Homeಕರ್ನಾಟಕ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಜನ ಕ್ಯೂನಲ್ಲಿ ನಿಂತಿದ್ದು ಅವರಿಗೆ ಮೊದಲು ಲಸಿಕೆ ಕೊಡಿ, ನಂತರ ನಮ್ಮ ಕಡೆ ಬೊಟ್ಟು ಮಾಡಿ ಎಂದು ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ

- Advertisement -
- Advertisement -

ಜನರು ಕೊರೊನಾ ವ್ಯಾಕ್ಸಿನ್ ಪಡೆಯಲು ಹಿಂಜರಿಯುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎನ್ನುವ ಬಿಜೆಪಿ ಆರೋಪ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ನಡೆಸುತ್ತಿರುವ ಹತಾಶ ಪ್ರಯತ್ನ ಅಷ್ಟೆ. ವ್ಯಾಕ್ಸಿನ್ ಪಡೆಯಲು ಜನ ಕ್ಯೂನಲ್ಲಿದ್ದಾರೆ, ಮೊದಲು ಅವರಿಗೆ ಕೊಡಿ, ಆ ಮೇಲೆ ನಮ್ಮ ಕಡೆ ಬೊಟ್ಟು ಮಾಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

‘ INC4Vaccine’ ಎಂಬ ಹ್ಯಾಶ್‌ಟ್ಯಾಗ್‌‌ ಬಳಸಿ ಸರಣಿ ಟ್ವೀಟ್‌ ಮಾಡಿರುವ ಅವರು, “ಕೊರೊನಾ ವ್ಯಾಕ್ಸಿನನ್ನು ಎಲ್ಲರಿಗೂ ಉಚಿತವಾಗಿ ಹಂಚಿ ಎನ್ನುವುದೇ ನಮ್ಮ ಮೂಲ ಬೇಡಿಕೆ. ನಾವು ವ್ಯಾಕ್ಸಿನನ್ನು ಎಂದೂ ವಿರೋಧಿಸಿಲ್ಲ. ಅದರ ಸತ್ವಪರೀಕ್ಷೆಯ ಫಲಿತಾಂಶಕ್ಕಿಂತ ಮೊದಲು ಕೇವಲ ಪ್ರಚಾರಕ್ಕಾಗಿ ಬಳಕೆಗೆ ಬಿಡುಗಡೆ ಮಾಡಬಾರದೆಂಬ ತಜ್ಞರ ಅಭಿಪ್ರಾಯಕ್ಕೆ ನಮ್ಮ ಪಕ್ಷ ಸಹಮತ ವ್ಯಕ್ತಪಡಿಸಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

“ಕೊರೊನಾ ವ್ಯಾಕ್ಸಿನನ್ನು ಕೊರೊನಾ ವಾರಿಯರ್ಸ್ ಗಾಗಿ ಬಿಡುಗಡೆಗೊಳಿಸಿದ್ದು ಜನವರಿ 18 ರಂದು. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವರು ವ್ಯಾಕ್ಸಿನ್ ಪಡೆಯುವ ಧೈರ್ಯ ತೋರಿಸಿದ್ದು ಮಾರ್ಚ್ ಒಂದರಂದು. ಎಲ್ಲದರಲ್ಲಿಯೂ ನಾವೇ ಮೊದಲು ಎಂದು ಎದೆ ತಟ್ಟಿಕೊಳ್ಳುವ ಪ್ರಧಾನಿ ಮೋದಿ ಅವರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹಿಂಜರಿದದ್ದು ಯಾಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಬೇರೆಲ್ಲ ದೇಶಗಳ ಪ್ರಧಾನಿ/ಅಧ್ಯಕ್ಷರು ಕೊರೊನಾ ವಾರಿಯರ್ಸ್‌ರಂತೆ ಮೊದಲು ವ್ಯಾಕ್ಸಿನ್ ಹಾಕಿಸಿಕೊಂಡು ಜನರಿಗೆ ಧೈರ್ಯ ತುಂಬಿದ್ದರೆ ನಮ್ಮ ಪ್ರಧಾನಿ ಮೋದಿ ಅವರು ಮಾತ್ರ ಫಲಿತಾಂಶ ಕಾದು ನೋಡಿ ವ್ಯಾಕ್ಸಿನ್ ಹಾಕಿಸಿಕೊಂಡರು. 56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?” ಎಂದು ಅವರು ಕೇಳಿದ್ದಾರೆ.

“ಭಾರತದಲ್ಲಿ ಎರಡೂ ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರು ನಾಲ್ಕುಕೋಟಿ ಜನಮಾತ್ರ (3%). ಕರ್ನಾಟಕದಲ್ಲಿ ಕೇವಲ 25 ಲಕ್ಷ ಜನ. ಇದಕ್ಕೆ ವ್ಯಾಕ್ಸಿನ್ ಕೊರತೆಯೇ ಕಾರಣ ಹೊರತು ಜನರ ಹಿಂಜರಿಕೆ ಅಲ್ಲ. ಜನರ ಬೇಡಿಕೆಗೆ ತಕ್ಕಂತೆ ವ್ಯಾಕ್ಸಿನ್ ಪೂರೈಸಲಾಗದ ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗ ವಿರೋಧ ಪಕ್ಷಗಳನ್ನು ಹಳಿಯುವುದು ತಮಾಷೆಯಾಗಿದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

“ಮೊದಲು ಕೊರೊನಾ ಕಾಣಿಸಿಕೊಂಡಾಗ ತಟ್ಟೆ ಬಡಿಯಿರಿ, ದೀಪ ಹಚ್ಚಿರಿ ಎಂದು ಪ್ರಧಾನಿಯವರು ಕರೆ ನೀಡಿದಾಗ ಇಡೀ ದೇಶ ಕುಣಿದಾಡಿತ್ತು. ಆದರೆ ವ್ಯಾಕ್ಸಿನ್ ವಿಷಯದಲ್ಲಿ ಮಾತ್ರ ಜನ ಕಾಂಗ್ರೆಸ್ ಮಾತಿಗೆ ತಲೆದೂಗಿದ್ದಾರೆ ಎಂದರೆ ದೇಶದ ಜನ ಈಗ ನರೇಂದ್ರ ಮೋದಿ ಅವರ ಮಾತಿಗೆ ಕಿವಿಗೊಡೊಲ್ಲ, ಕಾಂಗ್ರೆಸ್ ಮಾತಿಗೆ ಬೆಲೆಕೊಡುತ್ತಾರೆ ಎಂದರ್ಥವೇ?” ಎಂದು ಅವರು ಪ್ರಶ್ನಿಸಿದ್ದಾರೆ.

‘ಕುಮಾರಸ್ವಾಮಿಯದ್ದು ಬಾಲಿಷ ಹೇಳಿಕೆ’

ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎಂದು ಆರೋಪಿಸುವ ಮೂಲಕ ಎಚ್.ಡಿ.ಕುಮಾರಸ್ವಾಮಿ ತಮಗೆ ತಾವೇ ಗೋಲು ಹೊಡೆದುಕೊಂಡಿದ್ದಾರೆ. ಕಾಂಗ್ರೆಸ್ ಪ್ರಚಾರ ನಂಬಿ ನೀವು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮಾರ್ಚ್ 23ರ ವರೆಗೆ ಕಾದು ಕೂತಿದ್ದೇ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೇಲೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ವರಿಗೂ ಉಚಿತ ವ್ಯಾಕ್ಸಿನ್ ಹಾಕುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಜೊತೆಗೂಡಿ ದೇವೇಗೌಡ ಅವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದರು. ಕುಮಾರಸ್ವಾಮಿಯವರು ಇಂತಹ ಬಾಲಿಷ ಹೇಳಿಕೆ ನೀಡುವ ಮೊದಲು ತಂದೆಯ ಸಲಹೆ‌ ಪಡೆಯುವುದು ಒಳ್ಳೆಯದು” ಎಂದು ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...