Homeಕರ್ನಾಟಕ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಜನ ಕ್ಯೂನಲ್ಲಿ ನಿಂತಿದ್ದು ಅವರಿಗೆ ಮೊದಲು ಲಸಿಕೆ ಕೊಡಿ, ನಂತರ ನಮ್ಮ ಕಡೆ ಬೊಟ್ಟು ಮಾಡಿ ಎಂದು ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ

- Advertisement -
- Advertisement -

ಜನರು ಕೊರೊನಾ ವ್ಯಾಕ್ಸಿನ್ ಪಡೆಯಲು ಹಿಂಜರಿಯುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎನ್ನುವ ಬಿಜೆಪಿ ಆರೋಪ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ನಡೆಸುತ್ತಿರುವ ಹತಾಶ ಪ್ರಯತ್ನ ಅಷ್ಟೆ. ವ್ಯಾಕ್ಸಿನ್ ಪಡೆಯಲು ಜನ ಕ್ಯೂನಲ್ಲಿದ್ದಾರೆ, ಮೊದಲು ಅವರಿಗೆ ಕೊಡಿ, ಆ ಮೇಲೆ ನಮ್ಮ ಕಡೆ ಬೊಟ್ಟು ಮಾಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

‘ INC4Vaccine’ ಎಂಬ ಹ್ಯಾಶ್‌ಟ್ಯಾಗ್‌‌ ಬಳಸಿ ಸರಣಿ ಟ್ವೀಟ್‌ ಮಾಡಿರುವ ಅವರು, “ಕೊರೊನಾ ವ್ಯಾಕ್ಸಿನನ್ನು ಎಲ್ಲರಿಗೂ ಉಚಿತವಾಗಿ ಹಂಚಿ ಎನ್ನುವುದೇ ನಮ್ಮ ಮೂಲ ಬೇಡಿಕೆ. ನಾವು ವ್ಯಾಕ್ಸಿನನ್ನು ಎಂದೂ ವಿರೋಧಿಸಿಲ್ಲ. ಅದರ ಸತ್ವಪರೀಕ್ಷೆಯ ಫಲಿತಾಂಶಕ್ಕಿಂತ ಮೊದಲು ಕೇವಲ ಪ್ರಚಾರಕ್ಕಾಗಿ ಬಳಕೆಗೆ ಬಿಡುಗಡೆ ಮಾಡಬಾರದೆಂಬ ತಜ್ಞರ ಅಭಿಪ್ರಾಯಕ್ಕೆ ನಮ್ಮ ಪಕ್ಷ ಸಹಮತ ವ್ಯಕ್ತಪಡಿಸಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

“ಕೊರೊನಾ ವ್ಯಾಕ್ಸಿನನ್ನು ಕೊರೊನಾ ವಾರಿಯರ್ಸ್ ಗಾಗಿ ಬಿಡುಗಡೆಗೊಳಿಸಿದ್ದು ಜನವರಿ 18 ರಂದು. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವರು ವ್ಯಾಕ್ಸಿನ್ ಪಡೆಯುವ ಧೈರ್ಯ ತೋರಿಸಿದ್ದು ಮಾರ್ಚ್ ಒಂದರಂದು. ಎಲ್ಲದರಲ್ಲಿಯೂ ನಾವೇ ಮೊದಲು ಎಂದು ಎದೆ ತಟ್ಟಿಕೊಳ್ಳುವ ಪ್ರಧಾನಿ ಮೋದಿ ಅವರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹಿಂಜರಿದದ್ದು ಯಾಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಬೇರೆಲ್ಲ ದೇಶಗಳ ಪ್ರಧಾನಿ/ಅಧ್ಯಕ್ಷರು ಕೊರೊನಾ ವಾರಿಯರ್ಸ್‌ರಂತೆ ಮೊದಲು ವ್ಯಾಕ್ಸಿನ್ ಹಾಕಿಸಿಕೊಂಡು ಜನರಿಗೆ ಧೈರ್ಯ ತುಂಬಿದ್ದರೆ ನಮ್ಮ ಪ್ರಧಾನಿ ಮೋದಿ ಅವರು ಮಾತ್ರ ಫಲಿತಾಂಶ ಕಾದು ನೋಡಿ ವ್ಯಾಕ್ಸಿನ್ ಹಾಕಿಸಿಕೊಂಡರು. 56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?” ಎಂದು ಅವರು ಕೇಳಿದ್ದಾರೆ.

“ಭಾರತದಲ್ಲಿ ಎರಡೂ ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರು ನಾಲ್ಕುಕೋಟಿ ಜನಮಾತ್ರ (3%). ಕರ್ನಾಟಕದಲ್ಲಿ ಕೇವಲ 25 ಲಕ್ಷ ಜನ. ಇದಕ್ಕೆ ವ್ಯಾಕ್ಸಿನ್ ಕೊರತೆಯೇ ಕಾರಣ ಹೊರತು ಜನರ ಹಿಂಜರಿಕೆ ಅಲ್ಲ. ಜನರ ಬೇಡಿಕೆಗೆ ತಕ್ಕಂತೆ ವ್ಯಾಕ್ಸಿನ್ ಪೂರೈಸಲಾಗದ ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗ ವಿರೋಧ ಪಕ್ಷಗಳನ್ನು ಹಳಿಯುವುದು ತಮಾಷೆಯಾಗಿದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

“ಮೊದಲು ಕೊರೊನಾ ಕಾಣಿಸಿಕೊಂಡಾಗ ತಟ್ಟೆ ಬಡಿಯಿರಿ, ದೀಪ ಹಚ್ಚಿರಿ ಎಂದು ಪ್ರಧಾನಿಯವರು ಕರೆ ನೀಡಿದಾಗ ಇಡೀ ದೇಶ ಕುಣಿದಾಡಿತ್ತು. ಆದರೆ ವ್ಯಾಕ್ಸಿನ್ ವಿಷಯದಲ್ಲಿ ಮಾತ್ರ ಜನ ಕಾಂಗ್ರೆಸ್ ಮಾತಿಗೆ ತಲೆದೂಗಿದ್ದಾರೆ ಎಂದರೆ ದೇಶದ ಜನ ಈಗ ನರೇಂದ್ರ ಮೋದಿ ಅವರ ಮಾತಿಗೆ ಕಿವಿಗೊಡೊಲ್ಲ, ಕಾಂಗ್ರೆಸ್ ಮಾತಿಗೆ ಬೆಲೆಕೊಡುತ್ತಾರೆ ಎಂದರ್ಥವೇ?” ಎಂದು ಅವರು ಪ್ರಶ್ನಿಸಿದ್ದಾರೆ.

‘ಕುಮಾರಸ್ವಾಮಿಯದ್ದು ಬಾಲಿಷ ಹೇಳಿಕೆ’

ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎಂದು ಆರೋಪಿಸುವ ಮೂಲಕ ಎಚ್.ಡಿ.ಕುಮಾರಸ್ವಾಮಿ ತಮಗೆ ತಾವೇ ಗೋಲು ಹೊಡೆದುಕೊಂಡಿದ್ದಾರೆ. ಕಾಂಗ್ರೆಸ್ ಪ್ರಚಾರ ನಂಬಿ ನೀವು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮಾರ್ಚ್ 23ರ ವರೆಗೆ ಕಾದು ಕೂತಿದ್ದೇ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೇಲೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ವರಿಗೂ ಉಚಿತ ವ್ಯಾಕ್ಸಿನ್ ಹಾಕುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಜೊತೆಗೂಡಿ ದೇವೇಗೌಡ ಅವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದರು. ಕುಮಾರಸ್ವಾಮಿಯವರು ಇಂತಹ ಬಾಲಿಷ ಹೇಳಿಕೆ ನೀಡುವ ಮೊದಲು ತಂದೆಯ ಸಲಹೆ‌ ಪಡೆಯುವುದು ಒಳ್ಳೆಯದು” ಎಂದು ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...