Homeಎಕಾನಮಿಸಿಎಎ ಮತ್ತು ಎನ್‌ಆರ್‌ಸಿ ಜಾರಿಯಿಂದಾಗುವ ಆರ್ಥಿಕ ನಷ್ಟವೆಷ್ಟು?

ಸಿಎಎ ಮತ್ತು ಎನ್‌ಆರ್‌ಸಿ ಜಾರಿಯಿಂದಾಗುವ ಆರ್ಥಿಕ ನಷ್ಟವೆಷ್ಟು?

- Advertisement -
- Advertisement -

ಪೌರತ್ವ ಕಾಯ್ದೆ ಮತ್ತು ಎನ್‌ಆರ್‌ಸಿ ಈ ದೇಶದ ಸಂವಿಧಾನದ ಮೂಲ ಆಶಯಗಳಾದ ಸಹಭಾಗಿತ್ವ, ಸಹೋದರತ್ವ, ಧರ್ಮನಿರಪೇಕ್ಷತೆ, ಜಾತ್ಯತೀತತೆಗಳಿಗೆ ವಿರುದ್ಧವಾಗಿರುವುದು ಬಹುತೇಕರಿಗೆ ಅರ್ಥವಾಗಿದೆ. ಇದು ಸಮಾಜವನ್ನು ಧರ್ಮದ ಆಧಾರದ ಮೇಲೆ ಒಡೆದು ಒಂದಿಡೀ ಸಮುದಾಯವನ್ನು ಮುಖ್ಯವಾಹಿನಿಯಿಂದ ಹೊರಗಿಡುವಂಥ ಅಮಾನವೀಯ ಕೆಲಸವಾಗಿದೆ. ಈ ದೇಶ ಸರ್ವಜನಾಂಗದ ಶಾಂತಿಯ ತೋಟ ಎಂಬ ಹಿರಿಮೆಗೇ ಮಸಿಬಳಿಯುವಂತಹುದೂ ಆಗಿದೆ.

ಇದನ್ನ ಮನಗಂಡೇ ದೇಶದಾದ್ಯಂತ ಜಾತಿಧರ್ಮಗಳನ್ನು ಮೀರಿ ನಾಗರಿಕರು ಅದರಲ್ಲೂ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಮುಂದೆ ನಿಂತು ಶಾಂತಿಯುತ ಪ್ರತಿಭಟನಾ ಹೋರಾಟಗಳನ್ನು ನಡೆಸುತ್ತಿದ್ದಾರೆ. ಇಂಥಾ ಒಕ್ಕೊರಲ ಪ್ರತಿಭಟನೆಯಿಂದಾಗಿ ಕೆಲವು ರಾಜ್ಯ ಸರ್ಕಾರಗಳು ಸಿಎಎ ಮತ್ತು ಎನ್‌ಆರ್‌ಸಿಯನ್ನು ತಮ್ಮ ರಾಜ್ಯಗಳಲ್ಲಿ ಮಾಡುವುದಿಲ್ಲ ಎಂದೂ ಹೇಳಿವೆ.

ಈ ಪೌರತ್ವ ಕಾಯ್ದೆಯು ಸಮಾಜವನ್ನು ಧರ್ಮದ ಆಧಾರದ ಮೇಲೆ ಒಡೆಯುವುದಷ್ಟೇ ಅಲ್ಲದೆ ದೇಶದ ಆರ್ಥಿಕತೆಯ ಮೇಲೆಯೂ ತಾಳಲಾರದಷ್ಟು ಆಘಾತ ಉಂಟುಮಾಡಲಿದೆ.

ಈ ಕಾಯ್ದೆಯ ಅನುಷ್ಟಾನದಿಂದ ದೇಶದ ಮೇಲೆ ಉಂಟಾಗುವ ಅರ್ಥಿಕ ಪರಿಣಾಮಗಳೇನು ಎಂದು ಸಂಕ್ಷಿಪ್ತವಾಗಿ ನೋಡುವ ಪ್ರಯತ್ನ ಮಾಡೋಣ.

ಕಡೆಯ ಆರು ವರ್ಷಗಳಲ್ಲಿ ಅಸ್ಸಾಮ್ ರಾಜ್ಯದಲ್ಲಿ ನಡೆದ ಎನ್‌ಆರ್‌ಸಿ ಪ್ರಕ್ರಿಯೆಗೆ ಖರ್ಚಾದ ಹಣ ಹತ್ತಿರತ್ತಿರ 1500 ಕೋಟಿ ರೂಪಾಯಿಗಳು. ಜೊತೆಗೆ ಈ ಕೆಲಸಕ್ಕೆ ಬಳಸಿಕೊಂಡ ಸರ್ಕಾರೀ ಉದ್ಯೋಗಿಗಳ ಸಂಖ್ಯೆ ಐವತ್ತೈದು ಸಾವಿರ. ಅಸ್ಸಾಮ್ ಜನಸಂಖ್ಯೆ ಮೂರೂವರೆ ಕೋಟಿ. ಆ ಲೆಕ್ಕದಲ್ಲಿ ಇಡೀ ದೇಶದಲ್ಲಿ ಎನ್‌ಆರ್‌ಸಿ ಮಾಡಲು ಖರ್ಚಾಗುವ ಹಣ ಕನಿಷ್ಟ ಅರವತ್ತುಸಾವಿರ ಕೋಟಿ ರೂಪಾಯಿಗಳು. ಜೊತೆಗೆ ಬೇರೆ ಕೆಲಸಗಳನ್ನು ಬಿಟ್ಟು ಸಾವಿರಾರು ಉದ್ಯೋಗಿಗಳು ಎನ್‌ಆರ್‌ಸಿ ಕೆಲಸಕ್ಕೆ ಬಳಕೆಯಾದರೆ ತಗಲುವ ಪರೋಕ್ಷ ಖರ್ಚು ಇನ್ನೂ ಹಲವು ಸಾವಿರ ಕೋಟಿಗಳು.

ದೇಶವನ್ನು ಆರ್ಥಿಕ ಹಿಂಜರಿಕೆಯಿಂದ ಮೇಲೆತ್ತುವ ಮುಖ್ಯ ಕ್ರಮವಾದ ಗ್ರಾಮೀಣ ಉದ್ಯೋಗ ಖಾತ್ರಿಗೆ ಹೆಚ್ಚುವರಿಯಾಗಿ ಹತ್ತು ಸಾವಿರ ಕೋಟಿ ಕೊಡಲು ಸರ್ಕಾರದ ಬಳಿ ಹಣವಿಲ್ಲ.

ಕರ್ನಾಟಕದ ಪ್ರವಾಹ ಪೀಡಿತರಿಗೆ ಕೊಡಬೇಕಾದಷ್ಟರಲ್ಲಿ ಕನಿಷ್ಟ ಶೇಕಡಾ ಹತ್ತರಷ್ಟು ಕೊಡಲೂ ಸರ್ಕಾರದ ಬಳಿ ದುಡ್ಡಿಲ್ಲ. ಅಂತಹುದರಲ್ಲಿ ಇಷ್ಟೊಂದು ದೊಡ್ಡ ಮೊತ್ತ (ಒಟ್ಟು ಕನಿಷ್ಟ ಒಂದು ಲಕ್ಷಕೋಟಿ ) ಸರ್ಕಾರದ ಹತ್ತಿರ ಎಲ್ಲಿದೆ?

ಸರ್ಕಾರ ಸಾಲ ಮಾಡಿಯೇ ಈ ಖರ್ಚನ್ನು ಹೊಂದಿಸಬೇಕಾಗುವುದರಿಂದ ನಮ್ಮೆಲ್ಲರ ತಲೆಯ ಮೇಲೆ ಮತ್ತಷ್ಟು ಸಾಲದ ಹೊರೆ ಬೀಳಲಿದೆ ಮತ್ತು ಅದರಿಂದ ದೇಶ ಇನ್ನಷ್ಟು ಆರ್ಥಿಕವಾಗಿ ಹಿಂದೆ ಬೀಳಲಿದೆ.

ಇನ್ನು, ಬೇರೆ ದೇಶದಿಂದ ಬಂದಿರುವ ಮುಸ್ಲಿಮರಿಗೆ ಸಿಎಎ ಅಡಿಯಲ್ಲಿ ಪೌರತ್ವ ನೀಡಲಾಗುವುದಿಲ್ಲ (ಸಿಎಎ ಪ್ರಕಾರ ಹಿಂದು,ಕ್ರೈಸ್ತ, ಜೈನ, ಪಾರ್ಸಿ ಮತ್ತು ಬೌದ್ಧರಿಗೆ ಮಾತ್ರ ಪೌರತ್ವ ನೀಡಲಾಗುತ್ತದೆ). ಪೌರತ್ವವಿಲ್ಲದ ಮುಸ್ಲಿಮರನ್ನು ಬೇರೆ ಯಾವುದೇ ದೇಶಕ್ಕೆ ಕಳಿಸಲಾಗುವುದೂ ಇಲ್ಲ. ಏಕೆಂದರೆ, ಆಗಿರುವವರ ಬಳಿ ಅವರು ಬೇರೆ ದೇಶದ ಪ್ರಜೆಗಳೆಂದು ಸಾಬೀತುಪಡಿಸುವ ದಾಖಲೆಗಳೂ ಇರುವುದಿಲ್ಲ. ಆಗ, ಅಂತವರನ್ನು ಸರ್ಕಾರದ ಪ್ರಕಾರ ಡಿಟೆನ್ಷನ್ ಸೆಂಟರುಗಳಲ್ಲಿ (Detention centre) ಇಡಲಾಗುತ್ತದೆ.

ಸುಮ್ಮನೆ ಒಂದು ಅಂದಾಜಿಗೆ ಆ ರೀತಿ ಪೌರತ್ವ ಇಲ್ಲದ ಇಪ್ಪತ್ತು ಲಕ್ಷ ಮುಸ್ಲಿಮರು ಸಿಗುತ್ತಾರೆಂದುಕೊಳ್ಳೋಣ (ಬಿಜೆಪಿ ಐಟಿ ಸೆಲ್ ಈ ಸಂಖ್ಯೆ ಎರಡು ಮೂರು ಕೋಟಿಯಷ್ಟಿದೆ ಎಂದು ಪ್ರಚಾರ ಮಾಡ್ತಿದೆ). ಈ ಇಪ್ಪತ್ತು ಲಕ್ಷ ಜನರನ್ನ ಡಿಟೆನ್ಷನ್ ಸೆಂಟರುಗಳಲ್ಲಿಟ್ಟು ನೋಡಿಕೊಳ್ಳುವುದಕ್ಕೆ ವರ್ಷಕ್ಕೆ ಕನಿಷ್ಟ ಹತ್ತು ಸಾವಿರ ಕೋಟಿಗಳಷ್ಟು ಖರ್ಚಾಗಲಿದೆ. ಒಂದು ಸೆಂಟರಿನಲ್ಲಿ ಅಂದಾಜು ಮೂರು ಸಾವಿರ ಜನ, ಊಟ, ಬಟ್ಟೆ, ಮಕ್ಕಳ ಸ್ಕೂಲು ಮತ್ತು ಉಸ್ತುವಾರಿ ಸಿಬ್ಬಂದಿಗಳ ವೆಚ್ಚ ಎಲ್ಲ ಸೇರಿದರೆ ವರ್ಷಕ್ಕೆ ಹತ್ತು ಸಾವಿರ ಕೋಟಿ ದಾಟಲಿದೆ. ಅಸ್ಸಾಮಿನಲ್ಲಿ ಪ್ರತಿ ಸೆಂಟರನ್ನು ಕಟ್ಟಲು ಐವತ್ತು ಕೋಟಿ ವ್ಯಯಿಸಲಾಗಿದೆ. ಆ ಲೆಕ್ಕದಲ್ಲಿ ಐನೂರು ಸೆಂಟರುಗಳನ್ನು ಕಟ್ಟಲು ಇಪ್ಪತ್ತೈದು ಸಾವಿರ ಕೋಟಿ ಒಟ್ಟಿಗೇ ಖರ್ಚಾಗಲಿದೆ.

ಇಲ್ಲಿ ಅಂದಾಜಿಸಿರುವ ಇಪ್ಪತ್ತು ಲಕ್ಷ ಜನ ಬದುಕಲು ಇವತ್ತು ಒಂದಲ್ಲ ಒಂದು ಕೆಲಸ ಮಾಡಿ (ಮೆಕ್ಯಾನಿಕ್, ಸೆಕ್ಯೂರಿಟಿ, ಸಣ್ಣ ಅಂಗಡಿ ಇತ್ಯಾದಿ) ಸಂಪಾದನೆ ಮಾಡುತ್ತಾ ದೇಶದ ಜಿಡಿಪಿಗೆ ತಮ್ಮ ಕಾಣಿಕೆಯನ್ನು ನೀಡುತ್ತಿದ್ದಾರೆ.

ದೇಶದ ತಲಾದಾಯ ಇವತ್ತು ತಿಂಗಳಿಗೆ ಹತ್ತು ಸಾವಿರದ ಐನೂರು ರೂಪಾಯಿಗಳು. ಈ ಲೆಕ್ಕದಲ್ಲಿ ಇಪ್ಪತ್ತು ಲಕ್ಷ ಜನರಿಂದ ಪ್ರತಿವರ್ಷ ಜಿಡಿಪಿಗೆ ಸಿಗುವ ಕೊಡುಗೆ ಹತ್ತಿರತ್ತಿರ ಇಪ್ಪತ್ತೈದು ಸಾವಿರ ಕೋಟಿ ರೂಪಾಯಿಗಳು.

ಅಂದರೆ, ಅಷ್ಟು ಜನರನ್ನು ನೋಡಿಕೊಳ್ಳುವ ಮತ್ತು ನಿಂತುಹೋಗುವ ಸಂಪಾದನೆ ಈ ಎರಡರಿಂದ ಭಾರತಕ್ಕೆ ವಾರ್ಷಿಕವಾಗಿ ಆಗುವ ಒಟ್ಟು ಆರ್ಥಿಕ ನಷ್ಟ ಕನಿಷ್ಟ ಮೂವತ್ತೈದರಿಂದ ನಲವತ್ತು ಸಾವಿರ ಕೋಟಿ ರೂಪಾಯಿಗಳು.

ಅದಲ್ಲದೆ, ಮೇಲೆ ಹೇಳಿದಂತೆ ಈಗ ತಕ್ಷಣಕ್ಕೆ ಆಗುವ ನಷ್ಟ ಕನಿಷ್ಟ ಒಂದು ಲಕ್ಷ ಕೋಟಿ ರೂಪಾಯಿಗಳು.

ಇಷ್ಟರ ಜೊತೆಗೆ, ದೇಶದೊಳಗೆ ಸಿಎಎ ಕಾರಣಕ್ಕಾಗಿ ಅಶಾಂತಿಯ ವಾತಾವರಣವಿರುವಾಗ ಯಾವುದೇ ದೇಶ ಭಾರತದಲ್ಲಿ ಬಂಡವಾಳ ಹೂಡಲು ಮುಂಬರುವುದಿಲ್ಲ.

ಈಗಾಗಲೇ ಈಶಾನ್ಯ ರಾಜ್ಯಗಳಲ್ಲಿ ಹನ್ನೆರಡು ಸಾವಿರ ಕೋಟಿ ಹೂಡಬೇಕಾಗಿದ್ದ ಜಪಾನ್ ತನ್ನ ನಿರ್ಧಾರವನ್ನು ತಾತ್ಕಾಲಿಕವಾಗಿ ಮುಂದೂಡಿದೆ. ಇದಲ್ಲದೆ, ದೇಶದ ಕೋಟ್ಯಂತರ ಮಂದಿ ತಮ್ಮ ಪೌರತ್ವ ಸಾಬೀತಿಗೆ ಅಲೆದಾಡುತ್ತ ಕಳೆಯುವುದರಿಂದ ಅವರ ಉತ್ಪಾದನಾ ಮಟ್ಟ ಕುಸಿದು ಅದೂ ಕೂಡ ಆರ್ಥಿಕತೆಗೆ ಮತ್ತೊಂದು ಭಾರೀ ಹೊಡೆತ ಕೊಡಲಿದೆ.

ತಾನೇ ಕೈಯಾರೆ ಮಾಡಿಕೊಂಡ (ನೋಟುಬಂದಿ ಮತ್ತು ಜಿಎಸ್ಟಿ) ತಪ್ಪುಗಳಿಂದಾಗಿ ಆರ್ಥಿಕ ದುಸ್ಥಿತಿಯಲ್ಲಿರುವ ಸರ್ಕಾರ ಸಿಎಎ ಮತ್ತು ಎನ್‌ಆರ್‌ಸಿಯಿಂದುಂಟಾಗುವ ಆರ್ಥಿಕ ಹೊರೆ ತಾಳಿಕೊಳ್ಳುವ ಸ್ಥಿತಿಯಲ್ಲಂತು ಇಲ್ಲವೇ ಇಲ್ಲ.

ಒಟ್ಟಿನಲ್ಲಿ, ಈ ಸಿಎಎ ಮತ್ತು ಎನ್‌ಆರ್‌ಸಿ ದೇಶವನ್ನು ಧರ್ಮಾಧಾರಿತವಾಗಿ ಒಡೆದು ಸಮಾಜದೊಳಗಿನ ಸಾಮರಸ್ಯವನ್ನು ಹಾಳುಮಾಡುವುದರ ಜೊತೆಗೆ ಆರ್ಥಿಕವಾಗಿಯೂ ಕೂಡ ದೇಶವನ್ನು ಕೆಳತಳ್ಳಲಿದೆ.

ಒಟ್ಟಾರೆ, ಇದು ದೇಶವನ್ನು ನೈತಿಕವಾಗಿ ಮತ್ತು ಆರ್ಥಿಕವಾಗಿ ಪ್ರಪಾತಕ್ಕೆ ಬೀಳಿಸಲಿದೆ. ( ಜನಶಕ್ತಿಯಿಂದ ತಡೆಯದೇ ಹೋದರೆ)

ಹಾಗಾದರೆ, ಈ ಸರ್ಕಾರ ಯಾವ ಕಾರಣಕ್ಕಾಗಿ ಈ ಸಿಎಎ ಮತ್ತು ಎನ್‌ಆರ್‌ಸಿ ಮಾಡುತ್ತಿದೆ?

ಒಂದು, ಇದರ ಎಲ್ಲ ಪರಿಣಾಮಗಳ ಅಂದಾಜಿಲ್ಲದೆ ತಮ್ಮ ಹಿಂದುತ್ವ ಕಾರ್ಯಸೂಚಿಯ ಭಾಗವಾಗಿ ಇದನ್ನು ಮಾಡುತ್ತಿರಬಹುದು.

ಎರಡು, ಪರಿಣಾಮಗಳ ಅರಿವಿದ್ದು ಅದರಲ್ಲೂ ಆರ್ಥಿಕ ದುಷ್ಪರಿಣಾಮದ ಅರಿವಿದ್ದು ಕೇವಲ ರಾಜಕೀಯ ಲಾಭದ ಕಾರಣಕ್ಕೆ ಇದನ್ನು ಮಾಡುವಂತೆ ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿರಬಹುದು. ಅಂದರೆ, ಚುನಾವಣೆ ಹತ್ತಿರ ಬಂದಂತೆ ಐದಾರು ಸಾವಿರ ಜನರನ್ನು ಮಾತ್ರ ಡಿಟೆನ್ಷನ್ ಸೆಂಟರುಗಳಲ್ಲಿಟ್ಟು ಅದನ್ನೇ ಕೋಟಿ ಜನ ಎಂಬಂತೆ ಸೋಷಿಯಲ್ ಮೀಡಿಯ ಮೂಲಕ ನಂಬಿಸಿ ಹಿಂದೂಗಳ ಓಟು ಪಡೆಯುವ ಹುನ್ನಾರವೂ ಇರಬಹುದು.

ಯಾವ ಕಾರಣಕ್ಕೇ ಮಾಡುತ್ತಿದ್ದರೂ ಇದನ್ನು ಇಡೀ ದೇಶ ಈಗ ಮಾಡುತ್ತಿರುವಂತೆ ಒಗ್ಗಟ್ಟಿನಿಂದ ಶಾಂತಿಯುತವಾಗಿ ಎದುರಿಸಿ ದೇಶವನ್ನು ನೈತಿಕ ಮತ್ತು ಆರ್ಥಿಕ ಅಧಃಪತನದಿಂದ ಉಳಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...