Homeಕರ್ನಾಟಕ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಜನ ಕ್ಯೂನಲ್ಲಿ ನಿಂತಿದ್ದು ಅವರಿಗೆ ಮೊದಲು ಲಸಿಕೆ ಕೊಡಿ, ನಂತರ ನಮ್ಮ ಕಡೆ ಬೊಟ್ಟು ಮಾಡಿ ಎಂದು ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ

- Advertisement -
- Advertisement -

ಜನರು ಕೊರೊನಾ ವ್ಯಾಕ್ಸಿನ್ ಪಡೆಯಲು ಹಿಂಜರಿಯುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎನ್ನುವ ಬಿಜೆಪಿ ಆರೋಪ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ನಡೆಸುತ್ತಿರುವ ಹತಾಶ ಪ್ರಯತ್ನ ಅಷ್ಟೆ. ವ್ಯಾಕ್ಸಿನ್ ಪಡೆಯಲು ಜನ ಕ್ಯೂನಲ್ಲಿದ್ದಾರೆ, ಮೊದಲು ಅವರಿಗೆ ಕೊಡಿ, ಆ ಮೇಲೆ ನಮ್ಮ ಕಡೆ ಬೊಟ್ಟು ಮಾಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

‘ INC4Vaccine’ ಎಂಬ ಹ್ಯಾಶ್‌ಟ್ಯಾಗ್‌‌ ಬಳಸಿ ಸರಣಿ ಟ್ವೀಟ್‌ ಮಾಡಿರುವ ಅವರು, “ಕೊರೊನಾ ವ್ಯಾಕ್ಸಿನನ್ನು ಎಲ್ಲರಿಗೂ ಉಚಿತವಾಗಿ ಹಂಚಿ ಎನ್ನುವುದೇ ನಮ್ಮ ಮೂಲ ಬೇಡಿಕೆ. ನಾವು ವ್ಯಾಕ್ಸಿನನ್ನು ಎಂದೂ ವಿರೋಧಿಸಿಲ್ಲ. ಅದರ ಸತ್ವಪರೀಕ್ಷೆಯ ಫಲಿತಾಂಶಕ್ಕಿಂತ ಮೊದಲು ಕೇವಲ ಪ್ರಚಾರಕ್ಕಾಗಿ ಬಳಕೆಗೆ ಬಿಡುಗಡೆ ಮಾಡಬಾರದೆಂಬ ತಜ್ಞರ ಅಭಿಪ್ರಾಯಕ್ಕೆ ನಮ್ಮ ಪಕ್ಷ ಸಹಮತ ವ್ಯಕ್ತಪಡಿಸಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

“ಕೊರೊನಾ ವ್ಯಾಕ್ಸಿನನ್ನು ಕೊರೊನಾ ವಾರಿಯರ್ಸ್ ಗಾಗಿ ಬಿಡುಗಡೆಗೊಳಿಸಿದ್ದು ಜನವರಿ 18 ರಂದು. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವರು ವ್ಯಾಕ್ಸಿನ್ ಪಡೆಯುವ ಧೈರ್ಯ ತೋರಿಸಿದ್ದು ಮಾರ್ಚ್ ಒಂದರಂದು. ಎಲ್ಲದರಲ್ಲಿಯೂ ನಾವೇ ಮೊದಲು ಎಂದು ಎದೆ ತಟ್ಟಿಕೊಳ್ಳುವ ಪ್ರಧಾನಿ ಮೋದಿ ಅವರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹಿಂಜರಿದದ್ದು ಯಾಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಬೇರೆಲ್ಲ ದೇಶಗಳ ಪ್ರಧಾನಿ/ಅಧ್ಯಕ್ಷರು ಕೊರೊನಾ ವಾರಿಯರ್ಸ್‌ರಂತೆ ಮೊದಲು ವ್ಯಾಕ್ಸಿನ್ ಹಾಕಿಸಿಕೊಂಡು ಜನರಿಗೆ ಧೈರ್ಯ ತುಂಬಿದ್ದರೆ ನಮ್ಮ ಪ್ರಧಾನಿ ಮೋದಿ ಅವರು ಮಾತ್ರ ಫಲಿತಾಂಶ ಕಾದು ನೋಡಿ ವ್ಯಾಕ್ಸಿನ್ ಹಾಕಿಸಿಕೊಂಡರು. 56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?” ಎಂದು ಅವರು ಕೇಳಿದ್ದಾರೆ.

“ಭಾರತದಲ್ಲಿ ಎರಡೂ ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರು ನಾಲ್ಕುಕೋಟಿ ಜನಮಾತ್ರ (3%). ಕರ್ನಾಟಕದಲ್ಲಿ ಕೇವಲ 25 ಲಕ್ಷ ಜನ. ಇದಕ್ಕೆ ವ್ಯಾಕ್ಸಿನ್ ಕೊರತೆಯೇ ಕಾರಣ ಹೊರತು ಜನರ ಹಿಂಜರಿಕೆ ಅಲ್ಲ. ಜನರ ಬೇಡಿಕೆಗೆ ತಕ್ಕಂತೆ ವ್ಯಾಕ್ಸಿನ್ ಪೂರೈಸಲಾಗದ ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗ ವಿರೋಧ ಪಕ್ಷಗಳನ್ನು ಹಳಿಯುವುದು ತಮಾಷೆಯಾಗಿದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

“ಮೊದಲು ಕೊರೊನಾ ಕಾಣಿಸಿಕೊಂಡಾಗ ತಟ್ಟೆ ಬಡಿಯಿರಿ, ದೀಪ ಹಚ್ಚಿರಿ ಎಂದು ಪ್ರಧಾನಿಯವರು ಕರೆ ನೀಡಿದಾಗ ಇಡೀ ದೇಶ ಕುಣಿದಾಡಿತ್ತು. ಆದರೆ ವ್ಯಾಕ್ಸಿನ್ ವಿಷಯದಲ್ಲಿ ಮಾತ್ರ ಜನ ಕಾಂಗ್ರೆಸ್ ಮಾತಿಗೆ ತಲೆದೂಗಿದ್ದಾರೆ ಎಂದರೆ ದೇಶದ ಜನ ಈಗ ನರೇಂದ್ರ ಮೋದಿ ಅವರ ಮಾತಿಗೆ ಕಿವಿಗೊಡೊಲ್ಲ, ಕಾಂಗ್ರೆಸ್ ಮಾತಿಗೆ ಬೆಲೆಕೊಡುತ್ತಾರೆ ಎಂದರ್ಥವೇ?” ಎಂದು ಅವರು ಪ್ರಶ್ನಿಸಿದ್ದಾರೆ.

‘ಕುಮಾರಸ್ವಾಮಿಯದ್ದು ಬಾಲಿಷ ಹೇಳಿಕೆ’

ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಜನ ಹಿಂದೇಟು ಹಾಕುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎಂದು ಆರೋಪಿಸುವ ಮೂಲಕ ಎಚ್.ಡಿ.ಕುಮಾರಸ್ವಾಮಿ ತಮಗೆ ತಾವೇ ಗೋಲು ಹೊಡೆದುಕೊಂಡಿದ್ದಾರೆ. ಕಾಂಗ್ರೆಸ್ ಪ್ರಚಾರ ನಂಬಿ ನೀವು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮಾರ್ಚ್ 23ರ ವರೆಗೆ ಕಾದು ಕೂತಿದ್ದೇ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೇಲೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ವರಿಗೂ ಉಚಿತ ವ್ಯಾಕ್ಸಿನ್ ಹಾಕುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಜೊತೆಗೂಡಿ ದೇವೇಗೌಡ ಅವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದರು. ಕುಮಾರಸ್ವಾಮಿಯವರು ಇಂತಹ ಬಾಲಿಷ ಹೇಳಿಕೆ ನೀಡುವ ಮೊದಲು ತಂದೆಯ ಸಲಹೆ‌ ಪಡೆಯುವುದು ಒಳ್ಳೆಯದು” ಎಂದು ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...