Homeಕರ್ನಾಟಕಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

- Advertisement -
- Advertisement -

ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು? ಎಂದು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂ ಮಾಫಿಯಾ ನಿಯಂತ್ರಿಸುವುದು ಅಸಾಧ್ಯ ಎಂದು ಕಂದಾಯ ಸಚಿವ ಆರ್‌.ಅಶೋಕ್ ಹೇಳಿದ್ದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

’ಕಂದಾಯ ಸಚಿವರ ಉತ್ತರವೊಂದನ್ನು ಗಮನಿಸಿದೆ. ‘ಭೂ ಮಾಫಿಯಾ ವಿರುದ್ಧ ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ,’ ಎಂದು ಸಚಿವರು ಹೇಳಿದ್ದಾರೆ. ವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ಮಾತನಾಡಿರುವ ಸಚಿವರು, ಅದರ ಹಿಂದಿನ ಕಾರಣವನ್ನೂ ಪ್ರಸ್ತಾಪಿಸಿದಿದ್ದರೆ ಚನ್ನಾಗಿರುತ್ತಿತ್ತು’ ಎಂದಿದ್ದಾರೆ.

ವಿಧಾನಸಭೆಯಲ್ಲಿ ಭೂ ಮಾಫಿಯಾ ಬಗ್ಗೆ ಮಾತನಾಡಿದ್ದ ಸಚಿವ ಆರ್‌.ಅಶೋಕ್, ‘ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ. ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ’ ಎಂದಿದ್ದರು.

ಇದನ್ನೂ ಓದಿ: ಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರ ಮತ್ತು ಕಂದಾಯ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭೂ ಮಾಫಿಯ ತಡೆಯಲಾಗದು ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ ಎಂದಿದ್ದಾರೆ.

’ಇಂದು ಭೂ ಮಾಫಿಯಾದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವವರು ಯಾರು? ಪಕ್ಷಗಳ ಹಿಂಬಾಲಕರು, ಬಾಲಬಡುಕರೇ ಅಲ್ಲವೇ? ಅವರಿಗೆ ಪ್ರೋತ್ಸಾಹ ಕೊಡುವಾಗ ಕೊಟ್ಟು ಈಗ ‘ನಿಯಂತ್ರಿಸಲಾಗುತ್ತಿಲ್ಲ,’ ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ. ಇಂಥ ಮಾತುಗಳು ಭೂಮಾಫಿಯಾಕ್ಕೆ ಪ್ರೇರಕ. ಭೂಮಿ ನುಂಗುವ ದಂಧೆ ಬೆಳೆಯಲು ಎರಡೂ ರಾಷ್ಟ್ರೀಯ ಪಕ್ಷಗಳ ಪಾಲು ಸಮಾನ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

‘ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ,’ ಎಂದೂ ಸಚಿವರು ಹೇಳಿದ್ದಾರೆ. ಅಧಿಕಾರಿಗಳು ಈ ಮಟ್ಟಿನ ಭಂಡತನ ತೋರಲು ರಾಜಕಾರಣಿಗಳು ಹುಟ್ಟುಹಾಕಿದ ವಿಷಮ ವ್ಯವಸ್ಥೆಯೇ ಕಾರಣ. ಸರ್ಕಾರ ಅಸಹಾಯಕತೆ ಪ್ರದರ್ಶಿಸಿ, ದುರ್ವ್ಯವಸ್ಥೆ ಪ್ರೋತ್ಸಾಹಿಸದೇ ಶುದ್ಧೀಕರಣ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

’ಒಂದು ಅವ್ಯವಸ್ಥೆ ವಿರುದ್ಧ ಸರ್ಕಾರ ಕಠಿಣ ನೀತಿ ರೂಪಿಸಿ ಅದನ್ನು ಜಾರಿ ಮಾಡಲು ಹೊರಟು ನಿಂತರೆ ಯಾವ ಮಾಫಿಯಾ ಏನು ಮಾಡಲು ಸಾಧ್ಯ..? ಅದಕ್ಕೆ ಇಚ್ಛಾಶಕ್ತಿ ಬೇಕಷ್ಟೆ. ಸ್ವಹಿತಾಸಕ್ತಿ ಹೊಂದಿರುವವರು ಮಾತ್ರ ವ್ಯವಸ್ಥೆ ಸರಿಪಡಿಸಲಾಗದ ಮಾತಾಡುತ್ತಾರೆ. ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು?’ ಎಂದು ಸರ್ಕಾರ ಮತ್ತು ಕಂದಾಯ ಇಲಾಖೆಯನ್ನು ಖಾರವಾಗಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ಬೆದರಿಕೆ: ಕುಮಾರಸ್ವಾಮಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...