Homeಕರ್ನಾಟಕಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

- Advertisement -
- Advertisement -

ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು? ಎಂದು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂ ಮಾಫಿಯಾ ನಿಯಂತ್ರಿಸುವುದು ಅಸಾಧ್ಯ ಎಂದು ಕಂದಾಯ ಸಚಿವ ಆರ್‌.ಅಶೋಕ್ ಹೇಳಿದ್ದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

’ಕಂದಾಯ ಸಚಿವರ ಉತ್ತರವೊಂದನ್ನು ಗಮನಿಸಿದೆ. ‘ಭೂ ಮಾಫಿಯಾ ವಿರುದ್ಧ ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ,’ ಎಂದು ಸಚಿವರು ಹೇಳಿದ್ದಾರೆ. ವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ಮಾತನಾಡಿರುವ ಸಚಿವರು, ಅದರ ಹಿಂದಿನ ಕಾರಣವನ್ನೂ ಪ್ರಸ್ತಾಪಿಸಿದಿದ್ದರೆ ಚನ್ನಾಗಿರುತ್ತಿತ್ತು’ ಎಂದಿದ್ದಾರೆ.

ವಿಧಾನಸಭೆಯಲ್ಲಿ ಭೂ ಮಾಫಿಯಾ ಬಗ್ಗೆ ಮಾತನಾಡಿದ್ದ ಸಚಿವ ಆರ್‌.ಅಶೋಕ್, ‘ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ. ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ’ ಎಂದಿದ್ದರು.

ಇದನ್ನೂ ಓದಿ: ಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರ ಮತ್ತು ಕಂದಾಯ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭೂ ಮಾಫಿಯ ತಡೆಯಲಾಗದು ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ ಎಂದಿದ್ದಾರೆ.

’ಇಂದು ಭೂ ಮಾಫಿಯಾದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವವರು ಯಾರು? ಪಕ್ಷಗಳ ಹಿಂಬಾಲಕರು, ಬಾಲಬಡುಕರೇ ಅಲ್ಲವೇ? ಅವರಿಗೆ ಪ್ರೋತ್ಸಾಹ ಕೊಡುವಾಗ ಕೊಟ್ಟು ಈಗ ‘ನಿಯಂತ್ರಿಸಲಾಗುತ್ತಿಲ್ಲ,’ ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ. ಇಂಥ ಮಾತುಗಳು ಭೂಮಾಫಿಯಾಕ್ಕೆ ಪ್ರೇರಕ. ಭೂಮಿ ನುಂಗುವ ದಂಧೆ ಬೆಳೆಯಲು ಎರಡೂ ರಾಷ್ಟ್ರೀಯ ಪಕ್ಷಗಳ ಪಾಲು ಸಮಾನ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

‘ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ,’ ಎಂದೂ ಸಚಿವರು ಹೇಳಿದ್ದಾರೆ. ಅಧಿಕಾರಿಗಳು ಈ ಮಟ್ಟಿನ ಭಂಡತನ ತೋರಲು ರಾಜಕಾರಣಿಗಳು ಹುಟ್ಟುಹಾಕಿದ ವಿಷಮ ವ್ಯವಸ್ಥೆಯೇ ಕಾರಣ. ಸರ್ಕಾರ ಅಸಹಾಯಕತೆ ಪ್ರದರ್ಶಿಸಿ, ದುರ್ವ್ಯವಸ್ಥೆ ಪ್ರೋತ್ಸಾಹಿಸದೇ ಶುದ್ಧೀಕರಣ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

’ಒಂದು ಅವ್ಯವಸ್ಥೆ ವಿರುದ್ಧ ಸರ್ಕಾರ ಕಠಿಣ ನೀತಿ ರೂಪಿಸಿ ಅದನ್ನು ಜಾರಿ ಮಾಡಲು ಹೊರಟು ನಿಂತರೆ ಯಾವ ಮಾಫಿಯಾ ಏನು ಮಾಡಲು ಸಾಧ್ಯ..? ಅದಕ್ಕೆ ಇಚ್ಛಾಶಕ್ತಿ ಬೇಕಷ್ಟೆ. ಸ್ವಹಿತಾಸಕ್ತಿ ಹೊಂದಿರುವವರು ಮಾತ್ರ ವ್ಯವಸ್ಥೆ ಸರಿಪಡಿಸಲಾಗದ ಮಾತಾಡುತ್ತಾರೆ. ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು?’ ಎಂದು ಸರ್ಕಾರ ಮತ್ತು ಕಂದಾಯ ಇಲಾಖೆಯನ್ನು ಖಾರವಾಗಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ಬೆದರಿಕೆ: ಕುಮಾರಸ್ವಾಮಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...