Homeಕರ್ನಾಟಕ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಜನ ಕ್ಯೂನಲ್ಲಿ ನಿಂತಿದ್ದು ಅವರಿಗೆ ಮೊದಲು ಲಸಿಕೆ ಕೊಡಿ, ನಂತರ ನಮ್ಮ ಕಡೆ ಬೊಟ್ಟು ಮಾಡಿ ಎಂದು ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ

- Advertisement -
- Advertisement -

ಜನರು ಕೊರೊನಾ ವ್ಯಾಕ್ಸಿನ್ ಪಡೆಯಲು ಹಿಂಜರಿಯುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎನ್ನುವ ಬಿಜೆಪಿ ಆರೋಪ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ನಡೆಸುತ್ತಿರುವ ಹತಾಶ ಪ್ರಯತ್ನ ಅಷ್ಟೆ. ವ್ಯಾಕ್ಸಿನ್ ಪಡೆಯಲು ಜನ ಕ್ಯೂನಲ್ಲಿದ್ದಾರೆ, ಮೊದಲು ಅವರಿಗೆ ಕೊಡಿ, ಆ ಮೇಲೆ ನಮ್ಮ ಕಡೆ ಬೊಟ್ಟು ಮಾಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

‘ INC4Vaccine’ ಎಂಬ ಹ್ಯಾಶ್‌ಟ್ಯಾಗ್‌‌ ಬಳಸಿ ಸರಣಿ ಟ್ವೀಟ್‌ ಮಾಡಿರುವ ಅವರು, “ಕೊರೊನಾ ವ್ಯಾಕ್ಸಿನನ್ನು ಎಲ್ಲರಿಗೂ ಉಚಿತವಾಗಿ ಹಂಚಿ ಎನ್ನುವುದೇ ನಮ್ಮ ಮೂಲ ಬೇಡಿಕೆ. ನಾವು ವ್ಯಾಕ್ಸಿನನ್ನು ಎಂದೂ ವಿರೋಧಿಸಿಲ್ಲ. ಅದರ ಸತ್ವಪರೀಕ್ಷೆಯ ಫಲಿತಾಂಶಕ್ಕಿಂತ ಮೊದಲು ಕೇವಲ ಪ್ರಚಾರಕ್ಕಾಗಿ ಬಳಕೆಗೆ ಬಿಡುಗಡೆ ಮಾಡಬಾರದೆಂಬ ತಜ್ಞರ ಅಭಿಪ್ರಾಯಕ್ಕೆ ನಮ್ಮ ಪಕ್ಷ ಸಹಮತ ವ್ಯಕ್ತಪಡಿಸಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

“ಕೊರೊನಾ ವ್ಯಾಕ್ಸಿನನ್ನು ಕೊರೊನಾ ವಾರಿಯರ್ಸ್ ಗಾಗಿ ಬಿಡುಗಡೆಗೊಳಿಸಿದ್ದು ಜನವರಿ 18 ರಂದು. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವರು ವ್ಯಾಕ್ಸಿನ್ ಪಡೆಯುವ ಧೈರ್ಯ ತೋರಿಸಿದ್ದು ಮಾರ್ಚ್ ಒಂದರಂದು. ಎಲ್ಲದರಲ್ಲಿಯೂ ನಾವೇ ಮೊದಲು ಎಂದು ಎದೆ ತಟ್ಟಿಕೊಳ್ಳುವ ಪ್ರಧಾನಿ ಮೋದಿ ಅವರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹಿಂಜರಿದದ್ದು ಯಾಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಬೇರೆಲ್ಲ ದೇಶಗಳ ಪ್ರಧಾನಿ/ಅಧ್ಯಕ್ಷರು ಕೊರೊನಾ ವಾರಿಯರ್ಸ್‌ರಂತೆ ಮೊದಲು ವ್ಯಾಕ್ಸಿನ್ ಹಾಕಿಸಿಕೊಂಡು ಜನರಿಗೆ ಧೈರ್ಯ ತುಂಬಿದ್ದರೆ ನಮ್ಮ ಪ್ರಧಾನಿ ಮೋದಿ ಅವರು ಮಾತ್ರ ಫಲಿತಾಂಶ ಕಾದು ನೋಡಿ ವ್ಯಾಕ್ಸಿನ್ ಹಾಕಿಸಿಕೊಂಡರು. 56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?” ಎಂದು ಅವರು ಕೇಳಿದ್ದಾರೆ.

“ಭಾರತದಲ್ಲಿ ಎರಡೂ ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರು ನಾಲ್ಕುಕೋಟಿ ಜನಮಾತ್ರ (3%). ಕರ್ನಾಟಕದಲ್ಲಿ ಕೇವಲ 25 ಲಕ್ಷ ಜನ. ಇದಕ್ಕೆ ವ್ಯಾಕ್ಸಿನ್ ಕೊರತೆಯೇ ಕಾರಣ ಹೊರತು ಜನರ ಹಿಂಜರಿಕೆ ಅಲ್ಲ. ಜನರ ಬೇಡಿಕೆಗೆ ತಕ್ಕಂತೆ ವ್ಯಾಕ್ಸಿನ್ ಪೂರೈಸಲಾಗದ ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗ ವಿರೋಧ ಪಕ್ಷಗಳನ್ನು ಹಳಿಯುವುದು ತಮಾಷೆಯಾಗಿದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

“ಮೊದಲು ಕೊರೊನಾ ಕಾಣಿಸಿಕೊಂಡಾಗ ತಟ್ಟೆ ಬಡಿಯಿರಿ, ದೀಪ ಹಚ್ಚಿರಿ ಎಂದು ಪ್ರಧಾನಿಯವರು ಕರೆ ನೀಡಿದಾಗ ಇಡೀ ದೇಶ ಕುಣಿದಾಡಿತ್ತು. ಆದರೆ ವ್ಯಾಕ್ಸಿನ್ ವಿಷಯದಲ್ಲಿ ಮಾತ್ರ ಜನ ಕಾಂಗ್ರೆಸ್ ಮಾತಿಗೆ ತಲೆದೂಗಿದ್ದಾರೆ ಎಂದರೆ ದೇಶದ ಜನ ಈಗ ನರೇಂದ್ರ ಮೋದಿ ಅವರ ಮಾತಿಗೆ ಕಿವಿಗೊಡೊಲ್ಲ, ಕಾಂಗ್ರೆಸ್ ಮಾತಿಗೆ ಬೆಲೆಕೊಡುತ್ತಾರೆ ಎಂದರ್ಥವೇ?” ಎಂದು ಅವರು ಪ್ರಶ್ನಿಸಿದ್ದಾರೆ.

‘ಕುಮಾರಸ್ವಾಮಿಯದ್ದು ಬಾಲಿಷ ಹೇಳಿಕೆ’

ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎಂದು ಆರೋಪಿಸುವ ಮೂಲಕ ಎಚ್.ಡಿ.ಕುಮಾರಸ್ವಾಮಿ ತಮಗೆ ತಾವೇ ಗೋಲು ಹೊಡೆದುಕೊಂಡಿದ್ದಾರೆ. ಕಾಂಗ್ರೆಸ್ ಪ್ರಚಾರ ನಂಬಿ ನೀವು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮಾರ್ಚ್ 23ರ ವರೆಗೆ ಕಾದು ಕೂತಿದ್ದೇ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೇಲೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ವರಿಗೂ ಉಚಿತ ವ್ಯಾಕ್ಸಿನ್ ಹಾಕುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಜೊತೆಗೂಡಿ ದೇವೇಗೌಡ ಅವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದರು. ಕುಮಾರಸ್ವಾಮಿಯವರು ಇಂತಹ ಬಾಲಿಷ ಹೇಳಿಕೆ ನೀಡುವ ಮೊದಲು ತಂದೆಯ ಸಲಹೆ‌ ಪಡೆಯುವುದು ಒಳ್ಳೆಯದು” ಎಂದು ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...