Homeಮುಖಪುಟವಲಸೆ ಕಾರ್ಮಿಕರ ಈ ಸ್ಥಿತಿಗೆ ಕಾರಣವೇನು? ಅವರ ವಿಮೋಚನೆಯ ದಾರಿ ಯಾವುದು?

ವಲಸೆ ಕಾರ್ಮಿಕರ ಈ ಸ್ಥಿತಿಗೆ ಕಾರಣವೇನು? ಅವರ ವಿಮೋಚನೆಯ ದಾರಿ ಯಾವುದು?

ಕರ್ನಾಟಕದ ಗಂಗಮ್ಮದಿಂದ ಹಿಡಿದು ಮಹಾರಾಷ್ಟ್ರದ ಕನ್ನಡಿಗ ಕಾರ್ಮಿಕರವರೆಗೂ ಜನ ಸಾಯುತ್ತಿದ್ದರೂ ಸರ್ಕಾರ ಕಣ್ಣೆತ್ತಿ ನೋಡುತ್ತಿಲ್ಲ ಏಕೆ? ಇವರು ಈ ಸ್ಥಿತಿಗೆ ಬರಲು ಕಾರಣವೇನು?

- Advertisement -
- Advertisement -

ನಿನ್ನೆ ಒಂದು ಧಾರುಣ ಘಟನೆ ಜರುಗಿತು. ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಕಾಲ್ನಡಿಗೆಯಲ್ಲಿ ತಮ್ಮೂರಿಗೆ ಹೊರಟಿದ್ದ 16 ಜನ ವಲಸೆ ಕಾರ್ಮಿಕರು ವಿಶ್ರಾಂತಿಗಾಗಿ ರೈಲ್ವೆ ಹಳಿಯ ಮೇಲೆ ಮಲಗಿದ್ದಾಗ ರೈಲು ಹರಿದು ಎಲ್ಲರ ಪ್ರಾಣ ತೆಗೆಯಿತು. ಲಾಕ್‌ಡೌನ್‌ ಕಾರಣಕ್ಕೆ ರೈಲುಗಳಿಲ್ಲ ಎಂದು ತಿಳಿದು ಕಾಲ್ನಡಿಗೆಯಲ್ಲಿ ಹೊರಟಿದ್ದ ಅವರನ್ನು ಅದೇ ರೈಲು ಹರಿದು ಕೊಂದಿರುವುದು ದುರಾದೃಷ್ಟಕರ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ಭುಗಿಲೆದ್ದಿವೆ. ಕೆಲವು ಜನರು ಅವರೇಕೆ ರೈಲು ಹಳಿಗಳ ಮೇಲೆ ಮಲಗಬೇಕಿತ್ತು? ಎಂಬ ಪ್ರಶ್ನೆಗೆ ಅವರು ನಡೆದು ಹೋಗಬೇಕಾದ ಪರಿಸ್ಥಿತಿ ಏಕೆ ಬಂತು ಎಂಬ ಪ್ರಶ್ನೆ ಹಾಕಿದ್ದಾರೆ. ಇದಕ್ಕೆ ಅವರ ಬಳಿ ಉತ್ತರಗಳಿಲ್ಲ.

ಇನ್ನು ಇವರ ಸಾವು ಆಳುವ ಸರ್ಕಾರಗಳಿಗೆ ದೊಡ್ಡ ಪ್ರಮಾದ ಎನ್ನಿಸಲೇ ಇಲ್ಲ. ಅವರ ಜೀವಕ್ಕೆ ತಲಾ 5 ಲಕ್ಷ ಬೆಲೆ ಕಟ್ಟಿ ಕೈತೊಳೆದುಕೊಂಡಿವೆ. ಅವರ ಸಾವಿಗೆ ಮಮ್ಮಲ ಮರುಗಿದ ನಾವು ಕೂಡ ಒಂದೆರೆಡು ದಿನಗಳಲ್ಲಿ ಅವರನ್ನು ಮರೆತು ಮುಂದಕ್ಕೆ ಹೋಗುತ್ತೇವೆ. ಏಕೀಗೆ? ಅವರ ನೋವು ಆಳುವವರಿಗೆ ತಟ್ಟುವುದಿಲ್ಲ ಏಕೆ? ಈ ಕುರಿತು ಕನಿಷ್ಠ ಯೋಚಿಸಬೇಕಲ್ಲವೇ?

ಇದೊಂದೆ ಘಟನೆಯಲ್ಲ. ಲಾಕ್‌ಡೌನ್‌ ಘೋಷಣೆಯಾದಾಗಿನಿಂದ ದೇಶದಲ್ಲಿರುವ ಕೋಟ್ಯಾಂತರ ವಲಸೆ ಕಾರ್ಮಿಕರನ್ನು ಶೋಷಿಸಲಾಗುತ್ತಿದೆ. ಅವರಿಗೆ ಸಮರ್ಪಕ ದಿನಸಿಗಳು, ಊಟ ಸಿಕ್ಕಿಲ್ಲ. ಸರಿ ತಮ್ಮ ಊರಿಗೆ ಹೋಗಲು ಸಾರಿಗೆ ಇಲ್ಲ. ಕರ್ನಾಟಕದ ಗಂಗಮ್ಮದಿಂದ ಹಿಡಿದು ಮಹಾರಾಷ್ಟ್ರದ ಕನ್ನಡಿಗ ಕಾರ್ಮಿಕರವರೆಗೂ ಜನ ಸಾಯುತ್ತಿದ್ದರೂ ಸರ್ಕಾರ ಕಣ್ಣೆತ್ತಿ ನೋಡುತ್ತಿಲ್ಲ ಏಕೆ? ಇವರು ಈ ಸ್ಥಿತಿಗೆ ಬರಲು ಕಾರಣವೇನು?

ರಾಜಕೀಯ ಭಾಗವಹಿಸುವಿಕೆ ತೀರಾ ಕಡಿಮೆ.

ಈ ಕುರಿತು ಯೋಚಿಸಿದಾಗ ನಮಗೆ ಕಾಡುವ ಒಂದು ಪದವೆಂದರೆ ಅದು ವಲಸಿಗ ಎಂಬುದಾಗಿದೆ. ವಲಸಿಗ ಎಂಬ ಪದದ ಅರ್ಥವೇ ನಮ್ಮವನಲ್ಲ ಎಂಬುದಾಗಿದೆ. ವಲಸೆ ಕಾರ್ಮಿಕರ ಈ ಪರಿಸ್ಥಿತಿಯನ್ನ ರಾಜ್ಯಶಾಸ್ತ್ರ ದೃಷ್ಟಿಯಿಂದ ಇಂದ ಅಧ್ಯಯನ ಮಾಡಿದರೆ ಇವರಿಗೆ ನಾವು stateless population ಎಂದು ಕರೆಯುತ್ತೇವೆ. ಅಂದರೆ ಈ ಕಾರ್ಮಿಕರು ನಮ್ಮದೇ ದೇಶದಲ್ಲಿ ಪರಕೀಯರಾಗಿ ಉಳಿದಿದ್ದಾರೆ.

ಈ ಕಾರ್ಮಿಕರು ನಮ್ಮ ದೇಶ ಕಟ್ಟುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತಿದ್ದಾರೆ. ಇವರಿಲ್ಲದೇ ಅಭಿವೃದ್ದಿ ಎಂಬುದನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬಡತನದ ಕಾರಣಕ್ಕಾಗಿ ಉದ್ಯೋಗ ಸಿಗದೇ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಲಸೆ ಬಂದಿರುವ ಇವರು ತಮ್ಮ ರಾಜ್ಯಕ್ಕೂ ಬೇಡವಾಗಿರುತ್ತಾರೆ ಮತ್ತು ತಾವಿರುವ ರಾಜ್ಯದಲ್ಲಿಯೂ ಸಹ ಅನ್ಯರಾಗಿರುತ್ತಾರೆ.

ಇನ್ನು ಬಹುಮುಖ್ಯ ಕಾರಣ ಇವರ ರಾಜಕೀಯ ಭಾಗವಹಿಸುವಿಕೆ ತೀರಾ ಕಡಿಮೆಯಿದೆ. ಇವರುಗಳ ಮತದಾನದ ಗುರುತಿನ ಚೀಟಿ ತಮ್ಮ ಸ್ವಂತ ರಾಜ್ಯದಲ್ಲಿರುತ್ತದೆ. ಆದರೆ ದೂರದ ಇನ್ಯಾವುದೋ ರಾಜ್ಯದಲ್ಲಿ ಕೂಲಿ ಮಾಡಿಕೊಂಡು ಸ್ಲಂಗಳಲ್ಲಿ ವಾಸಿಸುತ್ತಿರುತ್ತಾರೆ. ಚುನಾವಣೆ ಬಂದಾಗ ತಮ್ಮ ಸ್ವಂತ ರಾಜ್ಯಕ್ಕೆ ತೆರಳಿ ಮತದಾನ ಮಾಡುವಷ್ಟ ಶಕ್ತಿ ಅವರಿಗೆ ಇರುವುದಿಲ್ಲ. ಇನ್ನು ಅವರಿರುವ ರಾಜ್ಯಗಳಲ್ಲಿ ಸಹ ಮತದಾನ ಮಾಡಲಾಗುವುದಿಲ್ಲ. ದೇಶದಲ್ಲಿ ಓಟು ಹಾಕುವ ರೈತರ ಬಗ್ಗೆಯೇ ಕಾಳಜಿ ವಹಿಸದ ಸರ್ಕಾರ ಇನ್ನು ಓಟೇ ಹಾಕದ ಇವರ ಮೇಲೆ ನಮ್ಮ ರಾಜಕಾರಣಿಗಳಿಗೆ, ಆಳುವವರಿಗೆ ಕಾಳಜಿ ಬರಲು ಹೇಗೆ ಸಾಧ್ಯ?

ಹೀಗಾಗಿಯೇ ಬೆಂಗಳೂರಿನಲ್ಲಿ ನಡೆದ ಒಂದೆರೆಡು ಘಟನೆಗಳನ್ನು ನೋಡಬೇಕಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಹಣವನ್ನು ಕೋವಿಡ್‌ ಪರಿಹಾರಕ್ಕಾಗಿ ಬಳಸಬಹುದೆಂದು ಸರ್ಕಾರ ತೀರ್ಮಾನಿಸಿತು. ಅದಾದ ನಂತರ ಶಾಸಕರುಗಳ ನೇತೃತ್ವದಲ್ಲಿ ದಿನಸಿ ಮತ್ತಿತರ ಕಿಟ್‌ಗಳನ್ನು ಕೊಡಲು ನಿರ್ಧರಿಸಿದಾಗ ಬೆಂಗಳೂರಿನ ಮಹಾದೇವಪುರದ ಶಾಸಕ ಅರವಿಂದ ಲಿಂಬಾವಳಿಯವರು ಕಿಟ್‌ಗಳ ಮೇಲೆ ತಮ್ಮ ಮತ್ತು ಬಿಜೆಪಿಯ ಭಾವಚಿತ್ರವನ್ನು ಹಾಕಿಸಿಕೊಂಡರು. ಅಷ್ಟು ಮಾತ್ರವಲ್ಲದೇ ಅದನ್ನು ನಿಜಕ್ಕೂ ಅಗತ್ಯವಿದ್ದ ವಲಸೆ ಕಾರ್ಮಿಕರಿಗೆ ಕೊಡುವ ಬದಲು ತಮ್ಮ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಹಂಚಿದರು. ಏಕೆಂದರೆ ಅವರಿಗೆ ಸ್ಪಷ್ಟತೆಯಿದೆ ತನಗೆ ಓಟು ಹಾಕಿರುವವರು ಬಿಜೆಪಿ ಕಾರ್ಯಕರ್ತರೇ ಹೊರತು, ವಲಸೆ ಕಾರ್ಮಿಕರಲ್ಲ ಎಂಬುದಾಗಿದೆ.

ಹಾಗಾಗಿಯೇ ಈ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ಹೋಗಲು ರೈಲು ವ್ಯವಸ್ಥೆ ಮಾಡಿದಾಗಲೂ ಕಾರ್ಮಿಕರಿಂದ ಟಿಕೆಟ್‌ಗಾಗಿ ಹಣ ವಸೂಲಿ ಮಾಡಲಾಗುತ್ತಿತ್ತು. ಆನಂತರ ಉಚಿತವಾದರೂ ಅದೇ ಸಮಯಕ್ಕೆ ಕರ್ನಾಟಕ ಸರ್ಕಾರ ಅವರು ಹೊರಟುಬಿಟ್ಟರೆ ಇಲ್ಲಿ ಚಟುವಟಿಕೆ ನಡೆಸುವುದು ಕಷ್ಟ ಎಂದು ರೈಲುಸೇವೆಯನ್ನೇ ರದ್ದುಗೊಳಿಸಿದರು. ಜನರ ಒತ್ತಡಕ್ಕೆ ಮಣಿದು ಅವರು ರೈಲುಸೇವೆಯನ್ನು ಪುನರ್‌ ಆರಂಭಿಸಿದಾಗ ಜಾರ್ಖಂಡ್‌, ಬಿಹಾರ, ಪಶ್ಚಿಮ ಬಂಗಾಳ ಮತ್ತು ಓಡಿಸ್ಸಾದಂತಹ ರಾಜ್ಯಗಳು ವಲಸೆ ಕಾರ್ಮಿಕರು ಸದ್ಯಕ್ಕೆ ನಮ್ಮ ರಾಜ್ಯಗಳಿಗೆ ಬರುವುದು ಬೇಡ ಎಂದು ರೈಲುಗಳಿಗೆ ಅನುಮತಿ ನಿರಾಕರಿಸಿವೆ.

ಇಲ್ಲಿಯೂ ಅದೇ ವಲಸೆ ನೀತಿ ಕೆಲಸ ಮಾಡಿದೆ. ಇಷ್ಟೊಂದು ದೊಡ್ಡ ಸಂಖ್ಯೆಯ ಕಾರ್ಮಿಕರು ಬಹಳಷ್ಟು ರಾಜ್ಯಗಳಿಂದ ತಮ್ಮ ರಾಜ್ಯಕ್ಕೆ ಒಟ್ಟಿಗೆ ಬಂದರೆ ಅವರನ್ನು ನಿಭಾಯಿಸುವುದು ಹೇಗೆ? ಮೊದಲನೇಯದು ಕೊರೊನಾ ಹರಡುವ ಭಯ. ಎರಡನೆಯದು ಕೊರೊನಾ ನಿಂತರೂ ಅವರಿಗೆ ಅನ್ನ ಆಹಾರ ಉದ್ಯೋಗ ನೀಡಲು ಸಾಧ್ಯವಿಲ್ಲ ಎಂಬ ಭಯ ಅವರನ್ನು ಕಾಡುತ್ತಿದೆ. ಅವರೇನಿದ್ದರೂ ನಮಗೆ ಓಟು ಹಾಕುವವರಲ್ಲವಲ್ಲ ಎಂಬ ಅಸಡ್ಡೆ ಬೇರೆ.

ಇದು ರಾಜ್ಯಸರ್ಕಾರಗಳ ಕಥೆಯಾದರೆ ಕೇಂದ್ರ ಸರ್ಕಾರದ್ದು ಅದಕ್ಕಿಂತ ಕ್ರೂರವಾದುದ್ದು. ಲಾಕ್‌ಡೌನ್‌ ಮಾಡಿದಾಗ ಕೇವಲ 4 ಗಂಟೆ ಸಮಯ ಕೊಟ್ಟ ಸರ್ಕಾರ ವಲಸೆ ಕಾರ್ಮಿಕರ ಜೀವನೋಪಾಯಕ್ಕೆ ಬಿಡಿಗಾಸನ್ನೂ ಬಿಚ್ಚಲಿಲ್ಲ. ಆಗಲೇ ಹೇಳಿದ ಹಾಗೆ ರೈಲು ದರಕ್ಕೂ ಕಾರ್ಮಿಕರಿಂದ ವಸೂಲಿಗಿಳಿದ ಕೇಂದ್ರ, ಅವರನ್ನು ನಿಭಾಯಿಸಲು ರಾಜ್ಯ ಸರ್ಕಾರಗಳಿಗೆ ನಯಾಪೈಸೆ ಕೊಡಲಿಲ್ಲ. ಪಿಎಂ ಕೇರ್ಸ್‌‌ಗೆ 30 ಸಾವಿರ ಕೋಟಿಗೂ ಅಧಿಕ ಹಣ ಹರಿದುಬಂದಿದ್ದರೂ ಅದರಿಂದ ಪ್ರಧಾನಿಗಳು ಒಂದು ರೂಪಾಯಿ ಸಹ ಖರ್ಚು ಮಾಡಿದ ಉದಾಹರಣೆಯಿಲ್ಲ. ಕೋವಿಡ್‌ಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಹಸಿವಿನಿಂದ ಕಾರ್ಮಿಕರು ಸಾಯುತ್ತಿರುವಾಗ ಖರ್ಚು ಮಾಡದೇ ಇನ್ಯಾವಾಗ ಮಾಡುತ್ತಾರೆ?

ಪರಿಹಾರವೇನು?

ವಲಸೆ ಕಾರ್ಮಿಕರು ಅಸಂಘಟಿತ ವಲಯಕ್ಕೆ ಬರುತ್ತಾರೆ. ಕಾರ್ಮಿಕ ಸಂಘಟನೆಗಳು ಇವರನ್ನು ಸಂಘಟಿಸಲು ಪ್ರಯತ್ನಸಿದರೂ ದೊಡ್ಡ ಮಟ್ಟದಲ್ಲಿ ಸಾಧ್ಯವಾಗಿಲ್ಲ. ಇವರನ್ನು ದೊಡ್ಡ ಮಟ್ಟದಲ್ಲಿ ಸಂಘಟಿಸಿ ಅವರೊಂದು ರಾಜಕೀಯ ಶಕ್ತಿಯನ್ನಾಗಿ ಮಾಡಬೇಕಾದ ಅನಿವಾರ್ಯತೆ ಇದೆ. ಅದು ಮಾತ್ರವೇ ಈ ಸಂಕಷ್ಟದಿಂದ ವಲಸೆ ಕಾರ್ಮಿಕರನ್ನು ಪಾರು ಮಾಡುತ್ತದೆ. ಕಾರ್ಲ್‌‌ಮಾರ್ಕ್ಸ್‌‌ರವರು ಹೇಳಿದಂತೆ ಕಾರ್ಮಿಕರು ಈಗ ಕಳೆದುಕೊಳ್ಳಲು ಸಂಕೋಲೆಯನ್ನು ಹೊರತಪಡಿಸಿ ಕಳೆದುಕೊಳ್ಳಲು ಮತ್ತೇನೂ ಇಲ್ಲ. ಅದೇ ರೀತಿ ಬುದ್ದ ನಮ್ಮ ಅಂದರೆ ಕಾರ್ಮಿಕರ ವಿಮೋಚನೆ ನಮ್ಮಿಂದಲೇ ಸಾಧ್ಯ ಹೊರತು ಮತ್ಯಾರಿಂದಲೂ ಅಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...