Homeಮುಖಪುಟಬೊಮ್ಮಾಯಿಯವರು ಬಯಸುವ ಯುಪಿ ಮಾದರಿಯ ಆಳ-ಅಗಲ ಬಲ್ಲಿರೇನು!?

ಬೊಮ್ಮಾಯಿಯವರು ಬಯಸುವ ಯುಪಿ ಮಾದರಿಯ ಆಳ-ಅಗಲ ಬಲ್ಲಿರೇನು!?

2020 ರಲ್ಲಿ ಅತಿ ಹೆಚ್ಚು ಅಪಹರಣ ಮತ್ತು ಕೊಲೆ ನಡೆದ ರಾಜ್ಯ ಉತ್ತರ ಪ್ರದೇಶವಾಗಿದೆ.

- Advertisement -
- Advertisement -

ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಕಳೆದ ಒಂದು ವಾರದಲ್ಲಿ ಮೂವರು ಯುವಜನರನ್ನು ಕೊಲೆ ಮಾಡಲಾಗಿದೆ. ಮತಾಂಧರ ರಕ್ತದಾಹಕ್ಕೆ ಮಸೂದ್, ಪ್ರವೀಣ್ ನೆಟ್ಟಾರ್ ಮತ್ತು ಫಾಝಿಲ್ ಎಂಬ ಹರೆಯದ ಯುವಕರು ಪ್ರಾಣ ತೆತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ, ಶಾಂತಿ ಸ್ಥಾಪಿಸಬೇಕಾದ ಜವಾಬ್ದಾರಿ ಸಿಎಂ ಬಸವರಾಜ ಬೊಮ್ಮಾಯಿಯವರದಾಗಿದೆ.

ಪ್ರವೀಣ್ ನೆಟ್ಟಾರು ಕೊಲೆ ಹಿನ್ನೆಲೆಯಲ್ಲಿ ಏನು ಕ್ರಮ ಕೈಗೊಳ್ಳುತ್ತೀರಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು, “ಉತ್ತರ ಪ್ರದೇಶದ ಮಾದರಿ ಅನುಸರಿಸಬೇಕು ಎನ್ನುತ್ತಿದ್ದಾರೆ. ಅಗತ್ಯ ಬಿದ್ದರೆ ಯುಪಿ ಮಾಡೆಲ್, ಯೋಗಿ ಮಾಡೆಲ್ ಅನುಸರಿಸಲಾಗುವುದು” ಎಂದು ಹೇಳಿದ್ದಾರೆ. ಹಾಗಾದರೆ ಯುಪಿ ಮಾಡೆಲ್ ಎಂದರೇನು? ಯಾರು ಯಾರಿಗೆ ಮಾದರಿಯಾಗಬೇಕು ಎಂಬುದನ್ನು ನೋಡೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇನ್ನೋವೇಷನ್ ಇಂಡೆಕ್ಸ್‌

ಕಳೆದ ವಾರ ಬಿಡುಗಡೆಯಾದ ನೀತಿ ಆಯೋಗದ ನಾವೀನ್ಯತೆ ಸೂಚ್ಯಂಕ (ಇನ್ನೋವೇಷನ್ ಇಂಡೆಕ್ಸ್‌) ವರದಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ ಉತ್ತರ ಪ್ರದೇಶ 7ನೇ ಸ್ಥಾನದಲ್ಲಿದೆ. ಮಾನವ ಸಂಪನ್ಮೂಲದ ಬಳಕೆ, ಹೂಡಿಕೆಯ ಆಕರ್ಷಣೆ, ಆರೋಗ್ಯ-ಶಿಕ್ಷಣ-ಕೃಷಿ-ಕಾನೂನು ವಲಯಗಳಲ್ಲಿನ ಸಾಧನೆ ಸೇರಿದಂತೆ ಇತ್ಯಾದಿ ಅಂಶಗಳ ಆಧಾರದಲ್ಲಿ ಇದನ್ನು ಅಳೆಯಲಾಗುತ್ತದೆ. ಈ ಸೂಚ್ಯಂಕದಲ್ಲಿ ಕರ್ನಾಟಕ ರಾಜ್ಯವು ಸತತ ಎರಡನೇ ಭಾರಿಗೆ ಮೊದಲ ಸ್ಥಾನ ಕಾಯ್ದುಕೊಂಡಿದೆ.

ಉತ್ತಮ ಆಡಳಿತ ಸೂಚ್ಯಂಕ

ಗುಡ್ ಗರ್ವನೆನ್ಸ್ ಇಂಡೆಕ್ಸ್ ಎಂದು ಕರೆಯಲಾಗುವು ಉತ್ತಮ ಆಡಳಿತದ ಸೂಚ್ಯಂಕದಲ್ಲಿ ಕೇರಳ ರಾಜ್ಯವು ಮೊದಲ ಸ್ಥಾನ ಪಡೆದರೆ, ಕರ್ನಾಟಕ 06 ನೇ ಸ್ಥಾನದಲ್ಲಿದೆ. ಗಮನಿಸಬೇಕಾದ ಅಂಶವೆಂದರೆ ಉತ್ತರ ಪ್ರದೇಶ ರಾಜ್ಯವು ಕೊನೆಯ ಸ್ಥಾನದಲ್ಲಿದ್ದು, ಕಳಪೆ ಆಡಳಿತಕ್ಕೆ ಕುಖ್ಯಾತಿಯಾಗಿದೆ.

ಉದ್ಯೋಗ ಸೃಷ್ಟಿ:

ಸಿಎಂಐಇ ವರದಿ ಪ್ರಕಾರ ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ರಾಜ್ಯವು 05ನೇ ಸ್ಥಾನದಲ್ಲಿದ್ದರೆ ಉತ್ತರ ಪ್ರದೇಶ 15 ನೇ ಸ್ಥಾನದಲ್ಲಿದೆ.

ಬಡತನ:

ಉತ್ತರ ಪ್ರದೇಶದ ಮೂರು ಜಿಲ್ಲೆಗಳು ಸುಮಾರು 70% ಮತ್ತು ಅದಕ್ಕಿಂತ ಹೆಚ್ಚಿನ ಬಡತನದ ಅನುಪಾತವನ್ನು ಹೊಂದಿವೆ. ಶ್ರಾವಸ್ತಿ (74.38%), ಬಹ್ರೈಚ್ (71.88%), ಮತ್ತು ಬಲರಾಂಪುರ (69.45%). ಆದರೆ ಕರ್ನಾಟಕದಲ್ಲಿ ಬಡತನದ ಪ್ರಮಾಣ ತೀರಾ ಕಡಿಮೆ ಇದೆ.

ವಾಸ ಯೋಗ್ಯ ನಗರಗಳ ಪಟ್ಟಿ:

ದೇಶದಲ್ಲಿಯೇ ಅತ್ಯುನ್ನತ ಮೂಲಸೌಕರ್ಯ ಹೊಂದಿರುವ, ಉತ್ತಮ ಪರಿಸರ ಹೊಂದಿರುವ ವಾಸಯೋಗ್ಯ ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಬೆಂಗಳೂರು, ಮೈಸೂರು ಸ್ಥಾನ ಪಡೆದಿವೆಯೆ ಹೊರತು ಉತ್ತರ ಪ್ರದೇಶದ ಲಕ್ನೋ, ಕಾನ್ಪುರ ಅಲ್ಲ ಎಂಬುದನ್ನು ಗಮನಿಸಬಹುದಾಗಿದೆ.

ಜಿಎಸ್‌ಟಿ ಸಂಗ್ರಹ:

20 ಕೋಟಿಗೂ ಅಧಿಕ ಜನಸಂಖ್ಯೆ ಇರುವ ಯುಪಿ 2022ರ ಏಪ್ರಿಲ್ ತಿಂಗಳಲ್ಲಿ 8,534 ಕೋಟಿ ರೂ ಜಿಎಸ್‌ಟಿ ಪಾವತಿಸಿದೆ. ಆದರೆ ಅದೇ ತಿಂಗಳಿನಲ್ಲಿ ಕೇವಲ 6.5 ಕೋಟಿ ಜನಸಂಖ್ಯೆ ಇರುವ ಕರ್ನಾಟಕ 11,820 ಕೋಟಿ ರೂ ಜಿಎಸ್‌ಟಿ ಪಾವತಿಸಿದೆ. 

ಅಪರಾಧಗಳ ಸೂಚ್ಯಂಕ

NCRB ಪ್ರಕಟಿಸುವ ವರದಿ ಪ್ರಕಾರ ಕ್ರೈಮ್ ರೇಟ್‌ ನಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಕರ್ನಾಟಕ 20ರ ನಂತರದ ಸ್ಥಾನದಲ್ಲಿದೆ. 2020 ರಲ್ಲಿ ಅತಿ ಹೆಚ್ಚು ಅಪಹರಣ ಮತ್ತು ಕೊಲೆ ನಡೆದ ರಾಜ್ಯ ಉತ್ತರ ಪ್ರದೇಶವಾಗಿದೆ.

ಸಾಕ್ಷರತೆ:

ಸಾಕ್ಷರತೆಯಲ್ಲಿ ಕರ್ನಾಟಕ 17ನೇ ಸ್ಥಾನ ಪಡೆದರೆ ಉತ್ತರ ಪ್ರದೇಶ 19ನೇ ಸ್ಥಾನ ಪಡೆದಿದೆ. ಎಂದಿನಂತೆ ಕೇರಳ ಮೊದಲ ಸ್ಥಾನದಲ್ಲಿದೆ.

ಹ್ಯುಮನ್ ಇಂಡೆಕ್ಸ್:

ಜನರ ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟವನ್ನು ಆಧರಿಸಿ ಹ್ಯುಮನ್ ಇಂಡೆಕ್ಸ್ ಅನ್ನು ಅಳೆಯಲಾಗುತ್ತದೆ. ಅದರಲ್ಲಿ ಕೇರಳ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ 19ನೇ ಸ್ಥಾನದಲ್ಲಿದೆ ಮತ್ತು ಉತ್ತರ ಪ್ರದೇಶ 35 ಅಂದರೆ ಕೊನೆಯ ಸ್ಥಾನದಲ್ಲಿದೆ. ಅಲ್ಲದೆ

ಮಹಿಳಾ ಸುರಕ್ಷತೆಯ ವಿಚಾರದಲ್ಲಿ – ಕೆಟ್ಟ ರಾಜ್ಯ ಉತ್ತರ ಪ್ರದೇಶ

ಅತಿ ಹೆಚ್ಚು ಅತ್ಯಾಚಾರಗಳು ನಡೆಯುವ ರಾಜ್ಯ ಉತ್ತರ ಪ್ರದೇಶ

ಆರೋಗ್ಯ ಸೂಚ್ಯಂಕದಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ವಾಯು ಮಾಲಿನ್ಯದಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ಶಿಕ್ಷಣ ಗುಣಮಟ್ಟ ಸೂಚ್ಯಂಕದಲ್ಲಿ ಭಾರತದ ಅತ್ಯಂತ ಕೆಟ್ಟ ರಾಜ್ಯ ಉತ್ತರ ಪ್ರದೇಶ

ಕೋವಿಡ್ ಸಮಯದಲ್ಲಿ ಗಂಗೆಯಲ್ಲಿ ಹೆಣಗಳು ತೇಲಿಬಂದ ರಾಜ್ಯ ಉತ್ತರ ಪ್ರದೇಶ

ಕರ್ನಾಟಕಕ್ಕೆ ಹೆಚ್ಚು ಉದ್ಯೋಗ ಅರಸಿ ಬರುವವರು, ಸೆಕ್ಯುರಿಟಿ ಕೆಲಸ ಮತ್ತು ಗೋಲ್‌ಗಪ್ಪ, ಪಾನೀಪುರಿ ಮಾರುವ ಹೆಚ್ಚಿನವರು ಉತ್ತರ ಪ್ರದೇಶದವರು

ಇಂತಹ ಕೆಳಮಟ್ಟದಲ್ಲಿರುವ ಉತ್ತರ ಪ್ರದೇಶ ರಾಜ್ಯವು ಕರ್ನಾಟಕಕ್ಕೆ ಮಾದರಿಯಾಗಬಲ್ಲದೆ? ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವ ಗೂಂಡಾ ರಾಜ್ಯ ಎಂದು ಕರೆಸಿಕೊಳ್ಳುವ ಉತ್ತರ ಪ್ರದೇಶವನ್ನು ಯಾವ ಆಧಾರದಲ್ಲಿ ಮಾದರಿಯಾಗಿ ತೆಗೆದುಕೊಳ್ಳಬಹುದು ಎಂಬುದನ್ನು ಸಿಎಂ ಬೊಮ್ಮಾಯಿಯವರು ವಿವರಿಸಬೇಕಿದೆ.

ಸರ್ಕಾರ ನೀತಿ ನಿರ್ಧಾರಗಳನ್ನು ಪ್ರಶ್ನಿಸುವವರ, ಹೋರಾಟಗಾರರ ಮನೆ ಮೇಲೆ ಅಸಾಂವಿಧಾನಿಕವಾಗಿ ಬುಲ್ಡೋಜರ್ ಹರಿಸುವುದಕ್ಕೆ ಉತ್ತರ ಪ್ರದೇಶ ಕುಖ್ಯಾತಿಯಾಗಿದೆ. ಇದು ದೇಶದ ಸಂವಿಧಾನ, ಕಾನೂನು ಮತ್ತು ನ್ಯಾಯವ್ಯವಸ್ಥೆ ಮೇಲೆ ನಂಬಿಕೆ ಇಲ್ಲದವರು ಮಾಡುವ ಕೆಲಸ. ಅದಕ್ಕಾಗಿಯೇ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರನ್ನು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳು ತರಾಟೆಗೆ ತೆಗೆದುಕೊಂಡಿವೆ. ಅವರು ನಮಗೆ ಖಂಡಿತ ಮಾದರಿಯಾಗುವುದಿಲ್ಲ.

ಈ ಮೊದಲೇ ಹೇಳಿದಂತೆ ಹ್ಯುಮನ್ ಇಂಡೆಕ್ಸ್, ಶಿಕ್ಷಣ, ಉದ್ಯೋಗ ಸೃಷ್ಟಿ ಇತ್ಯಾದಿ ವಿಚಾರಗಳನ್ನು ಪರಿಗಣಿಸಿದರೆ ನಮಗೆ ನೆರೆಯ ಕೇರಳ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳು ಮಾದರಿಯಾಗುತ್ತವೆಯೇ ಹೊರತು ಉತ್ತರ ಪ್ರದೇಶವಲ್ಲ.

ಇನ್ನು ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿರುವುದಕ್ಕೆ ನೇರ ಕಾರಣ ಇದೇ ಬಸವರಾಜ ಬೊಮ್ಮಾಯಿಯವರೆ ಆಗಿದ್ದಾರೆ. ಅಧಿಕಾರಕ್ಕೆ ಬಂದ ತಕ್ಷಣ ರಾಜ್ಯದಲ್ಲಿ ನಡೆಯುತ್ತಿದ್ದ ಮತೀಯ ಗೂಂಡಾಗಿರಿ ಪ್ರಕರಣಗಳನ್ನು ತಡೆಯುವ ಬದಲು ಕ್ರಿಯೆಗೆ ಪ್ರತಿಕ್ರಿಯೆ ಇದ್ದೆ ಇರುತ್ತದೆ ಎಂದು ಹೇಳುವ ಮೂಲಕ ಅವುಗಳನ್ನು ಸಮರ್ಥಿಸಿಕೊಂಡರು. ತಮ್ಮ ಪ್ರತಿ ನಡೆಯಲ್ಲಿಯೂ ಕೋಮವಾದವನ್ನು ಉದ್ದೀಪನಗೊಳಿಸಿದರು. ಅದರ ಫಲವಾಗಿ ಇಂದು ಕ್ರಿಯೆಗೆ ಪ್ರತಿಕ್ರಿಯೆ, ಪ್ರತಿಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಸಾಲು ಸಾಲು ಹೆಣಗಳು ಬೀಳುತ್ತಿವೆ. ಕರ್ನಾಟಕದ ಗೌರವ ರಾಷ್ಟ್ರಮಟ್ಟದಲ್ಲಿ ಮಣ್ಣು ಪಾಲಾಗುತ್ತಿದೆ. ಸಿಎಂ ಬೊಮ್ಮಾಯಿಯವರೆ ದ್ವೇಷದಿಂದ, ಮತಾಂಧತೆಯಿಂದ ರಾಜ್ಯವನ್ನು, ದೇಶವನ್ನು ಮುನ್ನಡೆಸಲಾಗದು ಎಂದು ಈಗಲಾದರೂ ಅರಿಯಿರಿ. ಶಾಂತಿ, ಪ್ರೀತಿ, ಸರ್ವಧರ್ಮ ಸಮಾನತೆ, ಸೌಹಾರ್ದತೆ ಮಾತ್ರವೇ ನಮ್ಮನ್ನು ಉಳಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನರರಾಕ್ಷ SDPI,PFI ಬಗ್ಗೆ ವರದಿಮಾಡಲು ಆಗದ ನಾಮಾರ್ಧ ಶಂಡರ ಪತ್ರಿಕೆ ಎಂದರೆ ಇದೇ ಅನಿಸುತ್ತೇ

  2. Up ಮಾಡೆಲ್ ಮಾಡಿ ರಾಜ್ಯದ ಮರ್ಯಾದೆ ವಿದೇಶಗಳಲ್ಲೂ ಹರಾಜು ಮಾಡಬೇಕು ಅನ್ನೋದು ಇವರ ತುಷ್ಟ ಮನಸ್ಥಿತಿ, ದೇಶಕ್ಕೆ ಒಂದು ಒಳ್ಳೆ ಕಾರ್ಯ ಮಾಡದಿದ್ರೂ ಕೂಡ ಇಂತಹ ರಾಜಕಾರಣಿಗಳಿಗೆ ಅಭಿಮಾನಿಗಳು ಇದಾರೆ ಅಂದ್ರೆ ಅವು ಎಂಥ ಹೇಸಿಗೆ ಮನಸ್ಥಿತಿ ಹೊಂದಿರಬೇಕು ಥೂ.. ಇವರನ್ನು ಅಭಿನಂದಿಸೋ ನರಹೇಡಿಗಳಿಗೆ 😡😡😡

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...