Homeಕರ್ನಾಟಕಕೃಷಿ ಕ್ಷೇತ್ರದ ಸಮಸ್ಯೆಗಳು: ಡಾ.ಕಮ್ಮರಡಿಯವರ ಲೇಖನ ಸರಣಿ -ಆಹಾರ ಭದ್ರತೆ ನೀಡಿದ ರೈತರ ಪಾಡೇನು?

ಕೃಷಿ ಕ್ಷೇತ್ರದ ಸಮಸ್ಯೆಗಳು: ಡಾ.ಕಮ್ಮರಡಿಯವರ ಲೇಖನ ಸರಣಿ -ಆಹಾರ ಭದ್ರತೆ ನೀಡಿದ ರೈತರ ಪಾಡೇನು?

ಭಾರತದ ಕೃಷಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಪರಿಹಾರ ಒದಗಿಸುವ ದೃಷ್ಟಿಯಿಂದ ಚಿಂತಿಸುವವರಲ್ಲಿ ಪ್ರಕಾಶ್‌ ಕಮ್ಮರಡಿಯವರೂ ಒಬ್ಬರು. ಏಕಕಾಲದಲ್ಲಿ ಕೃಷಿ ಅರ್ಥಶಾಸ್ತ್ರಜ್ಞ ಮತ್ತು ಸಮಾಜವಾದಿ ಚಿಂತಕರಾಗಿರುವುದೂ ಅದಕ್ಕೊಂದು ಕಾರಣವಿರಬಹುದು. ಭಾರತದ ಆಹಾರ ಭದ್ರತೆ, ಈಗಿನ ಸಮಸ್ಯೆ ಇತ್ಯಾದಿಗಳ ಕುರಿತು ಪ್ರಸ್ತುತ ಲೇಖನದಲ್ಲಿ ಚರ್ಚಿಸಿದ್ದಾರೆ. ಅವರು ಬರೆಯಲಿರುವ ಸರಣಿ ಲೇಖನಗಳಲ್ಲಿ ಇದು ಮೊದಲನೆಯದು

- Advertisement -
- Advertisement -


ಡಾ. ಟಿ. ಎನ್. ಪ್ರಕಾಶ್ ಕಮ್ಮರಡಿ

 

 

ಭಾರತವು ಸ್ವಾತಂತ್ರ್ಯ ಪಡೆದ ನಂತರದ ವರ್ಷಗಳಲ್ಲಿ ಆಹಾರದ ಉತ್ಪಾದನೆ ಅತೀ ಕಡಿಮೆಯಿದ್ದು, ಹಸಿದಹೊಟ್ಟೆಗೆ ಊಟ ನೀಡುವುದೇ ದೊಡ್ಡ ಸಮಸ್ಯೆಯಾಗಿತ್ತು. ಆಹಾರ ಭದ್ರತೆಯು ಅಂದಿನ ಪ್ರಧಾನ ಸಮಸ್ಯೆ ಹಾಗಾಗಿ ವಿದೇಶಗಳಿಗೆ ಕೈವೊಡ್ಡಿ ಆಹಾರದ ಆಮದು ಮಾಡಿಕೊಳ್ಳಬೇಕಾಗಿರುವ ಶೋಚನಿಯ ಪರಿಸ್ಥಿತಿಯನ್ನು ದೇಶ ಎದುರಿಸುತ್ತಿತ್ತು. ಆ ಸಮಯದಲ್ಲಿ ಅಮೇರಿಕಾ ಸಂಯುಕ್ತ ಸಂಸ್ಥಾನವು ಸಮೃದ್ಧ ಆಹಾರ ಧಾನ್ಯಗಳನ್ನು ಉತ್ಪಾದಿಸುತ್ತಿತ್ತು. ಆ ದೇಶದ ಗೋಧಿ ಧಾನ್ಯ ತುಂಬಿದ ಹಡಗುಗಳು ಭಾರತದ ಆಸುಪಾಸಿನಲ್ಲಿ ಹಾದು ಹೋಗುತ್ತಿರುವಾಗ ಅವು ದಾರಿ ತಪ್ಪಿ ನಮ್ಮ ಬಂದರುಗಳಿಗೆ ಬರಲಿ, ಆ ಮೂಲಕ “ಹಡಗಿನಿಂದ ಆಹಾರ ದೇಶದ ಜನರ ಬಾಯಿಗೆ” (Ship to Mouth) ಬಂದು ಬೀಳುವಂತಾಗಲಿ ಎಂದು ಹಾರೈಸುವ ಹೀನಾಯ ಪರಿಸ್ಥಿತಿ ದೇಶದಲ್ಲಿತ್ತು. ರಾಜತಾಂತ್ರಿಕವಾಗಿ ಭಾರತ ಅಂದಿನ ಸೋವಿಯತ್ ರಷ್ಯಾದ ಜೊತೆಗಿರುವುದನ್ನೇ ಹೆಳೆ ಮಾಡಿಕೊಂಡ ಅಮೇರಿಕಾ ಭಾರತದ ಈ ಪರಿಸ್ಥಿತಿಯ ಬಗ್ಗೆ, ಅವಕಾಶ ದೊರೆತಾಗಲೆಲ್ಲಾ ಅಣಕವಾಡುತ್ತಿತ್ತು.

ಆಹಾರದ ತೀವ್ರ ಅಭಾವ ಹಾಗೇ ಮುಂದುವರಿದಲ್ಲಿ ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯಕ್ಕೇ ಕುತ್ತು ಬರುವ ಅಪಾಯ ದೇಶದ ಮುಂದಿತ್ತು.

ಆದರೆ ಅದೆಲ್ಲಾ ಈಗ ಇತಿಹಾಸ. ನಾವೀಗ ಆಹಾರ ಭದ್ರತೆ ಸಾಧಿಸಿದ್ದೇವೆ. ನಮ್ಮ ರೈತರು ಸುಧಾರಿಸಿದ ತಳಿ, ನೀರಾವರಿ, ಆಧುನಿಕ ತಂತ್ರಜ್ಞಾನ, ಯಂತ್ರಗಳನ್ನು ಸಮರ್ಥವಾಗಿ ಬಳಸಿ, ಬೆವರು ಹರಿಸಿ ದುಡಿದಿರುವ ಪರಿಣಾಮವಾಗಿ ಇಂದು ಆಹಾರದಲ್ಲಿ ಸ್ವಾವಲಂಬನೆ ಸಾಧಿಸಿರುವುದು ಮಾತ್ರವಲ್ಲ ಬಹುತೇಕ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಉತ್ಪಾದನೆಯಲ್ಲಿ ದೇಶ ಸಮೃದ್ಧಿಯನ್ನೇ ಸಾಧಿಸಿರುತ್ತದೆ. ಇದನ್ನೇ ಹಸಿರುಕ್ರಾಂತಿ (Green Revolution) ಎಂದು ವರ್ಣಮಯವಾಗಿ ಬಣ್ಣಿಸಲಾಗುತ್ತಿದೆ. ಈ ಮೂಲಕ ದೇಶಕ್ಕೆ ಆಹಾರದ ಉತ್ಪಾದನೆಯಲ್ಲಿ ಸ್ವಾವಲಂಬನೆ ಮಾತ್ರವಲ್ಲ ತರಕಾರಿ, ಹಣ್ಣು, ಹಾಲುಗಳ ಸಮೃದ್ಧ ಉತ್ಪಾದನೆ ಮೂಲಕ ಅರಿವಿಗೂ ಬಾರದ ಅಗಾಧ ಪ್ರಮಾಣದ ಪೌಷ್ಟಿಕಾಂಶ ಭದ್ರತೆ (Nutrition Security) ಕೂಡ ರೈತರು ಒದಗಿಸಿರುವುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ

ಇದನ್ನೂ ಓದಿ: ಕನಿಷ್ಠ ಬೆಲೆಯ ಗರಿಷ್ಠ ಸಮಸ್ಯೆಗಳು

ಭಾರತದ ಈಗಿನ ಆಹಾರ ಉತ್ಪಾದನೆಯ ಪ್ರಮಾಣ

ಇತ್ತೀಚೆಗಿನ ವರ್ಷಗಳಲ್ಲಿ (2018-19) ನಮ್ಮ ಆಹಾರ ಉತ್ಪಾದನೆ ದಾಖಲೆ ಪ್ರಮಾಣದ 281 ದಶಲಕ್ಷ ಟನ್ ಮೀರಿರುತ್ತದೆ. ಇದರಲ್ಲಿ ಭತ್ತ 116 ದಶಲಕ್ಷ ಟನ್, ಗೋಧಿ 99 ದಶಲಕ್ಷ ಟನ್, ಒರಟು ಧಾನ್ಯ 43 ದಶಲಕ್ಷ ಟನ್, ದ್ವಿದಳ ಧಾನ್ಯ 24 ದಶಲಕ್ಷ ಟನ್ ಹಾಗೂ ಎಣ್ಣೆಕಾಳು 32 ದಶಲಕ್ಷ ಟನ್‍ಗಳಾಗಿರುತ್ತದೆ. ಹಾಗೇ, ನಮ್ಮ ತರಕಾರಿ (187 ದಶಲಕ್ಷ ಟನ್), ಹಣ್ಣು (97 ದಶಲಕ್ಷ ಟನ್), ಹಾಲು (176 ದಶಲಕ್ಷ ಟನ್) ಮತ್ತು ಸಕ್ಕರೆ (132 ದಶಲಕ್ಷ ಟನ್) ಉತ್ಪಾದನೆ ಕೂಡ ದಾಖಲು ಪ್ರಮಾಣದ್ದಾಗಿವೆ. ಈ ಎಲ್ಲಾ ಉತ್ಪನ್ನಗಳನ್ನು ದೇಶದ 137 ಕೋಟಿ ಜನತೆಗೆ ಸಮಾನವಾಗಿ ಹಂಚಿದರೆ ಹಸಿವು, ಅಪೌಷ್ಟಿಕಾಂಶತೆಗಳು ಭಾರತದಲ್ಲಿ ಮಾಯವಾಗಲಿವೆ ಎನ್ನುವುದಕ್ಕೇ ಈ ಕೆಳಗಿನ ಚಿತ್ರದ ಅಂಕಿಅಂಶಗಳೇ ಸಾಕ್ಷಿ.

ಆಹಾರ ಭದ್ರತೆ

ಚಿತ್ರ: ಭಾರತದಲ್ಲಿ ತಲಾವಾರು ಲಭ್ಯವಿರುವ ಆಹಾರ, ಹಣ್ಣು, ತರಕಾರಿ ಪ್ರಮಾಣ (ಗ್ರಾಂ/ ಪ್ರತಿ ನಿತ್ಯ)

ಗಮನಿಸಬೇಕಾದ ಅತೀ ಮುಖ್ಯ ವಿಚಾರವೆಂದರೆ ವ್ಯಕ್ತಿ ಒಬ್ಬ ಆರೋಗ್ಯಕರ ಬದುಕು ನಡೆಸಲು ಅಗತ್ಯವಿರುವ ಪ್ರಮಾಣಕ್ಕಿಂತ ಅಧಿಕ ಆಹಾರ, ಹಣ್ಣು, ಹಾಲು, ತರಕಾರಿಗಳನ್ನು ಈ ದೇಶದ ಜನತೆಗೆ ನಮ್ಮ ರೈತಾಪಿ ವರ್ಗ ನೀಡಿರುತ್ತದೆ. ಕೇಂದ್ರ ಸರ್ಕಾರದ ರಾಷ್ಟ್ರೀಯ ಪೌಷ್ಟಿಕಾಂಶ ನಿರ್ವಹಣಾ ಬ್ಯೂರೋ” (National Nutrition Monitoring Bureau) ಪ್ರತಿ ವ್ಯಕ್ತಿ ದಿನನಿತ್ಯ 400 ಗ್ರಾಂ ಏಕದಳ ಧಾನ್ಯ, 80 ಗ್ರಾಂ ದ್ವಿದಳ ಧಾನ್ಯ, 30 ಗ್ರಾಂ ಎಣ್ಣೆಕಾಳು, 300 ಗ್ರಾಂ ತರಕಾರಿ ಹಾಗು 300 ಗ್ರಾಂ ಹಾಲು ಸೇವಿಸುವಂತೆ ಶಿಫಾರಸ್ಸು ಮಾಡಿರುತ್ತದೆ. ಅಂದರೆ ದ್ವಿದಳಧಾನ್ಯದ ಹೊರತಾಗಿ ಬೇರೆಲ್ಲಾ ಉತ್ಪನ್ನಗಳ ತಲಾವಾರು ಲಭ್ಯತೆ ದೇಶದಲ್ಲಿ ಅಗತ್ಯಕ್ಕಿಂತ ಅಧಿಕವಾಗಿದೆ ಎಂದಾಯ್ತು. ಹಾಗಿದ್ದರೂ, ದೇಶದಲ್ಲಿ ಹಸಿವು, ಅಪೌಷ್ಟಿಕತೆ ತಾಂಡವಾಡುತ್ತಿರಲು ಸಮಾನ ಹಂಚಿಕೆ ಮಾಡುವುದರಲ್ಲಿ ಸರ್ಕಾರ ಸೋತಿರುತ್ತದೆಯೇ ಹೊರತು ಅವುಗಳನ್ನು ಉತ್ಪಾದಿಸಿ, ಪೂರೈಕೆ ಮಾಡುವಲ್ಲಿ ದೇಶದ ರೈತ ಹಿಂದೆ ಬಿದ್ದಿಲ್ಲ. ಆದರೆ, ಇದಕ್ಕೆ ಪ್ರತಿ ಫಲವಾಗಿ ದೇಶ ರೈತಾಪಿ ವರ್ಗಕ್ಕೆ ನೀಡಿರುವುದಾದರು ಏನು ಎಂಬ ಪ್ರಶ್ನೆಗೆ ಪಟ್ಟಣ ಪ್ರದೇಶಗಳ ಕಡೆಗಿನ ವಲಸೆ, ಬೇಸಾಯ ಮಾಡದೆ ಭೂಮಿಯನ್ನು ಬೀಳುಬಿಡುತ್ತಿರುವುದರಿಂದ ದೇಶದಾದ್ಯಂತ ನಡೆಯುತ್ತಿರುವ ರೈತರ ಅವ್ಯಾಹತ ಆತ್ಮಹತ್ಯೆಗಳು ಉತ್ತರ ನೀಡುತ್ತಿವೆ.

ಇದನ್ನೂ ಓದಿ: ಲಾಕ್‌ ಡೌನ್‌ ಮತ್ತು ಕೃಷಿ ಕ್ಷೇತ್ರದ ಸಮಸ್ಯೆ – ಸಿಎಂ ತರಾಟೆಗೆ

(ಲೇಖಕರು ಕೃಷಿ ಆರ್ಥಿಕ ತಜ್ಣರು ಮತ್ತು ಕರ್ನಾಟಕ ಬೆಲೆ ಆಯೋಗದ ಮಾಜಿ ಅಧ್ಯಕ್ಷರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

'ಜೆನ್‌ ಝೀ ದಂಗೆ'ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ.  ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ...

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

'ಅಂತಾರಾಷ್ಟ್ರೀಯ ಸಂತಾಲ್' ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ. ಪಶ್ಚಿಮ...

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...