Homeಎಕಾನಮಿಸಿಎಎ ಮತ್ತು ಎನ್‌ಆರ್‌ಸಿ ಜಾರಿಯಿಂದಾಗುವ ಆರ್ಥಿಕ ನಷ್ಟವೆಷ್ಟು?

ಸಿಎಎ ಮತ್ತು ಎನ್‌ಆರ್‌ಸಿ ಜಾರಿಯಿಂದಾಗುವ ಆರ್ಥಿಕ ನಷ್ಟವೆಷ್ಟು?

- Advertisement -
- Advertisement -

ಪೌರತ್ವ ಕಾಯ್ದೆ ಮತ್ತು ಎನ್‌ಆರ್‌ಸಿ ಈ ದೇಶದ ಸಂವಿಧಾನದ ಮೂಲ ಆಶಯಗಳಾದ ಸಹಭಾಗಿತ್ವ, ಸಹೋದರತ್ವ, ಧರ್ಮನಿರಪೇಕ್ಷತೆ, ಜಾತ್ಯತೀತತೆಗಳಿಗೆ ವಿರುದ್ಧವಾಗಿರುವುದು ಬಹುತೇಕರಿಗೆ ಅರ್ಥವಾಗಿದೆ. ಇದು ಸಮಾಜವನ್ನು ಧರ್ಮದ ಆಧಾರದ ಮೇಲೆ ಒಡೆದು ಒಂದಿಡೀ ಸಮುದಾಯವನ್ನು ಮುಖ್ಯವಾಹಿನಿಯಿಂದ ಹೊರಗಿಡುವಂಥ ಅಮಾನವೀಯ ಕೆಲಸವಾಗಿದೆ. ಈ ದೇಶ ಸರ್ವಜನಾಂಗದ ಶಾಂತಿಯ ತೋಟ ಎಂಬ ಹಿರಿಮೆಗೇ ಮಸಿಬಳಿಯುವಂತಹುದೂ ಆಗಿದೆ.

ಇದನ್ನ ಮನಗಂಡೇ ದೇಶದಾದ್ಯಂತ ಜಾತಿಧರ್ಮಗಳನ್ನು ಮೀರಿ ನಾಗರಿಕರು ಅದರಲ್ಲೂ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಮುಂದೆ ನಿಂತು ಶಾಂತಿಯುತ ಪ್ರತಿಭಟನಾ ಹೋರಾಟಗಳನ್ನು ನಡೆಸುತ್ತಿದ್ದಾರೆ. ಇಂಥಾ ಒಕ್ಕೊರಲ ಪ್ರತಿಭಟನೆಯಿಂದಾಗಿ ಕೆಲವು ರಾಜ್ಯ ಸರ್ಕಾರಗಳು ಸಿಎಎ ಮತ್ತು ಎನ್‌ಆರ್‌ಸಿಯನ್ನು ತಮ್ಮ ರಾಜ್ಯಗಳಲ್ಲಿ ಮಾಡುವುದಿಲ್ಲ ಎಂದೂ ಹೇಳಿವೆ.

ಈ ಪೌರತ್ವ ಕಾಯ್ದೆಯು ಸಮಾಜವನ್ನು ಧರ್ಮದ ಆಧಾರದ ಮೇಲೆ ಒಡೆಯುವುದಷ್ಟೇ ಅಲ್ಲದೆ ದೇಶದ ಆರ್ಥಿಕತೆಯ ಮೇಲೆಯೂ ತಾಳಲಾರದಷ್ಟು ಆಘಾತ ಉಂಟುಮಾಡಲಿದೆ.

ಈ ಕಾಯ್ದೆಯ ಅನುಷ್ಟಾನದಿಂದ ದೇಶದ ಮೇಲೆ ಉಂಟಾಗುವ ಅರ್ಥಿಕ ಪರಿಣಾಮಗಳೇನು ಎಂದು ಸಂಕ್ಷಿಪ್ತವಾಗಿ ನೋಡುವ ಪ್ರಯತ್ನ ಮಾಡೋಣ.

ಕಡೆಯ ಆರು ವರ್ಷಗಳಲ್ಲಿ ಅಸ್ಸಾಮ್ ರಾಜ್ಯದಲ್ಲಿ ನಡೆದ ಎನ್‌ಆರ್‌ಸಿ ಪ್ರಕ್ರಿಯೆಗೆ ಖರ್ಚಾದ ಹಣ ಹತ್ತಿರತ್ತಿರ 1500 ಕೋಟಿ ರೂಪಾಯಿಗಳು. ಜೊತೆಗೆ ಈ ಕೆಲಸಕ್ಕೆ ಬಳಸಿಕೊಂಡ ಸರ್ಕಾರೀ ಉದ್ಯೋಗಿಗಳ ಸಂಖ್ಯೆ ಐವತ್ತೈದು ಸಾವಿರ. ಅಸ್ಸಾಮ್ ಜನಸಂಖ್ಯೆ ಮೂರೂವರೆ ಕೋಟಿ. ಆ ಲೆಕ್ಕದಲ್ಲಿ ಇಡೀ ದೇಶದಲ್ಲಿ ಎನ್‌ಆರ್‌ಸಿ ಮಾಡಲು ಖರ್ಚಾಗುವ ಹಣ ಕನಿಷ್ಟ ಅರವತ್ತುಸಾವಿರ ಕೋಟಿ ರೂಪಾಯಿಗಳು. ಜೊತೆಗೆ ಬೇರೆ ಕೆಲಸಗಳನ್ನು ಬಿಟ್ಟು ಸಾವಿರಾರು ಉದ್ಯೋಗಿಗಳು ಎನ್‌ಆರ್‌ಸಿ ಕೆಲಸಕ್ಕೆ ಬಳಕೆಯಾದರೆ ತಗಲುವ ಪರೋಕ್ಷ ಖರ್ಚು ಇನ್ನೂ ಹಲವು ಸಾವಿರ ಕೋಟಿಗಳು.

ದೇಶವನ್ನು ಆರ್ಥಿಕ ಹಿಂಜರಿಕೆಯಿಂದ ಮೇಲೆತ್ತುವ ಮುಖ್ಯ ಕ್ರಮವಾದ ಗ್ರಾಮೀಣ ಉದ್ಯೋಗ ಖಾತ್ರಿಗೆ ಹೆಚ್ಚುವರಿಯಾಗಿ ಹತ್ತು ಸಾವಿರ ಕೋಟಿ ಕೊಡಲು ಸರ್ಕಾರದ ಬಳಿ ಹಣವಿಲ್ಲ.

ಕರ್ನಾಟಕದ ಪ್ರವಾಹ ಪೀಡಿತರಿಗೆ ಕೊಡಬೇಕಾದಷ್ಟರಲ್ಲಿ ಕನಿಷ್ಟ ಶೇಕಡಾ ಹತ್ತರಷ್ಟು ಕೊಡಲೂ ಸರ್ಕಾರದ ಬಳಿ ದುಡ್ಡಿಲ್ಲ. ಅಂತಹುದರಲ್ಲಿ ಇಷ್ಟೊಂದು ದೊಡ್ಡ ಮೊತ್ತ (ಒಟ್ಟು ಕನಿಷ್ಟ ಒಂದು ಲಕ್ಷಕೋಟಿ ) ಸರ್ಕಾರದ ಹತ್ತಿರ ಎಲ್ಲಿದೆ?

ಸರ್ಕಾರ ಸಾಲ ಮಾಡಿಯೇ ಈ ಖರ್ಚನ್ನು ಹೊಂದಿಸಬೇಕಾಗುವುದರಿಂದ ನಮ್ಮೆಲ್ಲರ ತಲೆಯ ಮೇಲೆ ಮತ್ತಷ್ಟು ಸಾಲದ ಹೊರೆ ಬೀಳಲಿದೆ ಮತ್ತು ಅದರಿಂದ ದೇಶ ಇನ್ನಷ್ಟು ಆರ್ಥಿಕವಾಗಿ ಹಿಂದೆ ಬೀಳಲಿದೆ.

ಇನ್ನು, ಬೇರೆ ದೇಶದಿಂದ ಬಂದಿರುವ ಮುಸ್ಲಿಮರಿಗೆ ಸಿಎಎ ಅಡಿಯಲ್ಲಿ ಪೌರತ್ವ ನೀಡಲಾಗುವುದಿಲ್ಲ (ಸಿಎಎ ಪ್ರಕಾರ ಹಿಂದು,ಕ್ರೈಸ್ತ, ಜೈನ, ಪಾರ್ಸಿ ಮತ್ತು ಬೌದ್ಧರಿಗೆ ಮಾತ್ರ ಪೌರತ್ವ ನೀಡಲಾಗುತ್ತದೆ). ಪೌರತ್ವವಿಲ್ಲದ ಮುಸ್ಲಿಮರನ್ನು ಬೇರೆ ಯಾವುದೇ ದೇಶಕ್ಕೆ ಕಳಿಸಲಾಗುವುದೂ ಇಲ್ಲ. ಏಕೆಂದರೆ, ಆಗಿರುವವರ ಬಳಿ ಅವರು ಬೇರೆ ದೇಶದ ಪ್ರಜೆಗಳೆಂದು ಸಾಬೀತುಪಡಿಸುವ ದಾಖಲೆಗಳೂ ಇರುವುದಿಲ್ಲ. ಆಗ, ಅಂತವರನ್ನು ಸರ್ಕಾರದ ಪ್ರಕಾರ ಡಿಟೆನ್ಷನ್ ಸೆಂಟರುಗಳಲ್ಲಿ (Detention centre) ಇಡಲಾಗುತ್ತದೆ.

ಸುಮ್ಮನೆ ಒಂದು ಅಂದಾಜಿಗೆ ಆ ರೀತಿ ಪೌರತ್ವ ಇಲ್ಲದ ಇಪ್ಪತ್ತು ಲಕ್ಷ ಮುಸ್ಲಿಮರು ಸಿಗುತ್ತಾರೆಂದುಕೊಳ್ಳೋಣ (ಬಿಜೆಪಿ ಐಟಿ ಸೆಲ್ ಈ ಸಂಖ್ಯೆ ಎರಡು ಮೂರು ಕೋಟಿಯಷ್ಟಿದೆ ಎಂದು ಪ್ರಚಾರ ಮಾಡ್ತಿದೆ). ಈ ಇಪ್ಪತ್ತು ಲಕ್ಷ ಜನರನ್ನ ಡಿಟೆನ್ಷನ್ ಸೆಂಟರುಗಳಲ್ಲಿಟ್ಟು ನೋಡಿಕೊಳ್ಳುವುದಕ್ಕೆ ವರ್ಷಕ್ಕೆ ಕನಿಷ್ಟ ಹತ್ತು ಸಾವಿರ ಕೋಟಿಗಳಷ್ಟು ಖರ್ಚಾಗಲಿದೆ. ಒಂದು ಸೆಂಟರಿನಲ್ಲಿ ಅಂದಾಜು ಮೂರು ಸಾವಿರ ಜನ, ಊಟ, ಬಟ್ಟೆ, ಮಕ್ಕಳ ಸ್ಕೂಲು ಮತ್ತು ಉಸ್ತುವಾರಿ ಸಿಬ್ಬಂದಿಗಳ ವೆಚ್ಚ ಎಲ್ಲ ಸೇರಿದರೆ ವರ್ಷಕ್ಕೆ ಹತ್ತು ಸಾವಿರ ಕೋಟಿ ದಾಟಲಿದೆ. ಅಸ್ಸಾಮಿನಲ್ಲಿ ಪ್ರತಿ ಸೆಂಟರನ್ನು ಕಟ್ಟಲು ಐವತ್ತು ಕೋಟಿ ವ್ಯಯಿಸಲಾಗಿದೆ. ಆ ಲೆಕ್ಕದಲ್ಲಿ ಐನೂರು ಸೆಂಟರುಗಳನ್ನು ಕಟ್ಟಲು ಇಪ್ಪತ್ತೈದು ಸಾವಿರ ಕೋಟಿ ಒಟ್ಟಿಗೇ ಖರ್ಚಾಗಲಿದೆ.

ಇಲ್ಲಿ ಅಂದಾಜಿಸಿರುವ ಇಪ್ಪತ್ತು ಲಕ್ಷ ಜನ ಬದುಕಲು ಇವತ್ತು ಒಂದಲ್ಲ ಒಂದು ಕೆಲಸ ಮಾಡಿ (ಮೆಕ್ಯಾನಿಕ್, ಸೆಕ್ಯೂರಿಟಿ, ಸಣ್ಣ ಅಂಗಡಿ ಇತ್ಯಾದಿ) ಸಂಪಾದನೆ ಮಾಡುತ್ತಾ ದೇಶದ ಜಿಡಿಪಿಗೆ ತಮ್ಮ ಕಾಣಿಕೆಯನ್ನು ನೀಡುತ್ತಿದ್ದಾರೆ.

ದೇಶದ ತಲಾದಾಯ ಇವತ್ತು ತಿಂಗಳಿಗೆ ಹತ್ತು ಸಾವಿರದ ಐನೂರು ರೂಪಾಯಿಗಳು. ಈ ಲೆಕ್ಕದಲ್ಲಿ ಇಪ್ಪತ್ತು ಲಕ್ಷ ಜನರಿಂದ ಪ್ರತಿವರ್ಷ ಜಿಡಿಪಿಗೆ ಸಿಗುವ ಕೊಡುಗೆ ಹತ್ತಿರತ್ತಿರ ಇಪ್ಪತ್ತೈದು ಸಾವಿರ ಕೋಟಿ ರೂಪಾಯಿಗಳು.

ಅಂದರೆ, ಅಷ್ಟು ಜನರನ್ನು ನೋಡಿಕೊಳ್ಳುವ ಮತ್ತು ನಿಂತುಹೋಗುವ ಸಂಪಾದನೆ ಈ ಎರಡರಿಂದ ಭಾರತಕ್ಕೆ ವಾರ್ಷಿಕವಾಗಿ ಆಗುವ ಒಟ್ಟು ಆರ್ಥಿಕ ನಷ್ಟ ಕನಿಷ್ಟ ಮೂವತ್ತೈದರಿಂದ ನಲವತ್ತು ಸಾವಿರ ಕೋಟಿ ರೂಪಾಯಿಗಳು.

ಅದಲ್ಲದೆ, ಮೇಲೆ ಹೇಳಿದಂತೆ ಈಗ ತಕ್ಷಣಕ್ಕೆ ಆಗುವ ನಷ್ಟ ಕನಿಷ್ಟ ಒಂದು ಲಕ್ಷ ಕೋಟಿ ರೂಪಾಯಿಗಳು.

ಇಷ್ಟರ ಜೊತೆಗೆ, ದೇಶದೊಳಗೆ ಸಿಎಎ ಕಾರಣಕ್ಕಾಗಿ ಅಶಾಂತಿಯ ವಾತಾವರಣವಿರುವಾಗ ಯಾವುದೇ ದೇಶ ಭಾರತದಲ್ಲಿ ಬಂಡವಾಳ ಹೂಡಲು ಮುಂಬರುವುದಿಲ್ಲ.

ಈಗಾಗಲೇ ಈಶಾನ್ಯ ರಾಜ್ಯಗಳಲ್ಲಿ ಹನ್ನೆರಡು ಸಾವಿರ ಕೋಟಿ ಹೂಡಬೇಕಾಗಿದ್ದ ಜಪಾನ್ ತನ್ನ ನಿರ್ಧಾರವನ್ನು ತಾತ್ಕಾಲಿಕವಾಗಿ ಮುಂದೂಡಿದೆ. ಇದಲ್ಲದೆ, ದೇಶದ ಕೋಟ್ಯಂತರ ಮಂದಿ ತಮ್ಮ ಪೌರತ್ವ ಸಾಬೀತಿಗೆ ಅಲೆದಾಡುತ್ತ ಕಳೆಯುವುದರಿಂದ ಅವರ ಉತ್ಪಾದನಾ ಮಟ್ಟ ಕುಸಿದು ಅದೂ ಕೂಡ ಆರ್ಥಿಕತೆಗೆ ಮತ್ತೊಂದು ಭಾರೀ ಹೊಡೆತ ಕೊಡಲಿದೆ.

ತಾನೇ ಕೈಯಾರೆ ಮಾಡಿಕೊಂಡ (ನೋಟುಬಂದಿ ಮತ್ತು ಜಿಎಸ್ಟಿ) ತಪ್ಪುಗಳಿಂದಾಗಿ ಆರ್ಥಿಕ ದುಸ್ಥಿತಿಯಲ್ಲಿರುವ ಸರ್ಕಾರ ಸಿಎಎ ಮತ್ತು ಎನ್‌ಆರ್‌ಸಿಯಿಂದುಂಟಾಗುವ ಆರ್ಥಿಕ ಹೊರೆ ತಾಳಿಕೊಳ್ಳುವ ಸ್ಥಿತಿಯಲ್ಲಂತು ಇಲ್ಲವೇ ಇಲ್ಲ.

ಒಟ್ಟಿನಲ್ಲಿ, ಈ ಸಿಎಎ ಮತ್ತು ಎನ್‌ಆರ್‌ಸಿ ದೇಶವನ್ನು ಧರ್ಮಾಧಾರಿತವಾಗಿ ಒಡೆದು ಸಮಾಜದೊಳಗಿನ ಸಾಮರಸ್ಯವನ್ನು ಹಾಳುಮಾಡುವುದರ ಜೊತೆಗೆ ಆರ್ಥಿಕವಾಗಿಯೂ ಕೂಡ ದೇಶವನ್ನು ಕೆಳತಳ್ಳಲಿದೆ.

ಒಟ್ಟಾರೆ, ಇದು ದೇಶವನ್ನು ನೈತಿಕವಾಗಿ ಮತ್ತು ಆರ್ಥಿಕವಾಗಿ ಪ್ರಪಾತಕ್ಕೆ ಬೀಳಿಸಲಿದೆ. ( ಜನಶಕ್ತಿಯಿಂದ ತಡೆಯದೇ ಹೋದರೆ)

ಹಾಗಾದರೆ, ಈ ಸರ್ಕಾರ ಯಾವ ಕಾರಣಕ್ಕಾಗಿ ಈ ಸಿಎಎ ಮತ್ತು ಎನ್‌ಆರ್‌ಸಿ ಮಾಡುತ್ತಿದೆ?

ಒಂದು, ಇದರ ಎಲ್ಲ ಪರಿಣಾಮಗಳ ಅಂದಾಜಿಲ್ಲದೆ ತಮ್ಮ ಹಿಂದುತ್ವ ಕಾರ್ಯಸೂಚಿಯ ಭಾಗವಾಗಿ ಇದನ್ನು ಮಾಡುತ್ತಿರಬಹುದು.

ಎರಡು, ಪರಿಣಾಮಗಳ ಅರಿವಿದ್ದು ಅದರಲ್ಲೂ ಆರ್ಥಿಕ ದುಷ್ಪರಿಣಾಮದ ಅರಿವಿದ್ದು ಕೇವಲ ರಾಜಕೀಯ ಲಾಭದ ಕಾರಣಕ್ಕೆ ಇದನ್ನು ಮಾಡುವಂತೆ ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿರಬಹುದು. ಅಂದರೆ, ಚುನಾವಣೆ ಹತ್ತಿರ ಬಂದಂತೆ ಐದಾರು ಸಾವಿರ ಜನರನ್ನು ಮಾತ್ರ ಡಿಟೆನ್ಷನ್ ಸೆಂಟರುಗಳಲ್ಲಿಟ್ಟು ಅದನ್ನೇ ಕೋಟಿ ಜನ ಎಂಬಂತೆ ಸೋಷಿಯಲ್ ಮೀಡಿಯ ಮೂಲಕ ನಂಬಿಸಿ ಹಿಂದೂಗಳ ಓಟು ಪಡೆಯುವ ಹುನ್ನಾರವೂ ಇರಬಹುದು.

ಯಾವ ಕಾರಣಕ್ಕೇ ಮಾಡುತ್ತಿದ್ದರೂ ಇದನ್ನು ಇಡೀ ದೇಶ ಈಗ ಮಾಡುತ್ತಿರುವಂತೆ ಒಗ್ಗಟ್ಟಿನಿಂದ ಶಾಂತಿಯುತವಾಗಿ ಎದುರಿಸಿ ದೇಶವನ್ನು ನೈತಿಕ ಮತ್ತು ಆರ್ಥಿಕ ಅಧಃಪತನದಿಂದ ಉಳಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...