Homeಕರ್ನಾಟಕಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

- Advertisement -
- Advertisement -

ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು? ಎಂದು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂ ಮಾಫಿಯಾ ನಿಯಂತ್ರಿಸುವುದು ಅಸಾಧ್ಯ ಎಂದು ಕಂದಾಯ ಸಚಿವ ಆರ್‌.ಅಶೋಕ್ ಹೇಳಿದ್ದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

’ಕಂದಾಯ ಸಚಿವರ ಉತ್ತರವೊಂದನ್ನು ಗಮನಿಸಿದೆ. ‘ಭೂ ಮಾಫಿಯಾ ವಿರುದ್ಧ ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ,’ ಎಂದು ಸಚಿವರು ಹೇಳಿದ್ದಾರೆ. ವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ಮಾತನಾಡಿರುವ ಸಚಿವರು, ಅದರ ಹಿಂದಿನ ಕಾರಣವನ್ನೂ ಪ್ರಸ್ತಾಪಿಸಿದಿದ್ದರೆ ಚನ್ನಾಗಿರುತ್ತಿತ್ತು’ ಎಂದಿದ್ದಾರೆ.

ವಿಧಾನಸಭೆಯಲ್ಲಿ ಭೂ ಮಾಫಿಯಾ ಬಗ್ಗೆ ಮಾತನಾಡಿದ್ದ ಸಚಿವ ಆರ್‌.ಅಶೋಕ್, ‘ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ. ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ’ ಎಂದಿದ್ದರು.

ಇದನ್ನೂ ಓದಿ: ಪೆಟ್ರೋಲಿಯಂ ಉತ್ಪನ್ನಗಳು GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ- ಎಚ್‌.ಡಿ.ಕುಮಾರಸ್ವಾಮಿ

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರ ಮತ್ತು ಕಂದಾಯ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭೂ ಮಾಫಿಯ ತಡೆಯಲಾಗದು ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ ಎಂದಿದ್ದಾರೆ.

’ಇಂದು ಭೂ ಮಾಫಿಯಾದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವವರು ಯಾರು? ಪಕ್ಷಗಳ ಹಿಂಬಾಲಕರು, ಬಾಲಬಡುಕರೇ ಅಲ್ಲವೇ? ಅವರಿಗೆ ಪ್ರೋತ್ಸಾಹ ಕೊಡುವಾಗ ಕೊಟ್ಟು ಈಗ ‘ನಿಯಂತ್ರಿಸಲಾಗುತ್ತಿಲ್ಲ,’ ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ. ಇಂಥ ಮಾತುಗಳು ಭೂಮಾಫಿಯಾಕ್ಕೆ ಪ್ರೇರಕ. ಭೂಮಿ ನುಂಗುವ ದಂಧೆ ಬೆಳೆಯಲು ಎರಡೂ ರಾಷ್ಟ್ರೀಯ ಪಕ್ಷಗಳ ಪಾಲು ಸಮಾನ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

‘ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ,’ ಎಂದೂ ಸಚಿವರು ಹೇಳಿದ್ದಾರೆ. ಅಧಿಕಾರಿಗಳು ಈ ಮಟ್ಟಿನ ಭಂಡತನ ತೋರಲು ರಾಜಕಾರಣಿಗಳು ಹುಟ್ಟುಹಾಕಿದ ವಿಷಮ ವ್ಯವಸ್ಥೆಯೇ ಕಾರಣ. ಸರ್ಕಾರ ಅಸಹಾಯಕತೆ ಪ್ರದರ್ಶಿಸಿ, ದುರ್ವ್ಯವಸ್ಥೆ ಪ್ರೋತ್ಸಾಹಿಸದೇ ಶುದ್ಧೀಕರಣ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

’ಒಂದು ಅವ್ಯವಸ್ಥೆ ವಿರುದ್ಧ ಸರ್ಕಾರ ಕಠಿಣ ನೀತಿ ರೂಪಿಸಿ ಅದನ್ನು ಜಾರಿ ಮಾಡಲು ಹೊರಟು ನಿಂತರೆ ಯಾವ ಮಾಫಿಯಾ ಏನು ಮಾಡಲು ಸಾಧ್ಯ..? ಅದಕ್ಕೆ ಇಚ್ಛಾಶಕ್ತಿ ಬೇಕಷ್ಟೆ. ಸ್ವಹಿತಾಸಕ್ತಿ ಹೊಂದಿರುವವರು ಮಾತ್ರ ವ್ಯವಸ್ಥೆ ಸರಿಪಡಿಸಲಾಗದ ಮಾತಾಡುತ್ತಾರೆ. ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು?’ ಎಂದು ಸರ್ಕಾರ ಮತ್ತು ಕಂದಾಯ ಇಲಾಖೆಯನ್ನು ಖಾರವಾಗಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ಬೆದರಿಕೆ: ಕುಮಾರಸ್ವಾಮಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....