರತದ ಕೃಷಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಪರಿಹಾರ ಒದಗಿಸುವ ದೃಷ್ಟಿಯಿಂದ ಚಿಂತಿಸುವವರಲ್ಲಿ ಪ್ರಕಾಶ್‌ ಕಮ್ಮರಡಿಯವರೂ ಒಬ್ಬರು. ಏಕಕಾಲದಲ್ಲಿ ಕೃಷಿ ಅರ್ಥಶಾಸ್ತ್ರಜ್ಞ ಮತ್ತು ಸಮಾಜವಾದಿ ಚಿಂತಕರಾಗಿರುವುದೂ ಅದಕ್ಕೊಂದು ಕಾರಣವಿರಬಹುದು. ಭಾರತದ ಆಹಾರ ಭದ್ರತೆ, ಈಗಿನ ಸಮಸ್ಯೆ ಇತ್ಯಾದಿಗಳ ಕುರಿತು ಪ್ರಸ್ತುತ ಲೇಖನದಲ್ಲಿ ಚರ್ಚಿಸಿದ್ದಾರೆ. ಅವರು ಬರೆಯಲಿರುವ ಸರಣಿ ಲೇಖನಗಳಲ್ಲಿ ಇದು ಮೊದಲನೆಯದು

- Advertisement -
- Advertisement -


ಡಾ. ಟಿ. ಎನ್. ಪ್ರಕಾಶ್ ಕಮ್ಮರಡಿ

 

 

ಭಾರತವು ಸ್ವಾತಂತ್ರ್ಯ ಪಡೆದ ನಂತರದ ವರ್ಷಗಳಲ್ಲಿ ಆಹಾರದ ಉತ್ಪಾದನೆ ಅತೀ ಕಡಿಮೆಯಿದ್ದು, ಹಸಿದಹೊಟ್ಟೆಗೆ ಊಟ ನೀಡುವುದೇ ದೊಡ್ಡ ಸಮಸ್ಯೆಯಾಗಿತ್ತು. ಆಹಾರ ಭದ್ರತೆಯು ಅಂದಿನ ಪ್ರಧಾನ ಸಮಸ್ಯೆ ಹಾಗಾಗಿ ವಿದೇಶಗಳಿಗೆ ಕೈವೊಡ್ಡಿ ಆಹಾರದ ಆಮದು ಮಾಡಿಕೊಳ್ಳಬೇಕಾಗಿರುವ ಶೋಚನಿಯ ಪರಿಸ್ಥಿತಿಯನ್ನು ದೇಶ ಎದುರಿಸುತ್ತಿತ್ತು. ಆ ಸಮಯದಲ್ಲಿ ಅಮೇರಿಕಾ ಸಂಯುಕ್ತ ಸಂಸ್ಥಾನವು ಸಮೃದ್ಧ ಆಹಾರ ಧಾನ್ಯಗಳನ್ನು ಉತ್ಪಾದಿಸುತ್ತಿತ್ತು. ಆ ದೇಶದ ಗೋಧಿ ಧಾನ್ಯ ತುಂಬಿದ ಹಡಗುಗಳು ಭಾರತದ ಆಸುಪಾಸಿನಲ್ಲಿ ಹಾದು ಹೋಗುತ್ತಿರುವಾಗ ಅವು ದಾರಿ ತಪ್ಪಿ ನಮ್ಮ ಬಂದರುಗಳಿಗೆ ಬರಲಿ, ಆ ಮೂಲಕ “ಹಡಗಿನಿಂದ ಆಹಾರ ದೇಶದ ಜನರ ಬಾಯಿಗೆ” (Ship to Mouth) ಬಂದು ಬೀಳುವಂತಾಗಲಿ ಎಂದು ಹಾರೈಸುವ ಹೀನಾಯ ಪರಿಸ್ಥಿತಿ ದೇಶದಲ್ಲಿತ್ತು. ರಾಜತಾಂತ್ರಿಕವಾಗಿ ಭಾರತ ಅಂದಿನ ಸೋವಿಯತ್ ರಷ್ಯಾದ ಜೊತೆಗಿರುವುದನ್ನೇ ಹೆಳೆ ಮಾಡಿಕೊಂಡ ಅಮೇರಿಕಾ ಭಾರತದ ಈ ಪರಿಸ್ಥಿತಿಯ ಬಗ್ಗೆ, ಅವಕಾಶ ದೊರೆತಾಗಲೆಲ್ಲಾ ಅಣಕವಾಡುತ್ತಿತ್ತು.

ಆಹಾರದ ತೀವ್ರ ಅಭಾವ ಹಾಗೇ ಮುಂದುವರಿದಲ್ಲಿ ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯಕ್ಕೇ ಕುತ್ತು ಬರುವ ಅಪಾಯ ದೇಶದ ಮುಂದಿತ್ತು.

ಆದರೆ ಅದೆಲ್ಲಾ ಈಗ ಇತಿಹಾಸ. ನಾವೀಗ ಆಹಾರ ಭದ್ರತೆ ಸಾಧಿಸಿದ್ದೇವೆ. ನಮ್ಮ ರೈತರು ಸುಧಾರಿಸಿದ ತಳಿ, ನೀರಾವರಿ, ಆಧುನಿಕ ತಂತ್ರಜ್ಞಾನ, ಯಂತ್ರಗಳನ್ನು ಸಮರ್ಥವಾಗಿ ಬಳಸಿ, ಬೆವರು ಹರಿಸಿ ದುಡಿದಿರುವ ಪರಿಣಾಮವಾಗಿ ಇಂದು ಆಹಾರದಲ್ಲಿ ಸ್ವಾವಲಂಬನೆ ಸಾಧಿಸಿರುವುದು ಮಾತ್ರವಲ್ಲ ಬಹುತೇಕ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಉತ್ಪಾದನೆಯಲ್ಲಿ ದೇಶ ಸಮೃದ್ಧಿಯನ್ನೇ ಸಾಧಿಸಿರುತ್ತದೆ. ಇದನ್ನೇ ಹಸಿರುಕ್ರಾಂತಿ (Green Revolution) ಎಂದು ವರ್ಣಮಯವಾಗಿ ಬಣ್ಣಿಸಲಾಗುತ್ತಿದೆ. ಈ ಮೂಲಕ ದೇಶಕ್ಕೆ ಆಹಾರದ ಉತ್ಪಾದನೆಯಲ್ಲಿ ಸ್ವಾವಲಂಬನೆ ಮಾತ್ರವಲ್ಲ ತರಕಾರಿ, ಹಣ್ಣು, ಹಾಲುಗಳ ಸಮೃದ್ಧ ಉತ್ಪಾದನೆ ಮೂಲಕ ಅರಿವಿಗೂ ಬಾರದ ಅಗಾಧ ಪ್ರಮಾಣದ ಪೌಷ್ಟಿಕಾಂಶ ಭದ್ರತೆ (Nutrition Security) ಕೂಡ ರೈತರು ಒದಗಿಸಿರುವುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ

ಇದನ್ನೂ ಓದಿ: ಕನಿಷ್ಠ ಬೆಲೆಯ ಗರಿಷ್ಠ ಸಮಸ್ಯೆಗಳು

ಭಾರತದ ಈಗಿನ ಆಹಾರ ಉತ್ಪಾದನೆಯ ಪ್ರಮಾಣ

ಇತ್ತೀಚೆಗಿನ ವರ್ಷಗಳಲ್ಲಿ (2018-19) ನಮ್ಮ ಆಹಾರ ಉತ್ಪಾದನೆ ದಾಖಲೆ ಪ್ರಮಾಣದ 281 ದಶಲಕ್ಷ ಟನ್ ಮೀರಿರುತ್ತದೆ. ಇದರಲ್ಲಿ ಭತ್ತ 116 ದಶಲಕ್ಷ ಟನ್, ಗೋಧಿ 99 ದಶಲಕ್ಷ ಟನ್, ಒರಟು ಧಾನ್ಯ 43 ದಶಲಕ್ಷ ಟನ್, ದ್ವಿದಳ ಧಾನ್ಯ 24 ದಶಲಕ್ಷ ಟನ್ ಹಾಗೂ ಎಣ್ಣೆಕಾಳು 32 ದಶಲಕ್ಷ ಟನ್‍ಗಳಾಗಿರುತ್ತದೆ. ಹಾಗೇ, ನಮ್ಮ ತರಕಾರಿ (187 ದಶಲಕ್ಷ ಟನ್), ಹಣ್ಣು (97 ದಶಲಕ್ಷ ಟನ್), ಹಾಲು (176 ದಶಲಕ್ಷ ಟನ್) ಮತ್ತು ಸಕ್ಕರೆ (132 ದಶಲಕ್ಷ ಟನ್) ಉತ್ಪಾದನೆ ಕೂಡ ದಾಖಲು ಪ್ರಮಾಣದ್ದಾಗಿವೆ. ಈ ಎಲ್ಲಾ ಉತ್ಪನ್ನಗಳನ್ನು ದೇಶದ 137 ಕೋಟಿ ಜನತೆಗೆ ಸಮಾನವಾಗಿ ಹಂಚಿದರೆ ಹಸಿವು, ಅಪೌಷ್ಟಿಕಾಂಶತೆಗಳು ಭಾರತದಲ್ಲಿ ಮಾಯವಾಗಲಿವೆ ಎನ್ನುವುದಕ್ಕೇ ಈ ಕೆಳಗಿನ ಚಿತ್ರದ ಅಂಕಿಅಂಶಗಳೇ ಸಾಕ್ಷಿ.

ಆಹಾರ ಭದ್ರತೆ

ಚಿತ್ರ: ಭಾರತದಲ್ಲಿ ತಲಾವಾರು ಲಭ್ಯವಿರುವ ಆಹಾರ, ಹಣ್ಣು, ತರಕಾರಿ ಪ್ರಮಾಣ (ಗ್ರಾಂ/ ಪ್ರತಿ ನಿತ್ಯ)

ಗಮನಿಸಬೇಕಾದ ಅತೀ ಮುಖ್ಯ ವಿಚಾರವೆಂದರೆ ವ್ಯಕ್ತಿ ಒಬ್ಬ ಆರೋಗ್ಯಕರ ಬದುಕು ನಡೆಸಲು ಅಗತ್ಯವಿರುವ ಪ್ರಮಾಣಕ್ಕಿಂತ ಅಧಿಕ ಆಹಾರ, ಹಣ್ಣು, ಹಾಲು, ತರಕಾರಿಗಳನ್ನು ಈ ದೇಶದ ಜನತೆಗೆ ನಮ್ಮ ರೈತಾಪಿ ವರ್ಗ ನೀಡಿರುತ್ತದೆ. ಕೇಂದ್ರ ಸರ್ಕಾರದ ರಾಷ್ಟ್ರೀಯ ಪೌಷ್ಟಿಕಾಂಶ ನಿರ್ವಹಣಾ ಬ್ಯೂರೋ” (National Nutrition Monitoring Bureau) ಪ್ರತಿ ವ್ಯಕ್ತಿ ದಿನನಿತ್ಯ 400 ಗ್ರಾಂ ಏಕದಳ ಧಾನ್ಯ, 80 ಗ್ರಾಂ ದ್ವಿದಳ ಧಾನ್ಯ, 30 ಗ್ರಾಂ ಎಣ್ಣೆಕಾಳು, 300 ಗ್ರಾಂ ತರಕಾರಿ ಹಾಗು 300 ಗ್ರಾಂ ಹಾಲು ಸೇವಿಸುವಂತೆ ಶಿಫಾರಸ್ಸು ಮಾಡಿರುತ್ತದೆ. ಅಂದರೆ ದ್ವಿದಳಧಾನ್ಯದ ಹೊರತಾಗಿ ಬೇರೆಲ್ಲಾ ಉತ್ಪನ್ನಗಳ ತಲಾವಾರು ಲಭ್ಯತೆ ದೇಶದಲ್ಲಿ ಅಗತ್ಯಕ್ಕಿಂತ ಅಧಿಕವಾಗಿದೆ ಎಂದಾಯ್ತು. ಹಾಗಿದ್ದರೂ, ದೇಶದಲ್ಲಿ ಹಸಿವು, ಅಪೌಷ್ಟಿಕತೆ ತಾಂಡವಾಡುತ್ತಿರಲು ಸಮಾನ ಹಂಚಿಕೆ ಮಾಡುವುದರಲ್ಲಿ ಸರ್ಕಾರ ಸೋತಿರುತ್ತದೆಯೇ ಹೊರತು ಅವುಗಳನ್ನು ಉತ್ಪಾದಿಸಿ, ಪೂರೈಕೆ ಮಾಡುವಲ್ಲಿ ದೇಶದ ರೈತ ಹಿಂದೆ ಬಿದ್ದಿಲ್ಲ. ಆದರೆ, ಇದಕ್ಕೆ ಪ್ರತಿ ಫಲವಾಗಿ ದೇಶ ರೈತಾಪಿ ವರ್ಗಕ್ಕೆ ನೀಡಿರುವುದಾದರು ಏನು ಎಂಬ ಪ್ರಶ್ನೆಗೆ ಪಟ್ಟಣ ಪ್ರದೇಶಗಳ ಕಡೆಗಿನ ವಲಸೆ, ಬೇಸಾಯ ಮಾಡದೆ ಭೂಮಿಯನ್ನು ಬೀಳುಬಿಡುತ್ತಿರುವುದರಿಂದ ದೇಶದಾದ್ಯಂತ ನಡೆಯುತ್ತಿರುವ ರೈತರ ಅವ್ಯಾಹತ ಆತ್ಮಹತ್ಯೆಗಳು ಉತ್ತರ ನೀಡುತ್ತಿವೆ.

ಇದನ್ನೂ ಓದಿ: ಲಾಕ್‌ ಡೌನ್‌ ಮತ್ತು ಕೃಷಿ ಕ್ಷೇತ್ರದ ಸಮಸ್ಯೆ – ಸಿಎಂ ತರಾಟೆಗೆ

(ಲೇಖಕರು ಕೃಷಿ ಆರ್ಥಿಕ ತಜ್ಣರು ಮತ್ತು ಕರ್ನಾಟಕ ಬೆಲೆ ಆಯೋಗದ ಮಾಜಿ ಅಧ್ಯಕ್ಷರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...