Homeಕರ್ನಾಟಕದೇಶದ ಹೆಸರು ಬದಲಾವಣೆ ಮಾಡಿದ್ರೆ ಏನು ಲಾಭ? ಜನರ ಬದುಕು ಬದಲಾಗಬೇಕು: ಡಿ.ಕೆ.ಶಿವಕುಮಾರ್

ದೇಶದ ಹೆಸರು ಬದಲಾವಣೆ ಮಾಡಿದ್ರೆ ಏನು ಲಾಭ? ಜನರ ಬದುಕು ಬದಲಾಗಬೇಕು: ಡಿ.ಕೆ.ಶಿವಕುಮಾರ್

- Advertisement -
- Advertisement -

”ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ. ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರು, ದೇಶದ ಹೆಸರನ್ನು ಇಂಡಿಯಾ ಬದಲು ಭಾರತ್ ಎಂದು ಬದಲಿಸುವ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ”ದೇಶದ ಎಲ್ಲ ಜನರಿಗೂ ಅನ್ನ, ಉದ್ಯೋಗ, ಮನೆ ಸಿಕ್ಕರೆ ಅದನ್ನು ಬದಲಾವಣೆ ಎನ್ನಬಹುದು. ಕಳೆದ 9 ವರ್ಷಗಳಲ್ಲಿ ಜನರ ಆದಾಯ ದುಪಟ್ಟಾಯಿತೇ, 15 ಲಕ್ಷ ಹಣ ಬ್ಯಾಂಕ್ ಖಾತೆಗೆ ಬಂದಿದೆಯೇ? ಇಲ್ಲ. ಒಂದೇ ಒಂದು ಅಕ್ಕಿಕಾಳು ಕಡಿಮೆ ಕೊಟ್ಟರು ಬಿಡುವುದಿಲ್ಲ ಎಂದು ಬಿಜೆಪಿಯವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರು, ಆದರೆ ಅವರು ಕೊಟ್ಟ ಮಾತನ್ನು ಒಂದಾದರೂ ಉಳಿಸಿಕೊಂಡಿದ್ದಾರೆಯೇ?” ಎಂದು ಪ್ರಶ್ನೆ ಮಾಡಿದರು.

”ಶ್ರೀಮಂತರು, ದೊಡ್ಡ ಉದ್ಯಮಿಗಳು ದೇಶಬಿಟ್ಟು ಹೋಗುತ್ತಿದ್ದಾರೆ. 12 ಲಕ್ಷ ಪಾಸ್‌ಪೋರ್ಟ್ಸ್‌ಗಳನ್ನು ಸರ್ಕಾರದ ವಶಕ್ಕೆ ನೀಡಿ ಈ ದೇಶದ ಕೋಟ್ಯಾಧಿಪತಿಗಳು ಬೇರೆ ದೇಶದ ಪೌರತ್ವ ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಹಣ ಹೊರಗಡೆ ಹೋಗುತ್ತಿದೆ. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ. ನಮ್ಮ ಆಚಾರ- ವಿಚಾರ ಬದಲಾವಣೆಯಾಗಬೇಕು” ಎಂದರು.

”ಸರ್ಕಾರ ಜನರ ಕಲ್ಯಾಣ ಮಾಡುವ ಹೊಸ ಕಾನೂನುಗಳನ್ನು ತರಬೇಕು. ನಮ್ಮ ಯುಪಿಎ ಸರ್ಕಾರ ಇದ್ದಾಗ ಮಾಹಿತಿಹಕ್ಕು, ಆರ್ಟಿಐ, ನರೇಗಾ, ಆಹಾರ ಭದ್ರತಾ ಕಾಯ್ದೆಗಳನ್ನು ಜಾರಿಗೆ ತಂದೆವು, ಇಂತಹ ಯೋಚನೆಗಳು ಬಿಜೆಪಿಯವರಿಗೆ ಬರುವುದಿಲ್ಲವೇ?” ಎಂದು ಕೇಳಿದ್ದಾರೆ.

ಹಿಂದೂ ಧರ್ಮಕ್ಕೆ ಅಪ್ಪ- ಅಮ್ಮ ಯಾರು ಇಲ್ಲ ಎಂದು ಗೃಹ ಸಚಿವರಾದ ಪರಮೇಶ್ವರ್ ಅವರು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮದವರು ಕೇಳಿದಾಗ, ”ನಾನು ಭಾರತೀಯ ಹಾಗೂ ಹಿಂದೂವಾಗಿರುವುದ್ದಕ್ಕೆ ಹೆಮ್ಮೆ ಪಡುತ್ತೇನೆ” ಎಂದು ಉತ್ತರಿಸಿದರು.

ಇದೇ ವೇಳೆ ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡಿನ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿರುವ ಬಗ್ಗೆ ಕೇಳಿದಾಗ, ”ಕಾವೇರಿ ನೀರಿನ ವಿಚಾರವಾಗಿ ನಡೆಯುತ್ತಿರುವ ವಿಚಾರಣೆಯ ಜೂಮ್ ಲಿಂಕ್‌ನ್ನು ನನಗೆ ಕಳುಹಿಸಿದ್ದರು. ನಾನು ವಿಚಾರಣೆಯನ್ನು ನೋಡಲು ಕಾಯುತ್ತಿದ್ದೆ. ಆದರೆ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮುಂದಕ್ಕೆ ಹಾಕಿದೆ. ಕಳೆದೆರಡು ದಿನಗಳಲ್ಲಿ ಮಳೆ ಬರುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು, ಮಳೆಯಾಗಿಲ್ಲ. ಹೀಗಾಗಿ ನಾವು ಮತ್ತೆ ಕಾಯಬೇಕು” ಎಂದು ತಿಳಿಸಿದರು.

ಇದನ್ನೂ ಓದಿ: ”ಗೇಮ್ ಚೇಂಜರ್ಸ್” ಎಂದು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...