Homeಮುಖಪುಟಬೊಮ್ಮಾಯಿಯವರು ಬಯಸುವ ಯುಪಿ ಮಾದರಿಯ ಆಳ-ಅಗಲ ಬಲ್ಲಿರೇನು!?

ಬೊಮ್ಮಾಯಿಯವರು ಬಯಸುವ ಯುಪಿ ಮಾದರಿಯ ಆಳ-ಅಗಲ ಬಲ್ಲಿರೇನು!?

2020 ರಲ್ಲಿ ಅತಿ ಹೆಚ್ಚು ಅಪಹರಣ ಮತ್ತು ಕೊಲೆ ನಡೆದ ರಾಜ್ಯ ಉತ್ತರ ಪ್ರದೇಶವಾಗಿದೆ.

- Advertisement -
- Advertisement -

ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಕಳೆದ ಒಂದು ವಾರದಲ್ಲಿ ಮೂವರು ಯುವಜನರನ್ನು ಕೊಲೆ ಮಾಡಲಾಗಿದೆ. ಮತಾಂಧರ ರಕ್ತದಾಹಕ್ಕೆ ಮಸೂದ್, ಪ್ರವೀಣ್ ನೆಟ್ಟಾರ್ ಮತ್ತು ಫಾಝಿಲ್ ಎಂಬ ಹರೆಯದ ಯುವಕರು ಪ್ರಾಣ ತೆತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ, ಶಾಂತಿ ಸ್ಥಾಪಿಸಬೇಕಾದ ಜವಾಬ್ದಾರಿ ಸಿಎಂ ಬಸವರಾಜ ಬೊಮ್ಮಾಯಿಯವರದಾಗಿದೆ.

ಪ್ರವೀಣ್ ನೆಟ್ಟಾರು ಕೊಲೆ ಹಿನ್ನೆಲೆಯಲ್ಲಿ ಏನು ಕ್ರಮ ಕೈಗೊಳ್ಳುತ್ತೀರಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು, “ಉತ್ತರ ಪ್ರದೇಶದ ಮಾದರಿ ಅನುಸರಿಸಬೇಕು ಎನ್ನುತ್ತಿದ್ದಾರೆ. ಅಗತ್ಯ ಬಿದ್ದರೆ ಯುಪಿ ಮಾಡೆಲ್, ಯೋಗಿ ಮಾಡೆಲ್ ಅನುಸರಿಸಲಾಗುವುದು” ಎಂದು ಹೇಳಿದ್ದಾರೆ. ಹಾಗಾದರೆ ಯುಪಿ ಮಾಡೆಲ್ ಎಂದರೇನು? ಯಾರು ಯಾರಿಗೆ ಮಾದರಿಯಾಗಬೇಕು ಎಂಬುದನ್ನು ನೋಡೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇನ್ನೋವೇಷನ್ ಇಂಡೆಕ್ಸ್‌

ಕಳೆದ ವಾರ ಬಿಡುಗಡೆಯಾದ ನೀತಿ ಆಯೋಗದ ನಾವೀನ್ಯತೆ ಸೂಚ್ಯಂಕ (ಇನ್ನೋವೇಷನ್ ಇಂಡೆಕ್ಸ್‌) ವರದಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ ಉತ್ತರ ಪ್ರದೇಶ 7ನೇ ಸ್ಥಾನದಲ್ಲಿದೆ. ಮಾನವ ಸಂಪನ್ಮೂಲದ ಬಳಕೆ, ಹೂಡಿಕೆಯ ಆಕರ್ಷಣೆ, ಆರೋಗ್ಯ-ಶಿಕ್ಷಣ-ಕೃಷಿ-ಕಾನೂನು ವಲಯಗಳಲ್ಲಿನ ಸಾಧನೆ ಸೇರಿದಂತೆ ಇತ್ಯಾದಿ ಅಂಶಗಳ ಆಧಾರದಲ್ಲಿ ಇದನ್ನು ಅಳೆಯಲಾಗುತ್ತದೆ. ಈ ಸೂಚ್ಯಂಕದಲ್ಲಿ ಕರ್ನಾಟಕ ರಾಜ್ಯವು ಸತತ ಎರಡನೇ ಭಾರಿಗೆ ಮೊದಲ ಸ್ಥಾನ ಕಾಯ್ದುಕೊಂಡಿದೆ.

ಉತ್ತಮ ಆಡಳಿತ ಸೂಚ್ಯಂಕ

ಗುಡ್ ಗರ್ವನೆನ್ಸ್ ಇಂಡೆಕ್ಸ್ ಎಂದು ಕರೆಯಲಾಗುವು ಉತ್ತಮ ಆಡಳಿತದ ಸೂಚ್ಯಂಕದಲ್ಲಿ ಕೇರಳ ರಾಜ್ಯವು ಮೊದಲ ಸ್ಥಾನ ಪಡೆದರೆ, ಕರ್ನಾಟಕ 06 ನೇ ಸ್ಥಾನದಲ್ಲಿದೆ. ಗಮನಿಸಬೇಕಾದ ಅಂಶವೆಂದರೆ ಉತ್ತರ ಪ್ರದೇಶ ರಾಜ್ಯವು ಕೊನೆಯ ಸ್ಥಾನದಲ್ಲಿದ್ದು, ಕಳಪೆ ಆಡಳಿತಕ್ಕೆ ಕುಖ್ಯಾತಿಯಾಗಿದೆ.

ಉದ್ಯೋಗ ಸೃಷ್ಟಿ:

ಸಿಎಂಐಇ ವರದಿ ಪ್ರಕಾರ ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ರಾಜ್ಯವು 05ನೇ ಸ್ಥಾನದಲ್ಲಿದ್ದರೆ ಉತ್ತರ ಪ್ರದೇಶ 15 ನೇ ಸ್ಥಾನದಲ್ಲಿದೆ.

ಬಡತನ:

ಉತ್ತರ ಪ್ರದೇಶದ ಮೂರು ಜಿಲ್ಲೆಗಳು ಸುಮಾರು 70% ಮತ್ತು ಅದಕ್ಕಿಂತ ಹೆಚ್ಚಿನ ಬಡತನದ ಅನುಪಾತವನ್ನು ಹೊಂದಿವೆ. ಶ್ರಾವಸ್ತಿ (74.38%), ಬಹ್ರೈಚ್ (71.88%), ಮತ್ತು ಬಲರಾಂಪುರ (69.45%). ಆದರೆ ಕರ್ನಾಟಕದಲ್ಲಿ ಬಡತನದ ಪ್ರಮಾಣ ತೀರಾ ಕಡಿಮೆ ಇದೆ.

ವಾಸ ಯೋಗ್ಯ ನಗರಗಳ ಪಟ್ಟಿ:

ದೇಶದಲ್ಲಿಯೇ ಅತ್ಯುನ್ನತ ಮೂಲಸೌಕರ್ಯ ಹೊಂದಿರುವ, ಉತ್ತಮ ಪರಿಸರ ಹೊಂದಿರುವ ವಾಸಯೋಗ್ಯ ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಬೆಂಗಳೂರು, ಮೈಸೂರು ಸ್ಥಾನ ಪಡೆದಿವೆಯೆ ಹೊರತು ಉತ್ತರ ಪ್ರದೇಶದ ಲಕ್ನೋ, ಕಾನ್ಪುರ ಅಲ್ಲ ಎಂಬುದನ್ನು ಗಮನಿಸಬಹುದಾಗಿದೆ.

ಜಿಎಸ್‌ಟಿ ಸಂಗ್ರಹ:

20 ಕೋಟಿಗೂ ಅಧಿಕ ಜನಸಂಖ್ಯೆ ಇರುವ ಯುಪಿ 2022ರ ಏಪ್ರಿಲ್ ತಿಂಗಳಲ್ಲಿ 8,534 ಕೋಟಿ ರೂ ಜಿಎಸ್‌ಟಿ ಪಾವತಿಸಿದೆ. ಆದರೆ ಅದೇ ತಿಂಗಳಿನಲ್ಲಿ ಕೇವಲ 6.5 ಕೋಟಿ ಜನಸಂಖ್ಯೆ ಇರುವ ಕರ್ನಾಟಕ 11,820 ಕೋಟಿ ರೂ ಜಿಎಸ್‌ಟಿ ಪಾವತಿಸಿದೆ. 

ಅಪರಾಧಗಳ ಸೂಚ್ಯಂಕ

NCRB ಪ್ರಕಟಿಸುವ ವರದಿ ಪ್ರಕಾರ ಕ್ರೈಮ್ ರೇಟ್‌ ನಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಕರ್ನಾಟಕ 20ರ ನಂತರದ ಸ್ಥಾನದಲ್ಲಿದೆ. 2020 ರಲ್ಲಿ ಅತಿ ಹೆಚ್ಚು ಅಪಹರಣ ಮತ್ತು ಕೊಲೆ ನಡೆದ ರಾಜ್ಯ ಉತ್ತರ ಪ್ರದೇಶವಾಗಿದೆ.

ಸಾಕ್ಷರತೆ:

ಸಾಕ್ಷರತೆಯಲ್ಲಿ ಕರ್ನಾಟಕ 17ನೇ ಸ್ಥಾನ ಪಡೆದರೆ ಉತ್ತರ ಪ್ರದೇಶ 19ನೇ ಸ್ಥಾನ ಪಡೆದಿದೆ. ಎಂದಿನಂತೆ ಕೇರಳ ಮೊದಲ ಸ್ಥಾನದಲ್ಲಿದೆ.

ಹ್ಯುಮನ್ ಇಂಡೆಕ್ಸ್:

ಜನರ ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟವನ್ನು ಆಧರಿಸಿ ಹ್ಯುಮನ್ ಇಂಡೆಕ್ಸ್ ಅನ್ನು ಅಳೆಯಲಾಗುತ್ತದೆ. ಅದರಲ್ಲಿ ಕೇರಳ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ 19ನೇ ಸ್ಥಾನದಲ್ಲಿದೆ ಮತ್ತು ಉತ್ತರ ಪ್ರದೇಶ 35 ಅಂದರೆ ಕೊನೆಯ ಸ್ಥಾನದಲ್ಲಿದೆ. ಅಲ್ಲದೆ

ಮಹಿಳಾ ಸುರಕ್ಷತೆಯ ವಿಚಾರದಲ್ಲಿ – ಕೆಟ್ಟ ರಾಜ್ಯ ಉತ್ತರ ಪ್ರದೇಶ

ಅತಿ ಹೆಚ್ಚು ಅತ್ಯಾಚಾರಗಳು ನಡೆಯುವ ರಾಜ್ಯ ಉತ್ತರ ಪ್ರದೇಶ

ಆರೋಗ್ಯ ಸೂಚ್ಯಂಕದಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ವಾಯು ಮಾಲಿನ್ಯದಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ಶಿಕ್ಷಣ ಗುಣಮಟ್ಟ ಸೂಚ್ಯಂಕದಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ಕೋವಿಡ್ ಸಮಯದಲ್ಲಿ ಗಂಗೆಯಲ್ಲಿ ಹೆಣಗಳು ತೇಲಿಬಂದ ರಾಜ್ಯ ಉತ್ತರ ಪ್ರದೇಶ

ಕರ್ನಾಟಕಕ್ಕೆ ಹೆಚ್ಚು ಉದ್ಯೋಗ ಅರಸಿ ಬರುವವರು, ಸೆಕ್ಯುರಿಟಿ ಕೆಲಸ ಮತ್ತು ಗೋಲ್‌ಗಪ್ಪ, ಪಾನೀಪುರಿ ಮಾರುವ ಹೆಚ್ಚಿನವರು ಉತ್ತರ ಪ್ರದೇಶದವರು

ಇಂತಹ ಕೆಳಮಟ್ಟದಲ್ಲಿರುವ ಉತ್ತರ ಪ್ರದೇಶ ರಾಜ್ಯವು ಕರ್ನಾಟಕಕ್ಕೆ ಮಾದರಿಯಾಗಬಲ್ಲದೆ? ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವ ಗೂಂಡಾ ರಾಜ್ಯ ಎಂದು ಕರೆಸಿಕೊಳ್ಳುವ ಉತ್ತರ ಪ್ರದೇಶವನ್ನು ಯಾವ ಆಧಾರದಲ್ಲಿ ಮಾದರಿಯಾಗಿ ತೆಗೆದುಕೊಳ್ಳಬಹುದು ಎಂಬುದನ್ನು ಸಿಎಂ ಬೊಮ್ಮಾಯಿಯವರು ವಿವರಿಸಬೇಕಿದೆ.

ಸರ್ಕಾರ ನೀತಿ ನಿರ್ಧಾರಗಳನ್ನು ಪ್ರಶ್ನಿಸುವವರ, ಹೋರಾಟಗಾರರ ಮನೆ ಮೇಲೆ ಅಸಾಂವಿಧಾನಿಕವಾಗಿ ಬುಲ್ಡೋಜರ್ ಹರಿಸುವುದಕ್ಕೆ ಉತ್ತರ ಪ್ರದೇಶ ಕುಖ್ಯಾತಿಯಾಗಿದೆ. ಇದು ದೇಶದ ಸಂವಿಧಾನ, ಕಾನೂನು ಮತ್ತು ನ್ಯಾಯವ್ಯವಸ್ಥೆ ಮೇಲೆ ನಂಬಿಕೆ ಇಲ್ಲದವರು ಮಾಡುವ ಕೆಲಸ. ಅದಕ್ಕಾಗಿಯೇ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರನ್ನು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳು ತರಾಟೆಗೆ ತೆಗೆದುಕೊಂಡಿವೆ. ಅವರು ನಮಗೆ ಖಂಡಿತ ಮಾದರಿಯಾಗುವುದಿಲ್ಲ.

ಈ ಮೊದಲೇ ಹೇಳಿದಂತೆ ಹ್ಯುಮನ್ ಇಂಡೆಕ್ಸ್, ಶಿಕ್ಷಣ, ಉದ್ಯೋಗ ಸೃಷ್ಟಿ ಇತ್ಯಾದಿ ವಿಚಾರಗಳನ್ನು ಪರಿಗಣಿಸಿದರೆ ನಮಗೆ ನೆರೆಯ ಕೇರಳ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳು ಮಾದರಿಯಾಗುತ್ತವೆಯೇ ಹೊರತು ಉತ್ತರ ಪ್ರದೇಶವಲ್ಲ.

ಇನ್ನು ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿರುವುದಕ್ಕೆ ನೇರ ಕಾರಣ ಇದೇ ಬಸವರಾಜ ಬೊಮ್ಮಾಯಿಯವರೆ ಆಗಿದ್ದಾರೆ. ಅಧಿಕಾರಕ್ಕೆ ಬಂದ ತಕ್ಷಣ ರಾಜ್ಯದಲ್ಲಿ ನಡೆಯುತ್ತಿದ್ದ ಮತೀಯ ಗೂಂಡಾಗಿರಿ ಪ್ರಕರಣಗಳನ್ನು ತಡೆಯುವ ಬದಲು ಕ್ರಿಯೆಗೆ ಪ್ರತಿಕ್ರಿಯೆ ಇದ್ದೆ ಇರುತ್ತದೆ ಎಂದು ಹೇಳುವ ಮೂಲಕ ಅವುಗಳನ್ನು ಸಮರ್ಥಿಸಿಕೊಂಡರು. ತಮ್ಮ ಪ್ರತಿ ನಡೆಯಲ್ಲಿಯೂ ಕೋಮವಾದವನ್ನು ಉದ್ದೀಪನಗೊಳಿಸಿದರು. ಅದರ ಫಲವಾಗಿ ಇಂದು ಕ್ರಿಯೆಗೆ ಪ್ರತಿಕ್ರಿಯೆ, ಪ್ರತಿಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಸಾಲು ಸಾಲು ಹೆಣಗಳು ಬೀಳುತ್ತಿವೆ. ಕರ್ನಾಟಕದ ಗೌರವ ರಾಷ್ಟ್ರಮಟ್ಟದಲ್ಲಿ ಮಣ್ಣು ಪಾಲಾಗುತ್ತಿದೆ. ಸಿಎಂ ಬೊಮ್ಮಾಯಿಯವರೆ ದ್ವೇಷದಿಂದ, ಮತಾಂಧತೆಯಿಂದ ರಾಜ್ಯವನ್ನು, ದೇಶವನ್ನು ಮುನ್ನಡೆಸಲಾಗದು ಎಂದು ಈಗಲಾದರೂ ಅರಿಯಿರಿ. ಶಾಂತಿ, ಪ್ರೀತಿ, ಸರ್ವಧರ್ಮ ಸಮಾನತೆ, ಸೌಹಾರ್ದತೆ ಮಾತ್ರವೇ ನಮ್ಮನ್ನು ಉಳಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನರರಾಕ್ಷ SDPI,PFI ಬಗ್ಗೆ ವರದಿಮಾಡಲು ಆಗದ ನಾಮಾರ್ಧ ಶಂಡರ ಪತ್ರಿಕೆ ಎಂದರೆ ಇದೇ ಅನಿಸುತ್ತೇ

  2. Up ಮಾಡೆಲ್ ಮಾಡಿ ರಾಜ್ಯದ ಮರ್ಯಾದೆ ವಿದೇಶಗಳಲ್ಲೂ ಹರಾಜು ಮಾಡಬೇಕು ಅನ್ನೋದು ಇವರ ತುಷ್ಟ ಮನಸ್ಥಿತಿ, ದೇಶಕ್ಕೆ ಒಂದು ಒಳ್ಳೆ ಕಾರ್ಯ ಮಾಡದಿದ್ರೂ ಕೂಡ ಇಂತಹ ರಾಜಕಾರಣಿಗಳಿಗೆ ಅಭಿಮಾನಿಗಳು ಇದಾರೆ ಅಂದ್ರೆ ಅವು ಎಂಥ ಹೇಸಿಗೆ ಮನಸ್ಥಿತಿ ಹೊಂದಿರಬೇಕು ಥೂ.. ಇವರನ್ನು ಅಭಿನಂದಿಸೋ ನರಹೇಡಿಗಳಿಗೆ 😡😡😡

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...