Homeಕರ್ನಾಟಕ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಜನ ಕ್ಯೂನಲ್ಲಿ ನಿಂತಿದ್ದು ಅವರಿಗೆ ಮೊದಲು ಲಸಿಕೆ ಕೊಡಿ, ನಂತರ ನಮ್ಮ ಕಡೆ ಬೊಟ್ಟು ಮಾಡಿ ಎಂದು ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ

- Advertisement -
- Advertisement -

ಜನರು ಕೊರೊನಾ ವ್ಯಾಕ್ಸಿನ್ ಪಡೆಯಲು ಹಿಂಜರಿಯುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎನ್ನುವ ಬಿಜೆಪಿ ಆರೋಪ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ನಡೆಸುತ್ತಿರುವ ಹತಾಶ ಪ್ರಯತ್ನ ಅಷ್ಟೆ. ವ್ಯಾಕ್ಸಿನ್ ಪಡೆಯಲು ಜನ ಕ್ಯೂನಲ್ಲಿದ್ದಾರೆ, ಮೊದಲು ಅವರಿಗೆ ಕೊಡಿ, ಆ ಮೇಲೆ ನಮ್ಮ ಕಡೆ ಬೊಟ್ಟು ಮಾಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

‘ INC4Vaccine’ ಎಂಬ ಹ್ಯಾಶ್‌ಟ್ಯಾಗ್‌‌ ಬಳಸಿ ಸರಣಿ ಟ್ವೀಟ್‌ ಮಾಡಿರುವ ಅವರು, “ಕೊರೊನಾ ವ್ಯಾಕ್ಸಿನನ್ನು ಎಲ್ಲರಿಗೂ ಉಚಿತವಾಗಿ ಹಂಚಿ ಎನ್ನುವುದೇ ನಮ್ಮ ಮೂಲ ಬೇಡಿಕೆ. ನಾವು ವ್ಯಾಕ್ಸಿನನ್ನು ಎಂದೂ ವಿರೋಧಿಸಿಲ್ಲ. ಅದರ ಸತ್ವಪರೀಕ್ಷೆಯ ಫಲಿತಾಂಶಕ್ಕಿಂತ ಮೊದಲು ಕೇವಲ ಪ್ರಚಾರಕ್ಕಾಗಿ ಬಳಕೆಗೆ ಬಿಡುಗಡೆ ಮಾಡಬಾರದೆಂಬ ತಜ್ಞರ ಅಭಿಪ್ರಾಯಕ್ಕೆ ನಮ್ಮ ಪಕ್ಷ ಸಹಮತ ವ್ಯಕ್ತಪಡಿಸಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

“ಕೊರೊನಾ ವ್ಯಾಕ್ಸಿನನ್ನು ಕೊರೊನಾ ವಾರಿಯರ್ಸ್ ಗಾಗಿ ಬಿಡುಗಡೆಗೊಳಿಸಿದ್ದು ಜನವರಿ 18 ರಂದು. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವರು ವ್ಯಾಕ್ಸಿನ್ ಪಡೆಯುವ ಧೈರ್ಯ ತೋರಿಸಿದ್ದು ಮಾರ್ಚ್ ಒಂದರಂದು. ಎಲ್ಲದರಲ್ಲಿಯೂ ನಾವೇ ಮೊದಲು ಎಂದು ಎದೆ ತಟ್ಟಿಕೊಳ್ಳುವ ಪ್ರಧಾನಿ ಮೋದಿ ಅವರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹಿಂಜರಿದದ್ದು ಯಾಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಬೇರೆಲ್ಲ ದೇಶಗಳ ಪ್ರಧಾನಿ/ಅಧ್ಯಕ್ಷರು ಕೊರೊನಾ ವಾರಿಯರ್ಸ್‌ರಂತೆ ಮೊದಲು ವ್ಯಾಕ್ಸಿನ್ ಹಾಕಿಸಿಕೊಂಡು ಜನರಿಗೆ ಧೈರ್ಯ ತುಂಬಿದ್ದರೆ ನಮ್ಮ ಪ್ರಧಾನಿ ಮೋದಿ ಅವರು ಮಾತ್ರ ಫಲಿತಾಂಶ ಕಾದು ನೋಡಿ ವ್ಯಾಕ್ಸಿನ್ ಹಾಕಿಸಿಕೊಂಡರು. 56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?” ಎಂದು ಅವರು ಕೇಳಿದ್ದಾರೆ.

“ಭಾರತದಲ್ಲಿ ಎರಡೂ ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರು ನಾಲ್ಕುಕೋಟಿ ಜನಮಾತ್ರ (3%). ಕರ್ನಾಟಕದಲ್ಲಿ ಕೇವಲ 25 ಲಕ್ಷ ಜನ. ಇದಕ್ಕೆ ವ್ಯಾಕ್ಸಿನ್ ಕೊರತೆಯೇ ಕಾರಣ ಹೊರತು ಜನರ ಹಿಂಜರಿಕೆ ಅಲ್ಲ. ಜನರ ಬೇಡಿಕೆಗೆ ತಕ್ಕಂತೆ ವ್ಯಾಕ್ಸಿನ್ ಪೂರೈಸಲಾಗದ ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗ ವಿರೋಧ ಪಕ್ಷಗಳನ್ನು ಹಳಿಯುವುದು ತಮಾಷೆಯಾಗಿದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

“ಮೊದಲು ಕೊರೊನಾ ಕಾಣಿಸಿಕೊಂಡಾಗ ತಟ್ಟೆ ಬಡಿಯಿರಿ, ದೀಪ ಹಚ್ಚಿರಿ ಎಂದು ಪ್ರಧಾನಿಯವರು ಕರೆ ನೀಡಿದಾಗ ಇಡೀ ದೇಶ ಕುಣಿದಾಡಿತ್ತು. ಆದರೆ ವ್ಯಾಕ್ಸಿನ್ ವಿಷಯದಲ್ಲಿ ಮಾತ್ರ ಜನ ಕಾಂಗ್ರೆಸ್ ಮಾತಿಗೆ ತಲೆದೂಗಿದ್ದಾರೆ ಎಂದರೆ ದೇಶದ ಜನ ಈಗ ನರೇಂದ್ರ ಮೋದಿ ಅವರ ಮಾತಿಗೆ ಕಿವಿಗೊಡೊಲ್ಲ, ಕಾಂಗ್ರೆಸ್ ಮಾತಿಗೆ ಬೆಲೆಕೊಡುತ್ತಾರೆ ಎಂದರ್ಥವೇ?” ಎಂದು ಅವರು ಪ್ರಶ್ನಿಸಿದ್ದಾರೆ.

‘ಕುಮಾರಸ್ವಾಮಿಯದ್ದು ಬಾಲಿಷ ಹೇಳಿಕೆ’

ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎಂದು ಆರೋಪಿಸುವ ಮೂಲಕ ಎಚ್.ಡಿ.ಕುಮಾರಸ್ವಾಮಿ ತಮಗೆ ತಾವೇ ಗೋಲು ಹೊಡೆದುಕೊಂಡಿದ್ದಾರೆ. ಕಾಂಗ್ರೆಸ್ ಪ್ರಚಾರ ನಂಬಿ ನೀವು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮಾರ್ಚ್ 23ರ ವರೆಗೆ ಕಾದು ಕೂತಿದ್ದೇ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೇಲೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ವರಿಗೂ ಉಚಿತ ವ್ಯಾಕ್ಸಿನ್ ಹಾಕುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಜೊತೆಗೂಡಿ ದೇವೇಗೌಡ ಅವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದರು. ಕುಮಾರಸ್ವಾಮಿಯವರು ಇಂತಹ ಬಾಲಿಷ ಹೇಳಿಕೆ ನೀಡುವ ಮೊದಲು ತಂದೆಯ ಸಲಹೆ‌ ಪಡೆಯುವುದು ಒಳ್ಳೆಯದು” ಎಂದು ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...