Homeಮುಖಪುಟಬೊಮ್ಮಾಯಿಯವರು ಬಯಸುವ ಯುಪಿ ಮಾದರಿಯ ಆಳ-ಅಗಲ ಬಲ್ಲಿರೇನು!?

ಬೊಮ್ಮಾಯಿಯವರು ಬಯಸುವ ಯುಪಿ ಮಾದರಿಯ ಆಳ-ಅಗಲ ಬಲ್ಲಿರೇನು!?

2020 ರಲ್ಲಿ ಅತಿ ಹೆಚ್ಚು ಅಪಹರಣ ಮತ್ತು ಕೊಲೆ ನಡೆದ ರಾಜ್ಯ ಉತ್ತರ ಪ್ರದೇಶವಾಗಿದೆ.

- Advertisement -
- Advertisement -

ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಕಳೆದ ಒಂದು ವಾರದಲ್ಲಿ ಮೂವರು ಯುವಜನರನ್ನು ಕೊಲೆ ಮಾಡಲಾಗಿದೆ. ಮತಾಂಧರ ರಕ್ತದಾಹಕ್ಕೆ ಮಸೂದ್, ಪ್ರವೀಣ್ ನೆಟ್ಟಾರ್ ಮತ್ತು ಫಾಝಿಲ್ ಎಂಬ ಹರೆಯದ ಯುವಕರು ಪ್ರಾಣ ತೆತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ, ಶಾಂತಿ ಸ್ಥಾಪಿಸಬೇಕಾದ ಜವಾಬ್ದಾರಿ ಸಿಎಂ ಬಸವರಾಜ ಬೊಮ್ಮಾಯಿಯವರದಾಗಿದೆ.

ಪ್ರವೀಣ್ ನೆಟ್ಟಾರು ಕೊಲೆ ಹಿನ್ನೆಲೆಯಲ್ಲಿ ಏನು ಕ್ರಮ ಕೈಗೊಳ್ಳುತ್ತೀರಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು, “ಉತ್ತರ ಪ್ರದೇಶದ ಮಾದರಿ ಅನುಸರಿಸಬೇಕು ಎನ್ನುತ್ತಿದ್ದಾರೆ. ಅಗತ್ಯ ಬಿದ್ದರೆ ಯುಪಿ ಮಾಡೆಲ್, ಯೋಗಿ ಮಾಡೆಲ್ ಅನುಸರಿಸಲಾಗುವುದು” ಎಂದು ಹೇಳಿದ್ದಾರೆ. ಹಾಗಾದರೆ ಯುಪಿ ಮಾಡೆಲ್ ಎಂದರೇನು? ಯಾರು ಯಾರಿಗೆ ಮಾದರಿಯಾಗಬೇಕು ಎಂಬುದನ್ನು ನೋಡೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇನ್ನೋವೇಷನ್ ಇಂಡೆಕ್ಸ್‌

ಕಳೆದ ವಾರ ಬಿಡುಗಡೆಯಾದ ನೀತಿ ಆಯೋಗದ ನಾವೀನ್ಯತೆ ಸೂಚ್ಯಂಕ (ಇನ್ನೋವೇಷನ್ ಇಂಡೆಕ್ಸ್‌) ವರದಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ ಉತ್ತರ ಪ್ರದೇಶ 7ನೇ ಸ್ಥಾನದಲ್ಲಿದೆ. ಮಾನವ ಸಂಪನ್ಮೂಲದ ಬಳಕೆ, ಹೂಡಿಕೆಯ ಆಕರ್ಷಣೆ, ಆರೋಗ್ಯ-ಶಿಕ್ಷಣ-ಕೃಷಿ-ಕಾನೂನು ವಲಯಗಳಲ್ಲಿನ ಸಾಧನೆ ಸೇರಿದಂತೆ ಇತ್ಯಾದಿ ಅಂಶಗಳ ಆಧಾರದಲ್ಲಿ ಇದನ್ನು ಅಳೆಯಲಾಗುತ್ತದೆ. ಈ ಸೂಚ್ಯಂಕದಲ್ಲಿ ಕರ್ನಾಟಕ ರಾಜ್ಯವು ಸತತ ಎರಡನೇ ಭಾರಿಗೆ ಮೊದಲ ಸ್ಥಾನ ಕಾಯ್ದುಕೊಂಡಿದೆ.

ಉತ್ತಮ ಆಡಳಿತ ಸೂಚ್ಯಂಕ

ಗುಡ್ ಗರ್ವನೆನ್ಸ್ ಇಂಡೆಕ್ಸ್ ಎಂದು ಕರೆಯಲಾಗುವು ಉತ್ತಮ ಆಡಳಿತದ ಸೂಚ್ಯಂಕದಲ್ಲಿ ಕೇರಳ ರಾಜ್ಯವು ಮೊದಲ ಸ್ಥಾನ ಪಡೆದರೆ, ಕರ್ನಾಟಕ 06 ನೇ ಸ್ಥಾನದಲ್ಲಿದೆ. ಗಮನಿಸಬೇಕಾದ ಅಂಶವೆಂದರೆ ಉತ್ತರ ಪ್ರದೇಶ ರಾಜ್ಯವು ಕೊನೆಯ ಸ್ಥಾನದಲ್ಲಿದ್ದು, ಕಳಪೆ ಆಡಳಿತಕ್ಕೆ ಕುಖ್ಯಾತಿಯಾಗಿದೆ.

ಉದ್ಯೋಗ ಸೃಷ್ಟಿ:

ಸಿಎಂಐಇ ವರದಿ ಪ್ರಕಾರ ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ರಾಜ್ಯವು 05ನೇ ಸ್ಥಾನದಲ್ಲಿದ್ದರೆ ಉತ್ತರ ಪ್ರದೇಶ 15 ನೇ ಸ್ಥಾನದಲ್ಲಿದೆ.

ಬಡತನ:

ಉತ್ತರ ಪ್ರದೇಶದ ಮೂರು ಜಿಲ್ಲೆಗಳು ಸುಮಾರು 70% ಮತ್ತು ಅದಕ್ಕಿಂತ ಹೆಚ್ಚಿನ ಬಡತನದ ಅನುಪಾತವನ್ನು ಹೊಂದಿವೆ. ಶ್ರಾವಸ್ತಿ (74.38%), ಬಹ್ರೈಚ್ (71.88%), ಮತ್ತು ಬಲರಾಂಪುರ (69.45%). ಆದರೆ ಕರ್ನಾಟಕದಲ್ಲಿ ಬಡತನದ ಪ್ರಮಾಣ ತೀರಾ ಕಡಿಮೆ ಇದೆ.

ವಾಸ ಯೋಗ್ಯ ನಗರಗಳ ಪಟ್ಟಿ:

ದೇಶದಲ್ಲಿಯೇ ಅತ್ಯುನ್ನತ ಮೂಲಸೌಕರ್ಯ ಹೊಂದಿರುವ, ಉತ್ತಮ ಪರಿಸರ ಹೊಂದಿರುವ ವಾಸಯೋಗ್ಯ ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಬೆಂಗಳೂರು, ಮೈಸೂರು ಸ್ಥಾನ ಪಡೆದಿವೆಯೆ ಹೊರತು ಉತ್ತರ ಪ್ರದೇಶದ ಲಕ್ನೋ, ಕಾನ್ಪುರ ಅಲ್ಲ ಎಂಬುದನ್ನು ಗಮನಿಸಬಹುದಾಗಿದೆ.

ಜಿಎಸ್‌ಟಿ ಸಂಗ್ರಹ:

20 ಕೋಟಿಗೂ ಅಧಿಕ ಜನಸಂಖ್ಯೆ ಇರುವ ಯುಪಿ 2022ರ ಏಪ್ರಿಲ್ ತಿಂಗಳಲ್ಲಿ 8,534 ಕೋಟಿ ರೂ ಜಿಎಸ್‌ಟಿ ಪಾವತಿಸಿದೆ. ಆದರೆ ಅದೇ ತಿಂಗಳಿನಲ್ಲಿ ಕೇವಲ 6.5 ಕೋಟಿ ಜನಸಂಖ್ಯೆ ಇರುವ ಕರ್ನಾಟಕ 11,820 ಕೋಟಿ ರೂ ಜಿಎಸ್‌ಟಿ ಪಾವತಿಸಿದೆ. 

ಅಪರಾಧಗಳ ಸೂಚ್ಯಂಕ

NCRB ಪ್ರಕಟಿಸುವ ವರದಿ ಪ್ರಕಾರ ಕ್ರೈಮ್ ರೇಟ್‌ ನಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಕರ್ನಾಟಕ 20ರ ನಂತರದ ಸ್ಥಾನದಲ್ಲಿದೆ. 2020 ರಲ್ಲಿ ಅತಿ ಹೆಚ್ಚು ಅಪಹರಣ ಮತ್ತು ಕೊಲೆ ನಡೆದ ರಾಜ್ಯ ಉತ್ತರ ಪ್ರದೇಶವಾಗಿದೆ.

ಸಾಕ್ಷರತೆ:

ಸಾಕ್ಷರತೆಯಲ್ಲಿ ಕರ್ನಾಟಕ 17ನೇ ಸ್ಥಾನ ಪಡೆದರೆ ಉತ್ತರ ಪ್ರದೇಶ 19ನೇ ಸ್ಥಾನ ಪಡೆದಿದೆ. ಎಂದಿನಂತೆ ಕೇರಳ ಮೊದಲ ಸ್ಥಾನದಲ್ಲಿದೆ.

ಹ್ಯುಮನ್ ಇಂಡೆಕ್ಸ್:

ಜನರ ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟವನ್ನು ಆಧರಿಸಿ ಹ್ಯುಮನ್ ಇಂಡೆಕ್ಸ್ ಅನ್ನು ಅಳೆಯಲಾಗುತ್ತದೆ. ಅದರಲ್ಲಿ ಕೇರಳ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ 19ನೇ ಸ್ಥಾನದಲ್ಲಿದೆ ಮತ್ತು ಉತ್ತರ ಪ್ರದೇಶ 35 ಅಂದರೆ ಕೊನೆಯ ಸ್ಥಾನದಲ್ಲಿದೆ. ಅಲ್ಲದೆ

ಮಹಿಳಾ ಸುರಕ್ಷತೆಯ ವಿಚಾರದಲ್ಲಿ – ಕೆಟ್ಟ ರಾಜ್ಯ ಉತ್ತರ ಪ್ರದೇಶ

ಅತಿ ಹೆಚ್ಚು ಅತ್ಯಾಚಾರಗಳು ನಡೆಯುವ ರಾಜ್ಯ ಉತ್ತರ ಪ್ರದೇಶ

ಆರೋಗ್ಯ ಸೂಚ್ಯಂಕದಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ವಾಯು ಮಾಲಿನ್ಯದಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ಶಿಕ್ಷಣ ಗುಣಮಟ್ಟ ಸೂಚ್ಯಂಕದಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ಕೋವಿಡ್ ಸಮಯದಲ್ಲಿ ಗಂಗೆಯಲ್ಲಿ ಹೆಣಗಳು ತೇಲಿಬಂದ ರಾಜ್ಯ ಉತ್ತರ ಪ್ರದೇಶ

ಕರ್ನಾಟಕಕ್ಕೆ ಹೆಚ್ಚು ಉದ್ಯೋಗ ಅರಸಿ ಬರುವವರು, ಸೆಕ್ಯುರಿಟಿ ಕೆಲಸ ಮತ್ತು ಗೋಲ್‌ಗಪ್ಪ, ಪಾನೀಪುರಿ ಮಾರುವ ಹೆಚ್ಚಿನವರು ಉತ್ತರ ಪ್ರದೇಶದವರು

ಇಂತಹ ಕೆಳಮಟ್ಟದಲ್ಲಿರುವ ಉತ್ತರ ಪ್ರದೇಶ ರಾಜ್ಯವು ಕರ್ನಾಟಕಕ್ಕೆ ಮಾದರಿಯಾಗಬಲ್ಲದೆ? ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವ ಗೂಂಡಾ ರಾಜ್ಯ ಎಂದು ಕರೆಸಿಕೊಳ್ಳುವ ಉತ್ತರ ಪ್ರದೇಶವನ್ನು ಯಾವ ಆಧಾರದಲ್ಲಿ ಮಾದರಿಯಾಗಿ ತೆಗೆದುಕೊಳ್ಳಬಹುದು ಎಂಬುದನ್ನು ಸಿಎಂ ಬೊಮ್ಮಾಯಿಯವರು ವಿವರಿಸಬೇಕಿದೆ.

ಸರ್ಕಾರ ನೀತಿ ನಿರ್ಧಾರಗಳನ್ನು ಪ್ರಶ್ನಿಸುವವರ, ಹೋರಾಟಗಾರರ ಮನೆ ಮೇಲೆ ಅಸಾಂವಿಧಾನಿಕವಾಗಿ ಬುಲ್ಡೋಜರ್ ಹರಿಸುವುದಕ್ಕೆ ಉತ್ತರ ಪ್ರದೇಶ ಕುಖ್ಯಾತಿಯಾಗಿದೆ. ಇದು ದೇಶದ ಸಂವಿಧಾನ, ಕಾನೂನು ಮತ್ತು ನ್ಯಾಯವ್ಯವಸ್ಥೆ ಮೇಲೆ ನಂಬಿಕೆ ಇಲ್ಲದವರು ಮಾಡುವ ಕೆಲಸ. ಅದಕ್ಕಾಗಿಯೇ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರನ್ನು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳು ತರಾಟೆಗೆ ತೆಗೆದುಕೊಂಡಿವೆ. ಅವರು ನಮಗೆ ಖಂಡಿತ ಮಾದರಿಯಾಗುವುದಿಲ್ಲ.

ಈ ಮೊದಲೇ ಹೇಳಿದಂತೆ ಹ್ಯುಮನ್ ಇಂಡೆಕ್ಸ್, ಶಿಕ್ಷಣ, ಉದ್ಯೋಗ ಸೃಷ್ಟಿ ಇತ್ಯಾದಿ ವಿಚಾರಗಳನ್ನು ಪರಿಗಣಿಸಿದರೆ ನಮಗೆ ನೆರೆಯ ಕೇರಳ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳು ಮಾದರಿಯಾಗುತ್ತವೆಯೇ ಹೊರತು ಉತ್ತರ ಪ್ರದೇಶವಲ್ಲ.

ಇನ್ನು ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿರುವುದಕ್ಕೆ ನೇರ ಕಾರಣ ಇದೇ ಬಸವರಾಜ ಬೊಮ್ಮಾಯಿಯವರೆ ಆಗಿದ್ದಾರೆ. ಅಧಿಕಾರಕ್ಕೆ ಬಂದ ತಕ್ಷಣ ರಾಜ್ಯದಲ್ಲಿ ನಡೆಯುತ್ತಿದ್ದ ಮತೀಯ ಗೂಂಡಾಗಿರಿ ಪ್ರಕರಣಗಳನ್ನು ತಡೆಯುವ ಬದಲು ಕ್ರಿಯೆಗೆ ಪ್ರತಿಕ್ರಿಯೆ ಇದ್ದೆ ಇರುತ್ತದೆ ಎಂದು ಹೇಳುವ ಮೂಲಕ ಅವುಗಳನ್ನು ಸಮರ್ಥಿಸಿಕೊಂಡರು. ತಮ್ಮ ಪ್ರತಿ ನಡೆಯಲ್ಲಿಯೂ ಕೋಮವಾದವನ್ನು ಉದ್ದೀಪನಗೊಳಿಸಿದರು. ಅದರ ಫಲವಾಗಿ ಇಂದು ಕ್ರಿಯೆಗೆ ಪ್ರತಿಕ್ರಿಯೆ, ಪ್ರತಿಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಸಾಲು ಸಾಲು ಹೆಣಗಳು ಬೀಳುತ್ತಿವೆ. ಕರ್ನಾಟಕದ ಗೌರವ ರಾಷ್ಟ್ರಮಟ್ಟದಲ್ಲಿ ಮಣ್ಣು ಪಾಲಾಗುತ್ತಿದೆ. ಸಿಎಂ ಬೊಮ್ಮಾಯಿಯವರೆ ದ್ವೇಷದಿಂದ, ಮತಾಂಧತೆಯಿಂದ ರಾಜ್ಯವನ್ನು, ದೇಶವನ್ನು ಮುನ್ನಡೆಸಲಾಗದು ಎಂದು ಈಗಲಾದರೂ ಅರಿಯಿರಿ. ಶಾಂತಿ, ಪ್ರೀತಿ, ಸರ್ವಧರ್ಮ ಸಮಾನತೆ, ಸೌಹಾರ್ದತೆ ಮಾತ್ರವೇ ನಮ್ಮನ್ನು ಉಳಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನರರಾಕ್ಷ SDPI,PFI ಬಗ್ಗೆ ವರದಿಮಾಡಲು ಆಗದ ನಾಮಾರ್ಧ ಶಂಡರ ಪತ್ರಿಕೆ ಎಂದರೆ ಇದೇ ಅನಿಸುತ್ತೇ

  2. Up ಮಾಡೆಲ್ ಮಾಡಿ ರಾಜ್ಯದ ಮರ್ಯಾದೆ ವಿದೇಶಗಳಲ್ಲೂ ಹರಾಜು ಮಾಡಬೇಕು ಅನ್ನೋದು ಇವರ ತುಷ್ಟ ಮನಸ್ಥಿತಿ, ದೇಶಕ್ಕೆ ಒಂದು ಒಳ್ಳೆ ಕಾರ್ಯ ಮಾಡದಿದ್ರೂ ಕೂಡ ಇಂತಹ ರಾಜಕಾರಣಿಗಳಿಗೆ ಅಭಿಮಾನಿಗಳು ಇದಾರೆ ಅಂದ್ರೆ ಅವು ಎಂಥ ಹೇಸಿಗೆ ಮನಸ್ಥಿತಿ ಹೊಂದಿರಬೇಕು ಥೂ.. ಇವರನ್ನು ಅಭಿನಂದಿಸೋ ನರಹೇಡಿಗಳಿಗೆ 😡😡😡

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...